AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್’ ಒಟಿಟಿ ರಿಲೀಸ್ ದಿನಾಂಕ ಫೈನಲ್? ಪ್ರಭಾಸ್ ಅಭಿಮಾನಿಗಳಿಗೆ ಗುಡ್ ನ್ಯೂಸ್..

ಜನಪ್ರಿಯ OTT ಪ್ಲಾಟ್‌ಫಾರ್ಮ್ ನೆಟ್‌ಫ್ಲಿಕ್ಸ್ ‘ಸಲಾರ್’ ಚಿತ್ರದ ಡಿಜಿಟಲ್ ಸ್ಟ್ರೀಮಿಂಗ್ ಹಕ್ಕುಗಳನ್ನು ಖರೀದಿಸಿದೆ. ನೆಟ್‌ಫ್ಲಿಕ್ಸ್‌ ಈ ಚಿತ್ರವನ್ನು ದೊಡ್ಡ ಮೊತ್ತಕ್ಕೆ ಖರೀದಿ ಮಾಡಿದೆ ‘ಸಲಾರ್’ ಚಿತ್ರವನ್ನು ಶೀಘ್ರದಲ್ಲೇ ಒಟಿಟಿಗೆ ತರಲಾಗುವುದು ಎಂದು ನೆಟ್​ಫ್ಲಿಕ್ಸ್ ತಿಳಿಸಿದೆ.

‘ಸಲಾರ್’ ಒಟಿಟಿ ರಿಲೀಸ್ ದಿನಾಂಕ ಫೈನಲ್? ಪ್ರಭಾಸ್ ಅಭಿಮಾನಿಗಳಿಗೆ ಗುಡ್ ನ್ಯೂಸ್..
ಪ್ರಭಾಸ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Jan 16, 2024 | 12:34 PM

Share

ಪ್ಯಾನ್ ಇಂಡಿಯಾದ ಮಟ್ಟದಲ್ಲಿ ಪ್ರಭಾಸ್ (Prabhas Movie) ನಟನೆಯ ‘ಸಲಾರ್’ ಸಿನಿಮಾ ಕಳೆದ ವರ್ಷಾಂತ್ಯಕ್ಕೆ ರಿಲೀಸ್ ಆಗಿದೆ. ಪ್ರಶಾಂತ್ ನೀಲ್ ನಿರ್ದೇಶನದ ಈ ಸಿನಿಮಾದಲ್ಲಿ ಶ್ರುತಿ ಹಾಸನ್ ನಾಯಕಿಯಾಗಿ ನಟಿಸಿದ್ದಾರೆ. ಮಲಯಾಳಂ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಬಾಬಿ ಸಿಂಹ, ಜಗಪತಿ ಬಾಬು, ಟಿನು ಆನಂದ್, ಶ್ರಿಯಾ ರೆಡ್ಡಿ ಮುಂತಾದವರು ವಿವಿಧ ಪಾತ್ರಗಳಲ್ಲಿ ಮಿಂಚಿದ್ದಾರೆ. ಡಿಸೆಂಬರ್ 22ರಂದು ಬಿಡುಗಡೆಯಾದ ‘ಸಲಾರ್’ ಬ್ಲಾಕ್ ಬಸ್ಟರ್ ಆಯಿತು. ಈಗ ಈ ಚಿತ್ರ ಒಟಿಟಿಯಲ್ಲಿ ರಿಲೀಸ್ ಆಗಲು ರೆಡಿ ಆಗಿದೆ.

‘ಸಲಾರ್’ ಸಿನಿಮಾದ ಮೊದಲ ದಿನದ ಅಬ್ಬರ ನೋಡಿದವರು ಈ ಚಿತ್ರ ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರಬಹುದು ಎಂದೇ ಭಾವಿಸಿದ್ದರು. ಆದರೆ, ಅಷ್ಟು ಗಳಿಕೆ ಆಗಿಲ್ಲ. ಈ ಚಿತ್ರದ ಒಟ್ಟಾರೆ ಗಳಿಕೆ 700 ಕೋಟಿ ರೂಪಾಯಿ ಆಗಿದೆ. ಬಹಳ ವರ್ಷಗಳ ನಂತರ ಪ್ರಭಾಸ್​​ಗೆ ‘ಸಲಾರ್’ ಚಿತ್ರದಿಂದ ದೊಡ್ಡ ಹಿಟ್ ಸಿಕ್ಕಂತೆ ಆಗಿದೆ. ಚಿತ್ರಮಂದಿರಗಳಲ್ಲಿ ಬ್ಲಾಕ್ ಬಸ್ಟರ್ ಹಿಟ್ ಆದ ‘ಸಲಾರ್’ ಒಟಿಟಿಯಲ್ಲಿ ಯಾವಾಗ ಬಿಡುಗಡೆಯಾಗುತ್ತದೆ ಎಂದು ಕಾದವರು ಅನೇಕರಿದ್ದಾರೆ. ಈ ಕಾಯುವಿಕೆ ಶೀಘ್ರದಲ್ಲೇ ಕೊನೆಗೊಳ್ಳಲಿದೆ.

ಜನಪ್ರಿಯ OTT ಪ್ಲಾಟ್‌ಫಾರ್ಮ್ ನೆಟ್‌ಫ್ಲಿಕ್ಸ್ ‘ಸಲಾರ್’ ಚಿತ್ರದ ಡಿಜಿಟಲ್ ಸ್ಟ್ರೀಮಿಂಗ್ ಹಕ್ಕುಗಳನ್ನು ಪಡೆದುಕೊಂಡಿದೆ. ನೆಟ್‌ಫ್ಲಿಕ್ಸ್‌ ಈ ಚಿತ್ರವನ್ನು ದೊಡ್ಡ ಮೊತ್ತಕ್ಕೆ ಖರೀದಿ ಮಾಡಿದೆ ಎಂದು ವರದಿಯಾಗಿದೆ. ‘ಸಲಾರ್’ ಚಿತ್ರವನ್ನು ಶೀಘ್ರದಲ್ಲೇ ಒಟಿಟಿಗೆ ತರಲಾಗುವುದು ಎಂದು ನೆಟ್​ಫ್ಲಿಕ್ಸ್ ಹೇಳಿದೆ. ಗಣರಾಜ್ಯೋತ್ಸವದ ಪ್ರಯುಕ್ತ ಜನವರಿ 26ರಂದು ಪ್ರಭಾಸ್ ಸಿನಿಮಾ ಸ್ಟ್ರೀಮ್ ಆಗುವ ಸಾಧ್ಯತೆ ಇದೆ ಎಂದು ವರದಿ ಆಗಿದೆ.

‘ಸಲಾರ್’ ಸಿನಿಮಾದ ಮೊದಲ ಪಾರ್ಟ್​ಗೆ ‘ಸೀಸ್​ಫೈರ್​’ ಎಂದು ಹೆಸರು ಇಡಲಾಗಿದೆ. ‘ಖನ್ಸಾರ್​’ ಹೆಸರಿನ ಕಾಲ್ಪನಿಕ ಊರಲ್ಲಿ ಚಿತ್ರದ ಕಥೆ ಸಾಗುತ್ತದೆ. ‘ಸಲಾರ್’ ಶೀಘ್ರದಲ್ಲೇ ನೆಟ್‌ಫ್ಲಿಕ್ಸ್‌ನಲ್ಲಿ ತೆಲುಗು, ತಮಿಳು, ಮಲಯಾಳಂ ಮತ್ತು ಕನ್ನಡ ಭಾಷೆಗಳಲ್ಲಿ ಸ್ಟ್ರೀಮ್ ಆಗಲಿದೆ ಎಂದು ನೆಟ್‌ಫ್ಲಿಕ್ಸ್ ತಿಳಿಸಿದೆ. ಸ್ಟ್ರೀಮಿಂಗ್ ದಿನಾಂಕದ ಬಗ್ಗೆ ಅಧಿಕೃತ ಮಾಹಿತಿಯನ್ನು ಶೀಘ್ರದಲ್ಲೇ ರಿವೀಲ್ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಗೆಲುವಿಗಾಗಿ ಹೆಸರು ಬದಲಿಸಿಕೊಂಡ್ರಾ ಪ್ರಭಾಸ್​? ಹೊಸ ಪೋಸ್ಟರ್​ನಿಂದ ಹುಟ್ಟಿತು ಅನುಮಾನ

‘ಕೆಜಿಎಫ್ 2’ ಸಿನಿಮಾಗೆ ಹೋಲಿಕೆ ಮಾಡಿದರೆ ‘ಸಲಾರ್’ ಸಿನಿಮಾ ಅಷ್ಟಾಗಿ ಅಬ್ಬರಿಸಿಲ್ಲ. ಪ್ರಶಾಂತ್ ನೀಲ್ ಅವರೇ ನಿರ್ದೇಶನ ಮಾಡಿದ್ದ ‘ಉಗ್ರಂ’ ಸಿನಿಮಾದಿಂದ ಕಥೆಯನ್ನು ಎರವಲು ಪಡೆದಿದ್ದು ‘ಸಲಾರ್’ ಚಿತ್ರಕ್ಕೆ ದೊಡ್ಡ ಹಿನ್ನಡೆ ಉಂಟು ಮಾಡಿತು. ಮೇಕಿಂಗ್ ವಿಚಾರದಲ್ಲಿ ಅನೇಕರಿಗೆ ‘ಕೆಜಿಎಫ್ 2’ ನೆನಪಿಗೆ ಬಂದಿದೆ. ಈ ಎಲ್ಲಾ ಕಾರಣದಿಂದ ‘ಸಲಾರ್’ ಅಂದುಕೊಂಡಷ್ಟು ಗಳಿಕೆ ಮಾಡಿಲ್ಲ. ಈಗ ಬಂದಿರೋದು ಮೊದಲ ಪಾರ್ಟ್ ಮಾತ್ರ. ಈ ಚಿತ್ರಕ್ಕೆ ಎರಡನೇ ಪಾರ್ಟ್ ಸಿದ್ಧಗೊಳ್ಳಲಿದ್ದು, ಇದಕ್ಕೆ ‘ಶೌರ್ಯಂಗ ಪರ್ವಂ’ ಎಂದು ಶೀರ್ಷಿಕೆ ಇಡಲಾಗಿದೆ. ಈ ಬಗ್ಗೆ ಯಾವುದೇ ಮಾಹಿತಿಯನ್ನು ತಂಡ ಬಿಟ್ಟುಕೊಟ್ಟಿಲ್ಲ. ಕನ್ನಡದ ಹೊಂಬಾಳೆ ಫಿಲ್ಮ್ಸ್ ಈ ಚಿತ್ರವನ್ನು ನಿರ್ಮಾಣ ಮಾಡಿದೆ. ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು