AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಗೆ ಕಾಲಿಟ್ಟ ‘ಕರಾವಳಿ’; ಇಂದಿನಿಂದ ಜೀ5‌ನಲ್ಲಿ ಪ್ರಜ್ವಲ್ ದೇವರಾಜ್-ರಾಜ್ ಬಿ. ಶೆಟ್ಟಿ ಅಭಿನಯದ ಚಿತ್ರ ಪ್ರಸಾರ

ಪ್ರಜ್ವಲ್ ದೇವರಾಜ್ ಹಾಗೂ ರಾಜ್ ಬಿ. ಶೆಟ್ಟಿ ನಟನೆಯ 'ಕರಾವಳಿ' ಸಿನಿಮಾ ಇದೀಗ ಜೀ5 ಒಟಿಟಿಯಲ್ಲಿ ಪ್ರಸಾರವಾಗುತ್ತಿದೆ. ಕರಾವಳಿಯ ಜಾನಪದ ಕ್ರೀಡೆ ಕಂಬಳ ಮತ್ತು ಸಂಸ್ಕೃತಿಯ ಕಥಾಹಂದರ ಹೊಂದಿರುವ ಈ ಆ್ಯಕ್ಷನ್ ಡ್ರಾಮಾವನ್ನು ಥಿಯೇಟರ್‌ನಲ್ಲಿ ಮಿಸ್ ಮಾಡಿಕೊಂಡವರು ಒಟಿಟಿಯಲ್ಲಿ ವೀಕ್ಷಿಸಬಹುದು. ಗುರುದತ್ತ ಗಾಣಿಗ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಒಟಿಟಿಗೆ ಕಾಲಿಟ್ಟ 'ಕರಾವಳಿ'; ಇಂದಿನಿಂದ ಜೀ5‌ನಲ್ಲಿ ಪ್ರಜ್ವಲ್ ದೇವರಾಜ್-ರಾಜ್ ಬಿ. ಶೆಟ್ಟಿ ಅಭಿನಯದ ಚಿತ್ರ ಪ್ರಸಾರ
ರಾಜ್ ಬಿ ಶೆಟ್ಟಿ
 ಶ್ರೀಲಕ್ಷ್ಮೀ ಎಚ್
| Edited By: |

Updated on:Aug 28, 2026 | 11:30 AM

Share

ಮುಖ್ಯಾಂಶಗಳು

  • ಜೀ5 ಒಟಿಟಿಗೆ ಲಗ್ಗೆಯಿಟ್ಟ 'ಕರಾವಳಿ'
  • ಇಂದಿನಿಂದಲೇ ಡಿಜಿಟಲ್ ಪ್ರಸಾರ ಆರಂಭ
  • ಕಂಬಳ ಜಾನಪದ ಕ್ರೀಡೆ ಮತ್ತು ಆಕ್ಷನ್ ಹಿನ್ನೆಲೆಯ ಬಿಗ್ ಬಜೆಟ್ ಸಿನಿಮಾ

ಕನ್ನಡ ಚಿತ್ರರಂಗದ ಬಹುನಿರೀಕ್ಷಿತ ಆ್ಯಕ್ಷನ್ ಡ್ರಾಮಾ ‘ಕರಾವಳಿ’ ಚಿತ್ರ ಇದೀಗ ಒಟಿಟಿ ವೇದಿಕೆಗೆ ಲಗ್ಗೆಯಿಟ್ಟಿದೆ. ಕರಾವಳಿ ಭಾಗದ ಜನಪ್ರಿಯ ಜಾನಪದ ಕ್ರೀಡೆ ‘ಕಂಬಳ’ದ ಹಿನ್ನೆಲೆಯಲ್ಲಿ ಮೂಡಿಬಂದಿರುವ ಈ ಚಿತ್ರವು ಆಗಸ್ಟ್ 28ರಿಂದ ಪ್ರಮುಖ ಒಟಿಟಿ ಸಂಸ್ಥೆಯಾದ ‘ಜೀ5’ನಲ್ಲಿ ಜಾಗತಿಕವಾಗಿ ಪ್ರಸಾರವಾಗುತ್ತಿದೆ. ಸಿನಿಮಾನ ಥಿಯೇಟರ್​ನಲ್ಲಿ ಮಿಸ್ ಮಾಡಿಕೊಂಡವರು ಒಟಿಟಿಯಲ್ಲಿ ವೀಕ್ಷಿಸಬಹುದು.

ಕಂಬಳ ಮತ್ತು ಸಂಸ್ಕೃತಿಯ ಕಥಾಹಂದರ

ಕರಾವಳಿ ಭಾಗದ ಸೊಗಡು, ಆಚರಣೆ ಹಾಗೂ ಪರಂಪರೆಯನ್ನು ತೆರೆಯ ಮೇಲೆ ತಂದಿರುವ ಈ ಚಿತ್ರದಲ್ಲಿ ಕಂಬಳವು ಪ್ರಮುಖ ವಸ್ತುವಾಗಿದೆ. ತಲೆಮಾರುಗಳ ನಡುವಿನ ಸಂಘರ್ಷ, ಮಹತ್ವಾಕಾಂಕ್ಷೆ ಮತ್ತು ಸಂಬಂಧಗಳ ತೀವ್ರತೆಯನ್ನು ಒಳಗೊಂಡಿರುವ ಚಿತ್ರಕಥೆ ಪ್ರೇಕ್ಷಕರ ಗಮನ ಸೆಳೆದಿದೆ. ಇಲ್ಲಿ ದ್ವೇಷದ ಕಥೆ ಪ್ರಮುಖವಾಗಿ ಹೈಲೈಟ್ ಆಗಿದೆ.

ಚಿತ್ರತಂಡದ ಕಥನ

ಗುರುದತ್ತ ಗಾಣಿಗ ನಿರ್ದೇಶಿಸಿ ನಿರ್ಮಿಸಿರುವ ಈ ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ಸ್ ಅರ್ಪಿಸಿದೆ. ಚಿತ್ರದಲ್ಲಿ ಪ್ರಜ್ವಲ್ ದೇವರಾಜ್, ರಾಜ್ ಬಿ. ಶೆಟ್ಟಿ ಹಾಗೂ ಸಂಪದಾ ಹುಲಿವಾನ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಮಿತ್ರ, ರಮೇಶ್ ಇಂದಿರಾ, ಗೋವಿಂದೇ ಗೌಡ ಸೇರಿದಂತೆ ಹಲವು ಕಲಾವಿದರು ತಾರಾಗಣದಲ್ಲಿದ್ದಾರೆ.

ಇದನ್ನೂ ಓದಿ: ಚಿತ್ರಮಂದಿರಗಳ ಬಳಿಕ ಈಗ ಜೀ5ನಲ್ಲಿ ಅಬ್ಬರಿಸಲು ಸಜ್ಜಾದ ‘ಕರಾವಳಿ’; ಇಲ್ಲಿದೆ ವಿವರ

‘ಕರಾವಳಿಯ ಮಣ್ಣಿನ ಕಥೆ ಮತ್ತು ಕಂಬಳದ ಶಕ್ತಿಯನ್ನು ಪರದೆಯ ಮೇಲೆ ತರುವುದು ವಿಶಿಷ್ಟ ಅನುಭವವಾಗಿತ್ತು’ ಎಂದು ನಟ ರಾಜ್ ಬಿ. ಶೆಟ್ಟಿ ತಿಳಿಸಿದ್ದಾರೆ. ಕರಾವಳಿಯ ನೈಜ ಜೀವನ ಮತ್ತು ಸಂಸ್ಕೃತಿಯನ್ನು ಜಾಗತಿಕ ಮಟ್ಟದ ವೀಕ್ಷಕರಿಗೆ ತಲುಪಿಸುವ ಉದ್ದೇಶದಿಂದ ಈ ಚಿತ್ರವನ್ನು ಒಟಿಟಿಯಲ್ಲಿ ತರಲಾಗಿದೆ ಎಂದು ನಿರ್ದೇಶಕ ಗುರುದತ್ತ ಗಾಣಿಗ ಹೇಳಿದ್ದಾರೆ. ಈ ಸಿನಿಮಾದಲ್ಲಿ ಕಾರಣಾಂತರಗಳಿಂದ ಪ್ರಜ್ವಲ್ ದೇವರಾಜ್ ಅವರ ಪಾತ್ರಕ್ಕೆ ಅವರ ಧ್ವನಿ ಇಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:29 am, Fri, 28 August 26

Follow Us
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ
ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!