AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಂಡತಿಗೆ ಬ್ರೈನ್ ಟ್ಯೂಮರ್​, ತಂದೆಗೆ ಕ್ಯಾನ್ಸರ್​, ಖರ್ಚಿಗಿರಲಿಲ್ಲ ಹಣ; ಇದು ಸೂಪರ್​ಸ್ಟಾರ್​ ಆದ ನಟನ ಹಿಂದಿನ ಕಥೆ

ಪ್ರತೀಕ್​ ಗುಜರಾತಿ​ ಭಾಷೆಯ ನಟ. ದಶಕಗಳ ಹಿಂದೆ ಅವರ ಜೀವನ ಹೀಗೆ ಇರಲಿಲ್ಲ. ಅವರು ತುಂಬಾನೇ ಕಷ್ಟ ಅನುಭವಿಸಿ ಬಂದಿದ್ದರು. ಈ ಬಗ್ಗೆ ಸಂದರ್ಶನದಲ್ಲಿ ಅವರು ಹೇಳಿಕೊಂಡಿದ್ದಾರೆ.

ಹೆಂಡತಿಗೆ ಬ್ರೈನ್ ಟ್ಯೂಮರ್​, ತಂದೆಗೆ ಕ್ಯಾನ್ಸರ್​, ಖರ್ಚಿಗಿರಲಿಲ್ಲ ಹಣ; ಇದು ಸೂಪರ್​ಸ್ಟಾರ್​ ಆದ ನಟನ ಹಿಂದಿನ ಕಥೆ
ಪ್ರತೀಕ್​ ಗಾಂಧಿ
TV9 Web
| Edited By: |

Updated on: Oct 01, 2021 | 7:18 AM

Share

‘ಸ್ಕ್ಯಾಮ್​ 1992’ ವೆಬ್ ಸೀರಿಸ್​ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಇದರಲ್ಲಿ ನಟ ಪ್ರತೀಕ್​ ಗಾಂಧಿ ಅವರು ಹರ್ಷದ್​ ಮೆಹ್ತಾ ಪಾತ್ರವನ್ನು ಅದ್ಭುತವಾಗಿ ನಿರ್ವಹಿಸಿದ್ದರು. ಭಾರತೀಯ ಸ್ಟಾಕ್​ ಮಾರ್ಕೆಟ್​ನಲ್ಲಿ ನಡೆದ ಹಗರಣ​ ಆಧರಿಸಿ ಈ ವೆಬ್​ ಸೀರಿಸ್​ ಸಿದ್ಧಗೊಂಡಿದೆ. ಈ ವೆಬ್​ ಸೀರಿಸ್​ ಹಿಟ್​ ಆದ ನಂತರದಲ್ಲಿ ಪ್ರತೀಕ್ ಗಾಂಧಿಗೆ ಆಫರ್​ಗಳು ಹೆಚ್ಚಿವೆ. ಆದರೆ, ಅವರ ಜೀವನ ಈ ಮೊದಲು ಈ ರೀತಿ ಇರಲಿಲ್ಲ. ಆ ಬಗ್ಗೆ ಅವರು ಹೇಳಿಕೊಂಡಿದ್ದಾರೆ.

ಪ್ರತೀಕ್​ ಗುಜರಾತಿ​ ಭಾಷೆಯ ನಟ. ದಶಕಗಳ ಹಿಂದೆ ಅವರ ಜೀವನ ಹೀಗೆ ಇರಲಿಲ್ಲ. ಅವರು ತುಂಬಾನೇ ಕಷ್ಟ ಅನುಭವಿಸಿ ಬಂದಿದ್ದರು. ಈ ಬಗ್ಗೆ ಸಂದರ್ಶನದಲ್ಲಿ ಅವರು ಹೇಳಿಕೊಂಡಿದ್ದಾರೆ. ಪ್ರತೀಕ್ ಪತ್ನಿಗೆ ಬ್ರೈನ್ ಟ್ಯೂಮರ್ ಇರುವುದು ಪತ್ತೆಯಾಗಿತ್ತು. ಅದೇ ಸಮಯದಲ್ಲಿ ಅವರ ತಂದೆಗೆ ಕ್ಯಾನ್ಸರ್ ಇರುವುದು ಗೊತ್ತಾಗಿತ್ತು. ಈ ಘಟನೆ ಪ್ರತೀಕ್​ ಅವರನ್ನು ಸಂಕಷ್ಟಕ್ಕೆ ನೂಕಿತ್ತು.

‘ತನ್ನ ತಂದೆ ತೀರಿಕೊಂಡ ನಂತರ ತನ್ನ ಬಳಿ ಯಾವುದೇ ಹಣ ಇರಲಿಲ್ಲ. ಅವರು ಮೃತಪಟ್ಟ ನಂತರ ನಾನು ಆ ಮನೆಯಿಂದ ಹೊರಹೋಗಬೇಕಾಯಿತು. ನನಗೆ ಉಳಿದುಕೊಳ್ಳೋಕೂ ಜಾಗ ಇರಲಿಲ್ಲ. ಆದರೆ, ನಾನು ನಂಬಿಕೆ​ ಕಳೆದುಕೊಂಡಿಲ್ಲ’ ಎಂದು ಪ್ರತೀಕ್ ತಮ್ಮ ಕಷ್ಟಗಳನ್ನು ವಿವರಿಸಿದ್ದಾರೆ

ಸ್ಕ್ಯಾಮ್​ 1992 ವೆಬ್​ ಸೀರಿಸ್​ ತೆರೆಕಂಡ ನಂತರ ಪ್ರತೀಕ್​ಗೆ​ ಬೇಡಿಕೆ ಹೆಚ್ಚಿದೆ. ಆಂಧ್ರ ಪ್ರದೇಶ ಮಾಜಿ ಮುಖ್ಯಮಂತ್ರಿ ವೈಎಸ್​ ರಾಜಶೇಖರ್​ ರೆಡ್ಡಿ ಜೀವನ ಆಧರಿಸಿ ಮಾಹಿ ವಿ. ರಾಘವ ಅವರು ಬಯೋಪಿಕ್​ ಸಿದ್ಧಪಡಿಸಿದ್ದರು. ‘ಯಾತ್ರಾ’ ಹೆಸರಿನಲ್ಲಿ ತೆರೆಗೆ ಬಂದ ಈ ಸಿನಿಮಾ ಯಶಸ್ಸು ಗಳಿಸಿತ್ತು. ಈಗ ಅವರು ರಾಜಶೇಖರ್​ ರೆಡ್ಡಿ ಮಗ, ಆಂಧ್ರದ ಮುಖ್ಯಮಂತ್ರಿ ವೈ.ಎಸ್.​ ಜಗನ್​ ಅವರ ಜೀವನ ಆಧರಿಸಿ ಸಿನಿಮಾ ಮಾಡೋಕೆ ನಿರ್ಧರಿಸಿದ್ದಾರೆ. ಜಗನ್​ ಪಾತ್ರಕ್ಕೆ ಯಾರು ಸೂಕ್ತ ಎನ್ನುವ ಹುಡುಕಾಟದಲ್ಲಿದ್ದಾಗ ಮಾಹಿ ಅವರಿಗೆ ಸಿಕ್ಕಿದ್ದು ಪ್ರತೀಕ್​ ಗಾಂಧಿ.

‘ನಿರ್ದೇಶಕರು ಪ್ರತೀಕ್​ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. ಬಯೋಪಿಕ್​ ನೆರೇಷನ್​ ಪ್ರತೀಕ್​ಗೆ ಇಷ್ಟವಾಗಿದೆ. ಅವರು ಜಗನ್​ ಪಾತ್ರ ಮಾಡೋಕೆ ಒಪ್ಪಿಗೆ ನೀಡಿದ್ದಾರೆ. ಪ್ಯಾನ್​ ಇಂಡಿಯಾ ಸಿನಿಮಾ ಆಗಿರುವುದರಿಂದ ಬಾಲಿವುಡ್​ ನಟನ ಆಯ್ಕೆ ನಡೆದಿದೆ’ ಎಂದು ಮೂಲಗಳು ಹೇಳಿವೆ. ಈ ಬಗ್ಗೆ ಅಧಿಕೃತ ಅಪ್​ಡೇಟ್​ ಕೇಳಿಬರಬೇಕಿದೆ.

ಇದನ್ನೂ ಓದಿ:

ತೆರೆಯ ಮೇಲೆ ಬರಲಿದೆ ಅಬ್ದುಲ್ ಕರೀಂ ತೆಲಗಿ ಹಗರಣ; ಸ್ಕ್ಯಾಮ್ 1992 ನಿರ್ದೇಶಕರಿಂದಲೇ ಸ್ಕ್ಯಾಮ್ 2003

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು