AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಂಡತಿಗೆ ಬ್ರೈನ್ ಟ್ಯೂಮರ್​, ತಂದೆಗೆ ಕ್ಯಾನ್ಸರ್​, ಖರ್ಚಿಗಿರಲಿಲ್ಲ ಹಣ; ಇದು ಸೂಪರ್​ಸ್ಟಾರ್​ ಆದ ನಟನ ಹಿಂದಿನ ಕಥೆ

ಪ್ರತೀಕ್​ ಗುಜರಾತಿ​ ಭಾಷೆಯ ನಟ. ದಶಕಗಳ ಹಿಂದೆ ಅವರ ಜೀವನ ಹೀಗೆ ಇರಲಿಲ್ಲ. ಅವರು ತುಂಬಾನೇ ಕಷ್ಟ ಅನುಭವಿಸಿ ಬಂದಿದ್ದರು. ಈ ಬಗ್ಗೆ ಸಂದರ್ಶನದಲ್ಲಿ ಅವರು ಹೇಳಿಕೊಂಡಿದ್ದಾರೆ.

ಹೆಂಡತಿಗೆ ಬ್ರೈನ್ ಟ್ಯೂಮರ್​, ತಂದೆಗೆ ಕ್ಯಾನ್ಸರ್​, ಖರ್ಚಿಗಿರಲಿಲ್ಲ ಹಣ; ಇದು ಸೂಪರ್​ಸ್ಟಾರ್​ ಆದ ನಟನ ಹಿಂದಿನ ಕಥೆ
ಪ್ರತೀಕ್​ ಗಾಂಧಿ
TV9 Web
| Updated By: ಮದನ್​ ಕುಮಾರ್​|

Updated on: Oct 01, 2021 | 7:18 AM

Share

‘ಸ್ಕ್ಯಾಮ್​ 1992’ ವೆಬ್ ಸೀರಿಸ್​ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಇದರಲ್ಲಿ ನಟ ಪ್ರತೀಕ್​ ಗಾಂಧಿ ಅವರು ಹರ್ಷದ್​ ಮೆಹ್ತಾ ಪಾತ್ರವನ್ನು ಅದ್ಭುತವಾಗಿ ನಿರ್ವಹಿಸಿದ್ದರು. ಭಾರತೀಯ ಸ್ಟಾಕ್​ ಮಾರ್ಕೆಟ್​ನಲ್ಲಿ ನಡೆದ ಹಗರಣ​ ಆಧರಿಸಿ ಈ ವೆಬ್​ ಸೀರಿಸ್​ ಸಿದ್ಧಗೊಂಡಿದೆ. ಈ ವೆಬ್​ ಸೀರಿಸ್​ ಹಿಟ್​ ಆದ ನಂತರದಲ್ಲಿ ಪ್ರತೀಕ್ ಗಾಂಧಿಗೆ ಆಫರ್​ಗಳು ಹೆಚ್ಚಿವೆ. ಆದರೆ, ಅವರ ಜೀವನ ಈ ಮೊದಲು ಈ ರೀತಿ ಇರಲಿಲ್ಲ. ಆ ಬಗ್ಗೆ ಅವರು ಹೇಳಿಕೊಂಡಿದ್ದಾರೆ.

ಪ್ರತೀಕ್​ ಗುಜರಾತಿ​ ಭಾಷೆಯ ನಟ. ದಶಕಗಳ ಹಿಂದೆ ಅವರ ಜೀವನ ಹೀಗೆ ಇರಲಿಲ್ಲ. ಅವರು ತುಂಬಾನೇ ಕಷ್ಟ ಅನುಭವಿಸಿ ಬಂದಿದ್ದರು. ಈ ಬಗ್ಗೆ ಸಂದರ್ಶನದಲ್ಲಿ ಅವರು ಹೇಳಿಕೊಂಡಿದ್ದಾರೆ. ಪ್ರತೀಕ್ ಪತ್ನಿಗೆ ಬ್ರೈನ್ ಟ್ಯೂಮರ್ ಇರುವುದು ಪತ್ತೆಯಾಗಿತ್ತು. ಅದೇ ಸಮಯದಲ್ಲಿ ಅವರ ತಂದೆಗೆ ಕ್ಯಾನ್ಸರ್ ಇರುವುದು ಗೊತ್ತಾಗಿತ್ತು. ಈ ಘಟನೆ ಪ್ರತೀಕ್​ ಅವರನ್ನು ಸಂಕಷ್ಟಕ್ಕೆ ನೂಕಿತ್ತು.

‘ತನ್ನ ತಂದೆ ತೀರಿಕೊಂಡ ನಂತರ ತನ್ನ ಬಳಿ ಯಾವುದೇ ಹಣ ಇರಲಿಲ್ಲ. ಅವರು ಮೃತಪಟ್ಟ ನಂತರ ನಾನು ಆ ಮನೆಯಿಂದ ಹೊರಹೋಗಬೇಕಾಯಿತು. ನನಗೆ ಉಳಿದುಕೊಳ್ಳೋಕೂ ಜಾಗ ಇರಲಿಲ್ಲ. ಆದರೆ, ನಾನು ನಂಬಿಕೆ​ ಕಳೆದುಕೊಂಡಿಲ್ಲ’ ಎಂದು ಪ್ರತೀಕ್ ತಮ್ಮ ಕಷ್ಟಗಳನ್ನು ವಿವರಿಸಿದ್ದಾರೆ

ಸ್ಕ್ಯಾಮ್​ 1992 ವೆಬ್​ ಸೀರಿಸ್​ ತೆರೆಕಂಡ ನಂತರ ಪ್ರತೀಕ್​ಗೆ​ ಬೇಡಿಕೆ ಹೆಚ್ಚಿದೆ. ಆಂಧ್ರ ಪ್ರದೇಶ ಮಾಜಿ ಮುಖ್ಯಮಂತ್ರಿ ವೈಎಸ್​ ರಾಜಶೇಖರ್​ ರೆಡ್ಡಿ ಜೀವನ ಆಧರಿಸಿ ಮಾಹಿ ವಿ. ರಾಘವ ಅವರು ಬಯೋಪಿಕ್​ ಸಿದ್ಧಪಡಿಸಿದ್ದರು. ‘ಯಾತ್ರಾ’ ಹೆಸರಿನಲ್ಲಿ ತೆರೆಗೆ ಬಂದ ಈ ಸಿನಿಮಾ ಯಶಸ್ಸು ಗಳಿಸಿತ್ತು. ಈಗ ಅವರು ರಾಜಶೇಖರ್​ ರೆಡ್ಡಿ ಮಗ, ಆಂಧ್ರದ ಮುಖ್ಯಮಂತ್ರಿ ವೈ.ಎಸ್.​ ಜಗನ್​ ಅವರ ಜೀವನ ಆಧರಿಸಿ ಸಿನಿಮಾ ಮಾಡೋಕೆ ನಿರ್ಧರಿಸಿದ್ದಾರೆ. ಜಗನ್​ ಪಾತ್ರಕ್ಕೆ ಯಾರು ಸೂಕ್ತ ಎನ್ನುವ ಹುಡುಕಾಟದಲ್ಲಿದ್ದಾಗ ಮಾಹಿ ಅವರಿಗೆ ಸಿಕ್ಕಿದ್ದು ಪ್ರತೀಕ್​ ಗಾಂಧಿ.

‘ನಿರ್ದೇಶಕರು ಪ್ರತೀಕ್​ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. ಬಯೋಪಿಕ್​ ನೆರೇಷನ್​ ಪ್ರತೀಕ್​ಗೆ ಇಷ್ಟವಾಗಿದೆ. ಅವರು ಜಗನ್​ ಪಾತ್ರ ಮಾಡೋಕೆ ಒಪ್ಪಿಗೆ ನೀಡಿದ್ದಾರೆ. ಪ್ಯಾನ್​ ಇಂಡಿಯಾ ಸಿನಿಮಾ ಆಗಿರುವುದರಿಂದ ಬಾಲಿವುಡ್​ ನಟನ ಆಯ್ಕೆ ನಡೆದಿದೆ’ ಎಂದು ಮೂಲಗಳು ಹೇಳಿವೆ. ಈ ಬಗ್ಗೆ ಅಧಿಕೃತ ಅಪ್​ಡೇಟ್​ ಕೇಳಿಬರಬೇಕಿದೆ.

ಇದನ್ನೂ ಓದಿ:

ತೆರೆಯ ಮೇಲೆ ಬರಲಿದೆ ಅಬ್ದುಲ್ ಕರೀಂ ತೆಲಗಿ ಹಗರಣ; ಸ್ಕ್ಯಾಮ್ 1992 ನಿರ್ದೇಶಕರಿಂದಲೇ ಸ್ಕ್ಯಾಮ್ 2003

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!