AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Droupadi Murmu: ಬೊಮ್ಮನ್-ಬೆಳ್ಳಿ ದಂಪತಿಯನ್ನು ಸನ್ಮಾನಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

‘ದಿ ಎಲಿಫೆಂಟ್​ ವಿಸ್ಪರರ್ಸ್​​’ ಸಾಕ್ಷ್ಯಚಿತ್ರ ಆಸ್ಕರ್ ಪ್ರಶಸ್ತಿ ಗೆದ್ದಿತು. ಇದಾದ ಬಳಿಕ ಬೊಮ್ಮನ್ ಹಾಗೂ ಬೆಳ್ಳಿ ಜನಪ್ರಿಯತೆ ಪಡೆದರು. ಇತ್ತೀಚೆಗೆ ಅವರನ್ನು ರಾಷ್ಟ್ರಪತಿ ಭವನಕ್ಕೆ ಕರೆಸಿ ಸನ್ಮಾನಿಸಲಾಗಿದೆ.

Droupadi Murmu: ಬೊಮ್ಮನ್-ಬೆಳ್ಳಿ ದಂಪತಿಯನ್ನು ಸನ್ಮಾನಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ದ್ರೌಪದಿ ಮುರ್ಮು
Follow us
ರಾಜೇಶ್ ದುಗ್ಗುಮನೆ
|

Updated on:Jul 19, 2023 | 12:36 PM

ನೆಟ್​ಫ್ಲಿಕ್ಸ್ (Netflix) ಮೂಲಕ ರಿಲೀಸ್ ಆದ ‘ದಿ ಎಲಿಫೆಂಟ್​ ವಿಸ್ಪರರ್ಸ್​​’ ಸಾಕ್ಷ್ಯಚಿತ್ರ ಎಲ್ಲರ ಗಮನ ಸೆಳೆದಿದೆ. ಈ ಡಾಕ್ಯುಮೆಂಟರಿ ಆಸ್ಕರ್ ಅವಾರ್ಡ್ ಗೆಲ್ಲುವ ಮೂಲಕ ಹೊಸ ದಾಖಲೆ ಬರೆದಿತ್ತು. ಇದರಲ್ಲಿ ಮುಖ್ಯವಾಗಿ ಕಾಣಿಸಿಕೊಂಡವರು ಬೊಮ್ಮನ್ ಹಾಗೂ ಬೆಳ್ಳಿ. ಈಗ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಸನ್ಮಾನ ಮಾಡಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಈ ಸನ್ಮಾನ ನಡೆದಿದೆ. ಈ ಫೋಟೋಗಳನ್ನು ಸ್ವತಃ ದ್ರೌಪದಿ ಅವರು ಸೋಶಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.

ಈ ವರ್ಷ ನಡೆದ 95ನೇ ಸಾಲಿನ ಅಕಾಡೆಮಿ ಅವಾರ್ಡ್ಸ್​ನಲ್ಲಿ ‘ದಿ ಎಲಿಫೆಂಟ್​ ವಿಸ್ಪರರ್ಸ್​​’ ಸಾಕ್ಷ್ಯಚಿತ್ರ ಆಸ್ಕರ್ ಪ್ರಶಸ್ತಿ ಗೆದ್ದಿತು. ಇದಾದ ಬಳಿಕ ಬೊಮ್ಮನ್ ಹಾಗೂ ಬೆಳ್ಳಿ ಜನಪ್ರಿಯತೆ ಪಡೆದರು. ಇತ್ತೀಚೆಗೆ ಅವರನ್ನು ರಾಷ್ಟ್ರಪತಿ ಭವನಕ್ಕೆ ಕರೆಸಿ ಸನ್ಮಾನಿಸಲಾಗಿದೆ.

‘ಆಸ್ಕರ್ ಪ್ರಶಸ್ತಿ ಪಡೆದ ದಿ ಎಲಿಫೆಮಂಟ್ ವಿಸ್ಪರರ್ಸ್​​ನಲ್ಲಿ ಮುಖ್ಯವಾಗಿ ಕಾಣಿಸಿಕೊಂಡ ಬೊಮ್ಮನ್ ಹಾಗೂ ಬೆಳ್ಳಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸನ್ಮಾನಿಸಿದರು. ಆನೆ ಮರಿಗಳನ್ನು ನೋಡಿಕೊಳ್ಳಲು ಜೀವನ ಮುಡಿಪಿಟ್ಟ ಅವರನ್ನು ಶ್ಲಾಘಿಸಲಾಯಿತು’ ಎಂದು ರಾಷ್ಟ್ರಪತಿ ಟ್ವಿಟರ್ ಖಾತೆ ಮೂಲಕ ಟ್ವೀಟ್ ಮಾಡಲಾಗಿದೆ.

ತಮಿಳುನಾಡಿನ ಮುದುಮಲೈ ಹುಲಿ ಸಂರಕ್ಷಿತ ಅರಣ್ಯದ ತೆಪ್ಪಕಾಡು ಆನೆ ಶಿಬಿರದಲ್ಲಿ ಬೊಮ್ಮನ್ ಹಾಗೂ ಬೆಳ್ಳಿ ಇದ್ದಾರೆ. ಇಲ್ಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್​ 9ರಂದು ಭೇಟಿ ನೀಡಿದ್ದರು. ಈ ವೇಳೆ ಅವರು ಬೆಳ್ಳಿ ಮತ್ತು ಬೊಮ್ಮನ್​ ದಂಪತಿ ಜೊತೆ ಮಾತುಕತೆ ನಡೆಸಿದ್ದರು. ಈ ಫೋಟೋ ವೈರಲ್ ಆಗಿತ್ತು. ಇದಲ್ಲದೆ, ಬೊಮ್ಮನ್​ ಮತ್ತು ಬೆಳ್ಳಿ ದಂಪತಿಯನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​ ಅವರು ಸನ್ಮಾನಿಸಿದ್ದರು.

ಇದನ್ನೂ ಓದಿ: IPL 2023: ದಿ ಎಲಿಫೆಂಟ್​ ವಿಸ್ಪರರ್ಸ್​ ಖ್ಯಾತಿಯ ಬೊಮ್ಮನ್‌ ಮತ್ತು ಬೆಳ್ಳಿಗೆ ಜೆರ್ಸಿಯನ್ನು ಗಿಫ್ಟ್ ನೀಡಿದ ಧೋನಿ

ಬೊಮ್ಮನ್ ಹಾಗೂ ಬೆಳ್ಳಿ ಅವರ ಜೀವನ ಅನೇಕರಿಗೆ ಮಾದರಿ. ಅವರನ್ನು ಅನೇಕರು ಶ್ಲಾಘಿಸಿದ್ದಾರೆ. ‘ದಿ ಎಲಿಫೆಂಟ್​ ವಿಸ್ಪರರ್ಸ್​’ ಸಾಕ್ಷ್ಯಚಿತ್ರಕ್ಕೆ ಕಾರ್ತಿಕಿ​ ಗೋನ್ಸಾಲ್ವಿಸ್​​ ಅವರು ನಿರ್ದೇಶನ ಮಾಡಿದ್ದಾರೆ. ಮೊದಲ ಪ್ರಯತ್ನದಲ್ಲೇ ಅವರಿಗೆ ಆಸ್ಕರ್​ ಪ್ರಶಸ್ತಿ ಸಿಕ್ಕಿರುವುದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:13 pm, Wed, 19 July 23

ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ
ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ
14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ