AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Droupadi Murmu: ಬೊಮ್ಮನ್-ಬೆಳ್ಳಿ ದಂಪತಿಯನ್ನು ಸನ್ಮಾನಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

‘ದಿ ಎಲಿಫೆಂಟ್​ ವಿಸ್ಪರರ್ಸ್​​’ ಸಾಕ್ಷ್ಯಚಿತ್ರ ಆಸ್ಕರ್ ಪ್ರಶಸ್ತಿ ಗೆದ್ದಿತು. ಇದಾದ ಬಳಿಕ ಬೊಮ್ಮನ್ ಹಾಗೂ ಬೆಳ್ಳಿ ಜನಪ್ರಿಯತೆ ಪಡೆದರು. ಇತ್ತೀಚೆಗೆ ಅವರನ್ನು ರಾಷ್ಟ್ರಪತಿ ಭವನಕ್ಕೆ ಕರೆಸಿ ಸನ್ಮಾನಿಸಲಾಗಿದೆ.

Droupadi Murmu: ಬೊಮ್ಮನ್-ಬೆಳ್ಳಿ ದಂಪತಿಯನ್ನು ಸನ್ಮಾನಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ದ್ರೌಪದಿ ಮುರ್ಮು
ರಾಜೇಶ್ ದುಗ್ಗುಮನೆ
|

Updated on:Jul 19, 2023 | 12:36 PM

Share

ನೆಟ್​ಫ್ಲಿಕ್ಸ್ (Netflix) ಮೂಲಕ ರಿಲೀಸ್ ಆದ ‘ದಿ ಎಲಿಫೆಂಟ್​ ವಿಸ್ಪರರ್ಸ್​​’ ಸಾಕ್ಷ್ಯಚಿತ್ರ ಎಲ್ಲರ ಗಮನ ಸೆಳೆದಿದೆ. ಈ ಡಾಕ್ಯುಮೆಂಟರಿ ಆಸ್ಕರ್ ಅವಾರ್ಡ್ ಗೆಲ್ಲುವ ಮೂಲಕ ಹೊಸ ದಾಖಲೆ ಬರೆದಿತ್ತು. ಇದರಲ್ಲಿ ಮುಖ್ಯವಾಗಿ ಕಾಣಿಸಿಕೊಂಡವರು ಬೊಮ್ಮನ್ ಹಾಗೂ ಬೆಳ್ಳಿ. ಈಗ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಸನ್ಮಾನ ಮಾಡಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಈ ಸನ್ಮಾನ ನಡೆದಿದೆ. ಈ ಫೋಟೋಗಳನ್ನು ಸ್ವತಃ ದ್ರೌಪದಿ ಅವರು ಸೋಶಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.

ಈ ವರ್ಷ ನಡೆದ 95ನೇ ಸಾಲಿನ ಅಕಾಡೆಮಿ ಅವಾರ್ಡ್ಸ್​ನಲ್ಲಿ ‘ದಿ ಎಲಿಫೆಂಟ್​ ವಿಸ್ಪರರ್ಸ್​​’ ಸಾಕ್ಷ್ಯಚಿತ್ರ ಆಸ್ಕರ್ ಪ್ರಶಸ್ತಿ ಗೆದ್ದಿತು. ಇದಾದ ಬಳಿಕ ಬೊಮ್ಮನ್ ಹಾಗೂ ಬೆಳ್ಳಿ ಜನಪ್ರಿಯತೆ ಪಡೆದರು. ಇತ್ತೀಚೆಗೆ ಅವರನ್ನು ರಾಷ್ಟ್ರಪತಿ ಭವನಕ್ಕೆ ಕರೆಸಿ ಸನ್ಮಾನಿಸಲಾಗಿದೆ.

‘ಆಸ್ಕರ್ ಪ್ರಶಸ್ತಿ ಪಡೆದ ದಿ ಎಲಿಫೆಮಂಟ್ ವಿಸ್ಪರರ್ಸ್​​ನಲ್ಲಿ ಮುಖ್ಯವಾಗಿ ಕಾಣಿಸಿಕೊಂಡ ಬೊಮ್ಮನ್ ಹಾಗೂ ಬೆಳ್ಳಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸನ್ಮಾನಿಸಿದರು. ಆನೆ ಮರಿಗಳನ್ನು ನೋಡಿಕೊಳ್ಳಲು ಜೀವನ ಮುಡಿಪಿಟ್ಟ ಅವರನ್ನು ಶ್ಲಾಘಿಸಲಾಯಿತು’ ಎಂದು ರಾಷ್ಟ್ರಪತಿ ಟ್ವಿಟರ್ ಖಾತೆ ಮೂಲಕ ಟ್ವೀಟ್ ಮಾಡಲಾಗಿದೆ.

ತಮಿಳುನಾಡಿನ ಮುದುಮಲೈ ಹುಲಿ ಸಂರಕ್ಷಿತ ಅರಣ್ಯದ ತೆಪ್ಪಕಾಡು ಆನೆ ಶಿಬಿರದಲ್ಲಿ ಬೊಮ್ಮನ್ ಹಾಗೂ ಬೆಳ್ಳಿ ಇದ್ದಾರೆ. ಇಲ್ಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್​ 9ರಂದು ಭೇಟಿ ನೀಡಿದ್ದರು. ಈ ವೇಳೆ ಅವರು ಬೆಳ್ಳಿ ಮತ್ತು ಬೊಮ್ಮನ್​ ದಂಪತಿ ಜೊತೆ ಮಾತುಕತೆ ನಡೆಸಿದ್ದರು. ಈ ಫೋಟೋ ವೈರಲ್ ಆಗಿತ್ತು. ಇದಲ್ಲದೆ, ಬೊಮ್ಮನ್​ ಮತ್ತು ಬೆಳ್ಳಿ ದಂಪತಿಯನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​ ಅವರು ಸನ್ಮಾನಿಸಿದ್ದರು.

ಇದನ್ನೂ ಓದಿ: IPL 2023: ದಿ ಎಲಿಫೆಂಟ್​ ವಿಸ್ಪರರ್ಸ್​ ಖ್ಯಾತಿಯ ಬೊಮ್ಮನ್‌ ಮತ್ತು ಬೆಳ್ಳಿಗೆ ಜೆರ್ಸಿಯನ್ನು ಗಿಫ್ಟ್ ನೀಡಿದ ಧೋನಿ

ಬೊಮ್ಮನ್ ಹಾಗೂ ಬೆಳ್ಳಿ ಅವರ ಜೀವನ ಅನೇಕರಿಗೆ ಮಾದರಿ. ಅವರನ್ನು ಅನೇಕರು ಶ್ಲಾಘಿಸಿದ್ದಾರೆ. ‘ದಿ ಎಲಿಫೆಂಟ್​ ವಿಸ್ಪರರ್ಸ್​’ ಸಾಕ್ಷ್ಯಚಿತ್ರಕ್ಕೆ ಕಾರ್ತಿಕಿ​ ಗೋನ್ಸಾಲ್ವಿಸ್​​ ಅವರು ನಿರ್ದೇಶನ ಮಾಡಿದ್ದಾರೆ. ಮೊದಲ ಪ್ರಯತ್ನದಲ್ಲೇ ಅವರಿಗೆ ಆಸ್ಕರ್​ ಪ್ರಶಸ್ತಿ ಸಿಕ್ಕಿರುವುದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:13 pm, Wed, 19 July 23

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್