AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಡಿಷನ್​ ಮಾಡಿ ಪ್ರೊಡ್ಯೂಸರ್​ ಬೀದಿಗೆ ಬಂದ ಅಂದ್ರೆ ಇತಿಹಾಸ ಆಗಲ್ವಾ?’: ಇದು ‘ಮ್ಯಾನ್​ ಆಫ್​ ದಿ ಮ್ಯಾಚ್’​ ಪ್ರಶ್ನೆ

Man of The Match: ‘ಮ್ಯಾನ್​ ಆಫ್​ ದಿ ಮ್ಯಾಚ್​’ ಸಿನಿಮಾದ ಕಥೆ ಡಿಫರೆಂಟ್​ ಆಗಿದೆ ಎಂಬುದಕ್ಕೆ ಈ ಟ್ರೇಲರ್​ನಲ್ಲಿ ಸುಳಿವು ಸಿಕ್ಕಿದೆ. ಒಂದು ಆಡಿಷನ್​ ಸಂಗತಿಯನ್ನೇ ಇಟ್ಟುಕೊಂಡು ನಿರ್ದೇಶಕ ಡಿ. ಸತ್ಯ ಪ್ರಕಾಶ್​ ಅವರು ಸಿನಿಮಾ ಮಾಡಿದ್ದಾರೆ.

‘ಆಡಿಷನ್​ ಮಾಡಿ ಪ್ರೊಡ್ಯೂಸರ್​ ಬೀದಿಗೆ ಬಂದ ಅಂದ್ರೆ ಇತಿಹಾಸ ಆಗಲ್ವಾ?’: ಇದು ‘ಮ್ಯಾನ್​ ಆಫ್​ ದಿ ಮ್ಯಾಚ್’​ ಪ್ರಶ್ನೆ
ನಟರಾಜ್
TV9 Web
| Edited By: |

Updated on: May 02, 2022 | 1:52 PM

Share

ಕನ್ನಡ ಸಿನಿಮಾಗಳು ಒಟಿಟಿ ಪ್ಲಾಟ್​ಫಾರ್ಮ್​ನಲ್ಲೂ ಶೈನ್​ ಆಗುತ್ತಿವೆ. ಪುನೀತ್​ ರಾಜ್​ಕುಮಾರ್​ ಅವರ ‘ಪಿಆರ್​ಕೆ ಪ್ರೊಡಕ್ಷನ್ಸ್​’ (PRK Productions) ಮೂಲಕ ಹೊರಬಂದ ಹಲವು ಚಿತ್ರಗಳು ‘ಅಮೇಜಾನ್​ ಪ್ರೈಂ ವಿಡಿಯೋ’ದಲ್ಲಿ ಪ್ರಸಾರ ಆಗಿವೆ. ಆ ಸಾಲಿಗೆ ಈಗ ಇನ್ನೊಂದು ಚಿತ್ರ ಸೇರ್ಪಡೆ ಆಗುತ್ತಿದೆ. ಡಿ. ಸತ್ಯ ಪ್ರಕಾಶ್​ ಅವರು ನಿರ್ದೇಶನ ಮಾಡಿರುವ ‘ಮ್ಯಾನ್​ ಆಫ್ ದಿ ಮ್ಯಾಚ್​’ (Man of The Match) ಸಿನಿಮಾ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಇದೆ. ಟೈಟಲ್​ ಮೂಲಕವೇ ಈ ಚಿತ್ರ ನಿರೀಕ್ಷೆ ಮೂಡಿಸಿದೆ. ಈ ಸಿನಿಮಾದ ಶೂಟಿಂಗ್​ ನಡೆಯುವಾಗ ಪುನೀತ್​ ರಾಜ್​ಕುಮಾರ್​ ಅವರು ಚಿತ್ರೀಕರಣದ ಸ್ಥಳಕ್ಕೆ ಭೇಟಿ ನೀಡಿ ಚಿತ್ರತಂಡವನ್ನು ಹುರಿದುಂಬಿಸಿದ್ದರು. ‘ಮ್ಯಾನ್​ ಆಫ್​ ದಿ ಮ್ಯಾನ್​’ ಚಿತ್ರಕ್ಕೆ ಅಶ್ವಿನಿ ಪುನೀತ್​ ರಾಜ್​ಕುಮಾರ್​ ನಿರ್ಮಾಪಕಿ. ಈಗ ಈ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಮೇ 5ರಂದು ‘ಅಮೇಜಾನ್​ ಪ್ರೈಂ ವಿಡಿಯೋ’ (Amazon Prime Video) ಮೂಲಕ ‘ಮ್ಯಾನ್​ ಆಫ್​ ದಿ ಮ್ಯಾನ್​’ ಪ್ರಸಾರ ಆಗಲಿದೆ. ಇಂದು (ಮೇ 2) ಟ್ರೇಲರ್​ ಬಿಡುಗಡೆ ಆಗಿದ್ದು, ಸಿನಿಪ್ರಿಯರ ಗಮನ ಸೆಳೆಯುವಲ್ಲಿ ಚಿತ್ರತಂಡ ಯಶಸ್ವಿ ಆಗಿದೆ.

ನಿರ್ದೇಶಕ ಡಿ. ಸತ್ಯ ಪ್ರಕಾಶ್​ ಅವರು ಕನ್ನಡ ಚಿತ್ರರಂಗದಲ್ಲಿ ವಿಶೇಷವಾಗಿ ಗುರುತಿಸಿಕೊಂಡಿದ್ದಾರೆ. ಅವರ ನಿರ್ದೇಶನದಲ್ಲಿ ಮೂಡಿಬಂದ ‘ರಾಮಾ ರಾಮಾ ರೇ’, ‘ಒಂದಲ್ಲಾ ಎರಡಲ್ಲಾ’ ಸಿನಿಮಾಗಳು ಜನಮನ ಗೆದ್ದಿವೆ. ಈಗ ಅವರ ತಂಡದಿಂದ ‘ಮ್ಯಾನ್​ ಆಫ್​ ದಿ ಮ್ಯಾಚ್​’ ಚಿತ್ರ ತೆರೆಗೆ ಬರುತ್ತಿದೆ. ಈ ಸಿನಿಮಾ ಹೇಗಿದೆ ಎಂಬುದರ ಝಲಕ್​ ತೋರಿಸಲು ಟ್ರೇಲರ್​ ಬಿಡುಗಡೆ ಆಗಿದೆ.

‘ರಾಮಾ ರಾಮಾ ರೇ’ ಸಿನಿಮಾ ಮೂಲಕ ನಟರಾಜ್​, ಧರ್ಮಣ್ಣ ಮುಂತಾದ ಕಲಾವಿದರು ಖ್ಯಾತಿ ಪಡೆದರು. ‘ಮ್ಯಾನ್​ ಆಫ್​ ದಿ ಮ್ಯಾಚ್​’ ಚಿತ್ರದಲ್ಲೂ ಅವರು ಗಮನಾರ್ಹ ಪಾತ್ರಗಳನ್ನು ನಿಭಾಯಿಸಿದ್ದಾರೆ. ಈ ಸಿನಿಮಾದ ಕಥೆಯೇ ಸಖತ್​ ಡಿಫರೆಂಟ್​ ಆಗಿದೆ ಎಂಬುದಕ್ಕೆ ಈ ಟ್ರೇಲರ್​ನಲ್ಲಿ ಸುಳಿವು ಸಿಕ್ಕಿದೆ. ಒಂದು ಆಡಿಷನ್​ ಸಂಗತಿಯನ್ನೇ ಇಟ್ಟುಕೊಂಡು ನಿರ್ದೇಶಕ ಡಿ. ಸತ್ಯ ಪ್ರಕಾಶ್​ ಅವರು ಸಿನಿಮಾ ಮಾಡಿದಂತಿದೆ. ಈ ಟ್ರೇಲರ್​ನಲ್ಲಿ ಬರುವ ಒಂದು ಡೈಲಾಗ್​ ಹೆಚ್ಚು ಗಮನ ಸೆಳೆಯುತ್ತಿದೆ. ‘ಸಿನಿಮಾ ಮಾಡಿ ಪ್ರೊಡ್ಯೂಸರ್​ ಲಾಸ್​ ಆದ ಅಂದ್ರೆ ಓಕೆ ಗುರು. ಆದ್ರೆ ಆಡಿಷನ್​ ಮಾಡಿ ಪ್ರೊಡ್ಯೂಸರ್​ ಬೀದಿಗೆ ಬಂದ ಅಂದ್ರೆ ಇತಿಹಾಸ ಆಗಲ್ವಾ?’ ಎಂದು ಧರ್ಮಣ್ಣ ಹೊಡೆಯುವ ಡೈಲಾಗ್​ ಪ್ರೇಕ್ಷಕರನ್ನು ನಕ್ಕು ನಲಿಸುತ್ತಿದೆ. ವಾಸುಕಿ ವೈಭವ್​, ವೀಣಾ ಸುಂದರ್​ ಮುಂತಾದವರು ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಅನೇಕ ಹೊಸ ಕಲಾವಿದರು ಇದರಲ್ಲಿ ಬಣ್ಣ ಹಚ್ಚಿದ್ದಾರೆ.

(‘ಮ್ಯಾನ್​ ಆಫ್​ ದಿ ಮ್ಯಾಚ್​’ ಚಿತ್ರದ ಟ್ರೇಲರ್​)

‘ಮ್ಯಾನ್​ ಆಫ್ ದಿ ಮ್ಯಾಚ್​’ ಚಿತ್ರದ ಟ್ರೇಲರ್​ಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಯೂಟ್ಯೂಬ್​ನಲ್ಲಿ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಇದು ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ. ‘ರಾಮಾ ರಾಮಾ ರೇ’ ಸಿನಿಮಾಗೆ ರಾಜ್ಯ ಪ್ರಶಸ್ತಿ ಹಾಗೂ ‘ಒಂದಲ್ಲಾ ಎರಡಲ್ಲಾ’ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದು ನಿರ್ದೇಶಕ ಸತ್ಯ ಪ್ರಕಾಶ್​ ಅವರ ಹೆಗ್ಗಳಿಕೆ. ಹಾಗಾಗಿ ಅವರು ಮಾಡುವ ಎಲ್ಲ ಸಿನಿಮಾಗಳ ಮೇಲೆ ಸಹಜವಾಗಿಯೇ ನಿರೀಕ್ಷೆ ಇರುತ್ತದೆ. ಮೇ 5ರಂದು ‘ಮ್ಯಾನ್​ ಆಫ್​ ದಿ ಮ್ಯಾಚ್​’ ನೋಡಲು ಪ್ರೇಕ್ಷಕರು ಕಾದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

‘ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಇದನ್ನೂ ಓದಿ:

1ನೇ ಸೀಸನ್​ಗೆ 40 ಲಕ್ಷ ರೂ, 2ನೇ ಸೀಸನ್​ಗೆ 20 ಕೋಟಿ ರೂ. ಸಂಬಳ ಪಡೆದ ‘ಪಾತಾಳ್​ ಲೋಕ್​’ ನಟ

ಅಮೇಜಾನ್​ ಪ್ರೈಮ್​ನಿಂದ ಬಂಪರ್​ ಆಫರ್​; ಈ ಸಿನಿಮಾಗಳು ಉಚಿತ ವೀಕ್ಷಣೆಗೆ ಲಭ್ಯ

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು