AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ರಾಜ್​ಕುಮಾರ್ ಅಭಿಮಾನಿಗಳಿಗೆ ಖುಷಿ ಸುದ್ದಿ; ‘ಗಂಧದಗುಡಿ’ ಒಟಿಟಿ ರಿಲೀಸ್ ದಿನಾಂಕ ರಿವೀಲ್​

Gandhdadgudi OTT Release Date: ಪುನೀತ್ ರಾಜ್​ಕುಮಾರ್ ಅವರ ಪುಣ್ಯತಿಥಿಗೂ ಒಂದು ದಿನ ಮೊದಲು (ಅಕ್ಟೋಬರ್​ 28) ಈ ಸಾಕ್ಷ್ಯಚಿತ್ರ ಥಿಯೇಟರ್​ನಲ್ಲಿ ರಿಲೀಸ್ ಆಗಿತ್ತು. ಈಗ ಈ ಡಾಕ್ಯುಮೆಂಟರಿ ಒಟಿಟಿಗೆ ಕಾಲಿಡುತ್ತಿದೆ.

ಪುನೀತ್ ರಾಜ್​ಕುಮಾರ್ ಅಭಿಮಾನಿಗಳಿಗೆ ಖುಷಿ ಸುದ್ದಿ; ‘ಗಂಧದಗುಡಿ’ ಒಟಿಟಿ ರಿಲೀಸ್ ದಿನಾಂಕ ರಿವೀಲ್​
ಪುನೀತ್ ರಾಜ್​ಕುಮಾರ್
ರಾಜೇಶ್ ದುಗ್ಗುಮನೆ
|

Updated on:Mar 14, 2023 | 12:19 PM

Share

ಪುನೀತ್ ರಾಜ್​ಕುಮಾರ್ (Puneeth Rajkumar) ಅವರನ್ನು ಕಳೆದುಕೊಂಡಿರುವ ನೋವು ಇಷ್ಟು ಬೇಗ ಕಡಿಮೆ ಆಗುವಂಥದ್ದಲ್ಲ. ಸಿನಿಮಾಗಳ ಮೂಲಕ, ಅವರು ಮಾಡಿದ ಒಳ್ಳೆಯ ಕೆಲಸಗಳ ಮೂಲಕ ಪುನೀತ್ ರಾಜ್​ಕುಮಾರ್ ಅವರನ್ನು ನೆನಪಿಸಿಕೊಳ್ಳುವ ಕೆಲಸ ಆಗುತ್ತಿದೆ. ಅವರು ನಿರ್ಮಿಸಿ ‘ಗಂಧದಗುಡಿ’ ಸಾಕ್ಷ್ಯಚಿತ್ರದ ರಿಲೀಸ್ ದಿನಾಂಕ ಘೋಷಣೆ ಆಗಿದೆ. ಪುನೀತ್ ರಾಜ್​ಕುಮಾರ್ ಅವರ ಬರ್ತ್​ಡೇ ಪ್ರಯುಕ್ತ ಮಾರ್ಚ್​ 17ರಂದು ಈ ಡಾಕ್ಯುಮೆಂಟರಿ ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ರಿಲೀಸ್ ಆಗಲಿದೆ. ಈ ಮೂಲಕ ದೊಡ್ಮನೆ ಕುಟುಂಬ ಫ್ಯಾನ್ಸ್​ಗೆ ಉಡುಗೊರೆ ನೀಡುತ್ತಿದೆ.

‘ಗಂಧದಗುಡಿ’ ಸಾಕ್ಷ್ಯಚಿತ್ರದಲ್ಲಿ ಕಾಡಿನ ಕಥೆ ಇದೆ. ನಾಗರಹೊಳೆಯಿಂದ ಆರಂಭವಾಗುವ ಪುನೀತ್ ಹಾಗೂ ನಿರ್ದೇಶಕ ಅಮೋಘವರ್ಷ ಪಯಣ ರಾಜ್​ಕುಮಾರ್ ಹುಟ್ಟೂರಾದ ಗಾಜನೂರು, ಬಿಆರ್​ಟಿ ಟೈಗರ್ ರಿಸರ್ವ್, ಸಕ್ಕರೆ ಬೈಲು​, ಕರಾವಳಿಯ ನೇತ್ರಾಣಿ, ಜೋಗ ಜಲಪಾತ, ಆಗುಂಬೆ, ಉತ್ತರ ಕರ್ನಾಟಕದ ವಿಜಯನಗರ, ತುಂಗಭದ್ರಾ ನದಿಯ ಕಡೆಗಳಲ್ಲಿ ಸಾಗಿ ಕಾಳಿ ನದಿಯಲ್ಲಿ ಪೂರ್ಣಗೊಳ್ಳುತ್ತದೆ. ಕರ್ನಾಟಕದ ಅರಣ್ಯ ವೈವಿಧ್ಯತೆಯ ದರ್ಶನ ಈ ಸಾಕ್ಷ್ಯಚಿತ್ರದಿಂದ ಆಗಿದೆ. ಪುನೀತ್ ರಾಜ್​ಕುಮಾರ್ ಅವರ ಪುಣ್ಯತಿಥಿಗೂ ಒಂದು ದಿನ ಮೊದಲು (ಅಕ್ಟೋಬರ್​ 28) ಈ ಸಾಕ್ಷ್ಯಚಿತ್ರ ಥಿಯೇಟರ್​ನಲ್ಲಿ ರಿಲೀಸ್ ಆಗಿತ್ತು. ಈಗ ಈ ಡಾಕ್ಯುಮೆಂಟರಿ ಒಟಿಟಿಗೆ ಕಾಲಿಡುತ್ತಿದೆ.

ಇದನ್ನೂ ಓದಿ
Image
Puneeth Rajkumar: ಪುನೀತ್​ ರಾಜ್​ಕುಮಾರ್ ಇಲ್ಲದೇ ಕಳೆಯಿತು 11 ತಿಂಗಳು; ಸಮಾಧಿ ಬಳಿ ಕಣ್ಣೀರು ಹಾಕಿದ ಫ್ಯಾನ್ಸ್​
Image
ಹೊಸಪೇಟೆ ಪುನೀತ್ ಪುತ್ಥಳಿಗೆ ವಿನಯ್ ರಾಜ್​ಕುಮಾರ್ ಮಾಲಾರ್ಪಣೆ
Image
Kantara: ‘ಕಾಂತಾರ’ ಚಿತ್ರಕ್ಕೆ ಪುನೀತ್​ ಹೀರೋ ಆಗ್ಬೇಕಿತ್ತು; ಆ ಸ್ಥಾನಕ್ಕೆ ರಿಷಬ್ ಶೆಟ್ಟಿ ಬಂದಿದ್ದು ಹೇಗೆ? ಇಲ್ಲಿದೆ ಉತ್ತರ
Image
ಪುನೀತ್ ಜನ್ಮದಿನ ಇನ್ಮುಂದೆ ‘ಸ್ಫೂರ್ತಿ ದಿನ’; ಸಚಿವ ಸುನೀಲ್ ಕುಮಾರ್ ಮನವಿ ಪುರಸ್ಕರಿಸಿದ ಸಿಎಂ ಬೊಮ್ಮಾಯಿ

ಇಂದು (ಮಾರ್ಚ್​ 14) ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರ ಜನ್ಮದಿನ. ಈ ವಿಶೇಷ ದಿನದಂದು ‘ಗಂಧದಗುಡಿ’ಯ ಒಟಿಟಿ ರಿಲೀಸ್ ದಿನಾಂಕ ತಿಳಿಸಲಾಗಿದೆ. ಪುನೀತ್ ರಾಜ್​ಕುಮಾರ್ ಬರ್ತ್​ಡೇಗೆ ಇದು ಅಭಿಮಾನಿಗಳಿಗೆ ಸಿಗುತ್ತಿರುವ ಗಿಫ್ಟ್ ಎಂದು ಕೆಲವರು ಕರೆದಿದ್ದಾರೆ.

ಇದನ್ನೂ ಓದಿ: ಅಶ್ವಿನಿ ಪುನೀತ್​ ಬರ್ತ್​ಡೇ: ಹುಟುಹಬ್ಬಕ್ಕೂ ಮೊದಲು 4 ಕೋಟಿ ರೂ. ಕಾರು ಗಿಫ್ಟ್ ಕೊಟ್ಟಿದ್ದ ಅಪ್ಪು

ಕಳೆದ ವರ್ಷ ಮಾರ್ಚ್​ 17ರಂದು ‘ಜೇಮ್ಸ್​’ ಸಿನಿಮಾ ರಿಲೀಸ್ ಆಯಿತು. ಇದು ಅವರು ಹೀರೋ ಆಗಿ ನಟಿಸಿದ ಕೊನೆಯ ಸಿನಿಮಾ. ಈ ವರ್ಷ ಅವರ ಬರ್ತ್​ಡೇ ಪ್ರಯುಕ್ತ ‘ಗಂಧದಗುಡಿ’ ಒಟಿಟಿಗೆ ಕಾಲಿಡುತ್ತಿದೆ. ಈ ಡಾಕ್ಯುಮೆಂಟರಿಯಲ್ಲಿ ಪುನೀತ್ ರಾಜ್​ಕುಮಾರ್ ಅವರು ಎಷ್ಟು ಸರಳ ಎಂಬುದನ್ನು ಕಣ್ಣಿಗೆ ಕಟ್ಟುವಂತೆ ತೋರಿಸಲಾಗಿತ್ತು. ತೆರೆಮೇಲೆ ಹೀರೋ ಆಗಿ ಮಿಂಚಿದ ಪುನೀತ್ ಅವರು ಇಲ್ಲಿ ಸಾಮಾನ್ಯರಲ್ಲೇ ಸಾಮಾನ್ಯರಾಗಿ ಕಾಣಿಸಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:09 pm, Tue, 14 March 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!