AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ರಾಜ್​ಕುಮಾರ್ ಅಭಿಮಾನಿಗಳಿಗೆ ಖುಷಿ ಸುದ್ದಿ; ‘ಗಂಧದಗುಡಿ’ ಒಟಿಟಿ ರಿಲೀಸ್ ದಿನಾಂಕ ರಿವೀಲ್​

Gandhdadgudi OTT Release Date: ಪುನೀತ್ ರಾಜ್​ಕುಮಾರ್ ಅವರ ಪುಣ್ಯತಿಥಿಗೂ ಒಂದು ದಿನ ಮೊದಲು (ಅಕ್ಟೋಬರ್​ 28) ಈ ಸಾಕ್ಷ್ಯಚಿತ್ರ ಥಿಯೇಟರ್​ನಲ್ಲಿ ರಿಲೀಸ್ ಆಗಿತ್ತು. ಈಗ ಈ ಡಾಕ್ಯುಮೆಂಟರಿ ಒಟಿಟಿಗೆ ಕಾಲಿಡುತ್ತಿದೆ.

ಪುನೀತ್ ರಾಜ್​ಕುಮಾರ್ ಅಭಿಮಾನಿಗಳಿಗೆ ಖುಷಿ ಸುದ್ದಿ; ‘ಗಂಧದಗುಡಿ’ ಒಟಿಟಿ ರಿಲೀಸ್ ದಿನಾಂಕ ರಿವೀಲ್​
ಪುನೀತ್ ರಾಜ್​ಕುಮಾರ್
ರಾಜೇಶ್ ದುಗ್ಗುಮನೆ
|

Updated on:Mar 14, 2023 | 12:19 PM

Share

ಪುನೀತ್ ರಾಜ್​ಕುಮಾರ್ (Puneeth Rajkumar) ಅವರನ್ನು ಕಳೆದುಕೊಂಡಿರುವ ನೋವು ಇಷ್ಟು ಬೇಗ ಕಡಿಮೆ ಆಗುವಂಥದ್ದಲ್ಲ. ಸಿನಿಮಾಗಳ ಮೂಲಕ, ಅವರು ಮಾಡಿದ ಒಳ್ಳೆಯ ಕೆಲಸಗಳ ಮೂಲಕ ಪುನೀತ್ ರಾಜ್​ಕುಮಾರ್ ಅವರನ್ನು ನೆನಪಿಸಿಕೊಳ್ಳುವ ಕೆಲಸ ಆಗುತ್ತಿದೆ. ಅವರು ನಿರ್ಮಿಸಿ ‘ಗಂಧದಗುಡಿ’ ಸಾಕ್ಷ್ಯಚಿತ್ರದ ರಿಲೀಸ್ ದಿನಾಂಕ ಘೋಷಣೆ ಆಗಿದೆ. ಪುನೀತ್ ರಾಜ್​ಕುಮಾರ್ ಅವರ ಬರ್ತ್​ಡೇ ಪ್ರಯುಕ್ತ ಮಾರ್ಚ್​ 17ರಂದು ಈ ಡಾಕ್ಯುಮೆಂಟರಿ ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ರಿಲೀಸ್ ಆಗಲಿದೆ. ಈ ಮೂಲಕ ದೊಡ್ಮನೆ ಕುಟುಂಬ ಫ್ಯಾನ್ಸ್​ಗೆ ಉಡುಗೊರೆ ನೀಡುತ್ತಿದೆ.

‘ಗಂಧದಗುಡಿ’ ಸಾಕ್ಷ್ಯಚಿತ್ರದಲ್ಲಿ ಕಾಡಿನ ಕಥೆ ಇದೆ. ನಾಗರಹೊಳೆಯಿಂದ ಆರಂಭವಾಗುವ ಪುನೀತ್ ಹಾಗೂ ನಿರ್ದೇಶಕ ಅಮೋಘವರ್ಷ ಪಯಣ ರಾಜ್​ಕುಮಾರ್ ಹುಟ್ಟೂರಾದ ಗಾಜನೂರು, ಬಿಆರ್​ಟಿ ಟೈಗರ್ ರಿಸರ್ವ್, ಸಕ್ಕರೆ ಬೈಲು​, ಕರಾವಳಿಯ ನೇತ್ರಾಣಿ, ಜೋಗ ಜಲಪಾತ, ಆಗುಂಬೆ, ಉತ್ತರ ಕರ್ನಾಟಕದ ವಿಜಯನಗರ, ತುಂಗಭದ್ರಾ ನದಿಯ ಕಡೆಗಳಲ್ಲಿ ಸಾಗಿ ಕಾಳಿ ನದಿಯಲ್ಲಿ ಪೂರ್ಣಗೊಳ್ಳುತ್ತದೆ. ಕರ್ನಾಟಕದ ಅರಣ್ಯ ವೈವಿಧ್ಯತೆಯ ದರ್ಶನ ಈ ಸಾಕ್ಷ್ಯಚಿತ್ರದಿಂದ ಆಗಿದೆ. ಪುನೀತ್ ರಾಜ್​ಕುಮಾರ್ ಅವರ ಪುಣ್ಯತಿಥಿಗೂ ಒಂದು ದಿನ ಮೊದಲು (ಅಕ್ಟೋಬರ್​ 28) ಈ ಸಾಕ್ಷ್ಯಚಿತ್ರ ಥಿಯೇಟರ್​ನಲ್ಲಿ ರಿಲೀಸ್ ಆಗಿತ್ತು. ಈಗ ಈ ಡಾಕ್ಯುಮೆಂಟರಿ ಒಟಿಟಿಗೆ ಕಾಲಿಡುತ್ತಿದೆ.

ಇದನ್ನೂ ಓದಿ
Image
Puneeth Rajkumar: ಪುನೀತ್​ ರಾಜ್​ಕುಮಾರ್ ಇಲ್ಲದೇ ಕಳೆಯಿತು 11 ತಿಂಗಳು; ಸಮಾಧಿ ಬಳಿ ಕಣ್ಣೀರು ಹಾಕಿದ ಫ್ಯಾನ್ಸ್​
Image
ಹೊಸಪೇಟೆ ಪುನೀತ್ ಪುತ್ಥಳಿಗೆ ವಿನಯ್ ರಾಜ್​ಕುಮಾರ್ ಮಾಲಾರ್ಪಣೆ
Image
Kantara: ‘ಕಾಂತಾರ’ ಚಿತ್ರಕ್ಕೆ ಪುನೀತ್​ ಹೀರೋ ಆಗ್ಬೇಕಿತ್ತು; ಆ ಸ್ಥಾನಕ್ಕೆ ರಿಷಬ್ ಶೆಟ್ಟಿ ಬಂದಿದ್ದು ಹೇಗೆ? ಇಲ್ಲಿದೆ ಉತ್ತರ
Image
ಪುನೀತ್ ಜನ್ಮದಿನ ಇನ್ಮುಂದೆ ‘ಸ್ಫೂರ್ತಿ ದಿನ’; ಸಚಿವ ಸುನೀಲ್ ಕುಮಾರ್ ಮನವಿ ಪುರಸ್ಕರಿಸಿದ ಸಿಎಂ ಬೊಮ್ಮಾಯಿ

ಇಂದು (ಮಾರ್ಚ್​ 14) ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರ ಜನ್ಮದಿನ. ಈ ವಿಶೇಷ ದಿನದಂದು ‘ಗಂಧದಗುಡಿ’ಯ ಒಟಿಟಿ ರಿಲೀಸ್ ದಿನಾಂಕ ತಿಳಿಸಲಾಗಿದೆ. ಪುನೀತ್ ರಾಜ್​ಕುಮಾರ್ ಬರ್ತ್​ಡೇಗೆ ಇದು ಅಭಿಮಾನಿಗಳಿಗೆ ಸಿಗುತ್ತಿರುವ ಗಿಫ್ಟ್ ಎಂದು ಕೆಲವರು ಕರೆದಿದ್ದಾರೆ.

ಇದನ್ನೂ ಓದಿ: ಅಶ್ವಿನಿ ಪುನೀತ್​ ಬರ್ತ್​ಡೇ: ಹುಟುಹಬ್ಬಕ್ಕೂ ಮೊದಲು 4 ಕೋಟಿ ರೂ. ಕಾರು ಗಿಫ್ಟ್ ಕೊಟ್ಟಿದ್ದ ಅಪ್ಪು

ಕಳೆದ ವರ್ಷ ಮಾರ್ಚ್​ 17ರಂದು ‘ಜೇಮ್ಸ್​’ ಸಿನಿಮಾ ರಿಲೀಸ್ ಆಯಿತು. ಇದು ಅವರು ಹೀರೋ ಆಗಿ ನಟಿಸಿದ ಕೊನೆಯ ಸಿನಿಮಾ. ಈ ವರ್ಷ ಅವರ ಬರ್ತ್​ಡೇ ಪ್ರಯುಕ್ತ ‘ಗಂಧದಗುಡಿ’ ಒಟಿಟಿಗೆ ಕಾಲಿಡುತ್ತಿದೆ. ಈ ಡಾಕ್ಯುಮೆಂಟರಿಯಲ್ಲಿ ಪುನೀತ್ ರಾಜ್​ಕುಮಾರ್ ಅವರು ಎಷ್ಟು ಸರಳ ಎಂಬುದನ್ನು ಕಣ್ಣಿಗೆ ಕಟ್ಟುವಂತೆ ತೋರಿಸಲಾಗಿತ್ತು. ತೆರೆಮೇಲೆ ಹೀರೋ ಆಗಿ ಮಿಂಚಿದ ಪುನೀತ್ ಅವರು ಇಲ್ಲಿ ಸಾಮಾನ್ಯರಲ್ಲೇ ಸಾಮಾನ್ಯರಾಗಿ ಕಾಣಿಸಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:09 pm, Tue, 14 March 23

Follow Us
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್