AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ರಾಜ್​ಕುಮಾರ್ ಅಭಿಮಾನಿಗಳಿಗೆ ಖುಷಿ ಸುದ್ದಿ; ‘ಗಂಧದಗುಡಿ’ ಒಟಿಟಿ ರಿಲೀಸ್ ದಿನಾಂಕ ರಿವೀಲ್​

Gandhdadgudi OTT Release Date: ಪುನೀತ್ ರಾಜ್​ಕುಮಾರ್ ಅವರ ಪುಣ್ಯತಿಥಿಗೂ ಒಂದು ದಿನ ಮೊದಲು (ಅಕ್ಟೋಬರ್​ 28) ಈ ಸಾಕ್ಷ್ಯಚಿತ್ರ ಥಿಯೇಟರ್​ನಲ್ಲಿ ರಿಲೀಸ್ ಆಗಿತ್ತು. ಈಗ ಈ ಡಾಕ್ಯುಮೆಂಟರಿ ಒಟಿಟಿಗೆ ಕಾಲಿಡುತ್ತಿದೆ.

ಪುನೀತ್ ರಾಜ್​ಕುಮಾರ್ ಅಭಿಮಾನಿಗಳಿಗೆ ಖುಷಿ ಸುದ್ದಿ; ‘ಗಂಧದಗುಡಿ’ ಒಟಿಟಿ ರಿಲೀಸ್ ದಿನಾಂಕ ರಿವೀಲ್​
ಪುನೀತ್ ರಾಜ್​ಕುಮಾರ್
ರಾಜೇಶ್ ದುಗ್ಗುಮನೆ
|

Updated on:Mar 14, 2023 | 12:19 PM

Share

ಪುನೀತ್ ರಾಜ್​ಕುಮಾರ್ (Puneeth Rajkumar) ಅವರನ್ನು ಕಳೆದುಕೊಂಡಿರುವ ನೋವು ಇಷ್ಟು ಬೇಗ ಕಡಿಮೆ ಆಗುವಂಥದ್ದಲ್ಲ. ಸಿನಿಮಾಗಳ ಮೂಲಕ, ಅವರು ಮಾಡಿದ ಒಳ್ಳೆಯ ಕೆಲಸಗಳ ಮೂಲಕ ಪುನೀತ್ ರಾಜ್​ಕುಮಾರ್ ಅವರನ್ನು ನೆನಪಿಸಿಕೊಳ್ಳುವ ಕೆಲಸ ಆಗುತ್ತಿದೆ. ಅವರು ನಿರ್ಮಿಸಿ ‘ಗಂಧದಗುಡಿ’ ಸಾಕ್ಷ್ಯಚಿತ್ರದ ರಿಲೀಸ್ ದಿನಾಂಕ ಘೋಷಣೆ ಆಗಿದೆ. ಪುನೀತ್ ರಾಜ್​ಕುಮಾರ್ ಅವರ ಬರ್ತ್​ಡೇ ಪ್ರಯುಕ್ತ ಮಾರ್ಚ್​ 17ರಂದು ಈ ಡಾಕ್ಯುಮೆಂಟರಿ ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ರಿಲೀಸ್ ಆಗಲಿದೆ. ಈ ಮೂಲಕ ದೊಡ್ಮನೆ ಕುಟುಂಬ ಫ್ಯಾನ್ಸ್​ಗೆ ಉಡುಗೊರೆ ನೀಡುತ್ತಿದೆ.

‘ಗಂಧದಗುಡಿ’ ಸಾಕ್ಷ್ಯಚಿತ್ರದಲ್ಲಿ ಕಾಡಿನ ಕಥೆ ಇದೆ. ನಾಗರಹೊಳೆಯಿಂದ ಆರಂಭವಾಗುವ ಪುನೀತ್ ಹಾಗೂ ನಿರ್ದೇಶಕ ಅಮೋಘವರ್ಷ ಪಯಣ ರಾಜ್​ಕುಮಾರ್ ಹುಟ್ಟೂರಾದ ಗಾಜನೂರು, ಬಿಆರ್​ಟಿ ಟೈಗರ್ ರಿಸರ್ವ್, ಸಕ್ಕರೆ ಬೈಲು​, ಕರಾವಳಿಯ ನೇತ್ರಾಣಿ, ಜೋಗ ಜಲಪಾತ, ಆಗುಂಬೆ, ಉತ್ತರ ಕರ್ನಾಟಕದ ವಿಜಯನಗರ, ತುಂಗಭದ್ರಾ ನದಿಯ ಕಡೆಗಳಲ್ಲಿ ಸಾಗಿ ಕಾಳಿ ನದಿಯಲ್ಲಿ ಪೂರ್ಣಗೊಳ್ಳುತ್ತದೆ. ಕರ್ನಾಟಕದ ಅರಣ್ಯ ವೈವಿಧ್ಯತೆಯ ದರ್ಶನ ಈ ಸಾಕ್ಷ್ಯಚಿತ್ರದಿಂದ ಆಗಿದೆ. ಪುನೀತ್ ರಾಜ್​ಕುಮಾರ್ ಅವರ ಪುಣ್ಯತಿಥಿಗೂ ಒಂದು ದಿನ ಮೊದಲು (ಅಕ್ಟೋಬರ್​ 28) ಈ ಸಾಕ್ಷ್ಯಚಿತ್ರ ಥಿಯೇಟರ್​ನಲ್ಲಿ ರಿಲೀಸ್ ಆಗಿತ್ತು. ಈಗ ಈ ಡಾಕ್ಯುಮೆಂಟರಿ ಒಟಿಟಿಗೆ ಕಾಲಿಡುತ್ತಿದೆ.

ಇದನ್ನೂ ಓದಿ
Image
Puneeth Rajkumar: ಪುನೀತ್​ ರಾಜ್​ಕುಮಾರ್ ಇಲ್ಲದೇ ಕಳೆಯಿತು 11 ತಿಂಗಳು; ಸಮಾಧಿ ಬಳಿ ಕಣ್ಣೀರು ಹಾಕಿದ ಫ್ಯಾನ್ಸ್​
Image
ಹೊಸಪೇಟೆ ಪುನೀತ್ ಪುತ್ಥಳಿಗೆ ವಿನಯ್ ರಾಜ್​ಕುಮಾರ್ ಮಾಲಾರ್ಪಣೆ
Image
Kantara: ‘ಕಾಂತಾರ’ ಚಿತ್ರಕ್ಕೆ ಪುನೀತ್​ ಹೀರೋ ಆಗ್ಬೇಕಿತ್ತು; ಆ ಸ್ಥಾನಕ್ಕೆ ರಿಷಬ್ ಶೆಟ್ಟಿ ಬಂದಿದ್ದು ಹೇಗೆ? ಇಲ್ಲಿದೆ ಉತ್ತರ
Image
ಪುನೀತ್ ಜನ್ಮದಿನ ಇನ್ಮುಂದೆ ‘ಸ್ಫೂರ್ತಿ ದಿನ’; ಸಚಿವ ಸುನೀಲ್ ಕುಮಾರ್ ಮನವಿ ಪುರಸ್ಕರಿಸಿದ ಸಿಎಂ ಬೊಮ್ಮಾಯಿ

ಇಂದು (ಮಾರ್ಚ್​ 14) ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರ ಜನ್ಮದಿನ. ಈ ವಿಶೇಷ ದಿನದಂದು ‘ಗಂಧದಗುಡಿ’ಯ ಒಟಿಟಿ ರಿಲೀಸ್ ದಿನಾಂಕ ತಿಳಿಸಲಾಗಿದೆ. ಪುನೀತ್ ರಾಜ್​ಕುಮಾರ್ ಬರ್ತ್​ಡೇಗೆ ಇದು ಅಭಿಮಾನಿಗಳಿಗೆ ಸಿಗುತ್ತಿರುವ ಗಿಫ್ಟ್ ಎಂದು ಕೆಲವರು ಕರೆದಿದ್ದಾರೆ.

ಇದನ್ನೂ ಓದಿ: ಅಶ್ವಿನಿ ಪುನೀತ್​ ಬರ್ತ್​ಡೇ: ಹುಟುಹಬ್ಬಕ್ಕೂ ಮೊದಲು 4 ಕೋಟಿ ರೂ. ಕಾರು ಗಿಫ್ಟ್ ಕೊಟ್ಟಿದ್ದ ಅಪ್ಪು

ಕಳೆದ ವರ್ಷ ಮಾರ್ಚ್​ 17ರಂದು ‘ಜೇಮ್ಸ್​’ ಸಿನಿಮಾ ರಿಲೀಸ್ ಆಯಿತು. ಇದು ಅವರು ಹೀರೋ ಆಗಿ ನಟಿಸಿದ ಕೊನೆಯ ಸಿನಿಮಾ. ಈ ವರ್ಷ ಅವರ ಬರ್ತ್​ಡೇ ಪ್ರಯುಕ್ತ ‘ಗಂಧದಗುಡಿ’ ಒಟಿಟಿಗೆ ಕಾಲಿಡುತ್ತಿದೆ. ಈ ಡಾಕ್ಯುಮೆಂಟರಿಯಲ್ಲಿ ಪುನೀತ್ ರಾಜ್​ಕುಮಾರ್ ಅವರು ಎಷ್ಟು ಸರಳ ಎಂಬುದನ್ನು ಕಣ್ಣಿಗೆ ಕಟ್ಟುವಂತೆ ತೋರಿಸಲಾಗಿತ್ತು. ತೆರೆಮೇಲೆ ಹೀರೋ ಆಗಿ ಮಿಂಚಿದ ಪುನೀತ್ ಅವರು ಇಲ್ಲಿ ಸಾಮಾನ್ಯರಲ್ಲೇ ಸಾಮಾನ್ಯರಾಗಿ ಕಾಣಿಸಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:09 pm, Tue, 14 March 23

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ