AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ರಾಜ್​ಕುಮಾರ್ ಅಭಿಮಾನಿಗಳಿಗೆ ಖುಷಿ ಸುದ್ದಿ; ‘ಗಂಧದಗುಡಿ’ ಒಟಿಟಿ ರಿಲೀಸ್ ದಿನಾಂಕ ರಿವೀಲ್​

Gandhdadgudi OTT Release Date: ಪುನೀತ್ ರಾಜ್​ಕುಮಾರ್ ಅವರ ಪುಣ್ಯತಿಥಿಗೂ ಒಂದು ದಿನ ಮೊದಲು (ಅಕ್ಟೋಬರ್​ 28) ಈ ಸಾಕ್ಷ್ಯಚಿತ್ರ ಥಿಯೇಟರ್​ನಲ್ಲಿ ರಿಲೀಸ್ ಆಗಿತ್ತು. ಈಗ ಈ ಡಾಕ್ಯುಮೆಂಟರಿ ಒಟಿಟಿಗೆ ಕಾಲಿಡುತ್ತಿದೆ.

ಪುನೀತ್ ರಾಜ್​ಕುಮಾರ್ ಅಭಿಮಾನಿಗಳಿಗೆ ಖುಷಿ ಸುದ್ದಿ; ‘ಗಂಧದಗುಡಿ’ ಒಟಿಟಿ ರಿಲೀಸ್ ದಿನಾಂಕ ರಿವೀಲ್​
ಪುನೀತ್ ರಾಜ್​ಕುಮಾರ್
ರಾಜೇಶ್ ದುಗ್ಗುಮನೆ
|

Updated on:Mar 14, 2023 | 12:19 PM

Share

ಪುನೀತ್ ರಾಜ್​ಕುಮಾರ್ (Puneeth Rajkumar) ಅವರನ್ನು ಕಳೆದುಕೊಂಡಿರುವ ನೋವು ಇಷ್ಟು ಬೇಗ ಕಡಿಮೆ ಆಗುವಂಥದ್ದಲ್ಲ. ಸಿನಿಮಾಗಳ ಮೂಲಕ, ಅವರು ಮಾಡಿದ ಒಳ್ಳೆಯ ಕೆಲಸಗಳ ಮೂಲಕ ಪುನೀತ್ ರಾಜ್​ಕುಮಾರ್ ಅವರನ್ನು ನೆನಪಿಸಿಕೊಳ್ಳುವ ಕೆಲಸ ಆಗುತ್ತಿದೆ. ಅವರು ನಿರ್ಮಿಸಿ ‘ಗಂಧದಗುಡಿ’ ಸಾಕ್ಷ್ಯಚಿತ್ರದ ರಿಲೀಸ್ ದಿನಾಂಕ ಘೋಷಣೆ ಆಗಿದೆ. ಪುನೀತ್ ರಾಜ್​ಕುಮಾರ್ ಅವರ ಬರ್ತ್​ಡೇ ಪ್ರಯುಕ್ತ ಮಾರ್ಚ್​ 17ರಂದು ಈ ಡಾಕ್ಯುಮೆಂಟರಿ ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ರಿಲೀಸ್ ಆಗಲಿದೆ. ಈ ಮೂಲಕ ದೊಡ್ಮನೆ ಕುಟುಂಬ ಫ್ಯಾನ್ಸ್​ಗೆ ಉಡುಗೊರೆ ನೀಡುತ್ತಿದೆ.

‘ಗಂಧದಗುಡಿ’ ಸಾಕ್ಷ್ಯಚಿತ್ರದಲ್ಲಿ ಕಾಡಿನ ಕಥೆ ಇದೆ. ನಾಗರಹೊಳೆಯಿಂದ ಆರಂಭವಾಗುವ ಪುನೀತ್ ಹಾಗೂ ನಿರ್ದೇಶಕ ಅಮೋಘವರ್ಷ ಪಯಣ ರಾಜ್​ಕುಮಾರ್ ಹುಟ್ಟೂರಾದ ಗಾಜನೂರು, ಬಿಆರ್​ಟಿ ಟೈಗರ್ ರಿಸರ್ವ್, ಸಕ್ಕರೆ ಬೈಲು​, ಕರಾವಳಿಯ ನೇತ್ರಾಣಿ, ಜೋಗ ಜಲಪಾತ, ಆಗುಂಬೆ, ಉತ್ತರ ಕರ್ನಾಟಕದ ವಿಜಯನಗರ, ತುಂಗಭದ್ರಾ ನದಿಯ ಕಡೆಗಳಲ್ಲಿ ಸಾಗಿ ಕಾಳಿ ನದಿಯಲ್ಲಿ ಪೂರ್ಣಗೊಳ್ಳುತ್ತದೆ. ಕರ್ನಾಟಕದ ಅರಣ್ಯ ವೈವಿಧ್ಯತೆಯ ದರ್ಶನ ಈ ಸಾಕ್ಷ್ಯಚಿತ್ರದಿಂದ ಆಗಿದೆ. ಪುನೀತ್ ರಾಜ್​ಕುಮಾರ್ ಅವರ ಪುಣ್ಯತಿಥಿಗೂ ಒಂದು ದಿನ ಮೊದಲು (ಅಕ್ಟೋಬರ್​ 28) ಈ ಸಾಕ್ಷ್ಯಚಿತ್ರ ಥಿಯೇಟರ್​ನಲ್ಲಿ ರಿಲೀಸ್ ಆಗಿತ್ತು. ಈಗ ಈ ಡಾಕ್ಯುಮೆಂಟರಿ ಒಟಿಟಿಗೆ ಕಾಲಿಡುತ್ತಿದೆ.

ಇದನ್ನೂ ಓದಿ
Image
Puneeth Rajkumar: ಪುನೀತ್​ ರಾಜ್​ಕುಮಾರ್ ಇಲ್ಲದೇ ಕಳೆಯಿತು 11 ತಿಂಗಳು; ಸಮಾಧಿ ಬಳಿ ಕಣ್ಣೀರು ಹಾಕಿದ ಫ್ಯಾನ್ಸ್​
Image
ಹೊಸಪೇಟೆ ಪುನೀತ್ ಪುತ್ಥಳಿಗೆ ವಿನಯ್ ರಾಜ್​ಕುಮಾರ್ ಮಾಲಾರ್ಪಣೆ
Image
Kantara: ‘ಕಾಂತಾರ’ ಚಿತ್ರಕ್ಕೆ ಪುನೀತ್​ ಹೀರೋ ಆಗ್ಬೇಕಿತ್ತು; ಆ ಸ್ಥಾನಕ್ಕೆ ರಿಷಬ್ ಶೆಟ್ಟಿ ಬಂದಿದ್ದು ಹೇಗೆ? ಇಲ್ಲಿದೆ ಉತ್ತರ
Image
ಪುನೀತ್ ಜನ್ಮದಿನ ಇನ್ಮುಂದೆ ‘ಸ್ಫೂರ್ತಿ ದಿನ’; ಸಚಿವ ಸುನೀಲ್ ಕುಮಾರ್ ಮನವಿ ಪುರಸ್ಕರಿಸಿದ ಸಿಎಂ ಬೊಮ್ಮಾಯಿ

ಇಂದು (ಮಾರ್ಚ್​ 14) ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರ ಜನ್ಮದಿನ. ಈ ವಿಶೇಷ ದಿನದಂದು ‘ಗಂಧದಗುಡಿ’ಯ ಒಟಿಟಿ ರಿಲೀಸ್ ದಿನಾಂಕ ತಿಳಿಸಲಾಗಿದೆ. ಪುನೀತ್ ರಾಜ್​ಕುಮಾರ್ ಬರ್ತ್​ಡೇಗೆ ಇದು ಅಭಿಮಾನಿಗಳಿಗೆ ಸಿಗುತ್ತಿರುವ ಗಿಫ್ಟ್ ಎಂದು ಕೆಲವರು ಕರೆದಿದ್ದಾರೆ.

ಇದನ್ನೂ ಓದಿ: ಅಶ್ವಿನಿ ಪುನೀತ್​ ಬರ್ತ್​ಡೇ: ಹುಟುಹಬ್ಬಕ್ಕೂ ಮೊದಲು 4 ಕೋಟಿ ರೂ. ಕಾರು ಗಿಫ್ಟ್ ಕೊಟ್ಟಿದ್ದ ಅಪ್ಪು

ಕಳೆದ ವರ್ಷ ಮಾರ್ಚ್​ 17ರಂದು ‘ಜೇಮ್ಸ್​’ ಸಿನಿಮಾ ರಿಲೀಸ್ ಆಯಿತು. ಇದು ಅವರು ಹೀರೋ ಆಗಿ ನಟಿಸಿದ ಕೊನೆಯ ಸಿನಿಮಾ. ಈ ವರ್ಷ ಅವರ ಬರ್ತ್​ಡೇ ಪ್ರಯುಕ್ತ ‘ಗಂಧದಗುಡಿ’ ಒಟಿಟಿಗೆ ಕಾಲಿಡುತ್ತಿದೆ. ಈ ಡಾಕ್ಯುಮೆಂಟರಿಯಲ್ಲಿ ಪುನೀತ್ ರಾಜ್​ಕುಮಾರ್ ಅವರು ಎಷ್ಟು ಸರಳ ಎಂಬುದನ್ನು ಕಣ್ಣಿಗೆ ಕಟ್ಟುವಂತೆ ತೋರಿಸಲಾಗಿತ್ತು. ತೆರೆಮೇಲೆ ಹೀರೋ ಆಗಿ ಮಿಂಚಿದ ಪುನೀತ್ ಅವರು ಇಲ್ಲಿ ಸಾಮಾನ್ಯರಲ್ಲೇ ಸಾಮಾನ್ಯರಾಗಿ ಕಾಣಿಸಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:09 pm, Tue, 14 March 23

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್