AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲಿ ಕುಳಿತು ನೋಡಬಹುದು ‘ಪುಷ್ಪ’ ಚಿತ್ರ; ಅಮೇಜಾನ್​ ಪ್ರೈಮ್​ನಲ್ಲಿ ರಿಲೀಸ್​ಗೆ ದಿನಾಂಕ ನಿಗದಿ

ಒಮಿಕ್ರಾನ್​ ಹೆಚ್ಚುತ್ತಿರುವ ಕಾರಣ ಗಲ್ಲಾಪೆಟ್ಟಿಗೆಯಲ್ಲಿ ಎಲ್ಲ ಸಿನಿಮಾಗಳ ಕಲೆಕ್ಷನ್​ ನಿಧಾನಕ್ಕೆ ಕುಸಿದಿದೆ. ಅಮೇಜಾನ್​ ಪ್ರೈಮ್​ ವಿಡಿಯೋದಲ್ಲಿ ಸಿನಿಮಾ ಪ್ರಸಾರ ಮಾಡಲು ಇದು ಸೂಕ್ತ ಸಮಯ ಎಂದು ‘ಪುಷ್ಪ’ ಚಿತ್ರತಂಡ ನಿರ್ಧರಿಸಿದೆ.

ಮನೆಯಲ್ಲಿ ಕುಳಿತು ನೋಡಬಹುದು ‘ಪುಷ್ಪ’ ಚಿತ್ರ; ಅಮೇಜಾನ್​ ಪ್ರೈಮ್​ನಲ್ಲಿ ರಿಲೀಸ್​ಗೆ ದಿನಾಂಕ ನಿಗದಿ
ಅಲ್ಲು ಅರ್ಜುನ್
TV9 Web
| Updated By: ಮದನ್​ ಕುಮಾರ್​|

Updated on: Jan 05, 2022 | 1:54 PM

Share

ಗಲ್ಲಾಪೆಟ್ಟಿಗೆಯಲ್ಲಿ ‘ಪುಷ್ಪ’ ಸಿನಿಮಾ ನೂರಾರು ಕೋಟಿ ರೂಪಾಯಿ ಕಮಾಯಿ ಮಾಡಿದೆ. ಆ ಮೂಲಕ ಅಲ್ಲು ಅರ್ಜುನ್​ ಸಿನಿಮಾ ಜರ್ನಿಗೆ ಮತ್ತೊಂದು ಭರ್ಜರಿ ಗೆಲುವು ಸಿಕ್ಕಂತಾಗಿದೆ. ಈ ಚಿತ್ರದಿಂದಾಗಿ ನಟಿ ರಶ್ಮಿಕಾ ಮಂದಣ್ಣ ಅವರ ವೃತ್ತಿಜೀವನದ ಮೈಲೇಜ್​ ಹೆಚ್ಚಿದೆ. ಡಿ.17ರಂದು ‘ಪುಷ್ಪ’ ಸಿನಿಮಾ ವಿಶ್ವಾದ್ಯಂತ ರಿಲೀಸ್​ ಆಗಿತ್ತು. ಈಗಲೂ ಅನೇಕ ಕಡೆಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಅದರ ಜತೆಗೆ ಒಟಿಟಿಯಲ್ಲೂ ಪ್ರಸಾರ ಆರಂಭಿಸಲಿದೆ. ಹೌದು, ಅಮೇಜಾನ್​ ಪ್ರೈಮ್​ ವಿಡಿಯೋ ಮೂಲಕ ಜ.7ರಂದು ‘ಪುಷ್ಪ’ ವೀಕ್ಷಣೆಗೆ ಲಭ್ಯವಾಗಲಿದೆ. ಈ ಸುದ್ದಿ ಕೇಳಿ ಸಿನಿಪ್ರಿಯರು ಖುಷಿಪಟ್ಟಿದ್ದಾರೆ.

ದೇಶಾದ್ಯಂತ ಒಮಿಕ್ರಾನ್​ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಆ ಕಾರಣದಿಂದ ಒಂದು ವರ್ಗದ ಪ್ರೇಕ್ಷಕರು ಚಿತ್ರಮಂದಿರದ ಕಡೆಗೆ ಹೆಜ್ಜೆ ಹಾಕಲು ಹಿಂಜರಿದಿದ್ದರು. ಅವರೆಲ್ಲರೂ ಈಗ ಮನೆಯಲ್ಲೇ ‘ಪುಷ್ಪ’ ಚಿತ್ರ ನೋಡಬಹುದು. ಈಗ ಅನೇಕ ರಾಜ್ಯಗಳಲ್ಲಿ ಚಿತ್ರಮಂದಿರಗಳ ಮೇಲೆ ಶೇ.50ರಷ್ಟು ಆಸನಮಿತಿ ನಿರ್ಬಂಧ ಹೇರಲಾಗಿದೆ. ಹಾಗಾಗಿ ಗಲ್ಲಾಪೆಟ್ಟಿಗೆ ಕಲೆಕ್ಷನ್​ ನಿಧಾನಕ್ಕೆ ಕುಸಿದಿದೆ. ಅಮೇಜಾನ್​ ಪ್ರೈಮ್​ ವಿಡಿಯೋದಲ್ಲಿ ಸಿನಿಮಾ ಪ್ರಸಾರ ಮಾಡಲು ಇದು ಸೂಕ್ತ ಸಮಯ ಎಂದು ಚಿತ್ರತಂಡ ನಿರ್ಧರಿಸಿದೆ.

ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಸುಕುಮಾರ್​ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ದೇವಿಶ್ರೀ ಪ್ರಸಾದ್​ ಅವರ ಸಂಗೀತ ನಿರ್ದೇಶನದಲ್ಲಿ ಮೂಡಿಬಂದ ಎಲ್ಲ ಹಾಡುಗಳು ಧೂಳೆಬ್ಬಿಸಿವೆ. ಅದರಲ್ಲೂ ಸಮಂತಾ ಡ್ಯಾನ್ಸ್​ ಮಾಡಿರುವ ‘ಹು ಅಂತಿವಾ ಮಾವ ಊಹೂ ಅಂತಿಯಾ ಮಾವ..’ ಹಾಡು ಸೂಪರ್​ ಹಿಟ್​ ಆಯಿತು. ಈ ಸಿನಿಮಾದ ಭರ್ಜರಿ ಗೆಲುವಿನಲ್ಲಿ ಈ ಹಾಡಿನ ಪಾತ್ರ ಕೂಡ ದೊಡ್ಡದಿದೆ.

ಇತ್ತೀಚೆಗೆ ‘ಪುಷ್ಪ’ ಸಿನಿಮಾ ತಂಡದಿಂದ ಥ್ಯಾಂಕ್ಸ್​ ಮೀಟ್​ ಆಯೋಜಿಸಲಾಗಿತ್ತು. ಆ ವೇದಿಕೆಯಲ್ಲಿ ಅಲ್ಲು ಅರ್ಜುನ್ ಅವರು ಕಣ್ಣೀರು ಹಾಕಿದ್ದರು. ಅಂದು ಅವರು 40 ನಿಮಿಷಕ್ಕೂ ಹೆಚ್ಚು ಕಾಲ ಮಾತನಾಡಿದರು. ತಮ್ಮ ಗೆಲುವಿಗೆ ಕಾರಣರಾದ ಎಲ್ಲರನ್ನೂ ಅವರು ನೆನಪಿಸಿಕೊಂಡರು. ‘ಕಳೆದ ಎರಡು ವರ್ಷ ತುಂಬ ಕಠಿಣವಾಗಿತ್ತು. ನಿಮ್ಮೆಲ್ಲರಿಗೂ ಧನ್ಯವಾದ ಹೇಳಬೇಕು ಎಂದು ನಾನು ಈ ಕ್ಷಣಕ್ಕಾಗಿ ಕಾದಿದ್ದೆ. ಇನ್ಮುಂದೆ ನನ್ನ ಸಿನಿಮಾ ಸೋತರೂ ಸಹ ನಾನು ಥ್ಯಾಂಕ್ಸ್​ ಮೀಟ್​ ಆಯೋಜಿಸುತ್ತೇನೆ. ಯಾಕೆಂದರೆ ಸೋತ ಚಿತ್ರದ ಹಿಂದೆಯೂ ತಂಡದ ಶ್ರಮ ಇರುತ್ತದೆ’ ಎಂದು ಅಲ್ಲು ಅರ್ಜುನ್​ ಹೇಳಿದ್ದರು.

‘ಪುಷ್ಪ’ ಸಿನಿಮಾ ಎರಡು ಪಾರ್ಟ್​ಗಳಲ್ಲಿ ತಯಾರಾಗಿದೆ. ಮೊದಲ ಪಾರ್ಟ್​ ಸೂಪರ್ ಹಿಟ್​ ಆಗಿರುವುದರಿಂದ ಎರಡನೇ ಪಾರ್ಟ್​ ಮೇಲೆ ನಿರೀಕ್ಷೆ ಹೆಚ್ಚಿದೆ. ಡಾಲಿ ಧನಂಜಯ್​, ಫಹಾದ್​ ಫಾಸಿಲ್​ ಮುಂತಾದ ಸ್ಟಾರ್​ ಕಲಾವಿದರಿಂದ ಈ ಸಿನಿಮಾದ ಸ್ಟಾರ್​ ಮೆರುಗು ಹೆಚ್ಚಿದೆ.

ಇದನ್ನೂ ಓದಿ:

‘ಪುಷ್ಪ 2’ ಚಿತ್ರದಲ್ಲಿ ಧನಂಜಯ ಪಾತ್ರದ ಬಗ್ಗೆ ಹೊಸ ಅಪ್​ಡೇಟ್​ ನೀಡಿದ ನಿರ್ದೇಶಕ ಸುಕುಮಾರ್​

‘ಪುಷ್ಪ’ ಹಾಡಿನಿಂದ ಸಮಂತಾ ಪ್ರಪಂಚದಲ್ಲೇ ನಂ.1; ಏನಿದು ಹೊಸ ದಾಖಲೆ?

ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ