AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

R Madhavan: ನೆಟ್​​ಫ್ಲಿಕ್ಸ್​ನಲ್ಲಿ ಹೊಸ ದಾಖಲೆ ಸೃಷ್ಟಿಸಿದ ಮಾಧವನ್ ನಟನೆಯ ವೆಬ್ ಸೀರೀಸ್; ಏನಿದು ಸಮಾಚಾರ?

Decoupled Series: ಆರ್ ಮಾಧಬವನ್ ಹಾಗೂ ಸುರ್ವೀನ್ ಚಾವ್ಲಾ ಕಾಣಿಸಿಕೊಂಡಿರುವ ನೆಟ್​ಫ್ಲಿಕ್ಸ್ ಸರಣಿ ‘ಡಿಕಪಲ್ಡ್’ ವೀಕ್ಷಕರಿಂದ, ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ. ಇದೀಗ ಈ ಸರಣಿ ಹೊಸ ದಾಖಲೆಯನ್ನು ಬರೆದಿದೆ.

R Madhavan: ನೆಟ್​​ಫ್ಲಿಕ್ಸ್​ನಲ್ಲಿ ಹೊಸ ದಾಖಲೆ ಸೃಷ್ಟಿಸಿದ ಮಾಧವನ್ ನಟನೆಯ ವೆಬ್ ಸೀರೀಸ್; ಏನಿದು ಸಮಾಚಾರ?
‘ಡಿಕಪಲ್ಡ್’ ಚಿತ್ರದಲ್ಲಿ ಆರ್ ಮಾಧವನ್ ಹಾಗೂ ಸುರ್ವೀನ್ ಚಾವ್ಲಾ
Follow us
TV9 Web
| Updated By: shivaprasad.hs

Updated on: Dec 22, 2021 | 8:21 AM

ಆರ್.ಮಾಧವನ್ (R Madhavan) ಮತ್ತು ಸುರ್ವೀನ್ ಚಾವ್ಲಾ (Surveen Chawla) ಕಾಣಿಸಿಕೊಂಡಿರುವ ‘ಡಿಕಪಲ್ಡ್’ (Decoupled) ಸೀರೀಸ್ ಇತ್ತೀಚೆಗೆ ನೆಟ್​ಫ್ಲಿಕ್ಸ್​ನಲ್ಲಿ (Netflix) ಬಿಡುಗಡೆಯಾಗಿದೆ. ಈ ಸೀರೀಸ್​​ನಲ್ಲಿ ಈರ್ವರೂ ದಂಪತಿಗಳಾಗಿ ಕಾಣಿಸಿಕೊಂಡಿದ್ದಾರೆ. ವಿಚ್ಛೇದನಕ್ಕೂ ಮುನ್ನ ತಮ್ಮ ಮಗಳ ನಡುವೆ ಸಮಯವನ್ನು ಕಳೆಯುವ ಕತೆಯನ್ನು ಸೀರೀಸ್ ಒಳಗೊಂಡಿದೆ. ಸದ್ಯ ಈ ಸರಣಿಯನ್ನು ವೀಕ್ಷಕರು ಇಷ್ಟಪಟ್ಟಿದ್ದು, ಹಲವು ದಾಖಲೆಗಳನ್ನು ಬರೆದಿದೆ. ಸ್ವತಃ ಮಾಧವನ್ ಟ್ವೀಟ್ ಮೂಲಕ ಸಂತಸವನ್ನು ಹಂಚಿಕೊಂಡಿದ್ದು, ‘ಡಿಕಪಲ್ಡ್’ ಹೊಸ ಮೈಲಿಗಲ್ಲನ್ನು ಸೃಷ್ಟಿಸಲು ಕಾರಣರಾದವರಿಗೆ ಧನ್ಯವಾದ ಹೇಳಿದ್ದಾರೆ. ಸದ್ಯ ‘ಡಿಕಪಲ್ಡ್’ ಸರಣಿಯು ಟ್ರೆಂಡಿಂಗ್​ನಲ್ಲಿ ಎರಡನೇ ಸ್ಥಾನದಲ್ಲಿದೆ. ಅಲ್ಲದೇ ಅತ್ಯಂತ ಹೆಚ್ಚು ಜನರಿಂದ ವೀಕ್ಷಿಸಲ್ಪಟ್ಟ ಭಾರತೀಯ ಸರಣಿ ಎಂಬ ಖ್ಯಾತಿಯನ್ನೂ ಪಡೆದಿದೆ. ಇದನ್ನು ಕೇವಲ 72 ಗಂಟೆಯಲ್ಲಿ ಸಾಧಿಸಿದ್ದು ಈ ಸರಣಿಯ ಹೆಚ್ಚುಗಾರಿಕೆಯಾಗಿದೆ. ಈ ಕುರಿತು ಮಾಧವನ್ ಬರೆದುಕೊಂಡಿದ್ದಾರೆ.

ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ಮಾಧವನ್ ಅದಕ್ಕೆ ನೆಟ್​​ಫ್ಲಿಕ್ಸ್​​ನಲ್ಲಿ ಟಾಪ್ ಟ್ರೆಂಡಿಂಗ್​ನಲ್ಲಿರುವ ಸರಣಿಗಳ ಚಿತ್ರವನ್ನು ಲಗತ್ತಿಸಿದ್ದಾರೆ. ಅದರಲ್ಲಿ ಡಿಕಪಲ್ಡ್ ಎರಡನೇ ಸ್ಥಾನದಲ್ಲಿದೆ. ‘‘ದೇವರು ಹಾಗೂ ಎಲ್ಲಾ ಹಿರಿಯರ ಆಶೀರ್ವಾದ ಮತ್ತು ಜನರ ಪ್ರೀತಿಯಿಂದ ‘ಡಿಕಪಲ್ಡ್’ ಸರಣಿಯು ಕೇವಲ 72 ಗಂಟೆಗಳ ಅವಧಿಯಲ್ಲಿ ಭಾರತದ ನಂಬರ್ 1 ನೆಟ್​​ಫ್ಲಿಕ್ಸ್ ಸರಣಿಯಾಗಿದೆ. ಇದರಿಂದ ಭಾವುಕನಾಗಿದ್ದಾನೆ ಮತ್ತು ವಿನಮ್ರನಾಗಿದ್ದೇನೆ’’ ಎಂದು ಅವರು ಬರೆದಿದ್ದಾರೆ.

ಮಾಧವನ್ ಹಂಚಿಕೊಂಡ ಪೋಸ್ಟ್ ಇಲ್ಲಿದೆ:

ಮಾಧವನ್ ಚಿತ್ರದಲ್ಲಿ ಪತ್ನಿಯಿಂದ ವಿಚ್ಛೇದನ ಪಡೆಯುತ್ತಿರುವ ‘ಪಲ್ಪ್ ಫಿಕ್ಷನ್’ ಬರಹಗಾರನ ಪಾತ್ರವನ್ನು ನಿರ್ವಹಿಸಿದ್ದಾರೆ. ಕಾಮಿಡಿ- ಡ್ರಾಮಾ ಸರಣಿ ಇದಾಗಿದ್ದು, ಮನು ಜೋಸೆಫ್ ರಚಿಸಿ, ಹಾರ್ದಿಕ್ ಮೆಹ್ತಾ ನಿರ್ದೇಶಿಸಿದ್ದಾರೆ. ಲೇಖಕ ಚೇತನ್ ಭಗತ್ ಈ ಸೀರೀಸ್​ನಲ್ಲಿ ಕಾಣಿಸಿಕೊಂಡಿರುವುದು ವಿಶೇಷ.

ಸರಣಿಯನ್ನು ಒಪ್ಪಿಕೊಂಡಿದ್ದರ ಕುರಿತು ಈ ಹಿಂದೆ ಮಾತನಾಡುತ್ತಾ ಕುತೂಹಲಕರ ಸಂಗತಿಗಳನ್ನು ಮಾಧವನ್ ಹಂಚಿಕೊಂಡಿದ್ದರು. ಕೊರೊನಾ ಸಂದರ್ಭದಲ್ಲಿ ಈ ಸ್ಕ್ರಿಪ್ಟ್ ಕೇಳಿದಾಗ ತಕ್ಷಣ ‘ಯಸ್’ ಎಂದರಂತರೆ. ಕಾರಣ ಅವರಿಗೆ ಲಘು ಹಾಸ್ಯದ ಚಿತ್ರ ಹಾಗೂ ಸೀರೀಸ್ ಬಹಳ ಇಷ್ಟವಂತೆ. ಆದ್ದರಿಂದಲೇ ಇದು ಆಸಕ್ತಿ ಮೂಡಿಸಿತು ಎಂದು ಅವರು ಹೇಳಿಕೊಂಡಿದ್ದರು.

ಇದನ್ನೂ ಓದಿ:

ಅಮೇಜಾನ್​ ಪ್ರೈಮ್​ನಲ್ಲಿ ಪಿಆರ್​ಕೆ ವಾರ; ಒಂದು ತಿಂಗಳಲ್ಲಿ ಅಪ್ಪು ನಿರ್ಮಾಣದ ಮೂರು ಹೊಸ ಸಿನಿಮಾ ರಿಲೀಸ್​?

‘ಶಿವಣ್ಣ ಹೇಳಿದಂತೆ ನಮ್ಮ ಭಾಷೆಗಾಗಿ ನಾವು ಪ್ರಾಣ ಕೊಡೋಕೂ ರೆಡಿ’; ಅಜಯ್​ ರಾವ್​

ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು