AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jaggesh: ‘ನಾವೆಲ್ಲ ಡರ್ಬಿ ರೇಸ್​ನಲ್ಲಿ ನಿವೃತ್ತಿ ಹೊಂದಿದ ಕುದುರೆಗಳು’; ಜಗ್ಗೇಶ್​ಗೆ ಹುರುಳಿ ತಿನಿಸಿದ್ದು ಯಾರು?

ಸಂತೋಷ್ ಆನಂದ್ ರಾಮ್ ಹಾಗೂ ಪುನೀತ್ ರಾಜ್​ಕುಮಾರ್ ಅವರದ್ದು ಹಿಟ್ ಕಾಂಬಿನೇಷನ್. ಈಗ ಸಂತೋಷ್ ಆನಂದ್​ರಾಮ್​ ಅವರು ಜಗ್ಗೇಶ್ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

Jaggesh: ‘ನಾವೆಲ್ಲ ಡರ್ಬಿ ರೇಸ್​ನಲ್ಲಿ ನಿವೃತ್ತಿ ಹೊಂದಿದ ಕುದುರೆಗಳು’; ಜಗ್ಗೇಶ್​ಗೆ ಹುರುಳಿ ತಿನಿಸಿದ್ದು ಯಾರು?
ಜಗ್ಗೇಶ್
ರಾಜೇಶ್ ದುಗ್ಗುಮನೆ
|

Updated on:Apr 26, 2023 | 10:10 AM

Share

ನಟ ಜಗ್ಗೇಶ್ ಅವರು ರಾಜಕೀಯ ಹಾಗೂ ಸಿನಿಮಾ ಎರಡೂ ಕಡೆಗಳಲ್ಲಿ ಬ್ಯುಸಿ ಇದ್ದಾರೆ. ಅವರಿಗೆ ಪ್ರತಿ ವಾರ ಹೊಸಹೊಸ ಆಫರ್​ಗಳು ಬರುತ್ತಲೇ ಇವೆ. ಆದರೆ, ಎಲ್ಲವನ್ನೂ ಅವರು ಒಪ್ಪಿಕೊಳ್ಳುವುದಿಲ್ಲ. ಹೀರೋ ಆಗುವುದಕ್ಕೂ ಮೊದಲು ಜಗ್ಗೇಶ್​ (Jaggesh) ಪ್ರತಿ ವರ್ಷ 10ಕ್ಕೂ ಅಧಿಕ ಸಿನಿಮಾಗಳನ್ನು ಮಾಡುತ್ತಿದ್ದರು. ಆದರೆ, ಈಗ ಅವರಿಗೆ ವಯಸ್ಸು 60 ದಾಟಿದೆ. ಪಾತ್ರ ಮನಸ್ಸಿಗೆ ಹತ್ತಿರವಾದರೆ ಮಾತ್ರ ಸಿನಿಮಾ ಮಾಡುತ್ತಾರೆ. ಅವರ ನಟನೆಯ ‘ರಾಘವೇಂದ್ರ ಸ್ಟೋರ್ಸ್’ ಸಿನಿಮಾ (Raghavendra Stores Movie)  ರಿಲೀಸ್ ಆಗುತ್ತಿದೆ. ಈ ಸಿನಿಮಾ ಬಗ್ಗೆ ಜಗ್ಗೇಶ್ ಮಾತನಾಡಿದ್ದಾರೆ.

‘ರಾಘವೇಂದ್ರ ಸ್ಟೋರ್ಸ್’ ಸಿನಿಮಾ ಸಾಕಷ್ಟು ಗಮನ ಸೆಳೆದಿದೆ. ಮದುವೆ ಆಗಬೇಕು ಎಂದು ಒದ್ದಾಡುವ ಬ್ಯಾಚುಲರ್​ನ ಕಥೆಯೇ ಈ ಸಿನಿಮಾ. ಹೊಂಬಾಳೆ ಫಿಲ್ಮ್ಸ್ ಈ ಚಿತ್ರವನ್ನು ನಿರ್ಮಾಣ ಮಾಡಿದರೆ, ಸಂತೋಷ್ ಆನಂದ್​ರಾಮ್ ನಿರ್ದೇಶನ ಚಿತ್ರಕ್ಕಿದೆ. ಜಗ್ಗೇಶ್ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಈ ಸಿನಿಮಾ ಏಪ್ರಿಲ್ 28ರಂದು ರಿಲೀಸ್ ಆಗುತ್ತಿದೆ. ಈ ಬಗ್ಗೆ ಅವರು ವಿಶೇಷ ಸಂದರ್ಶನ ನೀಡಿದ್ದಾರೆ. ಈ ಸಂದರ್ಶನವನ್ನು ಮಾಡಿದ್ದು ರಾಘವೇಂದ್ರ ರಾಜ್​ಕುಮಾರ್ ಅನ್ನೋದು ವಿಶೇಷ. ಈ ಸಂದರ್ಶನವನ್ನು ಹೊಂಬಾಳೆ ಫಿಲ್ಮ್ಸ್ ಹಂಚಿಕೊಂಡಿದೆ.

ಇದನ್ನೂ ಓದಿ: ಕಂಠಪೂರ್ತಿ ಕುಡಿದು ಮಧ್ಯರಾತ್ರಿ ಅಂಬರೀಶ್ ಮನೆಗೆ ನುಗ್ಗಿದ್ದ ಜಗ್ಗೇಶ್, ಆಮೇಲೇನಾಯ್ತು?

ಸಂತೋಷ್ ಆನಂದ್ ರಾಮ್ ಹಾಗೂ ಪುನೀತ್ ರಾಜ್​ಕುಮಾರ್ ಅವರದ್ದು ಹಿಟ್ ಕಾಂಬಿನೇಷನ್. ಪುನೀತ್ ನಟನೆಯ ‘ರಾಜಕುಮಾರ’, ‘ಯುವರತ್ನ’ ಚಿತ್ರಕ್ಕೆ ಸಂತೋಷ್ ನಿರ್ದೇಶನ ಮಾಡಿದ್ದಾರೆ. ಈಗ ಅವರು ಜಗ್ಗೇಶ್ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಸಂದರ್ಶನದಲ್ಲಿ ಸಂತೋಷ್ ಆನಂದ್​ರಾಮ್ ಅವರನ್ನು ಜಗ್ಗೇಶ್ ಹೊಗಳಿದ್ದಾರೆ.

ಇದನ್ನೂ ಓದಿ: ಸಿಟಿಆರ್ ದೋಸೆ ಮೆಲ್ಲುತ್ತಾ ಜಗ್ಗೇಶ್-ರಾಘಣ್ಣ ಮಾತು, ನಡುವೆ ಸುಳಿದಾಡಿದ ಅಪ್ಪು ನೆನಪು

‘ನನ್ನ ಘನತೆ ಉಳಿಬೇಕು, ಸಿನಿಮಾ ಪ್ರೇಕ್ಷಕರಿಗೆ ಇಷ್ಟ ಆಗಬೇಕು ಎನ್ನುವ ನಿಟ್ಟಿನಲ್ಲಿ ಸಂತೋಷ್ ಕೆಲಸ ಮಾಡಿದ್ದಾನೆ. ಸಿನಿಮಾ ನನಗೆ ಸುಲಭ ಆಯ್ತು, ಆದರೆ, ಅವನಿಗೆ ಕಷ್ಟ ಆಯ್ತು. ಈ ಚಿತ್ರಕ್ಕಾಗಿ ಸಂತೋಷ್ ಸಾಕಷ್ಟು ಸಿದ್ಧತೆ ಮಾಡಿಕೊಂಡಿದ್ದ. ಜಗ್ಗೇಶ್ ಜೊತೆ ಸಿನಿಮಾ ಮಾಡ್ತಾ ಇದೀನಿ ಎನ್ನುವುದು ಆತನ ತಲೆಯಲ್ಲಿ ಇತ್ತು. ಪುನೀತ್ ಜೊತೆ ಹಿಟ್ ಸಿನಿಮಾ ಕೊಟ್ಟಿದ್ದಾನೆ. ಯಂಗ್​ಸ್ಟರ್ಸ್​ನ ಹೇಗೆ ಗೆಲ್ಲಬೇಕು ಎಂಬುದು ಆತನಿಗೆ (ಸಂತೋಷ್ ಆನಂದ್​ರಾಮ್​) ಗೊತ್ತಿದೆ. ಆದರೆ, ನಾವೆಲ್ಲ ಡರ್ಬಿ ರೇಸ್​ನಲ್ಲಿ ನಿವೃತ್ತಿ ಹೊಂದಿದ ಕುದುರೆಗಳು. ಈ ಕುದುರೆಗೂ ಹುರುಳಿ ತಿನಿಸಿ ರೆಡಿ ಮಾಡಿದ್ದಾನೆ’ ಎಂದು ಸಂತೋಷ್ ಆನಂದ್​ರಾಮ್​ ಬಗ್ಗೆ ಜಗ್ಗೇಶ್ ಮಾತನಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:59 am, Sat, 22 April 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ