AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಯಲ್ಲೂ ಧೂಳೆಬ್ಬಿಸಿದ ‘ಗರುಡ ಗಮನ ವೃಷಭ ವಾಹನ’ ಚಿತ್ರ

ಟ್ರೇಲರ್​ನಿಂದಲೇ ಭಾರಿ ಕುತೂಹಲ ಸೃಷ್ಟಿಸಿದ್ದ ‘ಗರುಡ ಗಮನ ವೃಷಭ ವಾಹನ’ ಚಿತ್ರ ನ.19ರಂದು ತೆರೆಕಂಡಿತು. ಮೊದಲ ದಿನವೇ ಈ ಸಿನಿಮಾಗೆ ಉತ್ತಮ ರೆಸ್ಪಾನ್ಸ್​ ಸಿಕ್ಕಿತು. ಸಿನಿಮಾ ಬಹುತೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಂಡಿತು.

ಒಟಿಟಿಯಲ್ಲೂ ಧೂಳೆಬ್ಬಿಸಿದ ‘ಗರುಡ ಗಮನ ವೃಷಭ ವಾಹನ’ ಚಿತ್ರ
ಗರುಡ ಗಮನ ವೃಷಭ ವಾಹನ
TV9 Web
| Edited By: |

Updated on:Jan 16, 2022 | 8:08 AM

Share

2021ರಲ್ಲಿ ಪ್ರೇಕ್ಷಕರ ಮನಗೆದ್ದ ಸಿನಿಮಾಗಳ ಪೈಕಿ ‘ಗರುಡ ಗಮನ ವೃಷಭ ವಾಹನ’ (Garuda Gamana Vrishabha Vahana) ಚಿತ್ರ ಕೂಡ ಪ್ರಮುಖವಾಗಿದೆ. ರಾಜ್​ ಬಿ. ಶೆಟ್ಟಿ (Raj B. Shetty) ನಿರ್ದೇಶನದಲ್ಲಿ ಮೂಡಿಬಂದ ಈ ಸಿನಿಮಾದಲ್ಲಿ ರೌಡಿಸಂ ಲೋಕದ ಕಥೆ ಹೇಳಲಾಗಿದೆ. ನಿರ್ದೇಶನದ ಜತೆಗೆ ಪ್ರಮುಖ ಪಾತ್ರದಲ್ಲೂ ರಾಜ್​ ಬಿ. ಶೆಟ್ಟಿ ನಟಿಸಿದ್ದಾರೆ. ಇನ್ನೊಂದು ಮುಖ್ಯ ಪಾತ್ರಕ್ಕೆ ರಿಷಬ್​ ಶೆಟ್ಟಿ (Rishab Shetty) ಬಣ್ಣ ಹಚ್ಚಿದ್ದಾರೆ. ಈ ಚಿತ್ರ ಮೂರು ದಿನಗಳ ಹಿಂದೆ ಒಟಿಟಿಯಲ್ಲಿ ತೆರೆಗೆ ಬಂದಿತ್ತು. ಈ ಸಿನಿಮಾ ಈಗ ಒಟಿಟಿಯಲ್ಲೂ ಧೂಳೆಬ್ಬಿಸಿದೆ.

ಟ್ರೇಲರ್​ನಿಂದಲೇ ಭಾರಿ ಕುತೂಹಲ ಸೃಷ್ಟಿಸಿದ್ದ ‘ಗರುಡ ಗಮನ ವೃಷಭ ವಾಹನ’ ಚಿತ್ರ ನ.19ರಂದು ತೆರೆಕಂಡಿತು. ಮೊದಲ ದಿನವೇ ಈ ಸಿನಿಮಾಗೆ ಉತ್ತಮ ರೆಸ್ಪಾನ್ಸ್​ ಸಿಕ್ಕಿತು. ಸಿನಿಮಾ ಬಹುತೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಂಡಿತು. ಚಿತ್ರಕ್ಕೆ ಜನರು ತೋರಿಸಿದ ಪ್ರೀತಿಗೆ ರಾಜ್​ ಬಿ. ಶೆಟ್ಟಿ ಫಿದಾ ಆದರು. ತಮ್ಮ ಟೀಂ ಜತೆಗೂಡಿ ಅವರು ಅನೇಕ ಚಿತ್ರಮಂದಿರಗಳಿಗೆ ಭೇಟಿ ನೀಡಿದರು.

ಜನವರಿ 13ರಂದು ಒಟಿಟಿಯಲ್ಲಿ ‘ಗರುಡ ಗಮನ ವೃಷಭ ವಾಹನ’ ಸಿನಿಮಾ ರಿಲೀಸ್​ ಆಗಿದೆ. ಈ ಚಿತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಸಿನಿಮಾ ಕೇವಲ ಮೂರು ದಿನಗಳಲ್ಲಿ ಬರೋಬ್ಬರಿ 8 ಕೋಟಿ ನಿಮಿಷಗಳ ವೀಕ್ಷಣೆ ಕಂಡಿದೆ. ಈ ಮೂಲಕ ಒಟಿಟಿಯಲ್ಲೂ ಸಿನಿಮಾ ಭಾರೀ ಜನಮನ್ನಣೆ ಪಡೆದುಕೊಂಡಂತಾಗಿದೆ.

‘ಗರುಡ ಗಮನ ವೃಷಭ ವಾಹನ’ ಚಿತ್ರದಲ್ಲಿ ರಾಜ್​ ಬಿ. ಶೆಟ್ಟಿ ನಿಭಾಯಿಸಿರುವ ಪಾತ್ರ ಭಿನ್ನವಾಗಿದೆ. ಅನೇಕ ಸಿದ್ಧ ಸೂತ್ರಗಳನ್ನು ಮುರಿದು ಅವರು ಈ ಚಿತ್ರವನ್ನು ಕಟ್ಟಿದ್ದಾರೆ. ಸಿನಿಮಾ ಗೆಲ್ಲುವಲ್ಲಿ ಹಾಡುಗಳ ಪಾತ್ರ ಕೂಡ ದೊಡ್ಡದಿದೆ. ಮಿಧುನ್​ ಮುಕುಂದನ್​ ಸಂಗೀತ ನಿರ್ದೇಶನದಲ್ಲಿ ಮೂಡಿಬಂದಿರುವ ‘ಸೋಜುಗಾದ ಸೂಜು ಮಲ್ಲಿಗೆ..’, ‘ಚಂದ್ರ ಚೂಡ ಶಿವ ಶಂಕರ ಪಾರ್ವತಿ ರಮಣ..’ ಹಾಗೂ ‘ಡೀಮನ್​ ಇನ್​ ಮೀ’ ಹಾಡುಗಳು ಕೇಳುಗರ ಮನಗೆದ್ದಿವೆ.

ಇದನ್ನೂ ಓದಿ: ಪರಭಾಷೆಗಳಿಂದ ‘ಗರುಡ ಗಮನ ವೃಷಭ ವಾಹನ’ ಚಿತ್ರಕ್ಕೆ ಬಂತು ಬೇಡಿಕೆ

‘ಗರುಡ ಗಮನ..’ ಚಿತ್ರದ ಇನ್ನೊಂದು ಮೈಲಿಗಲ್ಲು; ‘ಸೋಜುಗಾದ ಸೂಜು ಮಲ್ಲಿಗೆ’ ಸಾಧನೆ ಏನು?

Published On - 9:15 pm, Sat, 15 January 22

Follow Us
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ