AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಯಲ್ಲೂ ಧೂಳೆಬ್ಬಿಸಿದ ‘ಗರುಡ ಗಮನ ವೃಷಭ ವಾಹನ’ ಚಿತ್ರ

ಟ್ರೇಲರ್​ನಿಂದಲೇ ಭಾರಿ ಕುತೂಹಲ ಸೃಷ್ಟಿಸಿದ್ದ ‘ಗರುಡ ಗಮನ ವೃಷಭ ವಾಹನ’ ಚಿತ್ರ ನ.19ರಂದು ತೆರೆಕಂಡಿತು. ಮೊದಲ ದಿನವೇ ಈ ಸಿನಿಮಾಗೆ ಉತ್ತಮ ರೆಸ್ಪಾನ್ಸ್​ ಸಿಕ್ಕಿತು. ಸಿನಿಮಾ ಬಹುತೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಂಡಿತು.

ಒಟಿಟಿಯಲ್ಲೂ ಧೂಳೆಬ್ಬಿಸಿದ ‘ಗರುಡ ಗಮನ ವೃಷಭ ವಾಹನ’ ಚಿತ್ರ
ಗರುಡ ಗಮನ ವೃಷಭ ವಾಹನ
TV9 Web
| Edited By: |

Updated on:Jan 16, 2022 | 8:08 AM

Share

2021ರಲ್ಲಿ ಪ್ರೇಕ್ಷಕರ ಮನಗೆದ್ದ ಸಿನಿಮಾಗಳ ಪೈಕಿ ‘ಗರುಡ ಗಮನ ವೃಷಭ ವಾಹನ’ (Garuda Gamana Vrishabha Vahana) ಚಿತ್ರ ಕೂಡ ಪ್ರಮುಖವಾಗಿದೆ. ರಾಜ್​ ಬಿ. ಶೆಟ್ಟಿ (Raj B. Shetty) ನಿರ್ದೇಶನದಲ್ಲಿ ಮೂಡಿಬಂದ ಈ ಸಿನಿಮಾದಲ್ಲಿ ರೌಡಿಸಂ ಲೋಕದ ಕಥೆ ಹೇಳಲಾಗಿದೆ. ನಿರ್ದೇಶನದ ಜತೆಗೆ ಪ್ರಮುಖ ಪಾತ್ರದಲ್ಲೂ ರಾಜ್​ ಬಿ. ಶೆಟ್ಟಿ ನಟಿಸಿದ್ದಾರೆ. ಇನ್ನೊಂದು ಮುಖ್ಯ ಪಾತ್ರಕ್ಕೆ ರಿಷಬ್​ ಶೆಟ್ಟಿ (Rishab Shetty) ಬಣ್ಣ ಹಚ್ಚಿದ್ದಾರೆ. ಈ ಚಿತ್ರ ಮೂರು ದಿನಗಳ ಹಿಂದೆ ಒಟಿಟಿಯಲ್ಲಿ ತೆರೆಗೆ ಬಂದಿತ್ತು. ಈ ಸಿನಿಮಾ ಈಗ ಒಟಿಟಿಯಲ್ಲೂ ಧೂಳೆಬ್ಬಿಸಿದೆ.

ಟ್ರೇಲರ್​ನಿಂದಲೇ ಭಾರಿ ಕುತೂಹಲ ಸೃಷ್ಟಿಸಿದ್ದ ‘ಗರುಡ ಗಮನ ವೃಷಭ ವಾಹನ’ ಚಿತ್ರ ನ.19ರಂದು ತೆರೆಕಂಡಿತು. ಮೊದಲ ದಿನವೇ ಈ ಸಿನಿಮಾಗೆ ಉತ್ತಮ ರೆಸ್ಪಾನ್ಸ್​ ಸಿಕ್ಕಿತು. ಸಿನಿಮಾ ಬಹುತೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಂಡಿತು. ಚಿತ್ರಕ್ಕೆ ಜನರು ತೋರಿಸಿದ ಪ್ರೀತಿಗೆ ರಾಜ್​ ಬಿ. ಶೆಟ್ಟಿ ಫಿದಾ ಆದರು. ತಮ್ಮ ಟೀಂ ಜತೆಗೂಡಿ ಅವರು ಅನೇಕ ಚಿತ್ರಮಂದಿರಗಳಿಗೆ ಭೇಟಿ ನೀಡಿದರು.

ಜನವರಿ 13ರಂದು ಒಟಿಟಿಯಲ್ಲಿ ‘ಗರುಡ ಗಮನ ವೃಷಭ ವಾಹನ’ ಸಿನಿಮಾ ರಿಲೀಸ್​ ಆಗಿದೆ. ಈ ಚಿತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಸಿನಿಮಾ ಕೇವಲ ಮೂರು ದಿನಗಳಲ್ಲಿ ಬರೋಬ್ಬರಿ 8 ಕೋಟಿ ನಿಮಿಷಗಳ ವೀಕ್ಷಣೆ ಕಂಡಿದೆ. ಈ ಮೂಲಕ ಒಟಿಟಿಯಲ್ಲೂ ಸಿನಿಮಾ ಭಾರೀ ಜನಮನ್ನಣೆ ಪಡೆದುಕೊಂಡಂತಾಗಿದೆ.

‘ಗರುಡ ಗಮನ ವೃಷಭ ವಾಹನ’ ಚಿತ್ರದಲ್ಲಿ ರಾಜ್​ ಬಿ. ಶೆಟ್ಟಿ ನಿಭಾಯಿಸಿರುವ ಪಾತ್ರ ಭಿನ್ನವಾಗಿದೆ. ಅನೇಕ ಸಿದ್ಧ ಸೂತ್ರಗಳನ್ನು ಮುರಿದು ಅವರು ಈ ಚಿತ್ರವನ್ನು ಕಟ್ಟಿದ್ದಾರೆ. ಸಿನಿಮಾ ಗೆಲ್ಲುವಲ್ಲಿ ಹಾಡುಗಳ ಪಾತ್ರ ಕೂಡ ದೊಡ್ಡದಿದೆ. ಮಿಧುನ್​ ಮುಕುಂದನ್​ ಸಂಗೀತ ನಿರ್ದೇಶನದಲ್ಲಿ ಮೂಡಿಬಂದಿರುವ ‘ಸೋಜುಗಾದ ಸೂಜು ಮಲ್ಲಿಗೆ..’, ‘ಚಂದ್ರ ಚೂಡ ಶಿವ ಶಂಕರ ಪಾರ್ವತಿ ರಮಣ..’ ಹಾಗೂ ‘ಡೀಮನ್​ ಇನ್​ ಮೀ’ ಹಾಡುಗಳು ಕೇಳುಗರ ಮನಗೆದ್ದಿವೆ.

ಇದನ್ನೂ ಓದಿ: ಪರಭಾಷೆಗಳಿಂದ ‘ಗರುಡ ಗಮನ ವೃಷಭ ವಾಹನ’ ಚಿತ್ರಕ್ಕೆ ಬಂತು ಬೇಡಿಕೆ

‘ಗರುಡ ಗಮನ..’ ಚಿತ್ರದ ಇನ್ನೊಂದು ಮೈಲಿಗಲ್ಲು; ‘ಸೋಜುಗಾದ ಸೂಜು ಮಲ್ಲಿಗೆ’ ಸಾಧನೆ ಏನು?

Published On - 9:15 pm, Sat, 15 January 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ