AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಯಲ್ಲೂ ಧೂಳೆಬ್ಬಿಸಿದ ‘ಗರುಡ ಗಮನ ವೃಷಭ ವಾಹನ’ ಚಿತ್ರ

ಟ್ರೇಲರ್​ನಿಂದಲೇ ಭಾರಿ ಕುತೂಹಲ ಸೃಷ್ಟಿಸಿದ್ದ ‘ಗರುಡ ಗಮನ ವೃಷಭ ವಾಹನ’ ಚಿತ್ರ ನ.19ರಂದು ತೆರೆಕಂಡಿತು. ಮೊದಲ ದಿನವೇ ಈ ಸಿನಿಮಾಗೆ ಉತ್ತಮ ರೆಸ್ಪಾನ್ಸ್​ ಸಿಕ್ಕಿತು. ಸಿನಿಮಾ ಬಹುತೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಂಡಿತು.

ಒಟಿಟಿಯಲ್ಲೂ ಧೂಳೆಬ್ಬಿಸಿದ ‘ಗರುಡ ಗಮನ ವೃಷಭ ವಾಹನ’ ಚಿತ್ರ
ಗರುಡ ಗಮನ ವೃಷಭ ವಾಹನ
TV9 Web
| Edited By: |

Updated on:Jan 16, 2022 | 8:08 AM

Share

2021ರಲ್ಲಿ ಪ್ರೇಕ್ಷಕರ ಮನಗೆದ್ದ ಸಿನಿಮಾಗಳ ಪೈಕಿ ‘ಗರುಡ ಗಮನ ವೃಷಭ ವಾಹನ’ (Garuda Gamana Vrishabha Vahana) ಚಿತ್ರ ಕೂಡ ಪ್ರಮುಖವಾಗಿದೆ. ರಾಜ್​ ಬಿ. ಶೆಟ್ಟಿ (Raj B. Shetty) ನಿರ್ದೇಶನದಲ್ಲಿ ಮೂಡಿಬಂದ ಈ ಸಿನಿಮಾದಲ್ಲಿ ರೌಡಿಸಂ ಲೋಕದ ಕಥೆ ಹೇಳಲಾಗಿದೆ. ನಿರ್ದೇಶನದ ಜತೆಗೆ ಪ್ರಮುಖ ಪಾತ್ರದಲ್ಲೂ ರಾಜ್​ ಬಿ. ಶೆಟ್ಟಿ ನಟಿಸಿದ್ದಾರೆ. ಇನ್ನೊಂದು ಮುಖ್ಯ ಪಾತ್ರಕ್ಕೆ ರಿಷಬ್​ ಶೆಟ್ಟಿ (Rishab Shetty) ಬಣ್ಣ ಹಚ್ಚಿದ್ದಾರೆ. ಈ ಚಿತ್ರ ಮೂರು ದಿನಗಳ ಹಿಂದೆ ಒಟಿಟಿಯಲ್ಲಿ ತೆರೆಗೆ ಬಂದಿತ್ತು. ಈ ಸಿನಿಮಾ ಈಗ ಒಟಿಟಿಯಲ್ಲೂ ಧೂಳೆಬ್ಬಿಸಿದೆ.

ಟ್ರೇಲರ್​ನಿಂದಲೇ ಭಾರಿ ಕುತೂಹಲ ಸೃಷ್ಟಿಸಿದ್ದ ‘ಗರುಡ ಗಮನ ವೃಷಭ ವಾಹನ’ ಚಿತ್ರ ನ.19ರಂದು ತೆರೆಕಂಡಿತು. ಮೊದಲ ದಿನವೇ ಈ ಸಿನಿಮಾಗೆ ಉತ್ತಮ ರೆಸ್ಪಾನ್ಸ್​ ಸಿಕ್ಕಿತು. ಸಿನಿಮಾ ಬಹುತೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಂಡಿತು. ಚಿತ್ರಕ್ಕೆ ಜನರು ತೋರಿಸಿದ ಪ್ರೀತಿಗೆ ರಾಜ್​ ಬಿ. ಶೆಟ್ಟಿ ಫಿದಾ ಆದರು. ತಮ್ಮ ಟೀಂ ಜತೆಗೂಡಿ ಅವರು ಅನೇಕ ಚಿತ್ರಮಂದಿರಗಳಿಗೆ ಭೇಟಿ ನೀಡಿದರು.

ಜನವರಿ 13ರಂದು ಒಟಿಟಿಯಲ್ಲಿ ‘ಗರುಡ ಗಮನ ವೃಷಭ ವಾಹನ’ ಸಿನಿಮಾ ರಿಲೀಸ್​ ಆಗಿದೆ. ಈ ಚಿತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಸಿನಿಮಾ ಕೇವಲ ಮೂರು ದಿನಗಳಲ್ಲಿ ಬರೋಬ್ಬರಿ 8 ಕೋಟಿ ನಿಮಿಷಗಳ ವೀಕ್ಷಣೆ ಕಂಡಿದೆ. ಈ ಮೂಲಕ ಒಟಿಟಿಯಲ್ಲೂ ಸಿನಿಮಾ ಭಾರೀ ಜನಮನ್ನಣೆ ಪಡೆದುಕೊಂಡಂತಾಗಿದೆ.

‘ಗರುಡ ಗಮನ ವೃಷಭ ವಾಹನ’ ಚಿತ್ರದಲ್ಲಿ ರಾಜ್​ ಬಿ. ಶೆಟ್ಟಿ ನಿಭಾಯಿಸಿರುವ ಪಾತ್ರ ಭಿನ್ನವಾಗಿದೆ. ಅನೇಕ ಸಿದ್ಧ ಸೂತ್ರಗಳನ್ನು ಮುರಿದು ಅವರು ಈ ಚಿತ್ರವನ್ನು ಕಟ್ಟಿದ್ದಾರೆ. ಸಿನಿಮಾ ಗೆಲ್ಲುವಲ್ಲಿ ಹಾಡುಗಳ ಪಾತ್ರ ಕೂಡ ದೊಡ್ಡದಿದೆ. ಮಿಧುನ್​ ಮುಕುಂದನ್​ ಸಂಗೀತ ನಿರ್ದೇಶನದಲ್ಲಿ ಮೂಡಿಬಂದಿರುವ ‘ಸೋಜುಗಾದ ಸೂಜು ಮಲ್ಲಿಗೆ..’, ‘ಚಂದ್ರ ಚೂಡ ಶಿವ ಶಂಕರ ಪಾರ್ವತಿ ರಮಣ..’ ಹಾಗೂ ‘ಡೀಮನ್​ ಇನ್​ ಮೀ’ ಹಾಡುಗಳು ಕೇಳುಗರ ಮನಗೆದ್ದಿವೆ.

ಇದನ್ನೂ ಓದಿ: ಪರಭಾಷೆಗಳಿಂದ ‘ಗರುಡ ಗಮನ ವೃಷಭ ವಾಹನ’ ಚಿತ್ರಕ್ಕೆ ಬಂತು ಬೇಡಿಕೆ

‘ಗರುಡ ಗಮನ..’ ಚಿತ್ರದ ಇನ್ನೊಂದು ಮೈಲಿಗಲ್ಲು; ‘ಸೋಜುಗಾದ ಸೂಜು ಮಲ್ಲಿಗೆ’ ಸಾಧನೆ ಏನು?

Published On - 9:15 pm, Sat, 15 January 22

Follow Us
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ