AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಯಲ್ಲೂ ಧೂಳೆಬ್ಬಿಸಿದ ‘ಗರುಡ ಗಮನ ವೃಷಭ ವಾಹನ’ ಚಿತ್ರ

ಟ್ರೇಲರ್​ನಿಂದಲೇ ಭಾರಿ ಕುತೂಹಲ ಸೃಷ್ಟಿಸಿದ್ದ ‘ಗರುಡ ಗಮನ ವೃಷಭ ವಾಹನ’ ಚಿತ್ರ ನ.19ರಂದು ತೆರೆಕಂಡಿತು. ಮೊದಲ ದಿನವೇ ಈ ಸಿನಿಮಾಗೆ ಉತ್ತಮ ರೆಸ್ಪಾನ್ಸ್​ ಸಿಕ್ಕಿತು. ಸಿನಿಮಾ ಬಹುತೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಂಡಿತು.

ಒಟಿಟಿಯಲ್ಲೂ ಧೂಳೆಬ್ಬಿಸಿದ ‘ಗರುಡ ಗಮನ ವೃಷಭ ವಾಹನ’ ಚಿತ್ರ
ಗರುಡ ಗಮನ ವೃಷಭ ವಾಹನ
TV9 Web
| Edited By: |

Updated on:Jan 16, 2022 | 8:08 AM

Share

2021ರಲ್ಲಿ ಪ್ರೇಕ್ಷಕರ ಮನಗೆದ್ದ ಸಿನಿಮಾಗಳ ಪೈಕಿ ‘ಗರುಡ ಗಮನ ವೃಷಭ ವಾಹನ’ (Garuda Gamana Vrishabha Vahana) ಚಿತ್ರ ಕೂಡ ಪ್ರಮುಖವಾಗಿದೆ. ರಾಜ್​ ಬಿ. ಶೆಟ್ಟಿ (Raj B. Shetty) ನಿರ್ದೇಶನದಲ್ಲಿ ಮೂಡಿಬಂದ ಈ ಸಿನಿಮಾದಲ್ಲಿ ರೌಡಿಸಂ ಲೋಕದ ಕಥೆ ಹೇಳಲಾಗಿದೆ. ನಿರ್ದೇಶನದ ಜತೆಗೆ ಪ್ರಮುಖ ಪಾತ್ರದಲ್ಲೂ ರಾಜ್​ ಬಿ. ಶೆಟ್ಟಿ ನಟಿಸಿದ್ದಾರೆ. ಇನ್ನೊಂದು ಮುಖ್ಯ ಪಾತ್ರಕ್ಕೆ ರಿಷಬ್​ ಶೆಟ್ಟಿ (Rishab Shetty) ಬಣ್ಣ ಹಚ್ಚಿದ್ದಾರೆ. ಈ ಚಿತ್ರ ಮೂರು ದಿನಗಳ ಹಿಂದೆ ಒಟಿಟಿಯಲ್ಲಿ ತೆರೆಗೆ ಬಂದಿತ್ತು. ಈ ಸಿನಿಮಾ ಈಗ ಒಟಿಟಿಯಲ್ಲೂ ಧೂಳೆಬ್ಬಿಸಿದೆ.

ಟ್ರೇಲರ್​ನಿಂದಲೇ ಭಾರಿ ಕುತೂಹಲ ಸೃಷ್ಟಿಸಿದ್ದ ‘ಗರುಡ ಗಮನ ವೃಷಭ ವಾಹನ’ ಚಿತ್ರ ನ.19ರಂದು ತೆರೆಕಂಡಿತು. ಮೊದಲ ದಿನವೇ ಈ ಸಿನಿಮಾಗೆ ಉತ್ತಮ ರೆಸ್ಪಾನ್ಸ್​ ಸಿಕ್ಕಿತು. ಸಿನಿಮಾ ಬಹುತೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಂಡಿತು. ಚಿತ್ರಕ್ಕೆ ಜನರು ತೋರಿಸಿದ ಪ್ರೀತಿಗೆ ರಾಜ್​ ಬಿ. ಶೆಟ್ಟಿ ಫಿದಾ ಆದರು. ತಮ್ಮ ಟೀಂ ಜತೆಗೂಡಿ ಅವರು ಅನೇಕ ಚಿತ್ರಮಂದಿರಗಳಿಗೆ ಭೇಟಿ ನೀಡಿದರು.

ಜನವರಿ 13ರಂದು ಒಟಿಟಿಯಲ್ಲಿ ‘ಗರುಡ ಗಮನ ವೃಷಭ ವಾಹನ’ ಸಿನಿಮಾ ರಿಲೀಸ್​ ಆಗಿದೆ. ಈ ಚಿತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಸಿನಿಮಾ ಕೇವಲ ಮೂರು ದಿನಗಳಲ್ಲಿ ಬರೋಬ್ಬರಿ 8 ಕೋಟಿ ನಿಮಿಷಗಳ ವೀಕ್ಷಣೆ ಕಂಡಿದೆ. ಈ ಮೂಲಕ ಒಟಿಟಿಯಲ್ಲೂ ಸಿನಿಮಾ ಭಾರೀ ಜನಮನ್ನಣೆ ಪಡೆದುಕೊಂಡಂತಾಗಿದೆ.

‘ಗರುಡ ಗಮನ ವೃಷಭ ವಾಹನ’ ಚಿತ್ರದಲ್ಲಿ ರಾಜ್​ ಬಿ. ಶೆಟ್ಟಿ ನಿಭಾಯಿಸಿರುವ ಪಾತ್ರ ಭಿನ್ನವಾಗಿದೆ. ಅನೇಕ ಸಿದ್ಧ ಸೂತ್ರಗಳನ್ನು ಮುರಿದು ಅವರು ಈ ಚಿತ್ರವನ್ನು ಕಟ್ಟಿದ್ದಾರೆ. ಸಿನಿಮಾ ಗೆಲ್ಲುವಲ್ಲಿ ಹಾಡುಗಳ ಪಾತ್ರ ಕೂಡ ದೊಡ್ಡದಿದೆ. ಮಿಧುನ್​ ಮುಕುಂದನ್​ ಸಂಗೀತ ನಿರ್ದೇಶನದಲ್ಲಿ ಮೂಡಿಬಂದಿರುವ ‘ಸೋಜುಗಾದ ಸೂಜು ಮಲ್ಲಿಗೆ..’, ‘ಚಂದ್ರ ಚೂಡ ಶಿವ ಶಂಕರ ಪಾರ್ವತಿ ರಮಣ..’ ಹಾಗೂ ‘ಡೀಮನ್​ ಇನ್​ ಮೀ’ ಹಾಡುಗಳು ಕೇಳುಗರ ಮನಗೆದ್ದಿವೆ.

ಇದನ್ನೂ ಓದಿ: ಪರಭಾಷೆಗಳಿಂದ ‘ಗರುಡ ಗಮನ ವೃಷಭ ವಾಹನ’ ಚಿತ್ರಕ್ಕೆ ಬಂತು ಬೇಡಿಕೆ

‘ಗರುಡ ಗಮನ..’ ಚಿತ್ರದ ಇನ್ನೊಂದು ಮೈಲಿಗಲ್ಲು; ‘ಸೋಜುಗಾದ ಸೂಜು ಮಲ್ಲಿಗೆ’ ಸಾಧನೆ ಏನು?

Published On - 9:15 pm, Sat, 15 January 22

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ