AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಯಲ್ಲೂ ಧೂಳೆಬ್ಬಿಸಿದ ‘ಗರುಡ ಗಮನ ವೃಷಭ ವಾಹನ’ ಚಿತ್ರ

ಟ್ರೇಲರ್​ನಿಂದಲೇ ಭಾರಿ ಕುತೂಹಲ ಸೃಷ್ಟಿಸಿದ್ದ ‘ಗರುಡ ಗಮನ ವೃಷಭ ವಾಹನ’ ಚಿತ್ರ ನ.19ರಂದು ತೆರೆಕಂಡಿತು. ಮೊದಲ ದಿನವೇ ಈ ಸಿನಿಮಾಗೆ ಉತ್ತಮ ರೆಸ್ಪಾನ್ಸ್​ ಸಿಕ್ಕಿತು. ಸಿನಿಮಾ ಬಹುತೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಂಡಿತು.

ಒಟಿಟಿಯಲ್ಲೂ ಧೂಳೆಬ್ಬಿಸಿದ ‘ಗರುಡ ಗಮನ ವೃಷಭ ವಾಹನ’ ಚಿತ್ರ
ಗರುಡ ಗಮನ ವೃಷಭ ವಾಹನ
TV9 Web
| Edited By: |

Updated on:Jan 16, 2022 | 8:08 AM

Share

2021ರಲ್ಲಿ ಪ್ರೇಕ್ಷಕರ ಮನಗೆದ್ದ ಸಿನಿಮಾಗಳ ಪೈಕಿ ‘ಗರುಡ ಗಮನ ವೃಷಭ ವಾಹನ’ (Garuda Gamana Vrishabha Vahana) ಚಿತ್ರ ಕೂಡ ಪ್ರಮುಖವಾಗಿದೆ. ರಾಜ್​ ಬಿ. ಶೆಟ್ಟಿ (Raj B. Shetty) ನಿರ್ದೇಶನದಲ್ಲಿ ಮೂಡಿಬಂದ ಈ ಸಿನಿಮಾದಲ್ಲಿ ರೌಡಿಸಂ ಲೋಕದ ಕಥೆ ಹೇಳಲಾಗಿದೆ. ನಿರ್ದೇಶನದ ಜತೆಗೆ ಪ್ರಮುಖ ಪಾತ್ರದಲ್ಲೂ ರಾಜ್​ ಬಿ. ಶೆಟ್ಟಿ ನಟಿಸಿದ್ದಾರೆ. ಇನ್ನೊಂದು ಮುಖ್ಯ ಪಾತ್ರಕ್ಕೆ ರಿಷಬ್​ ಶೆಟ್ಟಿ (Rishab Shetty) ಬಣ್ಣ ಹಚ್ಚಿದ್ದಾರೆ. ಈ ಚಿತ್ರ ಮೂರು ದಿನಗಳ ಹಿಂದೆ ಒಟಿಟಿಯಲ್ಲಿ ತೆರೆಗೆ ಬಂದಿತ್ತು. ಈ ಸಿನಿಮಾ ಈಗ ಒಟಿಟಿಯಲ್ಲೂ ಧೂಳೆಬ್ಬಿಸಿದೆ.

ಟ್ರೇಲರ್​ನಿಂದಲೇ ಭಾರಿ ಕುತೂಹಲ ಸೃಷ್ಟಿಸಿದ್ದ ‘ಗರುಡ ಗಮನ ವೃಷಭ ವಾಹನ’ ಚಿತ್ರ ನ.19ರಂದು ತೆರೆಕಂಡಿತು. ಮೊದಲ ದಿನವೇ ಈ ಸಿನಿಮಾಗೆ ಉತ್ತಮ ರೆಸ್ಪಾನ್ಸ್​ ಸಿಕ್ಕಿತು. ಸಿನಿಮಾ ಬಹುತೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಂಡಿತು. ಚಿತ್ರಕ್ಕೆ ಜನರು ತೋರಿಸಿದ ಪ್ರೀತಿಗೆ ರಾಜ್​ ಬಿ. ಶೆಟ್ಟಿ ಫಿದಾ ಆದರು. ತಮ್ಮ ಟೀಂ ಜತೆಗೂಡಿ ಅವರು ಅನೇಕ ಚಿತ್ರಮಂದಿರಗಳಿಗೆ ಭೇಟಿ ನೀಡಿದರು.

ಜನವರಿ 13ರಂದು ಒಟಿಟಿಯಲ್ಲಿ ‘ಗರುಡ ಗಮನ ವೃಷಭ ವಾಹನ’ ಸಿನಿಮಾ ರಿಲೀಸ್​ ಆಗಿದೆ. ಈ ಚಿತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಸಿನಿಮಾ ಕೇವಲ ಮೂರು ದಿನಗಳಲ್ಲಿ ಬರೋಬ್ಬರಿ 8 ಕೋಟಿ ನಿಮಿಷಗಳ ವೀಕ್ಷಣೆ ಕಂಡಿದೆ. ಈ ಮೂಲಕ ಒಟಿಟಿಯಲ್ಲೂ ಸಿನಿಮಾ ಭಾರೀ ಜನಮನ್ನಣೆ ಪಡೆದುಕೊಂಡಂತಾಗಿದೆ.

‘ಗರುಡ ಗಮನ ವೃಷಭ ವಾಹನ’ ಚಿತ್ರದಲ್ಲಿ ರಾಜ್​ ಬಿ. ಶೆಟ್ಟಿ ನಿಭಾಯಿಸಿರುವ ಪಾತ್ರ ಭಿನ್ನವಾಗಿದೆ. ಅನೇಕ ಸಿದ್ಧ ಸೂತ್ರಗಳನ್ನು ಮುರಿದು ಅವರು ಈ ಚಿತ್ರವನ್ನು ಕಟ್ಟಿದ್ದಾರೆ. ಸಿನಿಮಾ ಗೆಲ್ಲುವಲ್ಲಿ ಹಾಡುಗಳ ಪಾತ್ರ ಕೂಡ ದೊಡ್ಡದಿದೆ. ಮಿಧುನ್​ ಮುಕುಂದನ್​ ಸಂಗೀತ ನಿರ್ದೇಶನದಲ್ಲಿ ಮೂಡಿಬಂದಿರುವ ‘ಸೋಜುಗಾದ ಸೂಜು ಮಲ್ಲಿಗೆ..’, ‘ಚಂದ್ರ ಚೂಡ ಶಿವ ಶಂಕರ ಪಾರ್ವತಿ ರಮಣ..’ ಹಾಗೂ ‘ಡೀಮನ್​ ಇನ್​ ಮೀ’ ಹಾಡುಗಳು ಕೇಳುಗರ ಮನಗೆದ್ದಿವೆ.

ಇದನ್ನೂ ಓದಿ: ಪರಭಾಷೆಗಳಿಂದ ‘ಗರುಡ ಗಮನ ವೃಷಭ ವಾಹನ’ ಚಿತ್ರಕ್ಕೆ ಬಂತು ಬೇಡಿಕೆ

‘ಗರುಡ ಗಮನ..’ ಚಿತ್ರದ ಇನ್ನೊಂದು ಮೈಲಿಗಲ್ಲು; ‘ಸೋಜುಗಾದ ಸೂಜು ಮಲ್ಲಿಗೆ’ ಸಾಧನೆ ಏನು?

Published On - 9:15 pm, Sat, 15 January 22

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ