‘ಬಿಗ್​ ಬಾಸ್​ ಒಟಿಟಿ’ಗೆ ಕಾಲಿಟ್ಟ ರಾಜಸ್ಥಾನಿ ಬೆಡಗಿ; ಕನ್ನಡ ಮಾತನಾಡುವುದನ್ನು ಕೇಳಿ ಮೆಚ್ಚಿಕೊಂಡ ಸುದೀಪ್​

Bigg Boss OTT kannada: ಕಿರಣ್ ಅವರು ಡ್ಯಾನ್ಸ್ ಜತೆಗೆ ಯೋಗ ಮಾಡುತ್ತಾರೆ. ಅನೇಕರಿಗೆ ಯೋಗ ಹೇಳಿಕೊಡುತ್ತಾರೆ. ಈ ಕಾರಣದಿಂದಲೂ ಅವರು ಅನೇಕರಿಗೆ ಪರಿಚಯ ಇದ್ದಾರೆ. ಅವರು ರಾಜಸ್ಥಾನದಿಂದ ಕರ್ನಾಟಕಕ್ಕೆ ಬಂದು ಕನ್ನಡ ಕಲಿತಿದ್ದಾರೆ.

‘ಬಿಗ್​ ಬಾಸ್​ ಒಟಿಟಿ’ಗೆ ಕಾಲಿಟ್ಟ ರಾಜಸ್ಥಾನಿ ಬೆಡಗಿ; ಕನ್ನಡ ಮಾತನಾಡುವುದನ್ನು ಕೇಳಿ ಮೆಚ್ಚಿಕೊಂಡ ಸುದೀಪ್​
ಕಿರಣ್​-ಸುದೀಪ್
Follow us
| Updated By: ರಾಜೇಶ್ ದುಗ್ಗುಮನೆ

Updated on:Aug 06, 2022 | 10:03 PM

Bigg Boss OTT Kannada Season 1: ಈ ಬಾರಿ ‘ಬಿಗ್ ಬಾಸ್ ಒಟಿಟಿ’ ಹಲವು ವಿಶೇಷತೆಗಳಿಗೆ ಸಾಕ್ಷಿ ಆಗುತ್ತಿದೆ. ಸಿನಿಮಾ, ಕಿರುತೆರೆ ಜತೆಗೆ ಸೋಶಿಯಲ್ ಮೀಡಿಯಾ ಸ್ಟಾರ್​ಗಳನ್ನು ಇಲ್ಲಿಗೆ ಆಹ್ವಾನ ನೀಡಲಾಗಿದೆ. ಆ ಪೈಕಿ ಕಿರಣ್ ಯೋಗೇಶ್ವರ್​ ಕೂಡ ಒಬ್ಬರು. ಇವರು ರಾಜಸ್ಥಾನ ಮೂಲದವರು. ಅವರು ‘ಬಿಗ್ ಬಾಸ್ ಒಟಿಟಿ’ಗೆ ಎಂಟ್ರಿ ಕೊಟ್ಟಿದ್ದಾರೆ. ಅವರ ಕನ್ನಡ ಕೇಳಿ ಸುದೀಪ್ ಮೆಚ್ಚಿಕೊಂಡಿದ್ದಾರೆ.

‘ನಾನು ಕಷ್ಟಪಟ್ಟು ಕೆಲಸ ಮಾಡಿದ್ದೇನೆ. ಅದಕ್ಕೆ ನಾನು ಈಗ ಇಲ್ಲಿಗೆ ಬಂದಿದ್ದೇನೆ. ನನಗೆ ನಂಬಲು ಆಗುತ್ತಿಲ್ಲ. ನನ್ನ ಫ್ಯಾಮಿಲಿ ಇರೋದು ಹಳ್ಳಿಯಲ್ಲಿ. ಸಿಟಿ ಲೈಫ್ ಗೊತ್ತಿರಲಿಲ್ಲ. ನನ್ನ ಫ್ಯಾಮಿಲಿ ಟಿಪಿಕಲ್ ರಾಜಸ್ಥಾನಿ. ಚಿಕ್ಕ ವಯಸ್ಸಲ್ಲೇ ಮದುವೆ ಮಾಡ್ತೀನಿ ಎಂದರು. ಅದಕ್ಕೆ 17ನೇ ವಯಸ್ಸಿಗೆ ಮನೆ ಬಿಟ್ಟು ಬಂದೆ. ಹೋಟೆಲ್ ಕೆಲಸ ಮಾಡಿದೆ’ ಎಂದು ಹೇಳಿದರು ಕಿರಣ್.

‘ನಾನು ಸೋಲೋ ಟ್ರಾವೆಲ್ ಶುರು ಮಾಡಿದೆ. ನಾನು ಡ್ಯಾನ್ಸಿಂಗ್ ಮೂಲಕ ಫೇಮಸ್ ಆಗಿದ್ದೀನಿ. ಸದ್ಯ ಬೆಂಗಳೂರಿನಲ್ಲಿ ಇದ್ದೇನೆ. ಭಾರತವನ್ನು ಸುತ್ತಾಡಿದ್ದೇನೆ. ಆರಂಭದಲ್ಲಿ ನನಗೆ ಕಾನ್ಫಿಡೆನ್ಸ್ ಇರಲಿಲ್ಲ.  ಸಕ್ಸಸ್ ಬೆಸ್ಟ್ ರಿವೇಂಜ್ ಅನ್ನೋದು ನನ್ನ ನಂಬಿಕೆ. ತುಂಬಾ ಜನ ನನ್ನನ್ನು ಪಾರ್ಟಿಯಲ್ಲಿ ನೋಡಿದಾರೆ’ ಎಂದರು ಕಿರಣ್.

ಇದನ್ನೂ ಓದಿ
Image
Bigg Boss OTT Kannada: ಬಿಗ್ ಬಾಸ್ ಓಟಿಟಿ ಶುರುವಾಗುತ್ತಿದ್ದಂತೆ ಬಿಗ್ ಸರ್​ಪ್ರೈಸ್ ನೀಡಿದ ಕಿಚ್ಚ ಸುದೀಪ್: ಏನದು?
Image
Roopesh Shetty: ಬಿಗ್ ​ಬಾಸ್ ಮನೆಗೆ ಎಂಟ್ರಿಕೊಟ್ಟ ಕರಾವಳಿಯ ಸೂಪರ್ ಸ್ಟಾರ್: ಯಾರು ಗೊತ್ತಾ ಈ ರೂಪೇಶ್ ಶೆಟ್ಟಿ?
Image
Aryavardhan Guruji: ಜಿಂಗಲಕಾ ಲಕಾ ಲಕಾ: ‘ಬಿಗ್ ಬಾಸ್’ ಮನೆ ಸೇರಿದ ಈ ಆರ್ಯವರ್ಧನ್​ ಗುರೂಜಿ ಯಾರು?
Image
Sonu Srinivas Gowda: ‘ಬಿಗ್ ಬಾಸ್ ಒಟಿಟಿ’ ಎರಡನೇ ಸ್ಪರ್ಧಿಯಾಗಿ ಸೋನು ಶ್ರೀನಿವಾಸ್ ಗೌಡ ಎಂಟ್ರಿ

ಇದನ್ನೂ ಓದಿ: ಬೋಲ್ಡ್​ ಫೋಟೋ ಮೂಲಕ ಗಮನ ಸೆಳೆದ ಸೋನು ಈಗ ಬಿಗ್​ ಬಾಸ್​ಗೆ ಎಂಟ್ರಿ; ಇಲ್ಲಿದೆ ಗ್ಯಾಲರಿ

ಕಿರಣ್ ಅವರು ಡ್ಯಾನ್ಸ್ ಜತೆಗೆ ಯೋಗ ಮಾಡುತ್ತಾರೆ. ಅನೇಕರಿಗೆ ಯೋಗ ಹೇಳಿಕೊಡುತ್ತಾರೆ. ಈ ಕಾರಣದಿಂದಲೂ ಅವರು ಅನೇಕರಿಗೆ ಪರಿಚಯ ಇದ್ದಾರೆ. ಅವರು ರಾಜಸ್ಥಾನದಿಂದ ಕರ್ನಾಟಕಕ್ಕೆ ಬಂದು ಕನ್ನಡ ಕಲಿತಿದ್ದಾರೆ. ಅವರ ಕನ್ನಡ ಕೇಳಿ ಸುದೀಪ್ ಮೆಚ್ಚುಗೆ ವ್ಯಕ್ತಪಡಿಸಿದರು. ಜತೆಗೆ ಮನೆಗೆ ಹೋಗಿ ಇನ್ನಷ್ಟು ಚೆನ್ನಾಗಿ ಕನ್ನಡ ಮಾತನಾಡಿ ಎಂದರು. ಅವರು ಬಿಗ್ ಬಾಸ್ ಮನೆಯಲ್ಲಿ ಯಾವ ರೀತಿ ಪರ್ಫಾರ್ಮೆನ್ಸ್ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Published On - 10:03 pm, Sat, 6 August 22

ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್