AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿ ಪ್ರಿಯರಿಗೆ ಈ ವಾರ ಬಂಪರ್; ರಿಲೀಸ್ ಆಗ್ತಿವೆ ಹಲವು ಸಿನಿಮಾಗಳು

ಜೂನಿಯರ್ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಸಾಧಾರಣ ಗಳಿಕೆ ಮಾಡಿತು. ಈ ಚಿತ್ರ ಮಿಶ್ರ ಪ್ರತಿಕ್ರಿಯೆ ಪಡೆದಿದ್ದು ಸಿನಿಮಾ ಕಲೆಕ್ಷನ್ ಕುಗ್ಗಲು ಪ್ರಮುಖ ಕಾರಣ. ಈ ಚಿತ್ರವನ್ನು ಒಟಿಟಿಯಲ್ಲಿ ನೋಡಲು ಅನೇಕರು ಕಾದಿದ್ದಾರೆ. ಅವರಿಗೆ ಗುಡ್​ನ್ಯೂಸ್ ಸಿಕ್ಕಿದೆ.

ಒಟಿಟಿ ಪ್ರಿಯರಿಗೆ ಈ ವಾರ ಬಂಪರ್; ರಿಲೀಸ್ ಆಗ್ತಿವೆ ಹಲವು ಸಿನಿಮಾಗಳು
ಒಟಿಟಿ ಪ್ರಿಯರಿಗೆ ಈ ವಾರ ಬಂಪರ್
ರಾಜೇಶ್ ದುಗ್ಗುಮನೆ
|

Updated on: Nov 06, 2024 | 10:40 AM

Share

ದೀಪಾವಳಿ ಪ್ರಯುಕ್ತ ಹಲವು ಸಿನಿಮಾಗಳು ಥಿಯೇಟರ್​​ನಲ್ಲಿ ರಿಲೀಸ್ ಆಗಿವೆ. ಅವುಗಳ ಅಬ್ಬರ ಕಡಿಮೆ ಆಗಿಲ್ಲ. ಈ ವಾರ ಒಟಿಟಿಯಲ್ಲಿ ಸಿನಿಮಾಗಳ ಸುಗ್ಗಿ ನಡೆಯುತ್ತಿದೆ. ಥಿಯೇಟರ್​ನಲ್ಲಿ ಸಿನಿಮಾ ರಿಲೀಸ್ ಆದ ನಾಲ್ಕು ವಾರ ಅಥವಾ ಆರು ವಾರಗಳಲ್ಲಿ ಸಿನಿಮಾಗಳು ಒಟಿಟಿಗೆ ಬರೋದು ವಾಡಿಕೆ. ಅದೇ ರೀತಿ ಒಂದು ತಿಂಗಳು ಹಾಗೂ ಒಂದೂವರೆ ತಿಂಗಳ ಹಿಂದೆ ರಿಲೀಸ್ ಆದ ಚಿತ್ರಗಳು ಈಗ ಒಟಿಟಿ ಹಾದಿ ಹಿಡಿದಿವೆ.

ಜೂನಿಯರ್ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಸಾಧಾರಣ ಗಳಿಕೆ ಮಾಡಿತು. ಈ ಚಿತ್ರ ಮಿಶ್ರ ಪ್ರತಿಕ್ರಿಯೆ ಪಡೆದಿದ್ದು ಸಿನಿಮಾ ಕಲೆಕ್ಷನ್ ಕುಗ್ಗಲು ಪ್ರಮುಖ ಕಾರಣ. ಈ ಚಿತ್ರವನ್ನು ಒಟಿಟಿಯಲ್ಲಿ ನೋಡಲು ಅನೇಕರು ಕಾದಿದ್ದಾರೆ. ಅವರಿಗೆ ಗುಡ್​ನ್ಯೂಸ್ ಸಿಕ್ಕಿದೆ. ಜೂನಿಯರ್​ ಎನ್​ಟಿಆರ್ ನಟನೆಯ ಈ ಚಿತ್ರ ನವೆಂಬರ್ 8ರಂದು ನೆಟ್​​ಫ್ಲಿಕ್ಸ್ ಮೂಲಕ ಪ್ರಸಾರ ಕಾಣುತ್ತಿದೆ.

ಕೊರಟಾಲ ಶಿವ ‘ದೇವರ’ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಸಿನಿಮಾಗೆ ಎರಡನೇ ಪಾರ್ಟ್​ ಕೂಡ ಬರಬೇಕಿದೆ. ಆ ಚಿತ್ರ ಸೆಟ್ಟೇರುತ್ತದೆಯೇ ಅಥವಾ ಇಲ್ಲವೇ ಎನ್ನುವ ಪ್ರಶ್ನೆ ಮೂಡಿದೆ.

ರಜನಿಕಾಂತ್ ನಟನೆಯ ‘ವೆಟ್ಟೈಯಾನ್’ ಸಿನಿಮಾ ಮಿಶ್ರಪ್ರತಿಕ್ರಿಯೆ ಪಡೆಯಿತು. ಈ ಚಿತ್ರ 29 ದಿನಗಳಲ್ಲಿ ಒಟಿಟಿಗೆ ಕಾಲಿಡುತ್ತಿದೆ. ರಜನಿಕಾಂತ್ ಜೊತೆಗೆ ಅಮಿತಾಭ್ ಬಚ್ಚನ್, ಫಹಾದ್ ಫಾಸಿಲ್, ಮಂಜು ವಾರಿಯರ್ ಮೊದಲಾದವರು ನಟಿಸಿದ್ದಾರೆ. ಇದು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿಲ್ಲ. ಈ ಸಿನಿಮಾ ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ರಿಲೀಸ್ ಆಗಲಿದೆ.

ಇದನ್ನೂ ಓದಿ: ತೆಲುಗು ಬಿಗ್ ಬಾಸ್ ವೇದಿಕೆ ಮೇಲೆ ಕನ್ನಡದಲ್ಲೇ ಮಾತನಾಡಿದ್ದ ಜೂನಿಯರ್ ಎನ್​ಟಿಆರ್

ಟುವಿನೋ ಥಾಮಸ್ ನಟನೆಯ ‘ARM’ ಕೂಡ ಒಟಿಟಿಗೆ ಬರುತ್ತಿದೆ. ಈ ಸಿನಿಮಾ ಎರಡು ತಿಂಗಳ ಬಳಿಕ ಒಟಿಟಿಗೆ ಬರುತ್ತಿದೆ. ಈ ಚಿತ್ರದ ಕಥೆ 1900, 1950 ಹಾಗೂ 1990ರಲ್ಲಿ ಸಾಗುತ್ತದೆ. ನವೆಂಬರ್ 8ರಂದು ಡಿಸ್ನಿ ಪ್ಲಸ್ ಹಾಟ್​ಸ್ಟಾರ್  ಮೂಲಕ ಚಿತ್ರ ಬಿಡುಗಡೆ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ