AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಕೇಶ್​​ಗೆ ಸ್ಫೂರ್ತಿ ಗೌಡ ಮೇಲೆ ಲವ್​​? ‘ಬಿಗ್​​ ಬಾಸ್​’ನಲ್ಲಿ ಮೊದಲ ವಾರವೇ ಹುಟ್ಟಿತು ಪ್ರೀತಿ-ಪ್ರೇಮದ ಚರ್ಚೆ

‘ಬಿಗ್​ ಬಾಸ್​ ಒಟಿಟಿಗೆ’ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಖ್ಯಾತಿ ಗಳಿಸಿದ ಅನೇಕರು ಎಂಟ್ರಿ ಕೊಟ್ಟಿದ್ದಾರೆ. ಇನ್ನು, ನಟ ರಾಕೇಶ್ ಅಡಿಗ ಕೂಡ ಎಂಟ್ರಿ ಕೊಟ್ಟಿದ್ದಾರೆ. ಇಬ್ಬರ ನಡುವೆ ಕೆಲ ಸಂಭಾಷಣೆ ನಡೆದಿದೆ. ಇದು ಸಾಕಷ್ಟು ಅಚ್ಚರಿ ಮೂಡಿಸಿದೆ.

ರಾಕೇಶ್​​ಗೆ ಸ್ಫೂರ್ತಿ ಗೌಡ ಮೇಲೆ ಲವ್​​? ‘ಬಿಗ್​​ ಬಾಸ್​’ನಲ್ಲಿ ಮೊದಲ ವಾರವೇ ಹುಟ್ಟಿತು ಪ್ರೀತಿ-ಪ್ರೇಮದ ಚರ್ಚೆ
TV9 Web
| Edited By: |

Updated on:Aug 09, 2022 | 6:49 AM

Share

‘ಬಿಗ್ ಬಾಸ್​’ (Bigg Boss) ಮನೆಯಲ್ಲಿ ಸಾಕಷ್ಟು ಪ್ರೀತಿ-ಪ್ರೇಮಗಳು ಹುಟ್ಟಿಕೊಂಡಿವೆ. ಕೆಲವು ಮನೆಯಲ್ಲೇ ಅಂತ್ಯವಾದರೆ, ಇನ್ನೂ ಕೆಲವು ಮದುವೆವರೆಗೆ ಹೋದ ಉದಾಹರಣೆ ಇದೆ. ಈಗ ಕನ್ನಡದಲ್ಲಿ ‘ಬಿಗ್ ಬಾಸ್​ ಒಟಿಟಿ’ ಶುರುವಾಗಿದೆ. ದೊಡ್ಮನೆಗೆ ಒಟ್ಟು 16 ಸ್ಪರ್ಧಿಗಳ ಎಂಟ್ರಿ ಆಗಿದೆ. ಮೊದಲ ವಾರವರೇ ಪ್ರೀತಿ-ಪ್ರೇಮದ ವಿಚಾರ ಪ್ರಸ್ತಾಪ ಆಗಿದೆ. ಈ ಮೂಲಕ ಹಲವು ರೀತಿಯ ಚರ್ಚೆಗಳು ಹುಟ್ಟಿಕೊಳ್ಳುತ್ತಿವೆ. ಅಷ್ಟಕ್ಕೂ ಇದು ಹಾಸ್ಯಕ್ಕೆ ಸೀಮಿತವಾಗುತ್ತದೆಯೋ ಅಥವಾ ಗಂಭೀರ ಸ್ವರೂಪ ಪಡೆದುಕೊಳ್ಳುತ್ತದೆಯೋ ಎಂಬುದು ಸದ್ಯದ ಕುತೂಹಲ.

‘ಬಿಗ್​ ಬಾಸ್​ ಒಟಿಟಿಗೆ’ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಖ್ಯಾತಿ ಗಳಿಸಿದ ಅನೇಕರು ಎಂಟ್ರಿ ಕೊಟ್ಟಿದ್ದಾರೆ. ಇನ್ನು, ನಟ ರಾಕೇಶ್ ಅಡಿಗ ಕೂಡ ಎಂಟ್ರಿ ಕೊಟ್ಟಿದ್ದಾರೆ. ಇಬ್ಬರ ನಡುವೆ ಕೆಲ ಸಂಭಾಷಣೆ ನಡೆದಿದೆ. ಇದು ಸಾಕಷ್ಟು ಅಚ್ಚರಿ ಮೂಡಿಸಿದೆ. ಇಬ್ಬರ ನಡುವೆ ಏನಾದರೂ ನಡೆಯುತ್ತಿದೆಯೇ ಎಂಬ ಕುತೂಹಲ ಮೂಡಿದೆ.

ಇದನ್ನೂ ಓದಿ
Image
ಆರ್ಯವರ್ಧನ್​ ಗುರೂಜಿ ಕುಟುಂಬದ ಆಸ್ತಿ 5 ಸಾವಿರ ಕೋಟಿ ರೂಪಾಯಿ; ಶಾಕ್​ ಆದ ಸ್ಪರ್ಧಿಗಳು
Image
Aryavardhan Guruji: ಈ ಬಾರಿ ‘ಬಿಗ್ ಬಾಸ್​’ ಗೆಲ್ಲೋರು ಯಾರು? ಮೊದಲ ದಿನವೇ ಭವಿಷ್ಯ ನುಡಿದ ಆರ್ಯವರ್ಧನ್​ ಗುರೂಜಿ
Image
Aryavardhan Guruji: ಜಿಂಗಲಕಾ ಲಕಾ ಲಕಾ: ‘ಬಿಗ್ ಬಾಸ್’ ಮನೆ ಸೇರಿದ ಈ ಆರ್ಯವರ್ಧನ್​ ಗುರೂಜಿ ಯಾರು?
Image
Aryavardhan Guruji: ‘ಬಿಗ್ ಬಾಸ್ ಒಟಿಟಿ’ಯ ಮೊದಲ ಸ್ಪರ್ಧಿಯಾಗಿ ಮನೆ ಸೇರಿದ ಆರ್ಯವರ್ಧನ್​ ಗುರೂಜಿ

ರಾಕೇಶ್ ಅವರ ಕೈಹಿಡಿದುಕೊಂಡು ಭವಿಷ್ಯ ಹೇಳುವುದಾಗಿ ಹೇಳಿದರು ಸ್ಫೂರ್ತಿ ಗೌಡ. ‘ದುಡ್ಡು ಎಷ್ಟೇ ಬಂದರೂ ಅರ್ಧಂಬರ್ಧ ಬರುತ್ತದೆ’ ಎಂದು ಮಾತು ಆರಂಭಿಸಿದರು. ನಂತರ ಅದೂ ಇದು ಎಂದು ಕಥೆ ಹೇಳೋಕೆ ಶುರು ಮಾಡಿದರು. ಇದನ್ನು ರಾಕೇಶ್ ಹಾಗೂ ರೂಪೇಶ್ ಆಡಿಕೊಂಡು ನಕ್ಕರು. ನಂತರ ರಾಕೇಶ್​ ಅವರು ಸ್ಫೂರ್ತಿ ಅವರ ಕೈ ಹಿಡಿದುಕೊಂಡು ಭವಿಷ್ಯ ನುಡಿಯುವುದಾಗಿ ಹೇಳಿದರು.

‘ನಿಮಗೆ ಬಿಗ್ ಬಾಸ್ ಮನೆಯ ಮೇಲೆ ಲವ್​ ಆಗುತ್ತದೆ. ಅವರು ನಿಮ್ಮ ಕೈ ನೋಡುತ್ತಿರುತ್ತಾರೆ’ ಎಂದರು ರಾಕೇಶ್​. ಅವರು ಫ್ಲರ್ಟ್​ ಮಾಡಿದ್ದನ್ನು ನೋಡಿ ಸ್ಫೂರ್ತಿ ನಕ್ಕರು. ಇಬ್ಬರ ನಡುವೆ ಏನೋ ಶುರುವಾಗುವ ಸೂಚನೆ ಸಿಗುತ್ತಿದೆ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇದನ್ನೂ ಓದಿ: ‘ಬಿಗ್ ಬಾಸ್ ಒಟಿಟಿ’ ಸೇರಿದ 16 ಸ್ಪರ್ಧಿಗಳು ಇವರೇ ನೋಡಿ; ಇಲ್ಲಿದೆ ಫೋಟೋ ಹಾಗೂ ವಿವರ

ಬಿಗ್ ಬಾಸ್ ಮನೆಯಲ್ಲಿ ಎರಡೇ ದಿನಕ್ಕೆ ಸಾಕಷ್ಟು ವಿಚಾರಗಳು ನಡೆದಿವೆ. ಮೊದಲ ದಿನ ದೊಡ್ಮನೆಯಲ್ಲಿ ಕಣ್ಣೀರ ಕೋಡಿ ಹರಿಯಿತು. ಎರಡನೇ ದಿನ ಸಾಕಷ್ಟು ಜಗಳ ನಡೆಯಿತು. ಮುಂದಿನ 40 ದಿನಗಳ ಕಾಲ ಯಾವ ರೀತಿ ಸಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

Published On - 7:23 pm, Mon, 8 August 22

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ