AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada OTT: ಫಿನಾಲೆ ವಾರಕ್ಕೆ ನೇರ ಟಿಕೆಟ್​ ಪಡೆದ ರಾಕೇಶ್​, ಸಾನ್ಯಾ, ರೂಪೇಶ್​

Roopesh Shetty | BBK: ಐದನೇ ವಾರದಲ್ಲಿ ಯಾರು ಎಲಿಮಿನೇಟ್​ ಆಗುತ್ತಾರೆ ಎಂಬ ಕೌತುಕ ನಿರ್ಮಾಣ ಆಗಿದೆ. ರಾಕೇಶ್​ ಅಡಿಗ, ಸಾನ್ಯಾ ಐಯ್ಯರ್​, ರೂಪೇಶ್​ ಶೆಟ್ಟಿ ಸೇಫ್​ ಆಗಿದ್ದಾರೆ.

Bigg Boss Kannada OTT: ಫಿನಾಲೆ ವಾರಕ್ಕೆ ನೇರ ಟಿಕೆಟ್​ ಪಡೆದ ರಾಕೇಶ್​, ಸಾನ್ಯಾ, ರೂಪೇಶ್​
ರಾಕೇಶ್​ ಅಡಿಗ, ಸಾನ್ಯಾ ಐಯ್ಯರ್​, ರೂಪೇಶ್​ ಶೆಟ್ಟಿ
TV9 Web
| Edited By: |

Updated on: Sep 05, 2022 | 8:48 PM

Share

‘ಬಿಗ್​ ಬಾಸ್​ ಕನ್ನಡ ಒಟಿಟಿ’ (Bigg Boss Kannada OTT) ಶೋ ಮುಗಿಯಲು ಇನ್ನು ಕೆಲವೇ ದಿನಗಳ ಮಾತ್ರ ಬಾಕಿ ಉಳಿದಿವೆ. ಈ ಅಂತಿಮ ಘಟ್ಟದಲ್ಲಿ ಆಟದ ಮಜಾ ಹೆಚ್ಚುತ್ತಿದೆ. ಸ್ಪರ್ಧಿಗಳ ನಡುವಿನ ಪೈಪೋಟಿ ಕೂಡ ಇನ್ನೊಂದು ಹಂತಕ್ಕೆ ಏರಿದೆ. ಸದ್ಯ ಬಿಗ್​ ಬಾಸ್​ ಮನೆಯಲ್ಲಿ 9 ಸ್ಪರ್ಧಿಗಳು ಇದ್ದಾರೆ. ಐದನೇ ವಾರಕ್ಕೆ ಶೋ ಕಾಲಿಟ್ಟಿದೆ. ಆರನೇ ವಾರದಲ್ಲಿ ಫಿನಾಲೆ ನಡೆಯಲಿದೆ. ಅಲ್ಲಿಯವರೆಗೂ ಯಾರು ತಮ್ಮ ಸ್ಥಾನ ಉಳಿಸಿಕೊಳ್ಳುತ್ತಾರೆ ಎಂಬುದು ಕೌತುಕದ ಪ್ರಶ್ನೆ. ವಿಶೇಷ ಏನೆಂದರೆ, ರಾಕೇಶ್​ ಅಡಿಗ (Rakesh Adiga), ರೂಪೇಶ್​ ಶೆಟ್ಟಿ ಮತ್ತು ಸಾನ್ಯಾ ಐಯ್ಯರ್ (Sanya Iyer) ಅವರು ನೇರವಾಗಿ ಫಿನಾಲೆ ವಾರಕ್ಕೆ ಟಿಕೆಟ್​ ಪಡೆದಿದ್ದಾರೆ. ಇನ್ನುಳಿದ ಸ್ಪರ್ಧಿಗಳಿಗೆ ಸವಾಲು ಎದುರಾಗಿದೆ. ಐದನೇ ವಾರದಲ್ಲಿ ಎಲ್ಲರೂ ಹೆಚ್ಚು ಶ್ರಮ ಹಾಕಿ ಆಡಬೇಕಿದೆ.

ಆರ್ಯವರ್ಧನ್​ ಗುರೂಜಿ, ಜಯಶ್ರೀ ಆರಾಧ್ಯ, ಸೋನು ಶ್ರೀನಿವಾಸ್​ ಗೌಡ, ರಾಕೇಶ್​ ಅಡಿಗ, ರೂಪೇಶ್​ ಶೆಟ್ಟಿ, ಸಾನ್ಯಾ ಅಯ್ಯರ್​, ಸೋಮಣ್ಣ ಮಾಚಿಮಾಡ, ನಂದಿನಿ, ಜಶ್ವಂತ್ ಅವರ ನಡುವೆ ಪೈಪೋಟಿ ಮುಂದುವರಿದಿದೆ. ಆದರೆ ಪ್ರೇಕ್ಷಕರು ಆಯ್ಕೆ ಮಾಡಿರುವಂತೆ ರಾಕೇಶ್​ ಅಡಿಗ ಅವರು ನೇರವಾಗಿ ಫಿನಾಲೆ ವಾರಕ್ಕೆ ಎಂಟ್ರಿ ಪಡೆದಿದ್ದಾರೆ. ಕ್ಯಾಪ್ಟನ್​ ಆದ ಕಾರಣಕ್ಕೆ ರೂಪೇಶ್​ ಕೂಡ ಫಿನಾಲೆ ವಾರಕ್ಕೆ ಅರ್ಹತೆ ಪಡೆದಿದ್ದಾರೆ. ಇನ್ನೊಬ್ಬರನ್ನು ಆಯ್ಕೆ ಮಾಡುವ ಅವಕಾಶ ಕ್ಯಾಪ್ಟನ್​ಗೆ ನೀಡಲಾಯಿತು. ಆಗ ರೂಪೇಶ್ ಅವರು ಸಾನ್ಯಾ ಐಯ್ಯರ್​ ಹೆಸರನ್ನು ಆಯ್ಕೆ ಮಾಡಿದರು.

ಇನ್ನುಳಿದ ಸ್ಪರ್ಧಿಗಳಾದ ನಂದಿನಿ, ಜಶ್ವಂತ್​, ಸೋನು ಶ್ರೀನಿವಾಸ್​ ಗೌಡ, ಆರ್ಯವರ್ಧನ್​ ಗುರೂಜಿ, ಸೋಮಣ್ಣ ಮಾಚಿಮಾಡ, ಜಯಶ್ರೀ ಆರಾಧ್ಯ ಅವರು ನಾಮಿನೇಟ್​ ಆಗಿದ್ದಾರೆ. ಐದನೇ ವಾರದಲ್ಲಿ ಯಾರು ಎಲಿಮಿನೇಟ್​ ಆಗುತ್ತಾರೆ ಎಂಬ ಕೌತುಕ ನಿರ್ಮಾಣ ಆಗಿದೆ.

ಇದನ್ನೂ ಓದಿ
Image
ದೊಡ್ಮನೆಯಲ್ಲಿ ಎದೆ ಬಡಿದುಕೊಂಡು ಅತ್ತ ಜಯಶ್ರೀ; ಬಿಗ್​ ಬಾಸ್​ ಶೋನಲ್ಲಿ ಅಂಥದ್ದೇನಾಯ್ತು?
Image
BBK: ಬಿಗ್​ ಬಾಸ್​ಗೆ ಅವಮಾನ ಮಾಡಿದ ಸೋನು ಗೌಡ; ಮುಲಾಜಿಲ್ಲದೇ ಕ್ಲಾಸ್​ ತೆಗೆದುಕೊಂಡ ಕಿಚ್ಚ ಸುದೀಪ್​
Image
ಬಿಗ್​ ಬಾಸ್​ನಲ್ಲಿ ಹುಡುಗರಿಗೆ ಹೊರಗಿನಿಂದ ಸಿಗುತ್ತಿದೆ ಆ ಒಂದು ವಸ್ತು; ಸೋನು ಹೇಳಿಯೇ ಬಿಟ್ರು
Image
‘ಬಿಗ್​ ಬಾಸ್​ ಒಟಿಟಿ’ ಮನೆಯೊಳಗೆ ನಿಜವಾಗಿ ಏನೆಲ್ಲ ನಡೆಯಿತು? ಎಲ್ಲವನ್ನೂ ವಿವರಿಸಿದ ಸ್ಫೂರ್ತಿ ಗೌಡ

ನಾಲ್ಕನೇ ವಾರದಲ್ಲಿ ಡಬಲ್​ ಎಲಿಮಿನೇಷನ್​ ನಡೆಯಿತು. ಅಕ್ಷತಾ ಕುಕ್ಕಿ ಮತ್ತು ಚೈತ್ರಾ ಹಳ್ಳಿಕೇರಿ ಅವರು ಎಲಿಮಿನೇಟ್​ ಆದರು. ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋ ಮುಗಿದ ಬಳಿಕ ಟಿವಿಯಲ್ಲಿ ‘ಬಿಗ್​ ಬಾಸ್​ ಕನ್ನಡ 9ನೇ ಸೀಸನ್​’ ಆರಂಭ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!