AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಗೆ ಬರಲು ರೆಡಿ ಆಯ್ತು ‘ಏಳುಮಲೆ’ ಸಿನಿಮಾ; ಅಧಿಕೃತ ಘೋಷಣೆ

‘ಸು ಫ್ರಮ್ ಸೋ’ ಸಿನಿಮಾ ಆಗತಾನೇ ಯಶಸ್ಸು ಕಂಡು ಚಿತ್ರರಂಗದಲ್ಲಿ ಹೊಸ ಅಲೆ ಸೃಷ್ಟಿ ಆಗಿತ್ತು. ಆ ಬಳಿಕ ರಿಲೀಸ್ ಆಗುವ ಚಿತ್ರಗಳ ಮೇಲೆ ನಿರೀಕ್ಷೆಗಳು ಹೆಚ್ಚುವಂತೆ ಆದವು. ಆ ಸಮಯದಲ್ಲಿ ತೆರೆಗೆ ಬಂದಿದ್ದು ‘ಏಳುಮಲೆ’ ಚಿತ್ರ. ರಕ್ಷಿತಾ ಪ್ರೇಮ್ ಅವರ ಸಹೋದರ ರಾಣ ಅವರು ಈ ಚಿತ್ರದಲ್ಲಿ ನಟಿಸಿದರು ಮತ್ತು ದೊಡ್ಡ ಮಟ್ಟದಲ್ಲಿ ಗೆಲುವು ಕಂಡರು. ಈ ಸಿನಿಮಾ ಒಟಿಟಿಯಲ್ಲಿ ಬರಲು ಸಿದ್ಧವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಒಟಿಟಿಗೆ ಬರಲು ರೆಡಿ ಆಯ್ತು ‘ಏಳುಮಲೆ’ ಸಿನಿಮಾ; ಅಧಿಕೃತ ಘೋಷಣೆ
ಏಳುಮಲೆ
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 07, 2025 | 9:15 AM

Share

‘ಏಳುಮಲೆ’ ಸಿನಿಮಾ (Elumale Movie) ಚಿತ್ರಮಂದಿರದಲ್ಲಿ ಸೆಪ್ಟೆಂಬರ್ 5ರಂದು ಚಿತ್ರಮಂದಿರದಲ್ಲಿ ರಿಲೀಸ್ ಆಯಿತು. ಈ ಚಿತ್ರ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತು. ತರುಣ್ ಸುಧೀರ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡುವ ಜವಾಬ್ದಾರಿ ತೆಗೆದುಕೊಂಡಿದ್ದರು. ಈಗ ಸಿನಿಮಾ ಒಟಿಟಿಯಲ್ಲಿ ಬರಲು ಸಿದ್ಧವಾಗಿದೆ. ಜೀ5 ಒಟಿಟಿ ಮೂಲಕ ಸಿನಿಮಾ ರಿಲೀಸ್ ಆಗಲಿದೆ ಎಂಬ ಮಾಹಿತಿಯನ್ನು ವಾಹಿನಿಯವರ ಕಡೆಯಿಂದ ಸಿಕ್ಕಿದೆ ಎಂಬುದು ವಿಶೇಷ.

‘ಸು ಫ್ರಮ್ ಸೋ’ ಸಿನಿಮಾ ಆಗತಾನೇ ಯಶಸ್ಸು ಕಂಡು ಚಿತ್ರರಂಗದಲ್ಲಿ ಹೊಸ ಅಲೆ ಸೃಷ್ಟಿ ಆಗಿತ್ತು. ಆ ಬಳಿಕ ರಿಲೀಸ್ ಆಗುವ ಚಿತ್ರಗಳ ಮೇಲೆ ನಿರೀಕ್ಷೆಗಳು ಹೆಚ್ಚುವಂತೆ ಆದವು. ಆ ಸಮಯದಲ್ಲಿ ತೆರೆಗೆ ಬಂದಿದ್ದು ‘ಏಳುಮಲೆ’ ಚಿತ್ರ. ರಕ್ಷಿತಾ ಪ್ರೇಮ್ ಅವರ ಸಹೋದರ ರಾಣ ಅವರು ಈ ಚಿತ್ರದಲ್ಲಿ ನಟಿಸಿದರು ಮತ್ತು ದೊಡ್ಡ ಮಟ್ಟದಲ್ಲಿ ಗೆಲುವು ಕಂಡರು. ಈ ಸಿನಿಮಾ ಒಟಿಟಿಯಲ್ಲಿ ಬರಲು ಸಿದ್ಧವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

‘ಈ ವರ್ಷದ ಬ್ಲಾಕ್ ಬಸ್ಟರ್ ಹಿಟ್ ಮತ್ತು ರೊಮ್ಯಾಂಟಿಕ್ ಥ್ರಿಲ್ಲರ್ ಸಿನಿಮಾ ಏಳುಮಲೆ ಅಕ್ಟೋಬರ್ 17 ರಂದು ನಿಮ್ಮ ಕನ್ನಡ Z5ನಲ್ಲಿ ಪ್ರಸಾರ ಆಗಲಿದೆ’ ಎಂದು ಜೀ ಕನ್ನಡ ಮಾಹಿತಿ ನೀಡಿದೆ. ಇದಾದ ಬಳಿಕ ಸಿನಿಮಾ ಜೀ ಕನ್ನಡದಲ್ಲಿ ಪ್ರಸಾರ ಕಾಣುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಾ ಇದೆ. ಈ ವಿಷಯ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಥಿಯೇಟರ್​ನಲ್ಲಿ ಸಿನಿಮಾ ಮಿಸ್ ಮಾಡಿಕೊಂಡವರು ಒಟಿಟಿಯಲ್ಲಿ ವೀಕ್ಷಿಸಬಹುದು.

‘ಏಳುಮಲೆ’ ಚಿತ್ರವನ್ನು ಪುನೀತ್ ರಂಗಸ್ವಾಮಿ ನಿರ್ದೇಶನ ಮಾಡಿದ್ದಾರೆ. ರಾಣ, ಪ್ರಿಯಾಂಕಾ ಆಚಾರ್, ಜಗಪತಿ ಬಾಬು, ಕಿಶೋರ್ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಅವಧಿ ಎರಡು ಗಂಟೆ 13 ನಿಮಿಷ ಇದೆ.

ಇದನ್ನೂ ಓದಿ: ‘ಸು ಫ್ರಮ್ ಸೋ’ ಬಳಿಕ ಮತ್ತೊಂದು ಹಿಟ್ ಚಿತ್ರ; ‘ಏಳುಮಲೆ’ ಸಿನಿಮಾ ಕಲೆಕ್ಷನ್ ಎಷ್ಟು?

ಕರ್ನಾಟಕ ಮತ್ತು ತಮಿಳುನಾಡು ನಡುವಿನ ಗಡಿ ಪ್ರದೇಶಗಳಲ್ಲಿ ಈ ಕಥೆ ನಡೆಯುತ್ತದೆ. ಈ ಚಿತ್ರವು ಚಾಮರಾಜನಗರದ ಕ್ಯಾಬ್ ಚಾಲಕ ಹರೀಶ್ ಮತ್ತು ಸೇಲಂನ ಶ್ರೀಮಂತ ಯುವತಿಯಾದ ರೇವತಿ ಸುತ್ತ ಸಾಗುತ್ತದೆ. ಇವರ ಪ್ರೇಮ ಕಥೆ ಕಳ್ಳಸಾಗಣೆದಾರರು ಮತ್ತು ದೊಡ್ಡ ರಾಜಕೀಯ ಒಳಹರಿವುಗಳೊಂದಿಗೆ ಸಿಕ್ಕಿಹಾಕಿಕೊಳ್ಳುತ್ತದೆ. ಇದು ನೈಜ ಘಟನೆ ಆಧರಿಸಿದ ಸಿನಿಮಾ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್