AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥಿಯೇಟರ್​ನಲ್ಲಿ ಮುಗಿಯಿತು ‘ಧುರಂಧರ್ 2’ ಆಟ; ಅಂತಿಮ ಕಲೆಕ್ಷನ್ ಎಷ್ಟು?

ರಣವೀರ್ ಸಿಂಗ್ ಅಭಿನಯದ 'ಧುರಂಧರ್ 2: ದಿ ರಿವೆಂಜ್' ಚಿತ್ರ ಈ ವಾರ ಒಟಿಟಿಗೆ ಬರಲು ಸಿದ್ಧವಾಗಿದೆ. ಭಾರತದಲ್ಲಿ ಜಿಯೋ ಹಾಟ್‌ಸ್ಟಾರ್‌ನಲ್ಲಿ, ಅಂತರರಾಷ್ಟ್ರೀಯ ಮಟ್ಟದಲ್ಲಿ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಲಿದೆ. ಥಿಯೇಟರ್‌ಗಳಲ್ಲಿ ಕತ್ತರಿಸಿದ ದೃಶ್ಯಗಳನ್ನು ಒಳಗೊಂಡಿರುವ ಒಟಿಟಿ ಆವೃತ್ತಿ ಹೆಚ್ಚು ರೋಚಕವಾಗಿದೆ. ಈಗಾಗಲೇ ವಿಶ್ವದಾದ್ಯಂತ 1796 ಕೋಟಿಗೂ ಹೆಚ್ಚು ಗಳಿಕೆ ಕಂಡಿರುವ ಈ ಚಿತ್ರ, 'ಬಾಹುಬಲಿ 2' ದಾಖಲೆ ಮುರಿಯುವ ಸನಿಹದಲ್ಲಿದೆ.

ಥಿಯೇಟರ್​ನಲ್ಲಿ ಮುಗಿಯಿತು ‘ಧುರಂಧರ್ 2’ ಆಟ; ಅಂತಿಮ ಕಲೆಕ್ಷನ್ ಎಷ್ಟು?
ಧುರಂಧರ್ 2
ರಾಜೇಶ್ ದುಗ್ಗುಮನೆ
|

Updated on:May 15, 2026 | 7:06 AM

Share

ರಣವೀರ್ ಸಿಂಗ್ ಅಭಿನಯದ ಬಹುನಿರೀಕ್ಷಿತ ‘ಧುರಂಧರ್ 2: ದಿ ರಿವೆಂಜ್’ ಚಿತ್ರ ಈ ವಾರವೇ ಒಟಿಟಿಗೆ ಕಾಲಿಡಲು ರೆಡಿ ಆಗಿದೆ. ಈ ಸಿನಿಮಾ ಏಕಕಾಲದಲ್ಲಿ ಎರಡು ವಿಭಿನ್ನ ಒಟಿಟಿ ವೇದಿಕೆಗಳಲ್ಲಿ ಬಿಡುಗಡೆಯಾಗುತ್ತಿದೆ. ಈ ಮೂಲಕ ಥಿಯೇಟರ್​​ನಲ್ಲಿ ಈ ಸಿನಿಮಾದ ಕಲೆಕ್ಷನ್ ಬಹುತೇಕವಾಗಿ ಕೊನೆಗೊಂಡಂತೆ ಆಗಿದೆ. ಹಾಗಾದರೆ ಅಂತಿಮವಾಗಿ ಈ ಸಿನಿಮಾ ಎಷ್ಟು ಕೋಟಿ ಗಳಿಸಿತು ಎಂಬುದರ ಲೆಕ್ಕ ಇಲ್ಲಿದೆ.

1. ‘ಧುರಂಧರ್ 2’ ಒಟಿಟಿಗೆ ಬರಲು ರೆಡಿ

2. ವಿಶ್ವಾದ್ಯಂತ ಭರ್ಜರಿ ಕಲೆಕ್ಷನ್

3. ರಣವೀರ್ ಸಿಂಗ್​​ಗೆ ದೊಡ್ಡ ಜಯ

ಭಾರತದಲ್ಲಿ ಜಿಯೋ ಹಾಟ್​ಸ್ಟಾರ್ ಸಂಸ್ಥೆ ಬರೋಬ್ಬರಿ 150 ಕೋಟಿ ರೂಪಾಯಿಗಳಿಗೆ ಒಟಿಟಿ ಹಕ್ಕನ್ನು ಖರೀದಿಸಿದೆ ಎನ್ನಲಾಗಿದೆ. ಭಾರತೀಯ ಪ್ರೇಕ್ಷಕರು ಜಿಯೋಹಾಟ್‌ಸ್ಟಾರ್‌ನಲ್ಲಿ ಮಾತ್ರ ಈ ಚಿತ್ರವನ್ನು ವೀಕ್ಷಿಸಬಹುದಾಗಿದೆ. ಮೊದಲ ಭಾಗ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿದ್ದರಿಂದ, ಎರಡನೇ ಭಾಗವೂ ಅಲ್ಲಿಯೇ ಬರಬಹುದು ಎಂದು ನಿರೀಕ್ಷಿಸಿದ್ದ ಅಭಿಮಾನಿಗಳಿಗೆ ಈ ಸುದ್ದಿ ಅಚ್ಚರಿ ಮೂಡಿಸಿದೆ. ಭಾರತದ ಹೊರಗಿನ ಪ್ರೇಕ್ಷಕರಿಗಾಗಿ ನೆಟ್‌ಫ್ಲಿಕ್ಸ್ ಈ ಚಿತ್ರವನ್ನು ಪ್ರಸಾರ ಮಾಡಲಿದೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಇದು ‘ಧುರಂದರ್: ದಿ ರಿವೇಂಜ್ (ರಾ ಆ್ಯಂಡ್ ಅನ್​​ಸಿನ್) ಹೆಸರಿನಲ್ಲಿ ಬಿಡುಗಡೆಯಾಗುತ್ತಿದೆ. ಅಂದರೆ, ಥಿಯೇಟರ್‌ನಲ್ಲಿ ಬಿಡುಗಡೆಯಾದ ಆವೃತ್ತಿಗಿಂತ ಒಟಿಟಿ ಆವೃತ್ತಿ ಹೆಚ್ಚು ರೋಚಕವಾಗಿರಲಿದೆ: ಚಿತ್ರಮಂದಿರದಲ್ಲಿ 3 ಗಂಟೆ 49 ನಿಮಿಷಗಳಿದ್ದ ಈ ಸಿನಿಮಾ, ಒಟಿಟಿಯಲ್ಲಿ 3 ಗಂಟೆ 52 ನಿಮಿಷಗಳ ಕಾಲ ಇರಲಿದೆ. ಸೆನ್ಸಾರ್ ಮಂಡಳಿಯಿಂದ ಕತ್ತರಿ ಬಿದ್ದಿದ್ದ ಹಿಂಸಾತ್ಮಕ ದೃಶ್ಯಗಳು ಮತ್ತು ಸಂಭಾಷಣೆಗಳನ್ನು ಈ ಆವೃತ್ತಿಯಲ್ಲಿ ಮರುಸೇರ್ಪಡೆ ಮಾಡಲಾಗಿದೆ. ಇಂದು ಸಿನಿಮಾ ಪ್ರಸಾರ ಆಗುವ ಸಾಧ್ಯತೆ ಇದೆ.

ಒಟ್ಟಾರೆ ಗಳಿಕೆ

‘ಧುರಂಧರ್ 2’ ಸಿನಿಮಾ ಭಾರತಾದ್ಯಂತ 1369 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಹಾಗೂ 1,144.56 ನೆಟ್ ಕಲೆಕ್ಷನ್ ಮಾಡಿದೆ. ವಿಶ್ವಾದ್ಯಂತ ಈ ಚಿತ್ರದ ಗ್ರಾಸ್ ಕಲೆಕ್ಷನ್ 1,796.51 ಕೋಟಿ ರೂಪಾಯಿ ಆಗಿದೆ. ಹೆಚ್ಚುವರಿಯಾಗಿ 10-20 ಕೋಟಿ ರೂಪಾಯಿ ಸೇರ್ಪಡೆಯಾಗಬಹುದು ಅಷ್ಟೇ ಎಂದು ಅಂದಾಜಿಸಲಾಗಿದೆ. ‘ಬಾಹುಬಲಿ 2’ ಚಿತ್ರದ ಒಟ್ಟಾರೆ ಗಳಿಕೆ 1,810 ಕೋಟಿ ರೂಪಾಯಿ ಇದೆ. ಇದನ್ನು ಈ ಚಿತ್ರಕ್ಕೆ ಬೀಟ್ ಮಾಡಲಾಗುತ್ತದೆಯೇ ಎಂಬುದು ಸದ್ಯದ ಪ್ರಶ್ನೆ.

ಇದನ್ನೂ ಓದಿ: ‘ಧುರಂಧರ್’ಗೆ ಕೌಂಟರ್ ಕೊಡಲು ಬಂದ ‘ಮೇರಾ ಲಿಯಾರಿ’ಗೆ ಹೀನಾಯ ಸೋಲು; ಕೇವಲ 22 ಟಿಕೆಟ್ ಮಾರಾಟ

ಆದಿತ್ಯ ಧರ್ ನಿರ್ದೇಶನದ ಈ ಆಕ್ಷನ್ ಡ್ರಾಮಾ, ದೊಡ್ಡ ಮಟ್ಟದ ತಾರಾಗಣವನ್ನು ಹೊಂದಿದೆ. ರಣವೀರ್ ಸಿಂಗ್, ಸಾರಾ ಅರ್ಜುನ್, ಸಂಜಯ್ ದತ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಜಿಯೋ ಹಾಟ್​​ಸ್ಟಾರ್ ಸಂಸ್ಥೆ ಇದನ್ನು ನಿರ್ಮಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:04 am, Fri, 15 May 26

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!