AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂಜಾ ಭಟ್ ಜೊತೆಗಿನ ಲಿವ್​-ಇನ್ ರಿಲೇಶನ್​ಶಿಪ್ ಬಗ್ಗೆ ಮಾತನಾಡಿದ ರಣವೀರ್

ರಣವೀರ್ ಶೋರೆ ಹಾಗೂ ಮಹೇಶ್ ಭಟ್ ಮಗಳು ಪೂಜಾ ಭಟ್ ಡೇಟಿಂಗ್ ಮಾಡುತ್ತಿದ್ದರು. ಕೆಲವೇ ತಿಂಗಳುಗಳ ಸಂಬಂಧದ ನಂತರ ಈ ಇಬ್ಬರೂ ಬೇರೆ ಆದರು. ಬ್ರೇಕಪ್ ಆದ ಬಳಿಕ ರಣವೀರ್ ಕುಡಿದ ಅಮಲಿನಲ್ಲಿ ಥಳಿಸಿದ್ದಾರೆ ಎನ್ನುವ ಆರೋಪ ಬಂತು. ಈ ಬಗ್ಗೆ ರಣವೀರ್ ಅವರು ಮಾತನಾಡಿದ್ದಾರೆ.

ಪೂಜಾ ಭಟ್ ಜೊತೆಗಿನ ಲಿವ್​-ಇನ್ ರಿಲೇಶನ್​ಶಿಪ್ ಬಗ್ಗೆ ಮಾತನಾಡಿದ ರಣವೀರ್
ಪೂಜಾ ಭಟ್ ಜೊತೆಗಿನ ಲಿವ್​-ಇನ್ ರಿಲೇಶನ್​ಶಿಪ್ ಬಗ್ಗೆ ಮಾತನಾಡಿದ ರಣವೀರ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Jul 01, 2024 | 12:55 PM

Share

ನಟ ರಣವೀರ್ ಶೋರೆ ‘ಬಿಗ್ ಬಾಸ್ ಹಿಂದಿ ಒಟಿಟಿ ‘ ಮೂರನೇ ಸೀಸನ್‌ನಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದಾರೆ.ಈ ಶೋ ಜಿಯೋ ಸಿನಿಮಾ ಒಟಿಟಿಯಲ್ಲಿ ಪ್ರಸಾರ ಕಾಣುತ್ತಿದೆ. ಮೊದಲ ದಿನದಿಂದಲೂ ಈ ಶೋನಲ್ಲಿ ಅವರು ಜಗಳವಾಡುತ್ತಲೇ ಇದ್ದಾರೆ. ಇತ್ತೀಚಿನ ಸಂಚಿಕೆಯಲ್ಲಿ ರಣವೀರ್ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಈ ವೇಳೆ ನಟಿ ಪೂಜಾ ಭಟ್ ಜೊತೆಗಿನ ಸಂಬಂಧದ ಬಗ್ಗೆ ಮೌನ ಮುರಿದಿದ್ದಾರೆ. 2000ರ ಸಂದರ್ಭದಲ್ಲಿ ರಣವೀರ್ ಮತ್ತು ಪೂಜಾ ಪರಸ್ಪರ ಡೇಟಿಂಗ್ ಮಾಡುತ್ತಿದ್ದರು. ಕೆಲವೇ ತಿಂಗಳುಗಳ ಸಂಬಂಧದ ನಂತರ ಈ ಇಬ್ಬರೂ ಬೇರೆ ಆದರು. ಬ್ರೇಕಪ್ ಆದ ಬಳಿಕ ರಣವೀರ್ ಕುಡಿದ ಅಮಲಿನಲ್ಲಿ ಥಳಿಸಿದ್ದಾರೆ ಎನ್ನುವ ಆರೋಪ ಬಂತು.

‘ಬಿಗ್ ಬಾಸ್ OTT 3’ ಸಂಚಿಕೆಯಲ್ಲಿ ರಣವೀರ್ ತಮ್ಮ ಜೀವನದ ಕಷ್ಟದ ಸಮಯವನ್ನು ಮೆಲುಕು ಹಾಕಿದರು. ‘ಲಡಾಖ್‌ನಲ್ಲಿ ಲಕ್ಷ್ಯ ಚಿತ್ರದ ಚಿತ್ರೀಕರಣದ ವೇಳೆ ತಾಯಿಯ ಆರೋಗ್ಯ ಹದಗೆಟ್ಟಿತ್ತು. ಆದರೆ ಶೂಟಿಂಗ್‌ನಿಂದಾಗಿ ನನ್ನ ತಾಯಿಯನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ. ನಾನು ಚಿತ್ರೀಕರಣದಿಂದ ಹಿಂತಿರುಗಿದಾಗ ಅವರು ಆಸ್ಪತ್ರೆಯಿಂದ ಮನೆಗೆ ಮರಳಿದ್ದರು. ಆದರೆ ಕೆಲವೇ ದಿನಗಳಲ್ಲಿ ಅವರು ಮೃತಪಟ್ಟರು. ಅದೇ ಸಮಯದಲ್ಲಿ ನನ್ನೊಂದಿಗೆ ಒಬ್ಬ ನಟಿಗೆ ಸಂಬಂಧಿಸಿದ ಹಗರಣವಿತ್ತು. ಅದರಿಂದ ಹೊರಬರಲು ನನಗೆ ಸಾಧ್ಯವಾಗಲಿಲ್ಲ’ ಎಂದು ರಣವೀರ್ ಹೇಳಿದರು.

‘ನನ್ನ ಸಹೋದರ ನನ್ನನ್ನು ಅಮೆರಿಕದಲ್ಲಿರುವ ಮನೆಗೆ ಬರುವಂತೆ ಹೇಳಿದ. ಅವನ ಬಳಿ ಸಾಲ ಪಡೆದು ನಟನೆ ಕೋರ್ಸ್ ತೆಗೆದುಕೊಂಡೆ. ಅಲ್ಲಿಂದ ವಾಪಸಾದ ನಂತರ 2005ರಲ್ಲಿ ‘ದಿ ಗ್ರೇಟ್ ಇಂಡಿಯನ್ ಕಾಮಿಡಿ ಶೋ’ನಲ್ಲಿ ಭಾಗವಹಿಸಿದೆ. ಅದೇ ಸಮಯದಲ್ಲಿ ನನ್ನ ಎರಡು ಸ್ಥಗಿತಗೊಂಡ ಚಿತ್ರಗಳು ಬ್ಯಾಕಟ್ ಟು ಬ್ಯಾಕ್ ರಿಲೀಸ್ ಆಗಿ ಹಿಟ್ ಆದವು. ನನ್ನ ಕೆಲಸವು ಪ್ರೇಕ್ಷಕರಿಂದ ಪ್ರೀತಿಯನ್ನು ಪಡೆಯಲಾರಂಭಿಸಿತು ಮತ್ತು ನಾನು ಅಲ್ಲಿಂದ ಕ್ರಮೇಣ ಪ್ರಗತಿ ಸಾಧಿಸಿದೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ರಣವೀರ್ ಸಿಂಗ್ ಮೊದಲ ಆಡಿಷನ್ ಹೇಗಿತ್ತು ನೋಡಿ; ನೀವು ನಗೋದು ಗ್ಯಾರಂಟಿ

ಇಷ್ಟೆಲ್ಲಾ ಹೇಳುವಾಗ ರಣವೀರ್ ಅವರು ಪೂಜಾ ಭಟ್ ಹೆಸರನ್ನು ತೆಗೆದುಕೊಳ್ಳಲಿಲ್ಲ. ಆದರೆ ಅವರು ಮಾತನಾಡಿದ್ದು ಪೂಜಾ ಭಟ್ ಬಗ್ಗೆಯೇ ಎನ್ನಲಾಗಿದೆ. 2000ನೇ ಇಸವಿಯಲ್ಲಿ ಪೂಜಾ ಭಟ್ ಅವರು ರಣವೀರ್ ಮೇಲೆ ಕುಡಿದ ಮತ್ತಿನಲ್ಲಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಆಗ ಅವರು ಆರೋಪವನ್ನು ನಿರಾಕರಿಸಿದ್ದರು. ‘ಇತರೆ ಜೋಡಿಗಳಂತೆ ಪೂಜಾ ಮತ್ತು ನಾನು ಕೆಲವು ವಿಷಯಗಳನ್ನು ಒಪ್ಪಲಿಲ್ಲ. ಆದರೆ ನಾನು ಅವಳನ್ನು ಎಂದಿಗೂ ಹೊಡೆದಿಲ್ಲ’ ಎಂದು ಅವರು ಈ ಮೊದಲು ಹೇಳಿದ್ದರು. ಪೂಜಾ ಮತ್ತು ರಣವೀರ್ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿ ವಾಸಿಸುತ್ತಿದ್ದರು. ಆದರೆ ಜಗಳದ ನಂತರ ಪೂಜಾ ಮನೆ ಬಿಟ್ಟು ಹೋಗಿದ್ದರು. ಪೂಜಾ ಅವರು ಆಲಿಯಾ ಭಟ್ ಅವರ ಸಹೋದರಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​