AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಮಂದಣ್ಣ ವಿಚಾರದಲ್ಲಿ ‘ಪುಷ್ಪ’ ಚಿತ್ರತಂಡದಿಂದ ದೊಡ್ಡ ಅಚಾತುರ್ಯ; ಹೆಸರನ್ನೇ ಬದಲಿಸಿದ ನಿರ್ದೇಶಕರು

Rasmika Madona: ‘ಪುಷ್ಪ’ ಸಿನಿಮಾ ಪೂರ್ಣಗೊಂಡ ನಂತರದಲ್ಲಿ ಕೊನೆಯಲ್ಲಿ ಎಲ್ಲಾ ಕಲಾವಿದರ ಫೋಟೋವನ್ನು ಹಾಕಿ ಹೆಸರು ತೋರಿಸಲಾಗಿದೆ. ಅಲ್ಲು ಅರ್ಜುನ್​, ಫಹಾದ್​ ಫಾಸಿಲ್​ ಆದ ಬಳಿಕ ರಶ್ಮಿಕಾ ಅವರ ಹೆಸರು ಬಂದಿದೆ.

ರಶ್ಮಿಕಾ ಮಂದಣ್ಣ ವಿಚಾರದಲ್ಲಿ ‘ಪುಷ್ಪ’ ಚಿತ್ರತಂಡದಿಂದ ದೊಡ್ಡ ಅಚಾತುರ್ಯ; ಹೆಸರನ್ನೇ ಬದಲಿಸಿದ ನಿರ್ದೇಶಕರು
ರಶ್ಮಿಕಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jan 08, 2022 | 2:26 PM

Share

ಅಲ್ಲು ಅರ್ಜುನ್ (Allu Arjun)​ ಹಾಗೂ ರಶ್ಮಿಕಾ ಮಂದಣ್ಣ (Rashmika Mandanna) ನಟನೆಯ ‘ಪುಷ್ಪ’ ಸಿನಿಮಾ (Pushpa Movie) ಚಿತ್ರಮಂದಿರದಲ್ಲಿ ರಿಲೀಸ್​ ಆಗಿ ಮೆಚ್ಚುಗೆ ಪಡೆದುಕೊಂಡಿತ್ತು. ಈಗ ಈ ಸಿನಿಮಾ ಅಮೇಜಾನ್​ ಪ್ರೈಮ್​ ವಿಡಿಯೋದಲ್ಲಿ (Amazon Prime Video) ರಿಲೀಸ್​ ಆಗಿದೆ. ಈ ಸಿನಿಮಾಗೆ ಒಟಿಟಿಯಲ್ಲೂ ಮೆಚ್ಚುಗೆ ಕೇಳಿ ಬರುತ್ತಿದೆ. ರಶ್ಮಿಕಾ ಮಂದಣ್ಣ ಅವರನ್ನು ನಿರ್ದೇಶಕ ಸುಕುಮಾರ್ (Sukumar)​ ಅವರು ಹೊಗಳಿದ್ದರು. ಆದರೆ, ಈಗ ಅದೇ ಚಿತ್ರತಂಡದಿಂದ ಅಚಾತುರ್ಯ ಒಂದು ನಡೆದು ಹೋಗಿದೆ. ರಶ್ಮಿಕಾ ಹೆಸರನ್ನು ತಪ್ಪಾಗಿ ಹಾಕಲಾಗಿದೆ. ಸದ್ಯ, ಈ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದೆ. ರಶ್ಮಿಕಾ ಅಭಿಮಾನಿಗಳು ಈ ಬಗ್ಗೆ ಬೇಸರ ಹೊರಹಾಕಿದ್ದಾರೆ. ಕೆಲವರು ಗರಂ ಆಗಿದ್ದಾರೆ.

‘ಪುಷ್ಪ’ ಸಿನಿಮಾ ಪೂರ್ಣಗೊಂಡ ನಂತರದಲ್ಲಿ ಕೊನೆಯಲ್ಲಿ ಎಲ್ಲಾ ಕಲಾವಿದರ ಫೋಟೋವನ್ನು ಹಾಕಿ ಹೆಸರು ತೋರಿಸಲಾಗಿದೆ. ಅಲ್ಲು ಅರ್ಜುನ್​, ಫಹಾದ್​ ಫಾಸಿಲ್​ ಆದ ಬಳಿಕ ರಶ್ಮಿಕಾ ಅವರ ಹೆಸರು ಬಂದಿದೆ. ಎಲ್ಲಾ ಹೆಸರುಗಳು ಇಂಗ್ಲಿಷ್​ನಲ್ಲಿವೆ. ರಶ್ಮಿಕಾ ಹೆಸರನ್ನು ತಪ್ಪಾಗಿ ಬರೆಯಲಾಗಿದೆ. ರಶ್ಮಿಕಾ ಮಂದಣ್ಣ ಬದಲು, ರಸ್ಮಿಕಾ ಮಡೋನಾ ಎಂದು ಬರೆಯಲಾಗಿದೆ. ಚಿತ್ರತಂಡ ಮಾಡಿದ ಈ ಅಚಾತುರ್ಯಕ್ಕೆ ಅನೇಕರಿಂದ ವಿರೋಧ ವ್ಯಕ್ತವಾಗಿದೆ.

ರಶ್ಮಿಕಾ ಸ್ಯಾಂಡಲ್​ವುಡ್​ನಿಂದ ಟಾಲಿವುಡ್​ಗೆ ಹೋದವರು. ಹೀಗಾಗಿ, ಅಲ್ಲಿಯವರಿಗೆ ರಶ್ಮಿಕಾ ಅವರ ಸರ್​ನೇಮ್​ ಬಗ್ಗೆ ಅಷ್ಟಾಗಿ ಜ್ಞಾನವಿಲ್ಲ. ಮಂದಣ್ಣ ಎಂಬುದು ಅವರಿಗೆ ಹೊಸದೂ ಇರಬಹುದು. ಈ ಕಾರಣಕ್ಕೆ ತಿಳಿಯದೇ ಮಡೋನಾ ಎಂದು ಹಾಕಿರಬಹುದು. ಆದರೆ, ನಟಿಯ ಹೆಸರನ್ನೇ ಈ ರೀತಿ ತಪ್ಪಾಗಿ ಬರೆದಿರುವುದು ಎಷ್ಟು ಸರಿ ಎನ್ನುವ ವಿಚಾರವನ್ನು ಅನೇಕರು ಪ್ರಶ್ನೆ ಮಾಡಿದ್ದಾರೆ. ನಿರ್ದೇಶಕರು ಈ ಬಗ್ಗೆ ಏಕೆ ಗಮನ ಹರಿಸಿಲ್ಲ ಎಂಬ ಪ್ರಶ್ನೆ ಅನೇಕರಿಂದ ಬಂದಿದೆ.

‘ಪುಷ್ಪ’ ಸಿನಿಮಾ ರಿಲೀಸ್​ ಆಗಿ 300 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಮಾಡಿದೆ. ಮಹೇಶ್​ ಬಾಬು ಅವರು ಈ ಸಿನಿಮಾ ವೀಕ್ಷಣೆ ಮಾಡಿದ್ದಾರೆ. ನಟ ಅಲ್ಲು ಅರ್ಜುನ್​ ಹಾಗೂ ನಿರ್ದೇಶಕ ಸುಕುಮಾರ್ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಆದರೆ, ಎಲ್ಲಿಯೂ ಅವರು ರಶ್ಮಿಕಾ ನಟನೆ ಬಗ್ಗೆ ಒಂದೇ ಒಂದು ಮಾತನ್ನೂ ಹೇಳಿಲ್ಲ. ‘ಪುಷ್ಪ’ ಸಿನಿಮಾದಲ್ಲಿ ರಶ್ಮಿಕಾ ನಟನೆ ಬಗ್ಗೆ ಪಾಸಿಟಿವ್​ ರೆಸ್ಪಾನ್ಸ್​ ಬಂದಿದೆ. ಆದರೆ, ಕೆಲವರು ಅವರ ಪಾತ್ರದ ಬಗ್ಗೆ ಅಷ್ಟಾಗಿ ಮೆಚ್ಚುಗೆ ಸೂಚಿಸಿಲ್ಲ. ಈಗ ಮಹೇಶ್​ ಬಾಬು ಕೂಡ ಈ ಬಗ್ಗೆ ಮಾತನಾಡದೆ ಇರುವುದು ಅನೇಕರಲ್ಲಿ ಅಚ್ಚರಿ ಮೂಡಿಸಿದೆ. ಅವರಿಗೆ ಪಾತ್ರ ಇಷ್ಟವಾಗಿಲ್ಲವೇ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿದೆ. ಕೆಲವರು ಮಹೇಶ್​ ಬಾಬುಗೆ ಧನ್ಯವಾದ ಹೇಳಿದ್ದಾರೆ.

ಇದನ್ನೂ ಓದಿ: Samantha: ‘ಹೂ ಅಂತೀಯಾ ಮಾವ..’ ಡ್ಯಾನ್ಸ್​ ಹಿಂದಿನ ಕಷ್ಟವನ್ನು ವಿಡಿಯೋ ಮೂಲಕ ವಿವರಿಸಿದ ಸಮಂತಾ  

‘ಪುಷ್ಪ’ ಚಿತ್ರವನ್ನು ಹಾಡಿ ಹೊಗಳಿದ ಮಹೇಶ್​ ಬಾಬು; ಈ ಪರಿ ಪ್ರಶಂಸೆಗೆ ಅಲ್ಲು ಅರ್ಜುನ್​ ಪ್ರತಿಕ್ರಿಯೆ ಏನು?

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ