AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಮಂದಣ್ಣ ವಿಚಾರದಲ್ಲಿ ‘ಪುಷ್ಪ’ ಚಿತ್ರತಂಡದಿಂದ ದೊಡ್ಡ ಅಚಾತುರ್ಯ; ಹೆಸರನ್ನೇ ಬದಲಿಸಿದ ನಿರ್ದೇಶಕರು

Rasmika Madona: ‘ಪುಷ್ಪ’ ಸಿನಿಮಾ ಪೂರ್ಣಗೊಂಡ ನಂತರದಲ್ಲಿ ಕೊನೆಯಲ್ಲಿ ಎಲ್ಲಾ ಕಲಾವಿದರ ಫೋಟೋವನ್ನು ಹಾಕಿ ಹೆಸರು ತೋರಿಸಲಾಗಿದೆ. ಅಲ್ಲು ಅರ್ಜುನ್​, ಫಹಾದ್​ ಫಾಸಿಲ್​ ಆದ ಬಳಿಕ ರಶ್ಮಿಕಾ ಅವರ ಹೆಸರು ಬಂದಿದೆ.

ರಶ್ಮಿಕಾ ಮಂದಣ್ಣ ವಿಚಾರದಲ್ಲಿ ‘ಪುಷ್ಪ’ ಚಿತ್ರತಂಡದಿಂದ ದೊಡ್ಡ ಅಚಾತುರ್ಯ; ಹೆಸರನ್ನೇ ಬದಲಿಸಿದ ನಿರ್ದೇಶಕರು
ರಶ್ಮಿಕಾ
TV9 Web
| Edited By: |

Updated on: Jan 08, 2022 | 2:26 PM

Share

ಅಲ್ಲು ಅರ್ಜುನ್ (Allu Arjun)​ ಹಾಗೂ ರಶ್ಮಿಕಾ ಮಂದಣ್ಣ (Rashmika Mandanna) ನಟನೆಯ ‘ಪುಷ್ಪ’ ಸಿನಿಮಾ (Pushpa Movie) ಚಿತ್ರಮಂದಿರದಲ್ಲಿ ರಿಲೀಸ್​ ಆಗಿ ಮೆಚ್ಚುಗೆ ಪಡೆದುಕೊಂಡಿತ್ತು. ಈಗ ಈ ಸಿನಿಮಾ ಅಮೇಜಾನ್​ ಪ್ರೈಮ್​ ವಿಡಿಯೋದಲ್ಲಿ (Amazon Prime Video) ರಿಲೀಸ್​ ಆಗಿದೆ. ಈ ಸಿನಿಮಾಗೆ ಒಟಿಟಿಯಲ್ಲೂ ಮೆಚ್ಚುಗೆ ಕೇಳಿ ಬರುತ್ತಿದೆ. ರಶ್ಮಿಕಾ ಮಂದಣ್ಣ ಅವರನ್ನು ನಿರ್ದೇಶಕ ಸುಕುಮಾರ್ (Sukumar)​ ಅವರು ಹೊಗಳಿದ್ದರು. ಆದರೆ, ಈಗ ಅದೇ ಚಿತ್ರತಂಡದಿಂದ ಅಚಾತುರ್ಯ ಒಂದು ನಡೆದು ಹೋಗಿದೆ. ರಶ್ಮಿಕಾ ಹೆಸರನ್ನು ತಪ್ಪಾಗಿ ಹಾಕಲಾಗಿದೆ. ಸದ್ಯ, ಈ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದೆ. ರಶ್ಮಿಕಾ ಅಭಿಮಾನಿಗಳು ಈ ಬಗ್ಗೆ ಬೇಸರ ಹೊರಹಾಕಿದ್ದಾರೆ. ಕೆಲವರು ಗರಂ ಆಗಿದ್ದಾರೆ.

‘ಪುಷ್ಪ’ ಸಿನಿಮಾ ಪೂರ್ಣಗೊಂಡ ನಂತರದಲ್ಲಿ ಕೊನೆಯಲ್ಲಿ ಎಲ್ಲಾ ಕಲಾವಿದರ ಫೋಟೋವನ್ನು ಹಾಕಿ ಹೆಸರು ತೋರಿಸಲಾಗಿದೆ. ಅಲ್ಲು ಅರ್ಜುನ್​, ಫಹಾದ್​ ಫಾಸಿಲ್​ ಆದ ಬಳಿಕ ರಶ್ಮಿಕಾ ಅವರ ಹೆಸರು ಬಂದಿದೆ. ಎಲ್ಲಾ ಹೆಸರುಗಳು ಇಂಗ್ಲಿಷ್​ನಲ್ಲಿವೆ. ರಶ್ಮಿಕಾ ಹೆಸರನ್ನು ತಪ್ಪಾಗಿ ಬರೆಯಲಾಗಿದೆ. ರಶ್ಮಿಕಾ ಮಂದಣ್ಣ ಬದಲು, ರಸ್ಮಿಕಾ ಮಡೋನಾ ಎಂದು ಬರೆಯಲಾಗಿದೆ. ಚಿತ್ರತಂಡ ಮಾಡಿದ ಈ ಅಚಾತುರ್ಯಕ್ಕೆ ಅನೇಕರಿಂದ ವಿರೋಧ ವ್ಯಕ್ತವಾಗಿದೆ.

ರಶ್ಮಿಕಾ ಸ್ಯಾಂಡಲ್​ವುಡ್​ನಿಂದ ಟಾಲಿವುಡ್​ಗೆ ಹೋದವರು. ಹೀಗಾಗಿ, ಅಲ್ಲಿಯವರಿಗೆ ರಶ್ಮಿಕಾ ಅವರ ಸರ್​ನೇಮ್​ ಬಗ್ಗೆ ಅಷ್ಟಾಗಿ ಜ್ಞಾನವಿಲ್ಲ. ಮಂದಣ್ಣ ಎಂಬುದು ಅವರಿಗೆ ಹೊಸದೂ ಇರಬಹುದು. ಈ ಕಾರಣಕ್ಕೆ ತಿಳಿಯದೇ ಮಡೋನಾ ಎಂದು ಹಾಕಿರಬಹುದು. ಆದರೆ, ನಟಿಯ ಹೆಸರನ್ನೇ ಈ ರೀತಿ ತಪ್ಪಾಗಿ ಬರೆದಿರುವುದು ಎಷ್ಟು ಸರಿ ಎನ್ನುವ ವಿಚಾರವನ್ನು ಅನೇಕರು ಪ್ರಶ್ನೆ ಮಾಡಿದ್ದಾರೆ. ನಿರ್ದೇಶಕರು ಈ ಬಗ್ಗೆ ಏಕೆ ಗಮನ ಹರಿಸಿಲ್ಲ ಎಂಬ ಪ್ರಶ್ನೆ ಅನೇಕರಿಂದ ಬಂದಿದೆ.

‘ಪುಷ್ಪ’ ಸಿನಿಮಾ ರಿಲೀಸ್​ ಆಗಿ 300 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಮಾಡಿದೆ. ಮಹೇಶ್​ ಬಾಬು ಅವರು ಈ ಸಿನಿಮಾ ವೀಕ್ಷಣೆ ಮಾಡಿದ್ದಾರೆ. ನಟ ಅಲ್ಲು ಅರ್ಜುನ್​ ಹಾಗೂ ನಿರ್ದೇಶಕ ಸುಕುಮಾರ್ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಆದರೆ, ಎಲ್ಲಿಯೂ ಅವರು ರಶ್ಮಿಕಾ ನಟನೆ ಬಗ್ಗೆ ಒಂದೇ ಒಂದು ಮಾತನ್ನೂ ಹೇಳಿಲ್ಲ. ‘ಪುಷ್ಪ’ ಸಿನಿಮಾದಲ್ಲಿ ರಶ್ಮಿಕಾ ನಟನೆ ಬಗ್ಗೆ ಪಾಸಿಟಿವ್​ ರೆಸ್ಪಾನ್ಸ್​ ಬಂದಿದೆ. ಆದರೆ, ಕೆಲವರು ಅವರ ಪಾತ್ರದ ಬಗ್ಗೆ ಅಷ್ಟಾಗಿ ಮೆಚ್ಚುಗೆ ಸೂಚಿಸಿಲ್ಲ. ಈಗ ಮಹೇಶ್​ ಬಾಬು ಕೂಡ ಈ ಬಗ್ಗೆ ಮಾತನಾಡದೆ ಇರುವುದು ಅನೇಕರಲ್ಲಿ ಅಚ್ಚರಿ ಮೂಡಿಸಿದೆ. ಅವರಿಗೆ ಪಾತ್ರ ಇಷ್ಟವಾಗಿಲ್ಲವೇ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿದೆ. ಕೆಲವರು ಮಹೇಶ್​ ಬಾಬುಗೆ ಧನ್ಯವಾದ ಹೇಳಿದ್ದಾರೆ.

ಇದನ್ನೂ ಓದಿ: Samantha: ‘ಹೂ ಅಂತೀಯಾ ಮಾವ..’ ಡ್ಯಾನ್ಸ್​ ಹಿಂದಿನ ಕಷ್ಟವನ್ನು ವಿಡಿಯೋ ಮೂಲಕ ವಿವರಿಸಿದ ಸಮಂತಾ  

‘ಪುಷ್ಪ’ ಚಿತ್ರವನ್ನು ಹಾಡಿ ಹೊಗಳಿದ ಮಹೇಶ್​ ಬಾಬು; ಈ ಪರಿ ಪ್ರಶಂಸೆಗೆ ಅಲ್ಲು ಅರ್ಜುನ್​ ಪ್ರತಿಕ್ರಿಯೆ ಏನು?

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?