AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧನಂಜಯ್ ನಟನೆಯ ‘ರತ್ನನ್ ಪ್ರಪಂಚ’ ಬಿಡುಗಡೆಗೆ ಮುಹೂರ್ತ ನಿಗದಿ; ಅಕ್ಟೋಬರ್ 22ಕ್ಕೆ ಈ ಒಟಿಟಿಯಲ್ಲಿ ಚಿತ್ರ ರಿಲೀಸ್

Rathnan Prapancha: ಸ್ಯಾಂಡಲ್​ವುಡ್ ನಟ ಧನಂಜಯ್ ರತ್ನಾಕರ ಪಾತ್ರದಲ್ಲಿ ಕಾಣಿಸಿಕೊಂಡಿರುವ ‘ರತ್ನನ್ ಪ್ರಪಂಚ’ ಚಿತ್ರವು ಅಕ್ಟೋಬರ್ 22ರಂದು ಬಿಡುಗಡೆಯಾಗಲಿದೆ. ಒಟಿಟಿ ಮೂಲಕ ನೇರವಾಗಿ ಚಿತ್ರವು ವೀಕ್ಷಕರನ್ನು ತಲುಪಲಿದೆ.

ಧನಂಜಯ್ ನಟನೆಯ ‘ರತ್ನನ್ ಪ್ರಪಂಚ’ ಬಿಡುಗಡೆಗೆ ಮುಹೂರ್ತ ನಿಗದಿ; ಅಕ್ಟೋಬರ್ 22ಕ್ಕೆ ಈ ಒಟಿಟಿಯಲ್ಲಿ ಚಿತ್ರ ರಿಲೀಸ್
‘ರತ್ನನ್ ಪ್ರಪಂಚ’ ಚಿತ್ರದ ಪೋಸ್ಟರ್
TV9 Web
| Edited By: |

Updated on:Oct 05, 2021 | 1:42 PM

Share

ಸ್ಯಾಂಡಲ್​ವುಡ್​ನ ಮುಂಚೂಣಿಯ ನಟರಲ್ಲಿ ಒಬ್ಬರಾಗಿ ಗುರುತಿಸಕೊಳ್ಳುತ್ತಿರುವ ಡಾಲಿ ಧನಂಜಯ ಅವರ ಬಹುನಿರೀಕ್ಷಿತ ‘ರತ್ನನ್ ಪ್ರಪಂಚ’ (Rathnan Prapancha) ಚಿತ್ರದ ಬಿಡುಗಡೆಯ ದಿನಾಂಕ ಘೋಷಣೆಯಾಗಿದೆ. ಅಭಿಮಾನಿಗಳಿಗೆ ಇದರಿಂದ ತುಸು ಅಚ್ಚರಿಯಾಗಿದೆ. ಕಾರಣ, ‘ರತ್ನನ್ ಪ್ರಪಂಚ’ ಅಕ್ಟೋಬರ್ 22ರಂದು ಆಮೆಜಾನ್ ಪ್ರೈಮ್ ಒಟಿಟಿಯಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಆಮೆಜಾನ್ ಪ್ರೈಮ್ ಹಾಗೂ ಧನಂಜಯ್ ಟ್ವೀಟ್​ಗಳನ್ನು ಹಂಚಿಕೊಂಡಿದ್ದಾರೆ. ಆಮೆಜಾನ್ ಪ್ರೈಮ್ ಈ ಕುರಿತು ಟ್ವೀಟ್ ಮಾಡುತ್ತಾ, ‘ಒಂಬತ್ತು ಪಾತ್ರಗಳು, ಒಂದು ಕುತೂಹಲಕರ ಕತೆ’ ಎಂದು ಕ್ಯಾಪ್ಶನ್ ನೀಡಿದೆ.

ಆಮೆಜಾನ್ ಪ್ರೈಮ್ ಹಂಚಿಕೊಂಡಿರುವ ಟ್ವೀಟ್ ಇಲ್ಲಿದೆ:

ಧನಂಜಯ್ ಹಂಚಿಕೊಂಡಿರುವ ಟ್ವೀಟ್ ಇಲ್ಲಿದೆ:

‘ರತ್ನನ್ ಪ್ರಪಂಚ’ದ ನಾಯಕ ನಟ ಧನಂಜಯ್ ಟ್ವೀಟ್ ಹಂಚಿಕೊಳ್ಳುತ್ತಾ, ‘ನಗು+ ತಿರುವು+ ಪ್ರೀತಿ= ರತ್ನನ್ ಪ್ರಪಂಚ’ ಎಂದು ಬರೆದುಕೊಂಡಿದ್ದಾರೆ. ಈಗಾಗಲೇ ರತ್ನನ್ ಪ್ರಪಂಚ ತನ್ನ ಟ್ರೈಲರ್ ಮುಖಾಂತರ ಅಪಾರ ನಿರೀಕ್ಷೆ ಹುಟ್ಟುಹಾಕಿದೆ. ‘ದಯವಿಟ್ಟು ಗಮನಿಸಿ’ ಚಿತ್ರದ ಮುಖಾಂತರ ಸ್ಯಾಂಡಲ್​ವುಡ್​ನಲ್ಲಿ ಸಂಚಲನ ಮೂಡಿಸಿದ್ದ ರೋಹಿತ್ ಪದಕಿ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಕನ್ನಡದ ಹಿರಿಯ ನಟಿ ಉಮಾಶ್ರೀ ಈ ಚಿತ್ರದಲ್ಲಿ ಧನಂಜಯ್ ತಾಯಿಯ ಪಾತ್ರವನ್ನು ನಿರ್ವಹಿಸಿದ್ದು, ಟ್ರೈಲರ್​ನಲ್ಲಿ ಅವರ ಪಾತ್ರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಇದನ್ನೂ ಓದಿ:

SBI PO Recruitment 2021: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ 2056 ಪ್ರೊಬೆಷನರಿ ಹುದ್ದೆಗೆ ಅರ್ಜಿ ಆಹ್ವಾನ

Dhananjay: ಇದು ಡಾಲಿ ಅಲ್ಲ ರತ್ನಾಕರ; ಹೊಸ ಪ್ರಪಂಚದ ಸ್ಯಾಂಪಲ್​ ತೋರಿಸಿದ ಧನಂಜಯ್​

Published On - 1:39 pm, Tue, 5 October 21

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!