ಧನಂಜಯ್ ನಟನೆಯ ‘ರತ್ನನ್ ಪ್ರಪಂಚ’ ಬಿಡುಗಡೆಗೆ ಮುಹೂರ್ತ ನಿಗದಿ; ಅಕ್ಟೋಬರ್ 22ಕ್ಕೆ ಈ ಒಟಿಟಿಯಲ್ಲಿ ಚಿತ್ರ ರಿಲೀಸ್

Rathnan Prapancha: ಸ್ಯಾಂಡಲ್​ವುಡ್ ನಟ ಧನಂಜಯ್ ರತ್ನಾಕರ ಪಾತ್ರದಲ್ಲಿ ಕಾಣಿಸಿಕೊಂಡಿರುವ ‘ರತ್ನನ್ ಪ್ರಪಂಚ’ ಚಿತ್ರವು ಅಕ್ಟೋಬರ್ 22ರಂದು ಬಿಡುಗಡೆಯಾಗಲಿದೆ. ಒಟಿಟಿ ಮೂಲಕ ನೇರವಾಗಿ ಚಿತ್ರವು ವೀಕ್ಷಕರನ್ನು ತಲುಪಲಿದೆ.

ಧನಂಜಯ್ ನಟನೆಯ ‘ರತ್ನನ್ ಪ್ರಪಂಚ’ ಬಿಡುಗಡೆಗೆ ಮುಹೂರ್ತ ನಿಗದಿ; ಅಕ್ಟೋಬರ್ 22ಕ್ಕೆ ಈ ಒಟಿಟಿಯಲ್ಲಿ ಚಿತ್ರ ರಿಲೀಸ್
‘ರತ್ನನ್ ಪ್ರಪಂಚ’ ಚಿತ್ರದ ಪೋಸ್ಟರ್
Follow us
| Updated By: shivaprasad.hs

Updated on:Oct 05, 2021 | 1:42 PM

ಸ್ಯಾಂಡಲ್​ವುಡ್​ನ ಮುಂಚೂಣಿಯ ನಟರಲ್ಲಿ ಒಬ್ಬರಾಗಿ ಗುರುತಿಸಕೊಳ್ಳುತ್ತಿರುವ ಡಾಲಿ ಧನಂಜಯ ಅವರ ಬಹುನಿರೀಕ್ಷಿತ ‘ರತ್ನನ್ ಪ್ರಪಂಚ’ (Rathnan Prapancha) ಚಿತ್ರದ ಬಿಡುಗಡೆಯ ದಿನಾಂಕ ಘೋಷಣೆಯಾಗಿದೆ. ಅಭಿಮಾನಿಗಳಿಗೆ ಇದರಿಂದ ತುಸು ಅಚ್ಚರಿಯಾಗಿದೆ. ಕಾರಣ, ‘ರತ್ನನ್ ಪ್ರಪಂಚ’ ಅಕ್ಟೋಬರ್ 22ರಂದು ಆಮೆಜಾನ್ ಪ್ರೈಮ್ ಒಟಿಟಿಯಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಆಮೆಜಾನ್ ಪ್ರೈಮ್ ಹಾಗೂ ಧನಂಜಯ್ ಟ್ವೀಟ್​ಗಳನ್ನು ಹಂಚಿಕೊಂಡಿದ್ದಾರೆ. ಆಮೆಜಾನ್ ಪ್ರೈಮ್ ಈ ಕುರಿತು ಟ್ವೀಟ್ ಮಾಡುತ್ತಾ, ‘ಒಂಬತ್ತು ಪಾತ್ರಗಳು, ಒಂದು ಕುತೂಹಲಕರ ಕತೆ’ ಎಂದು ಕ್ಯಾಪ್ಶನ್ ನೀಡಿದೆ.

ಆಮೆಜಾನ್ ಪ್ರೈಮ್ ಹಂಚಿಕೊಂಡಿರುವ ಟ್ವೀಟ್ ಇಲ್ಲಿದೆ:

ಧನಂಜಯ್ ಹಂಚಿಕೊಂಡಿರುವ ಟ್ವೀಟ್ ಇಲ್ಲಿದೆ:

‘ರತ್ನನ್ ಪ್ರಪಂಚ’ದ ನಾಯಕ ನಟ ಧನಂಜಯ್ ಟ್ವೀಟ್ ಹಂಚಿಕೊಳ್ಳುತ್ತಾ, ‘ನಗು+ ತಿರುವು+ ಪ್ರೀತಿ= ರತ್ನನ್ ಪ್ರಪಂಚ’ ಎಂದು ಬರೆದುಕೊಂಡಿದ್ದಾರೆ. ಈಗಾಗಲೇ ರತ್ನನ್ ಪ್ರಪಂಚ ತನ್ನ ಟ್ರೈಲರ್ ಮುಖಾಂತರ ಅಪಾರ ನಿರೀಕ್ಷೆ ಹುಟ್ಟುಹಾಕಿದೆ. ‘ದಯವಿಟ್ಟು ಗಮನಿಸಿ’ ಚಿತ್ರದ ಮುಖಾಂತರ ಸ್ಯಾಂಡಲ್​ವುಡ್​ನಲ್ಲಿ ಸಂಚಲನ ಮೂಡಿಸಿದ್ದ ರೋಹಿತ್ ಪದಕಿ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಕನ್ನಡದ ಹಿರಿಯ ನಟಿ ಉಮಾಶ್ರೀ ಈ ಚಿತ್ರದಲ್ಲಿ ಧನಂಜಯ್ ತಾಯಿಯ ಪಾತ್ರವನ್ನು ನಿರ್ವಹಿಸಿದ್ದು, ಟ್ರೈಲರ್​ನಲ್ಲಿ ಅವರ ಪಾತ್ರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಇದನ್ನೂ ಓದಿ:

SBI PO Recruitment 2021: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ 2056 ಪ್ರೊಬೆಷನರಿ ಹುದ್ದೆಗೆ ಅರ್ಜಿ ಆಹ್ವಾನ

Dhananjay: ಇದು ಡಾಲಿ ಅಲ್ಲ ರತ್ನಾಕರ; ಹೊಸ ಪ್ರಪಂಚದ ಸ್ಯಾಂಪಲ್​ ತೋರಿಸಿದ ಧನಂಜಯ್​

Published On - 1:39 pm, Tue, 5 October 21

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್