AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧನಂಜಯ್ ನಟನೆಯ ‘ರತ್ನನ್ ಪ್ರಪಂಚ’ ಬಿಡುಗಡೆಗೆ ಮುಹೂರ್ತ ನಿಗದಿ; ಅಕ್ಟೋಬರ್ 22ಕ್ಕೆ ಈ ಒಟಿಟಿಯಲ್ಲಿ ಚಿತ್ರ ರಿಲೀಸ್

Rathnan Prapancha: ಸ್ಯಾಂಡಲ್​ವುಡ್ ನಟ ಧನಂಜಯ್ ರತ್ನಾಕರ ಪಾತ್ರದಲ್ಲಿ ಕಾಣಿಸಿಕೊಂಡಿರುವ ‘ರತ್ನನ್ ಪ್ರಪಂಚ’ ಚಿತ್ರವು ಅಕ್ಟೋಬರ್ 22ರಂದು ಬಿಡುಗಡೆಯಾಗಲಿದೆ. ಒಟಿಟಿ ಮೂಲಕ ನೇರವಾಗಿ ಚಿತ್ರವು ವೀಕ್ಷಕರನ್ನು ತಲುಪಲಿದೆ.

ಧನಂಜಯ್ ನಟನೆಯ ‘ರತ್ನನ್ ಪ್ರಪಂಚ’ ಬಿಡುಗಡೆಗೆ ಮುಹೂರ್ತ ನಿಗದಿ; ಅಕ್ಟೋಬರ್ 22ಕ್ಕೆ ಈ ಒಟಿಟಿಯಲ್ಲಿ ಚಿತ್ರ ರಿಲೀಸ್
‘ರತ್ನನ್ ಪ್ರಪಂಚ’ ಚಿತ್ರದ ಪೋಸ್ಟರ್
TV9 Web
| Edited By: |

Updated on:Oct 05, 2021 | 1:42 PM

Share

ಸ್ಯಾಂಡಲ್​ವುಡ್​ನ ಮುಂಚೂಣಿಯ ನಟರಲ್ಲಿ ಒಬ್ಬರಾಗಿ ಗುರುತಿಸಕೊಳ್ಳುತ್ತಿರುವ ಡಾಲಿ ಧನಂಜಯ ಅವರ ಬಹುನಿರೀಕ್ಷಿತ ‘ರತ್ನನ್ ಪ್ರಪಂಚ’ (Rathnan Prapancha) ಚಿತ್ರದ ಬಿಡುಗಡೆಯ ದಿನಾಂಕ ಘೋಷಣೆಯಾಗಿದೆ. ಅಭಿಮಾನಿಗಳಿಗೆ ಇದರಿಂದ ತುಸು ಅಚ್ಚರಿಯಾಗಿದೆ. ಕಾರಣ, ‘ರತ್ನನ್ ಪ್ರಪಂಚ’ ಅಕ್ಟೋಬರ್ 22ರಂದು ಆಮೆಜಾನ್ ಪ್ರೈಮ್ ಒಟಿಟಿಯಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಆಮೆಜಾನ್ ಪ್ರೈಮ್ ಹಾಗೂ ಧನಂಜಯ್ ಟ್ವೀಟ್​ಗಳನ್ನು ಹಂಚಿಕೊಂಡಿದ್ದಾರೆ. ಆಮೆಜಾನ್ ಪ್ರೈಮ್ ಈ ಕುರಿತು ಟ್ವೀಟ್ ಮಾಡುತ್ತಾ, ‘ಒಂಬತ್ತು ಪಾತ್ರಗಳು, ಒಂದು ಕುತೂಹಲಕರ ಕತೆ’ ಎಂದು ಕ್ಯಾಪ್ಶನ್ ನೀಡಿದೆ.

ಆಮೆಜಾನ್ ಪ್ರೈಮ್ ಹಂಚಿಕೊಂಡಿರುವ ಟ್ವೀಟ್ ಇಲ್ಲಿದೆ:

ಧನಂಜಯ್ ಹಂಚಿಕೊಂಡಿರುವ ಟ್ವೀಟ್ ಇಲ್ಲಿದೆ:

‘ರತ್ನನ್ ಪ್ರಪಂಚ’ದ ನಾಯಕ ನಟ ಧನಂಜಯ್ ಟ್ವೀಟ್ ಹಂಚಿಕೊಳ್ಳುತ್ತಾ, ‘ನಗು+ ತಿರುವು+ ಪ್ರೀತಿ= ರತ್ನನ್ ಪ್ರಪಂಚ’ ಎಂದು ಬರೆದುಕೊಂಡಿದ್ದಾರೆ. ಈಗಾಗಲೇ ರತ್ನನ್ ಪ್ರಪಂಚ ತನ್ನ ಟ್ರೈಲರ್ ಮುಖಾಂತರ ಅಪಾರ ನಿರೀಕ್ಷೆ ಹುಟ್ಟುಹಾಕಿದೆ. ‘ದಯವಿಟ್ಟು ಗಮನಿಸಿ’ ಚಿತ್ರದ ಮುಖಾಂತರ ಸ್ಯಾಂಡಲ್​ವುಡ್​ನಲ್ಲಿ ಸಂಚಲನ ಮೂಡಿಸಿದ್ದ ರೋಹಿತ್ ಪದಕಿ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಕನ್ನಡದ ಹಿರಿಯ ನಟಿ ಉಮಾಶ್ರೀ ಈ ಚಿತ್ರದಲ್ಲಿ ಧನಂಜಯ್ ತಾಯಿಯ ಪಾತ್ರವನ್ನು ನಿರ್ವಹಿಸಿದ್ದು, ಟ್ರೈಲರ್​ನಲ್ಲಿ ಅವರ ಪಾತ್ರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಇದನ್ನೂ ಓದಿ:

SBI PO Recruitment 2021: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ 2056 ಪ್ರೊಬೆಷನರಿ ಹುದ್ದೆಗೆ ಅರ್ಜಿ ಆಹ್ವಾನ

Dhananjay: ಇದು ಡಾಲಿ ಅಲ್ಲ ರತ್ನಾಕರ; ಹೊಸ ಪ್ರಪಂಚದ ಸ್ಯಾಂಪಲ್​ ತೋರಿಸಿದ ಧನಂಜಯ್​

Published On - 1:39 pm, Tue, 5 October 21

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ