AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮ್ಯಾಗೆ ಸಖತ್​ ಇಷ್ಟವಾಯ್ತು ‘ರತ್ನನ್​ ಪ್ರಪಂಚ’; ಈ ಚಿತ್ರಕ್ಕೆ ಅವರೇ ನಾಯಕಿ ಆಗಬೇಕಿತ್ತು, ಆದರೆ…

Rathnan Prapancha: ‘ರತ್ನನ್​ ಪ್ರಪಂಚ’ ಸಿನಿಮಾದಲ್ಲಿ ತಾಯಿ ಸೆಂಟಿಮೆಂಟ್​ ಕಥೆ ಇದೆ. ಕ್ಲೈಮ್ಯಾಕ್ಸ್​ ಕೂಡ ಸಖತ್​ ಭಾವುಕವಾಗಿದೆ. ಆ ಕಾರಣಕ್ಕಾಗಿ ರಮ್ಯಾ ಒಂದು ವಿಶೇಷ ಮಾತು ತಿಳಿಸಿದ್ದಾರೆ.

ರಮ್ಯಾಗೆ ಸಖತ್​ ಇಷ್ಟವಾಯ್ತು ‘ರತ್ನನ್​ ಪ್ರಪಂಚ’; ಈ ಚಿತ್ರಕ್ಕೆ ಅವರೇ ನಾಯಕಿ ಆಗಬೇಕಿತ್ತು, ಆದರೆ...
ಉಮಾಶ್ರೀ, ಧನಂಜಯ, ರಮ್ಯಾ
Follow us
TV9 Web
| Updated By: ಮದನ್​ ಕುಮಾರ್​

Updated on: Oct 23, 2021 | 8:09 AM

ಡಾಲಿ ಧನಂಜಯ ನಟನೆಯ ‘ರತ್ನನ್​ ಪ್ರಪಂಚ’ ಸಿನಿಮಾ ಬಿಡುಗಡೆಯಾಗಿ ಎಲ್ಲರಿಂದ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ‘ಅಮೇಜಾನ್​ ಪ್ರೈಂ ವಿಡಿಯೋ’ ಮೂಲಕ ಅ.22ರಂದು ಈ ಚಿತ್ರ ರಿಲೀಸ್​ ಆಗಿದೆ. ಮೊದಲಿನಿಂದಲೂ ‘ರತ್ನನ್​ ಪ್ರಪಂಚ’ ಬಗ್ಗೆ ನಟಿ ರಮ್ಯಾ ಆಸಕ್ತಿ ಹೊಂದಿದ್ದರು. ಕೆಲವೇ ದಿನಗಳ ಹಿಂದೆ ಅವರು ಟ್ರೇಲರ್​ ನೋಡಿ ಮೆಚ್ಚಿಕೊಂಡಿದ್ದರು. ಈಗ ಅವರಿಗೆ ಸಿನಿಮಾ ಕೂಡ ಇಷ್ಟ ಆಗಿದೆ. ತಮ್ಮ ಅನಿಸಿಕೆಯನ್ನು ಇನ್​ಸ್ಟಾಗ್ರಾಮ್​ ಸ್ಟೋರಿ ಮೂಲಕ ಹಂಚಿಕೊಂಡಿದ್ದಾರೆ. ಅಚ್ಚರಿ ಏನೆಂದರೆ, ಈ ಚಿತ್ರದಲ್ಲಿ ನಾಯಕಿ ಪಾತ್ರ ಮಾಡುವಂತೆ ತಮಗೆ ಆಫರ್ ಬಂದಿತ್ತು ಎಂಬ ವಿಚಾರವನ್ನು ರಮ್ಯಾ ಈಗ ಬಾಯಿ ಬಿಟ್ಟಿದ್ದಾರೆ.

‘ಅಮೇಜಾನ್​ ಪ್ರೈಂ ವಿಡಿಯೋದಲ್ಲಿ ಈಗ ರತ್ನನ್​ ಪ್ರಪಂಚ ಸಿನಿಮಾ ನೋಡುವ ಸಮಯ. ಈ ಸಿನಿಮಾದಲ್ಲಿ ನಾಯಕಿ ಪಾತ್ರ ಮಾಡುವಂತೆ ನನಗೆ ಆಫರ್​ ನೀಡಲಾಗಿತ್ತು. ನಾನೇನು ಮಿಸ್​ ಮಾಡಿಕೊಂಡೆ ಅಂತ ನೋಡೋಣ’ ಎಂದು ಸಿನಿಮಾ ವೀಕ್ಷಿಸುವುದಕ್ಕೂ ಮುನ್ನ ರಮ್ಯಾ ಬರೆದುಕೊಂಡಿದ್ದರು. ಸಿನಿಮಾ ನೋಡಿದ ಬಳಿಕ ತಮ್ಮ ಅಭಿಪ್ರಾಯ ಹಂಚಿಕೊಂಡರು.

‘ಕಲಾವಿದರಾದ ಡಾಲಿ ಧನಂಜಯ, ಉಮಾಶ್ರೀ, ಪ್ರಮೋದ್​, ಶ್ರುತಿ, ವೈನಿಧಿ, ಅಚ್ಯುತ್​ ಕುಮಾರ್​, ಅನು ಪ್ರಭಾಕರ್​, ರವಿಶಂಕರ್​ ಎಲ್ಲರೂ ಬ್ರಿಲಿಯಂಟ್​. ರೆಬಾ ಮೋನಿಕಾ ಅವರೇ, ನಾನು ನಿಮಗಿಂತಲೂ ಉತ್ತಮವಾಗಿ ನಟಿಸುತ್ತಿರಲಿಲ್ಲ. ಕಾರ್ತಿಕ್​ ಗೌಡ ಮತ್ತು ಯೋಗಿ ಜಿ. ರಾಜ್​ ಮುಡಿಗೆ ಇನ್ನೊಂದು ಗರಿ ಸೇರಿದೆ. ನಿರ್ದೇಶಕ ರೋಹಿತ್​ ಪದಕಿ ಅವರ ಇಡೀ ತಂಡಕ್ಕೆ ಅಭಿನಂದನೆಗಳು’ ಎಂದು ರಮ್ಯಾ ಪೋಸ್ಟ್​ ಮಾಡಿದ್ದಾರೆ.

ಈ ಸಿನಿಮಾದಲ್ಲಿ ತಾಯಿ ಸೆಂಟಿಮೆಂಟ್​ ಕಥೆ ಇದೆ. ತಾಯಂದಿರ ಪಾತ್ರದಲ್ಲಿ ಉಮಾಶ್ರೀ ಮತ್ತು ಶ್ರುತಿ ಅಭಿನಯ ಮನಸೆಳೆಯುವಂತಿದೆ. ಕ್ಲೈಮ್ಯಾಕ್ಸ್​ ಕೂಡ ಸಖತ್​ ಭಾವುಕವಾಗಿದೆ. ಆ ಕಾರಣಕ್ಕಾಗಿ ರಮ್ಯಾ ಒಂದು ವಿಶೇಷ ಮಾತು ತಿಳಿಸಿದ್ದಾರೆ. ‘ಅವಶ್ಯವಾಗಿ ಒಂದಷ್ಟು ಟಿಶ್ಯೂ ಇಟ್ಟುಕೊಳ್ಳಿ. ಕೊನೇ ದೃಶ್ಯದಲ್ಲಿ ಮನಸಾರೆ ಅತ್ತುಬಿಡಿ’ ಎಂದು ಅವರು ಚಿತ್ರದ ಕ್ಲೈಮ್ಯಾಕ್ಸ್​ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. ಒಂದು ವೇಳೆ ರಮ್ಯಾ ಅವರು ಈ ಚಿತ್ರವನ್ನು ಒಪ್ಪಿಕೊಂಡಿದ್ದರೆ ಅಭಿಮಾನಿಗಳಿಗೆ ಹೆಚ್ಚು ಇಷ್ಟವಾಗುತ್ತಿತ್ತು.

ರಮ್ಯಾ ಜೊತೆ ನಟಿಸುವ ಆಸೆ ಇದೆ ಎಂದು ಡಾಲಿ ಧನಂಜಯ​ ಅವರು ಇತ್ತೀಚೆಗೆ ಟಿವಿ9 ಡಿಜಿಟಲ್​ಗೆ ನೀಡಿದ ಸಂದರ್ಶನದಲ್ಲಿ ಹೇಳಿಕೊಂಡಿದ್ದರು. ಆ ಆಸೆ ಮುಂದಿನ ದಿನಗಳಲ್ಲಾದರೂ ಈಡೇರಲಿ ಎಂದು ಅಭಿಮಾನಿಗಳು ನಿರೀಕ್ಷಿಸುತ್ತಿದ್ದಾರೆ. ಧನಂಜಯ ನಟನೆಯ ‘ಸಲಗ’ ಸಿನಿಮಾ ಅ.14ರಂದು ಚಿತ್ರಮಂದಿರದಲ್ಲಿ ತೆರೆಕಂಡು ಸೂಪರ್​ ಹಿಟ್​ ಆಗಿದೆ. ಅದರ ಬೆನ್ನಲ್ಲೇ ಅವರಿಗೆ ‘ರತ್ನನ್​ ಪ್ರಪಂಚ’ ಮೂಲಕವೂ ಗೆಲುವು ಸಿಕ್ಕಿದೆ.

ಇದನ್ನೂ ಓದಿ:

Rathnan Prapancha Movie Review: ಸಂಬಂಧಗಳ ಅರ್ಥ ತಿಳಿಯಲು ಪ್ರಪಂಚ ಸುತ್ತಿದ ರತ್ನ; ಧನಂಜಯ ಖಾತೆಗೆ ಇನ್ನೊಂದು ಭಿನ್ನ ಸಿನಿಮಾ

Salaga Movie Review: ‘ಸಲಗ’ ತುಂಬಾ ರಗಡ್​ ಆಗಿದೆ ಎಚ್ಚರಿಕೆ! ದುನಿಯಾ ವಿಜಯ್​ಗೆ ಮಾಸ್​ ಪ್ರೇಕ್ಷಕರೇ ಟಾರ್ಗೆಟ್​

ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ