AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮ್ಯಾಗೆ ಸಖತ್​ ಇಷ್ಟವಾಯ್ತು ‘ರತ್ನನ್​ ಪ್ರಪಂಚ’; ಈ ಚಿತ್ರಕ್ಕೆ ಅವರೇ ನಾಯಕಿ ಆಗಬೇಕಿತ್ತು, ಆದರೆ…

Rathnan Prapancha: ‘ರತ್ನನ್​ ಪ್ರಪಂಚ’ ಸಿನಿಮಾದಲ್ಲಿ ತಾಯಿ ಸೆಂಟಿಮೆಂಟ್​ ಕಥೆ ಇದೆ. ಕ್ಲೈಮ್ಯಾಕ್ಸ್​ ಕೂಡ ಸಖತ್​ ಭಾವುಕವಾಗಿದೆ. ಆ ಕಾರಣಕ್ಕಾಗಿ ರಮ್ಯಾ ಒಂದು ವಿಶೇಷ ಮಾತು ತಿಳಿಸಿದ್ದಾರೆ.

ರಮ್ಯಾಗೆ ಸಖತ್​ ಇಷ್ಟವಾಯ್ತು ‘ರತ್ನನ್​ ಪ್ರಪಂಚ’; ಈ ಚಿತ್ರಕ್ಕೆ ಅವರೇ ನಾಯಕಿ ಆಗಬೇಕಿತ್ತು, ಆದರೆ...
ಉಮಾಶ್ರೀ, ಧನಂಜಯ, ರಮ್ಯಾ
TV9 Web
| Edited By: |

Updated on: Oct 23, 2021 | 8:09 AM

Share

ಡಾಲಿ ಧನಂಜಯ ನಟನೆಯ ‘ರತ್ನನ್​ ಪ್ರಪಂಚ’ ಸಿನಿಮಾ ಬಿಡುಗಡೆಯಾಗಿ ಎಲ್ಲರಿಂದ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ‘ಅಮೇಜಾನ್​ ಪ್ರೈಂ ವಿಡಿಯೋ’ ಮೂಲಕ ಅ.22ರಂದು ಈ ಚಿತ್ರ ರಿಲೀಸ್​ ಆಗಿದೆ. ಮೊದಲಿನಿಂದಲೂ ‘ರತ್ನನ್​ ಪ್ರಪಂಚ’ ಬಗ್ಗೆ ನಟಿ ರಮ್ಯಾ ಆಸಕ್ತಿ ಹೊಂದಿದ್ದರು. ಕೆಲವೇ ದಿನಗಳ ಹಿಂದೆ ಅವರು ಟ್ರೇಲರ್​ ನೋಡಿ ಮೆಚ್ಚಿಕೊಂಡಿದ್ದರು. ಈಗ ಅವರಿಗೆ ಸಿನಿಮಾ ಕೂಡ ಇಷ್ಟ ಆಗಿದೆ. ತಮ್ಮ ಅನಿಸಿಕೆಯನ್ನು ಇನ್​ಸ್ಟಾಗ್ರಾಮ್​ ಸ್ಟೋರಿ ಮೂಲಕ ಹಂಚಿಕೊಂಡಿದ್ದಾರೆ. ಅಚ್ಚರಿ ಏನೆಂದರೆ, ಈ ಚಿತ್ರದಲ್ಲಿ ನಾಯಕಿ ಪಾತ್ರ ಮಾಡುವಂತೆ ತಮಗೆ ಆಫರ್ ಬಂದಿತ್ತು ಎಂಬ ವಿಚಾರವನ್ನು ರಮ್ಯಾ ಈಗ ಬಾಯಿ ಬಿಟ್ಟಿದ್ದಾರೆ.

‘ಅಮೇಜಾನ್​ ಪ್ರೈಂ ವಿಡಿಯೋದಲ್ಲಿ ಈಗ ರತ್ನನ್​ ಪ್ರಪಂಚ ಸಿನಿಮಾ ನೋಡುವ ಸಮಯ. ಈ ಸಿನಿಮಾದಲ್ಲಿ ನಾಯಕಿ ಪಾತ್ರ ಮಾಡುವಂತೆ ನನಗೆ ಆಫರ್​ ನೀಡಲಾಗಿತ್ತು. ನಾನೇನು ಮಿಸ್​ ಮಾಡಿಕೊಂಡೆ ಅಂತ ನೋಡೋಣ’ ಎಂದು ಸಿನಿಮಾ ವೀಕ್ಷಿಸುವುದಕ್ಕೂ ಮುನ್ನ ರಮ್ಯಾ ಬರೆದುಕೊಂಡಿದ್ದರು. ಸಿನಿಮಾ ನೋಡಿದ ಬಳಿಕ ತಮ್ಮ ಅಭಿಪ್ರಾಯ ಹಂಚಿಕೊಂಡರು.

‘ಕಲಾವಿದರಾದ ಡಾಲಿ ಧನಂಜಯ, ಉಮಾಶ್ರೀ, ಪ್ರಮೋದ್​, ಶ್ರುತಿ, ವೈನಿಧಿ, ಅಚ್ಯುತ್​ ಕುಮಾರ್​, ಅನು ಪ್ರಭಾಕರ್​, ರವಿಶಂಕರ್​ ಎಲ್ಲರೂ ಬ್ರಿಲಿಯಂಟ್​. ರೆಬಾ ಮೋನಿಕಾ ಅವರೇ, ನಾನು ನಿಮಗಿಂತಲೂ ಉತ್ತಮವಾಗಿ ನಟಿಸುತ್ತಿರಲಿಲ್ಲ. ಕಾರ್ತಿಕ್​ ಗೌಡ ಮತ್ತು ಯೋಗಿ ಜಿ. ರಾಜ್​ ಮುಡಿಗೆ ಇನ್ನೊಂದು ಗರಿ ಸೇರಿದೆ. ನಿರ್ದೇಶಕ ರೋಹಿತ್​ ಪದಕಿ ಅವರ ಇಡೀ ತಂಡಕ್ಕೆ ಅಭಿನಂದನೆಗಳು’ ಎಂದು ರಮ್ಯಾ ಪೋಸ್ಟ್​ ಮಾಡಿದ್ದಾರೆ.

ಈ ಸಿನಿಮಾದಲ್ಲಿ ತಾಯಿ ಸೆಂಟಿಮೆಂಟ್​ ಕಥೆ ಇದೆ. ತಾಯಂದಿರ ಪಾತ್ರದಲ್ಲಿ ಉಮಾಶ್ರೀ ಮತ್ತು ಶ್ರುತಿ ಅಭಿನಯ ಮನಸೆಳೆಯುವಂತಿದೆ. ಕ್ಲೈಮ್ಯಾಕ್ಸ್​ ಕೂಡ ಸಖತ್​ ಭಾವುಕವಾಗಿದೆ. ಆ ಕಾರಣಕ್ಕಾಗಿ ರಮ್ಯಾ ಒಂದು ವಿಶೇಷ ಮಾತು ತಿಳಿಸಿದ್ದಾರೆ. ‘ಅವಶ್ಯವಾಗಿ ಒಂದಷ್ಟು ಟಿಶ್ಯೂ ಇಟ್ಟುಕೊಳ್ಳಿ. ಕೊನೇ ದೃಶ್ಯದಲ್ಲಿ ಮನಸಾರೆ ಅತ್ತುಬಿಡಿ’ ಎಂದು ಅವರು ಚಿತ್ರದ ಕ್ಲೈಮ್ಯಾಕ್ಸ್​ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. ಒಂದು ವೇಳೆ ರಮ್ಯಾ ಅವರು ಈ ಚಿತ್ರವನ್ನು ಒಪ್ಪಿಕೊಂಡಿದ್ದರೆ ಅಭಿಮಾನಿಗಳಿಗೆ ಹೆಚ್ಚು ಇಷ್ಟವಾಗುತ್ತಿತ್ತು.

ರಮ್ಯಾ ಜೊತೆ ನಟಿಸುವ ಆಸೆ ಇದೆ ಎಂದು ಡಾಲಿ ಧನಂಜಯ​ ಅವರು ಇತ್ತೀಚೆಗೆ ಟಿವಿ9 ಡಿಜಿಟಲ್​ಗೆ ನೀಡಿದ ಸಂದರ್ಶನದಲ್ಲಿ ಹೇಳಿಕೊಂಡಿದ್ದರು. ಆ ಆಸೆ ಮುಂದಿನ ದಿನಗಳಲ್ಲಾದರೂ ಈಡೇರಲಿ ಎಂದು ಅಭಿಮಾನಿಗಳು ನಿರೀಕ್ಷಿಸುತ್ತಿದ್ದಾರೆ. ಧನಂಜಯ ನಟನೆಯ ‘ಸಲಗ’ ಸಿನಿಮಾ ಅ.14ರಂದು ಚಿತ್ರಮಂದಿರದಲ್ಲಿ ತೆರೆಕಂಡು ಸೂಪರ್​ ಹಿಟ್​ ಆಗಿದೆ. ಅದರ ಬೆನ್ನಲ್ಲೇ ಅವರಿಗೆ ‘ರತ್ನನ್​ ಪ್ರಪಂಚ’ ಮೂಲಕವೂ ಗೆಲುವು ಸಿಕ್ಕಿದೆ.

ಇದನ್ನೂ ಓದಿ:

Rathnan Prapancha Movie Review: ಸಂಬಂಧಗಳ ಅರ್ಥ ತಿಳಿಯಲು ಪ್ರಪಂಚ ಸುತ್ತಿದ ರತ್ನ; ಧನಂಜಯ ಖಾತೆಗೆ ಇನ್ನೊಂದು ಭಿನ್ನ ಸಿನಿಮಾ

Salaga Movie Review: ‘ಸಲಗ’ ತುಂಬಾ ರಗಡ್​ ಆಗಿದೆ ಎಚ್ಚರಿಕೆ! ದುನಿಯಾ ವಿಜಯ್​ಗೆ ಮಾಸ್​ ಪ್ರೇಕ್ಷಕರೇ ಟಾರ್ಗೆಟ್​

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು