AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಟಿಟಿಯಲ್ಲಿ ರಿಲೀಸ್​ ಆಗತ್ತೆ ರವಿಚಂದ್ರನ್​ ಹೊಸ ಚಿತ್ರ ‘ಕನ್ನಡಿಗ’; ‘ಕ್ರೇಜಿ ಸ್ಟಾರ್’ ಅಭಿಮಾನಿಗಳಿಗೆ ಗುಡ್​ ನ್ಯೂಸ್​

ಹಲವು ಕಾರಣಗಳಿಂದಾಗಿ ‘ಕನ್ನಡಿಗ’ ಸಿನಿಮಾ ಹೈಪ್​ ಸೃಷ್ಟಿ ಮಾಡಿದೆ. ಈ ಚಿತ್ರದಲ್ಲಿ ರವಿಚಂದ್ರನ್​ ಅವರಿಗೆ ವಿಶೇಷ ಗೆಟಪ್​ ಇದೆ. ಜೀ5 ಮೂಲಕ ಡಿ.17ರಂದು ‘ಕನ್ನಡಿಗ’ ರಿಲೀಸ್​ ಆಗಲಿದೆ.

ಓಟಿಟಿಯಲ್ಲಿ ರಿಲೀಸ್​ ಆಗತ್ತೆ ರವಿಚಂದ್ರನ್​ ಹೊಸ ಚಿತ್ರ ‘ಕನ್ನಡಿಗ’; ‘ಕ್ರೇಜಿ ಸ್ಟಾರ್’ ಅಭಿಮಾನಿಗಳಿಗೆ ಗುಡ್​ ನ್ಯೂಸ್​
ರವಿಚಂದ್ರನ್
TV9 Web
| Edited By: |

Updated on:Dec 13, 2021 | 11:51 AM

Share

ಈ ವರ್ಷಾಂತ್ಯದಲ್ಲಿ ಹಲವಾರು ಸಿನಿಮಾಗಳು ಬಿಡುಗಡೆಗೆ ಸಜ್ಜಾಗಿವೆ. ಕೊರೊನಾ ಕಾರಣದಿಂದ ಅನೇಕ ಸಿನಿಮಾಗಳ ರಿಲೀಸ್​ ತಡವಾಯಿತು. ಅಂತಹ ಎಲ್ಲ ಚಿತ್ರಗಳು ಒಮ್ಮೆಲೇ ಥಿಯೇಟರ್​ಗೆ ಲಗ್ಗೆ ಇಡುತ್ತಿವೆ. ಹಾಗಾಗಿ ಎಲ್ಲ ಸಿನಿಮಾಗಳಿಗೆ ಸರಿಯಾಗಿ ಪ್ರಮಾಣದಲ್ಲಿ ಚಿತ್ರಮಂದಿರಗಳು ಸಿಗುವುದು ಅಸಾಧ್ಯ. ಈ ನಡುವೆ ಕೆಲವು ಚಿತ್ರತಂಡಗಳು ಓಟಿಟಿ ಪ್ಲಾಟ್​ಫಾರ್ಮ್​ (OTT platform) ಕಡೆಗೆ ಗಮನ ಹರಿಸಿವೆ. ರವಿಚಂದ್ರನ್ (Ravichandran)​ ನಟನೆಯ ‘ಕನ್ನಡಿಗ’ ಸಿನಿಮಾ (Kannadiga Movie) ಕೂಡ ಓಟಿಟಿ ಮೂಲಕ ಬಿಡುಗಡೆ ಆಗಲಿದೆ. ‘ಜಟ್ಟ’, ‘ಮೈತ್ರಿ’ ಸಿನಿಮಾಗಳ ಮೂಲಕ ಖ್ಯಾತಿ ಪಡೆದ ಗಿರಿರಾಜ್​ ಅವರು ನಿರ್ದೇಶನ ಮಾಡಿರುವ ಈ ಸಿನಿಮಾ ಡಿ.17ರಂದು ಜೀ5 (Zee5) ಮೂಲಕ ಬಿಡುಗಡೆ ಆಗಲಿದೆ.

ಹಲವು ಕಾರಣಗಳಿಂದಾಗಿ ‘ಕನ್ನಡಿಗ’ ಸಿನಿಮಾ ಹೈಪ್​ ಸೃಷ್ಟಿ ಮಾಡಿದೆ. ಈ ಚಿತ್ರದಲ್ಲಿ ರವಿಚಂದ್ರನ್​ ಅವರಿಗೆ ವಿಶೇಷ ಗೆಟಪ್​ ಇದೆ. ಐತಿಹಾಸಿಕ ಕಥಾಹಂದರ ಹೊಂದಿರುವ ಈ ಸಿನಿಮಾದಲ್ಲಿ ಲಿಪಿಕಾರ ಗುಣಭದ್ರನ ಪಾತ್ರವನ್ನು ರವಿಚಂದ್ರನ್​ ನಿಭಾಯಿಸಿದ್ದಾರೆ. ಈಗಾಗಲೇ ಹಲವು ಸದಭಿರುಚಿಯ ಸಿನಿಮಾಗಳನ್ನು ಮಾಡಿ ಗಮನ ಸೆಳೆದಿರುವ ಗಿರಿರಾಜ್​ ಅವರು ‘ಕನ್ನಡಿಗ’ ಸಿನಿಮಾವನ್ನು ಯಾವ ರೀತಿ ಕಟ್ಟಿಕೊಟ್ಟಿದ್ದಾರೆ ಎಂದು ತಿಳಿದುಕೊಳ್ಳಲು ಸಿನಿಪ್ರಿಯರು ಕಾದಿದ್ದಾರೆ.

ನಟ ರಮೇಶ್​ ಅರವಿಂದ್​ ಅವರು ಈ ಚಿತ್ರದ ಟ್ರೇಲರ್​ ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ. ‘ನಮ್ಮ ರವಿಚಂದ್ರನ್​ ಅವರು ಬಹಳ ವಿಭಿನ್ನವಾದ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಕನ್ನಡದ ಮೊದಲು ಶಬ್ದಕೋಶವನ್ನ ಬರೆಯಲು ಸಹಾಯ ಮಾಡಿದವನ ಕಥೆ ಅಂತ ನನಗೆ ಅನಿಸ್ತಾ ಇದೆ. ಇದೇ ಡಿ.17ರಂದು ಜೀ5ನಲ್ಲಿ ಈ ಚಿತ್ರ ನೀವು ನೋಡಬಹುದು’ ಎಂದು ರಮೇಶ್​ ಹೇಳಿದ್ದಾರೆ.

ರಾಕ್​ಲೈನ್​ ವೆಂಕಟೇಶ್​, ಪಾವನಾ ಗೌಡ, ಅಚ್ಯುತ್​ ಕುಮಾರ್​, ಬಾಲಾಜಿ ಮನೋಹರ್​, ಭವಾನಿ ಪ್ರಕಾಶ್​ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಓಂಕಾರ್ ಮೂವೀಸ್ ಲಾಂಛನದಲ್ಲಿ ಎನ್.ಎಸ್. ರಾಜ್​ಕುಮಾರ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಕೆಜಿಎಫ್ ಖ್ಯಾತಿಯ ರವಿ ಬಸ್ರೂರು ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಜಿ.ಎಸ್.ವಿ. ಸೀತಾರಾಂ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಹೊಸ್ಮನೆ ಮೂರ್ತಿ ಕಲಾ‌ ನಿರ್ದೇಶನ ಹಾಗೂ ಡಿಫರೆಂಟ್ ಡ್ಯಾನಿ ‌ಸಾಹಸ ನಿರ್ದೇಶನ‌ ಈ ಚಿತ್ರಕ್ಕಿದೆ‌.

ಒಂದೇ ತಿಂಗಳಲ್ಲಿ ರವಿಚಂದ್ರನ್​ ನಟನೆಯ 2 ಸಿನಿಮಾ ರಿಲೀಸ್​:

ರವಿಚಂದ್ರನ್​ ಅಭಿನಯದ ‘ದೃಶ್ಯ 2’ ಸಿನಿಮಾ ಇತ್ತೀಚೆಗಷ್ಟೇ ಬಿಡುಗಡೆ ಆಗಿದೆ. ಡಿ.10ರಂದು ಚಿತ್ರಮಂದಿರದಲ್ಲಿ ಈ ಸಿನಿಮಾ ತೆರೆಕಂಡು, ವಿಮರ್ಶಕರಿಂದ ಮೆಚ್ಚುಗೆ ಪಡೆದುಕೊಂಡಿದೆ. ಅದರ ಬೆನ್ನಲೇ ಓಟಿಟಿ ಮೂಲಕ ‘ಕನ್ನಡಿಗ’ ರಿಲೀಸ್​ ಆಗುತ್ತಿದೆ. ‘ಕ್ರೇಜಿ ಸ್ಟಾರ್​’ ನಟನೆಯ ಎರಡೆರಡು ಚಿತ್ರಗಳು ಒಂದೇ ತಿಂಗಳಲ್ಲಿ ಬಿಡುಗಡೆ ಆಗುತ್ತಿರುವುದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ.

ಇದನ್ನೂ ಓದಿ:

‘ರಾಜೇಂದ್ರ ಪೊನ್ನಪ್ಪ ಎಂಥಾ ಬುದ್ಧಿವಂತ ರೀ..’: ‘ದೃಶ್ಯ 2’ ಸಿನಿಮಾ ಬಗ್ಗೆ ರವಿಚಂದ್ರನ್​ ಮಾತು

Drishya 2 Movie Review: ಕೊನೇ ದೃಶ್ಯದವರೆಗೂ ಕೊಲೆ ಕೌತುಕ; ಈ ಬಾರಿ ಕ್ಲೈಮ್ಯಾಕ್ಸ್​ ಇನ್ನಷ್ಟು ರೋಚಕ

Published On - 11:50 am, Mon, 13 December 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ