AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara Movie: ಇಂಗ್ಲಿಷ್​ನಲ್ಲೂ ಬರುತ್ತಿದೆ ‘ಕಾಂತಾರ’ ಸಿನಿಮಾ; ಮಾರ್ಚ್​ 1ರಂದು ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ

Rishab Shetty | Kantara English Version: ‘ಕಾಂತಾರ’ ಸಿನಿಮಾ ಇಂಗ್ಲಿಷ್​ನಲ್ಲೂ ವೀಕ್ಷಣೆಗೆ ಲಭ್ಯವಾಗಲಿದೆ. ಇದರಿಂದ ಇನ್ನೂ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರನ್ನು ತಲುಪಲು ಸಾಧ್ಯವಾಗಲಿದೆ.

Kantara Movie: ಇಂಗ್ಲಿಷ್​ನಲ್ಲೂ ಬರುತ್ತಿದೆ ‘ಕಾಂತಾರ’ ಸಿನಿಮಾ; ಮಾರ್ಚ್​ 1ರಂದು ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ
ರಿಷಬ್ ಶೆಟ್ಟಿ
ಮದನ್​ ಕುಮಾರ್​
|

Updated on:Feb 07, 2023 | 6:51 PM

Share

ಕನ್ನಡ ಸಿನಿಮಾಗಳು ಜಾಗತಿಕ ಮಟ್ಟದಲ್ಲಿ ಮಿಂಚುತ್ತಿವೆ. ಕಳೆದ ವರ್ಷ ತೆರೆಕಂಡ ‘ಕೆಜಿಎಫ್​: ಚಾಪ್ಟರ್​ 2’, ‘ಕಾಂತಾರ’ (Kantara) ಸಿನಿಮಾಗಳು ಆ ರೀತಿ ಮೋಡಿ ಮಾಡಿವೆ. ಡಬ್ಬಿಂಗ್​ ಸಹಾಯದಿಂದ ಕನ್ನಡದ ಚಿತ್ರಗಳು ತಮಿಳು, ಮಲಯಾಳಂ, ತೆಲುಗು ಹಾಗೂ ಹಿಂದಿಯಲ್ಲಿ ಅದ್ದೂರಿ ಪ್ರದರ್ಶನ ಕಂಡಿವೆ. ಈಗ ಇಂಗ್ಲಿಷ್​ನಲ್ಲೂ ಸದ್ದು ಮಾಡುವ ಕಾಲ ಕೂಡಿಬಂದಿದೆ. ಹೌದು, ರಿಷಬ್​ ಶೆಟ್ಟಿ (Rishab Shetty) ನಿರ್ದೇಶನದ ‘ಕಾಂತಾರ’ ಸಿನಿಮಾ ಇಂಗ್ಲಿಷ್​ಗೆ ಡಬ್​ ಆಗುತ್ತಿದೆ. ಮಾರ್ಚ್​ 1ರಂದು ನೆಟ್​ಫ್ಲಿಕ್ಸ್​ ಮೂಲಕ ವೀಕ್ಷಣೆಗೆ ಲಭ್ಯವಾಗಲಿದೆ. ಇದು ಕನ್ನಡಿಗರಿಗೆ ಹೆಮ್ಮೆ ತರುವಂತಹ ವಿಚಾರವಾಗಿದ್ದು, ಕನ್ನಡ ಇನ್ನಷ್ಟು ಸಿನಿಮಾಗಳು (Kannada Movies) ಇದೇ ರೀತಿ ವಿಶ್ವಮಟ್ಟದಲ್ಲಿ ಮಿಂಚಲಿ ಎಂದು ಸಿನಿಪ್ರಿಯರು ಆಶಿಸುತ್ತಿದ್ದಾರೆ.

ತುಳುನಾಡಿನ ಸಂಸ್ಕೃತಿ ಮತ್ತು ಆಚರಣೆಗಳನ್ನು ಆಧರಿಸಿ ‘ಕಾಂತಾರ’ ಸಿನಿಮಾ ಮೂಡಿಬಂತು. ಭೂತಕೋಲದ ಬಗ್ಗೆ ಈ ಚಿತ್ರದಲ್ಲಿ ತೋರಿಸಲಾಗಿದೆ. ಇದು ಪರಭಾಷಿಕ ಪ್ರೇಕ್ಷಕರಿಗೂ ಇಷ್ಟ ಆಗಿದ್ದರಿಂದ ತಮಿಳು, ಹಿಂದಿ, ಮಲಯಾಳಂ, ತೆಲುಗು ಭಾಷೆಗಳಿಗೆ ಡಬ್​ ಮಾಡಿ ತೆರೆಕಾಣಿಸಲಾಯಿತು. ಜಾಗತಿಕ ಮಟ್ಟದಲ್ಲಿ ಈ ಸಿನಿಮಾ ಬಗ್ಗೆ ಚರ್ಚೆ ಆಗಿದೆ. ಇಂಗ್ಲಿಷ್​ನಲ್ಲೂ ವೀಕ್ಷಣೆಗೆ ಲಭ್ಯವಾಗಲಿರುವುದರಿಂದ ಇನ್ನೂ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರನ್ನು ತಲುಪಲು ಸಾಧ್ಯವಾಗಲಿದೆ. ‘ಕಾಂತಾರ’ದ ಡೈಲಾಗ್​ಗಳನ್ನು ಇಂಗ್ಲಿಷ್​ನಲ್ಲಿ ಕೇಳಿ ಸವಿಯಲು ಸಿನಿಪ್ರಿಯರು ಕಾದಿದ್ದಾರೆ.

ಇದನ್ನೂ ಓದಿ: ‘ನೀವು ನೋಡಿರೋದೇ ಎರಡನೇ ಭಾಗ’; ‘ಕಾಂತಾರ’ ಗುಟ್ಟು ರಿವೀಲ್ ಮಾಡಿದ ರಿಷಬ್ ಶೆಟ್ಟಿ

ಇದನ್ನೂ ಓದಿ
Image
Rishab Shetty: ಪಂಚೆ ಧರಿಸಿದ ರಿಷಬ್​ ಶೆಟ್ಟಿ ಗತ್ತು ಹೇಗಿದೆ ನೋಡಿ; ಇಲ್ಲಿದೆ ‘ಕಾಂತಾರ’ ಹೀರೋ ಫೋಟೋ ಗ್ಯಾಲರಿ
Image
Kantara: ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ 1 ಕೋಟಿ ಟಿಕೆಟ್ಸ್​ ಮಾರಾಟ; ದಾಖಲೆಗೆ ಹಿಗ್ಗಿದ ‘ಹೊಂಬಾಳೆ ಫಿಲ್ಮ್ಸ್​’
Image
Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?
Image
Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

‘ಹೊಂಬಾಳೆ ಫಿಲ್ಮ್ಸ್​’ ಬ್ಯಾನರ್​ ಮೂಲಕ ನಿರ್ಮಾಪಕ ವಿಜಯ್​ ಕಿರಗಂದೂರು ಅವರು ‘ಕಾಂತಾರ’ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. 400 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿದ್ದು ಈ ಸಿನಿಮಾದ ಹೆಚ್ಚುಗಾರಿಕೆ. 100 ದಿನಗಳ ಕಾಲ ಅದ್ದೂರಿ ಪ್ರದರ್ಶನ ಕಂಡಿದ್ದರಿಂದ ಇತ್ತೀಚೆಗೆ ಬೆಂಗಳೂರಿನಲ್ಲಿ ಸಕ್ಸಸ್​ ಮೀಟ್​ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಇಡೀ ಚಿತ್ರತಂಡ ಭಾಗಿಯಾಗಿ ಸಂಭ್ರಮಿಸಿದೆ.

ಇದನ್ನೂ ಓದಿ: Kantara: ಹಿಂದಿಯಲ್ಲೂ 100 ದಿನ ಪೂರೈಸಿದ ‘ಕಾಂತಾರ’ ಚಿತ್ರ; ರಿಷಬ್​ ಶೆಟ್ಟಿಗೆ ಉತ್ತರ ಭಾರತದಲ್ಲಿ ಭರ್ಜರಿ ಮೆಚ್ಚುಗೆ

‘ಕಾಂತಾರ 2’ ಬರುವುದು ಖಚಿತವಾಗಿದೆ. ಈ ಬಗ್ಗೆ ಇಷ್ಟು ದಿನ ಸೈಲೆಂಟ್​ ಆಗಿದ್ದ ರಿಷಬ್​ ಶೆಟ್ಟಿ ಅವರು ಶತದಿನೋತ್ಸವದ ಸಂಭ್ರಮದಲ್ಲಿ ಮೌನ ಮುರಿದರು. ಆದರೆ ಎರಡನೇ ಪಾರ್ಟ್​ನಲ್ಲಿ ಹಿಂದಿನ ಭಾಗದ ಕಥೆ ಇರಲಿದೆ ಎಂದು ಅವರು ಹೇಳಿದ್ದಾರೆ. ಇದರಿಂದ ಅಭಿಮಾನಿಗಳ ನಿರೀಕ್ಷೆ ಇನ್ನಷ್ಟು ಹೆಚ್ಚಾಗಿದೆ.

ಇದನ್ನೂ ಓದಿ: Kantara 2 Shooting: ‘ಕಾಂತಾರ 2’ ಆರಂಭಿಸಲು ಮಳೆಗಾಲಕ್ಕೆ ಕಾದಿರುವ ರಿಷಬ್​ ಶೆಟ್ಟಿ; ಮಾಹಿತಿ ನೀಡಿದ ವಿಜಯ್​ ಕಿರಗಂದೂರು

‘ಕಾಂತಾರ’ ಸಿನಿಮಾದಲ್ಲಿ ಸಪ್ತಮಿ ಗೌಡ, ರಿಷಬ್​ ಶೆಟ್ಟಿ ಅವರು ಜೋಡಿಯಾಗಿ ನಟಿಸಿದ್ದಾರೆ. ಅವರಿಬ್ಬರ ಕೆಮಿಸ್ಟ್ರಿಯನ್ನು ಪ್ರೇಕ್ಷಕರು ಇಷ್ಟಪಟ್ಟಿದ್ದಾರೆ. ಇನ್ನುಳಿದ ಕಲಾವಿದರಾದ ಮಾನಸಿ ಸುಧೀರ್​, ಪ್ರಮೋದ್​ ಶೆಟ್ಟಿ, ಅಚ್ಯುತ್ ಕುಮಾರ್​, ಕಿಶೋರ್​ ಮುಂತಾದ ಕಲಾವಿದರು ಸಹ ಗಮನ ಸೆಳೆದಿದ್ದಾರೆ. ಅಜನೀಶ್ ಲೋಕನಾಥ್​ ಅವರ ಸಂಗೀತ ಸಂಯೋಜನೆಯಲ್ಲಿ ಬಂದ ಹಾಡುಗಳು ಜನಮನ ಗೆದ್ದಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:51 pm, Tue, 7 February 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್