Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanya Iyer: ಸಾನ್ಯಾ ಐಯ್ಯರ್​ ಎದುರು ಮನದ ಮಾತು ತೆರೆದಿಟ್ಟ ರೂಪೇಶ್​ ಶೆಟ್ಟಿ​: ಪಾಸಿಟಿವ್​ ಆಗಿ ಪ್ರತಿಕ್ರಿಯಿಸಿದ ನಟಿ

Roopesh Shetty | Bigg Boss Kannada OTT: ತುಂಬ ಆತ್ಮೀಯವಾಗಿ ಕುಳಿತುಕೊಂಡು ರೂಪೇಶ್​ ಶೆಟ್ಟಿ ಮತ್ತು ಸಾನ್ಯಾ ಅಯ್ಯರ್​ ಮಾತನಾಡಿದ್ದಾರೆ. ಮನದ ಮಾತುಗಳನ್ನು ರೂಪೇಶ್​ ಓಪನ್​ ಆಗಿ ಹೇಳಿದ್ದಾರೆ.

Sanya Iyer: ಸಾನ್ಯಾ ಐಯ್ಯರ್​ ಎದುರು ಮನದ ಮಾತು ತೆರೆದಿಟ್ಟ ರೂಪೇಶ್​ ಶೆಟ್ಟಿ​: ಪಾಸಿಟಿವ್​ ಆಗಿ ಪ್ರತಿಕ್ರಿಯಿಸಿದ ನಟಿ
ಸಾನ್ಯಾ ಐಯ್ಯರ್, ರೂಪೇಶ್ ಶೆಟ್ಟಿ
Follow us
TV9 Web
| Updated By: ಮದನ್​ ಕುಮಾರ್​

Updated on: Sep 04, 2022 | 7:30 AM

ನಟ ರೂಪೇಶ್​ ಶೆಟ್ಟಿ ಅವರು ‘ಬಿಗ್ ಬಾಸ್​ ಕನ್ನಡ ಒಟಿಟಿ’ (Bigg Boss Kannada OTT) ಶೋನಲ್ಲಿ ತಮ್ಮದೇ ರೀತಿಯಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಯಾರ ಜೊತೆಗೂ ಅನಗತ್ಯ ಕಿರಿಕ್​ ಮಾಡಿಕೊಳ್ಳದೇ ಪರಿಸ್ಥಿತಿ ನಿಭಾಯಿಸುತ್ತಿದ್ದಾರೆ. ಟಾಸ್ಕ್​ ವಿಚಾರದಲ್ಲೂ ಅವರು ಹಿಂದೆ ಬಿದ್ದಿಲ್ಲ. ಪ್ರತಿ ವಾರ ಅವರು ವೀಕ್ಷಕರಿಂದ ವೋಟ್ ಪಡೆದು ಬಚಾವ್​ ಆಗುತ್ತಿದ್ದಾರೆ. ನಟಿ ಸಾನ್ಯಾ ಐಯ್ಯರ್​ (Sanya Iyer) ಜೊತೆಗೆ ಅವರಿಗೆ ಉತ್ತಮ ಬಾಂಧವ್ಯ ಬೆಳೆದಿದೆ. ಈ ಬಗ್ಗೆ ಅವರು ಪರಸ್ಪರ ಮಾತನಾಡಿಕೊಂಡಿದ್ದಾರೆ. ‘ಒಂದು ವೇಳೆ ನಿನ್ನ ಸಪೋರ್ಟ್​ ಇಲ್ಲದೇ ಇದ್ದಿದ್ದರೆ ನಾನು ಕಳೆದುಹೋಗುತ್ತಿದ್ದೆ. ನನಗೆ ತುಂಬ ಕಷ್ಟ ಆಗುತ್ತಿತ್ತು. ನೀನು ನನಗೆ ಫ್ರೆಂಡ್​ ಆದೆ. ಅದಕ್ಕೆ ಧನ್ಯವಾದ’ ಎಂದು ರೂಪೇಶ್ (Roopesh Shetty)​ ಹೇಳಿದ್ದಾರೆ. ಅದನ್ನು ಕೇಳಿ ಸಾನ್ಯಾ ಐಯ್ಯರ್​ ಅವರಿಗೆ ಖುಷಿ ಆಗಿದೆ.

ತುಂಬ ಆತ್ಮೀಯವಾಗಿ ಕುಳಿತುಕೊಂಡು ರೂಪೇಶ್​ ಶೆಟ್ಟಿ ಮತ್ತು ಸಾನ್ಯಾ ಅಯ್ಯರ್​ ಮಾತನಾಡಿದ್ದಾರೆ. ಮನದ ಮಾತುಗಳನ್ನು ರೂಪೇಶ್​ ಓಪನ್​ ಆಗಿ ಹೇಳಿದ್ದಾರೆ. ‘ನನಗೆ ಹುಡುಗರು ತುಂಬ ಫ್ರೆಂಡ್ಸ್​ ಇದ್ದಾರೆ. ಆದರೆ ಹುಡುಗಿಯರಲ್ಲಿ ಯಾರೂ ಇಲ್ಲ. ನಿನ್ನ ಲಿಸ್ಟ್​ನಲ್ಲಿ ನನ್ನನ್ನು ಮೊದಲಿಗೆ ಇಡು. ಯಾವುದೇ ಸಂದರ್ಭದಲ್ಲಿ ನಿನಗೆ ಸಹಾಯ ಬೇಕೆಂದರೂ ನನಗೆ ಫೋನ್​ ಮಾಡು. ಎಷ್ಟೇ ಬ್ಯುಸಿ ಇದ್ದರೂ ನಾನು ಬರ್ತೀನಿ’ ಎಂದು ರೂಪೇಶ್​ ಹೇಳಿದ್ದಾರೆ.

ಇಷ್ಟೆಲ್ಲ ಕೇಳಿಸಿಕೊಂಡು ಸಾನ್ಯಾ ಐಯ್ಯರ್​ ಸುಮ್ಮನಾಗಿಲ್ಲ. ಅವರು ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ‘ನಿನ್ನ ಜೊತೆ ಇದ್ದಾಗ ನಾನು ಬೇರೆಯದೇ ರೀತಿಯ ಕಂಫರ್ಟ್​ ಝೋನ್​ನಲ್ಲಿ ಇರುತ್ತೇನೆ. ನಾನು ಏನು ಹೇಳಿದರೂ ನೀನು ಜಡ್ಜ್​ ಮಾಡಲ್ಲ ಅಂತ ನನಗೆ ಗೊತ್ತು’ ಎಂದಿದ್ದಾರೆ ಸಾನ್ಯಾ. ‘ನಾನು ಯಾವುದೇ ಹುಡುಗಿಯ ಮೇಲೆ ಅಪ್ಪಿತಪ್ಪಿಯೂ ಕೈ ಹಾಕಲ್ಲ. ನಂದಿನಿ ಮೈ ಸ್ವಲ್ಪ ಟಚ್​ ಆದರೂ ನಾನು ಸಾರಿ ಎನ್ನುತ್ತೇನೆ’ ಎಂದಿದ್ದಾರೆ ರೂಪೇಶ್​ ಶೆಟ್ಟಿ.

ಇದನ್ನೂ ಓದಿ
Image
ಸಾನ್ಯಾ ಅಯ್ಯರ್ ಪಕ್ಕದಲ್ಲಿ ಹೋಗಿ ಕುಳಿತ ಜಶ್ವಂತ್; ಉರಿದು ಬಿದ್ದ ನಂದಿನಿ ಮಾಡಿದ್ದೇನು ನೋಡಿ
Image
ಬಿಗ್ ಬಾಸ್ ಸ್ಪರ್ಧಿ ಸಾನ್ಯಾ ಅಯ್ಯರ್ ತಾಯಿ ದೀಪಾ ಅವರ ಪೂರ್ತಿ ಸಂದರ್ಶನ ಇಲ್ಲಿದೆ
Image
Sanya Iyer: ಮನೆಯಲ್ಲಿ ಹೇಗಿರುತ್ತೆ ಸಾನ್ಯಾ ಅಯ್ಯರ್​ ನಡೆ-ನುಡಿ? ಎಲ್ಲವನ್ನೂ ವಿವರಿಸಿದ ತಾಯಿ ದೀಪಾ ಅಯ್ಯರ್​
Image
Sanya Iyer: ಅಪ್ಪನೇ ಮಗಳ ಖಾಸಗಿ ವಿಡಿಯೋ ರೆಕಾರ್ಡ್​ ಮಾಡಿದ್ದ; ಸಾನ್ಯಾ ಅಯ್ಯರ್​ ತಾಯಿ ಹೇಳಿದ ಕರಾಳ ಸತ್ಯಗಳು

ಹಲವು ಟ್ವಿಸ್ಟ್​ಗಳಿಗೆ ‘ಬಿಗ್​ ಬಾಸ್​ ಒಟಿಟಿ ಕನ್ನಡ’ ಶೋ ಕಾರಣ ಆಗುತ್ತಿದೆ. ನಾಲ್ಕನೇ ವಾರದಲ್ಲಿ ಡಬಲ್​ ಎಲಿಮಿನೇಷನ್​ ನಡೆದಿದೆ. ಅಕ್ಷತಾ ಕುಕ್ಕಿ ಮತ್ತು ಚೈತ್ರಾ ಹಳ್ಳಿಕೇರಿ ಅವರು ಔಟ್​ ಆಗಿದ್ದಾರೆ. ಇನ್ನುಳಿದ ಕೆಲವೇ ದಿನಗಳಲ್ಲಿ ಆಟದ ರಂಗು ಇನ್ನಷ್ಟು ಹೆಚ್ಚಲಿದೆ. 6ನೇ ವಾರಕ್ಕೆ ಈ ಶೋ ಮುಗಿಯಲಿದೆ. ಇದರಲ್ಲಿ ಇರುವ ಕೆಲವರಿಗೆ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ರಲ್ಲಿ ಸ್ಪರ್ಧಿಸುವ ಅವಕಾಶ ಸಿಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್
ಪಿಲಿಭಿತ್ ಅಭಯಾರಣ್ಯದಲ್ಲಿ ಹೆಬ್ಬಾವನ್ನು ತಿಂದು ವಾಂತಿ ಮಾಡಿದ ಹುಲಿ
ಪಿಲಿಭಿತ್ ಅಭಯಾರಣ್ಯದಲ್ಲಿ ಹೆಬ್ಬಾವನ್ನು ತಿಂದು ವಾಂತಿ ಮಾಡಿದ ಹುಲಿ
ಜಿಲ್ಲೆಯಲ್ಲಿ ಬಿಜೆಪಿಗೆ ಉತ್ತಮ ಫಲಿತಾಂಶ ಕೊಡಿಸುವ ಸವಾಲು ಸ್ವೀಕಾರ: ಬಿವೈವಿ
ಜಿಲ್ಲೆಯಲ್ಲಿ ಬಿಜೆಪಿಗೆ ಉತ್ತಮ ಫಲಿತಾಂಶ ಕೊಡಿಸುವ ಸವಾಲು ಸ್ವೀಕಾರ: ಬಿವೈವಿ
ಜನಿವಾರದಿಂದ ನೇಣು ಬಿಗಿದುಕೊಂಡರೆ? ಕಾಲೇಜು ಸಿಬ್ಬಂದಿಯ ಮೂರ್ಖ ವಾದ!
ಜನಿವಾರದಿಂದ ನೇಣು ಬಿಗಿದುಕೊಂಡರೆ? ಕಾಲೇಜು ಸಿಬ್ಬಂದಿಯ ಮೂರ್ಖ ವಾದ!
ಹೊಸ ಪಕ್ಷ ಕಟ್ಟುವ ಇಚ್ಛೆ ಇದೆ ಎಂದ ಮಾಜಿ ಸಚಿವ ಸಿಎಂ ಇಬ್ರಾಹಿಂ
ಹೊಸ ಪಕ್ಷ ಕಟ್ಟುವ ಇಚ್ಛೆ ಇದೆ ಎಂದ ಮಾಜಿ ಸಚಿವ ಸಿಎಂ ಇಬ್ರಾಹಿಂ