AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಆರ್​ಆರ್​ ಚಿತ್ರ ಓಟಿಟಿಯಲ್ಲಿ ಬರೋದು ಯಾವಾಗ? ಕಾತರದ ಪ್ರಶ್ನೆಗೆ ಸಿಕ್ತು ಉತ್ತರ

RRR Movie: ‘ಆರ್​ಆರ್​ಆರ್​’ ಸಿನಿಮಾ 2022ರ ಜ.7ರಂದು ತೆರೆಕಾಣಲಿದೆ. ಕೊವಿಡ್​ ರೂಪಾಂತರಿಯ ಭಯದಿಂದ ಕೆಲವರು ಚಿತ್ರಮಂದಿರಕ್ಕೆ ಬರಲು ಹಿಂದೇಟು ಹಾಕುತ್ತಾರೆ. ಅಂಥವರು ಈ ಚಿತ್ರವನ್ನು ಓಟಿಟಿಯಲ್ಲಿ ನೋಡಲು ಬಯಸುತ್ತಾರೆ.

ಆರ್​ಆರ್​ಆರ್​ ಚಿತ್ರ ಓಟಿಟಿಯಲ್ಲಿ ಬರೋದು ಯಾವಾಗ? ಕಾತರದ ಪ್ರಶ್ನೆಗೆ ಸಿಕ್ತು ಉತ್ತರ
ಆರ್​ಆರ್​ಆರ್​ನಲ್ಲಿ ಎನ್​ಟಿಆರ್​
Follow us
TV9 Web
| Updated By: ಮದನ್​ ಕುಮಾರ್​

Updated on: Dec 11, 2021 | 7:28 AM

ಅದ್ದೂರಿ ಬಜೆಟ್​ನಲ್ಲಿ ‘ಆರ್​ಆರ್​ಆರ್​’ ಚಿತ್ರ (RRR Movie) ಮೂಡಿಬಂದಿದೆ. ಡಿ.9ರಂದು ಟ್ರೇಲರ್​ ಬಿಡುಗಡೆಯಾಗಿ ಧೂಳೆಬ್ಬಿಸಿದೆ. 2022ರ ಜ.7ರಂದು ವಿಶ್ವಾದ್ಯಂತ ಈ ಚಿತ್ರ ತೆರೆಕಾಣಲಿದೆ. ರಾಜಮೌಳಿ (SS Rajamouli) ನಿರ್ದೇಶನದ ಸಿನಿಮಾ ಎಂದರೆ ನಿರೀಕ್ಷೆ ಜೋರಾಗಿಯೇ ಇರುತ್ತದೆ. ಜ್ಯೂ. ಎನ್​ಟಿಆರ್​ (Jr NTR) ಮತ್ತು ರಾಮ್​ ಚರಣ್​ (Ram Charan) ಮುಖ್ಯಭೂಮಿಕೆ ನಿಭಾಯಿಸಿದ್ದಾರೆ. ಆಲಿಯಾ ಭಟ್​ (Alia Bhatt) ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಅಜಯ್​ ದೇವಗನ್​ ಅವರಿಗೂ ಪ್ರಮುಖ ಪಾತ್ರವಿದೆ. ಈ ಎಲ್ಲ ಕಾರಣಗಳಿಂದಾಗಿ ಈ ಸಿನಿಮಾ ಹೆಚ್ಚು ಹೈಪ್​ ಸೃಷ್ಟಿ ಮಾಡಿದೆ. ಕೊವಿಡ್​ ರೂಪಾಂತರಿಯ ಭಯದಿಂದ ಕೆಲವರು ಚಿತ್ರಮಂದಿರಕ್ಕೆ ಬರಲು ಹಿಂದೇಟು ಹಾಕುತ್ತಾರೆ. ಅಂಥವರು ಈ ಸಿನಿಮಾವನ್ನು ಓಟಿಟಿ ಪ್ಲಾಟ್​ಫಾರ್ಮ್​ (OTT platform) ಮೂಲಕ ನೋಡಲು ಬಯಸುತ್ತಾರೆ. ಹಾಗಾದರೆ ‘ಆರ್​ಆರ್​ಆರ್​’ ಸಿನಿಮಾ ಓಟಿಟಿಯಲ್ಲಿ ಲಭ್ಯವಾಗೋದು ಯಾವಾಗ? ಈ ಪ್ರಶ್ನೆಗೆ ಚಿತ್ರತಂಡದವರಿಂದಲೇ ಉತ್ತರ ಸಿಕ್ಕಿದೆ.

ತೆಲುಗಿನಲ್ಲಿ ನಿರ್ಮಾಣ ಆಗಿರುವ ಈ ಸಿನಿಮಾ ಕನ್ನಡ, ಮಲಯಾಳಂ, ಹಿಂದಿ, ತಮಿಳು ಮುಂತಾದ ಭಾಷೆಗಳಿಗೆ ಡಬ್​ ಆಗಿದೆ. ಹಾಗಾಗಿ ಎಲ್ಲ ರಾಜ್ಯಗಳಿಗೂ ತೆರಳಿ ‘ಆರ್​ಆರ್​ಆರ್​’ ಚಿತ್ರತಂಡ ಪ್ರಚಾರ ಮಾಡುತ್ತಿದೆ. ಈ ವೇಳೆ ಓಟಿಟಿ ರಿಲೀಸ್​ ಬಗ್ಗೆ ಪ್ರಶ್ನೆ ಎದುರಾಗಿದೆ. ಅದಕ್ಕೆ ಚಿತ್ರತಂಡದ ಕಡೆಯಿಂದ ಉತ್ತರ ಸಿಕ್ಕಿದೆ. ಚಿತ್ರಮಂದಿರದಲ್ಲಿ ಈ ಸಿನಿಮಾ ತೆರೆಕಂಡು ಕನಿಷ್ಠ 90 ದಿನಗಳು ಕಳೆದ ಬಳಿಕ ಓಟಿಟಿಯಲ್ಲಿ ಪ್ರಸಾರ ಆರಂಭಿಸಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ. ಆದರೆ ನಿರ್ದಿಷ್ಟ ದಿನಾಂಕವನ್ನು ಅವರು ತಿಳಿಸಿಲ್ಲ.

ಆರ್​ಆರ್​ಆರ್​ ಸಿನಿಮಾದ ತೆಲುಗು, ತಮಿಳು, ಕನ್ನಡ ಮತ್ತು ಮಲಯಾಳಂ ಅವತರಣಿಕೆಗಳ ಓಟಿಟಿ ಪ್ರಸಾರದ ಹಕ್ಕನ್ನು ಜೀ5 ಸಂಸ್ಥೆ ಖರೀದಿಸಿದೆ. ಹಿಂದಿ ವರ್ಷನ್​ ನೆಟ್​ಫ್ಲಿಕ್ಸ್​ ಪಾಲಾಗಿದೆ. ಓಟಿಟಿ ವಹಿವಾಟಿನಿಂದಾಗಿ ಈ ಚಿತ್ರಕ್ಕೆ ಬಹುಕೋಟಿ ರೂಪಾಯಿ ಆದಾಯ ಹರಿದು ಬಂದಿದೆ.

ಕನ್ನಡದ ನಟ ಅರುಣ್​ ಸಾಗರ್​ ಕೂಡ ಈ ಚಿತ್ರದಲ್ಲೊಂದು ಪಾತ್ರ ಮಾಡಿದ್ದಾರೆ. ಎಂಎಂ ಕೀರವಾಣಿ ಸಂಗೀತ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ‘ಜನನಿ’, ‘ಹಳ್ಳಿ ನಾಟು’ ಹಾಡುಗಳು ಜನಮನ ಗೆದ್ದಿವೆ. ಟ್ರೇಲರ್​ ನೋಡಿದ ಬಳಿಕ ಸಿನಿಮಾ ಮೇಲಿನ ನಿರೀಕ್ಷೆ ದುಪ್ಪಟ್ಟಾಗಿದೆ.

ಇದನ್ನೂ ಓದಿ:

RRR: ಬೆಂಗಳೂರಲ್ಲಿ ತೆಲುಗು ನಟರನ್ನು ನೋಡಲು ಮುಗಿಬಿದ್ದ ಜನ; ಆರ್​ಆರ್​ಆರ್​ ಸುದ್ದಿಗೋಷ್ಠಿ ವೇಳೆ ನೂಕುನುಗ್ಗಲು

RRR​ ಸುದ್ದಿಗೋಷ್ಠಿ: ಕರುನಾಡಿಗೆ ಬಂದ ರಾಜಮೌಳಿ, ಆಲಿಯಾ, ರಾಮ್​ ಚರಣ್​, ಜ್ಯೂ. ಎನ್​ಟಿಆರ್​ ಹೇಳಿದ್ದೇನು?

ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಕಬಿನಿ ಜಲಾಶಯಕ್ಕೆ ಶಿವಣ್ಣ-ಗೀತಕ್ಕ ಭೇಟಿ, ಮಕ್ಕಳೊಂದಿಗೆ ಬೆರೆತ ದಂಪತಿ
ಕಬಿನಿ ಜಲಾಶಯಕ್ಕೆ ಶಿವಣ್ಣ-ಗೀತಕ್ಕ ಭೇಟಿ, ಮಕ್ಕಳೊಂದಿಗೆ ಬೆರೆತ ದಂಪತಿ
ಮಗನಿಗಾಗಿ ಶಬರಿಯಂತೆ ಕಾಯ್ದ ತಾಯಿ, ದೈವದ ಮೊರೆ ಹೊಕ್ಕಿದ್ದ ಕುಟುಂಬ
ಮಗನಿಗಾಗಿ ಶಬರಿಯಂತೆ ಕಾಯ್ದ ತಾಯಿ, ದೈವದ ಮೊರೆ ಹೊಕ್ಕಿದ್ದ ಕುಟುಂಬ