Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಆರ್​ಆರ್​ ಚಿತ್ರ ಓಟಿಟಿಯಲ್ಲಿ ಬರೋದು ಯಾವಾಗ? ಕಾತರದ ಪ್ರಶ್ನೆಗೆ ಸಿಕ್ತು ಉತ್ತರ

RRR Movie: ‘ಆರ್​ಆರ್​ಆರ್​’ ಸಿನಿಮಾ 2022ರ ಜ.7ರಂದು ತೆರೆಕಾಣಲಿದೆ. ಕೊವಿಡ್​ ರೂಪಾಂತರಿಯ ಭಯದಿಂದ ಕೆಲವರು ಚಿತ್ರಮಂದಿರಕ್ಕೆ ಬರಲು ಹಿಂದೇಟು ಹಾಕುತ್ತಾರೆ. ಅಂಥವರು ಈ ಚಿತ್ರವನ್ನು ಓಟಿಟಿಯಲ್ಲಿ ನೋಡಲು ಬಯಸುತ್ತಾರೆ.

ಆರ್​ಆರ್​ಆರ್​ ಚಿತ್ರ ಓಟಿಟಿಯಲ್ಲಿ ಬರೋದು ಯಾವಾಗ? ಕಾತರದ ಪ್ರಶ್ನೆಗೆ ಸಿಕ್ತು ಉತ್ತರ
ಆರ್​ಆರ್​ಆರ್​ನಲ್ಲಿ ಎನ್​ಟಿಆರ್​
Follow us
TV9 Web
| Updated By: ಮದನ್​ ಕುಮಾರ್​

Updated on: Dec 11, 2021 | 7:28 AM

ಅದ್ದೂರಿ ಬಜೆಟ್​ನಲ್ಲಿ ‘ಆರ್​ಆರ್​ಆರ್​’ ಚಿತ್ರ (RRR Movie) ಮೂಡಿಬಂದಿದೆ. ಡಿ.9ರಂದು ಟ್ರೇಲರ್​ ಬಿಡುಗಡೆಯಾಗಿ ಧೂಳೆಬ್ಬಿಸಿದೆ. 2022ರ ಜ.7ರಂದು ವಿಶ್ವಾದ್ಯಂತ ಈ ಚಿತ್ರ ತೆರೆಕಾಣಲಿದೆ. ರಾಜಮೌಳಿ (SS Rajamouli) ನಿರ್ದೇಶನದ ಸಿನಿಮಾ ಎಂದರೆ ನಿರೀಕ್ಷೆ ಜೋರಾಗಿಯೇ ಇರುತ್ತದೆ. ಜ್ಯೂ. ಎನ್​ಟಿಆರ್​ (Jr NTR) ಮತ್ತು ರಾಮ್​ ಚರಣ್​ (Ram Charan) ಮುಖ್ಯಭೂಮಿಕೆ ನಿಭಾಯಿಸಿದ್ದಾರೆ. ಆಲಿಯಾ ಭಟ್​ (Alia Bhatt) ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಅಜಯ್​ ದೇವಗನ್​ ಅವರಿಗೂ ಪ್ರಮುಖ ಪಾತ್ರವಿದೆ. ಈ ಎಲ್ಲ ಕಾರಣಗಳಿಂದಾಗಿ ಈ ಸಿನಿಮಾ ಹೆಚ್ಚು ಹೈಪ್​ ಸೃಷ್ಟಿ ಮಾಡಿದೆ. ಕೊವಿಡ್​ ರೂಪಾಂತರಿಯ ಭಯದಿಂದ ಕೆಲವರು ಚಿತ್ರಮಂದಿರಕ್ಕೆ ಬರಲು ಹಿಂದೇಟು ಹಾಕುತ್ತಾರೆ. ಅಂಥವರು ಈ ಸಿನಿಮಾವನ್ನು ಓಟಿಟಿ ಪ್ಲಾಟ್​ಫಾರ್ಮ್​ (OTT platform) ಮೂಲಕ ನೋಡಲು ಬಯಸುತ್ತಾರೆ. ಹಾಗಾದರೆ ‘ಆರ್​ಆರ್​ಆರ್​’ ಸಿನಿಮಾ ಓಟಿಟಿಯಲ್ಲಿ ಲಭ್ಯವಾಗೋದು ಯಾವಾಗ? ಈ ಪ್ರಶ್ನೆಗೆ ಚಿತ್ರತಂಡದವರಿಂದಲೇ ಉತ್ತರ ಸಿಕ್ಕಿದೆ.

ತೆಲುಗಿನಲ್ಲಿ ನಿರ್ಮಾಣ ಆಗಿರುವ ಈ ಸಿನಿಮಾ ಕನ್ನಡ, ಮಲಯಾಳಂ, ಹಿಂದಿ, ತಮಿಳು ಮುಂತಾದ ಭಾಷೆಗಳಿಗೆ ಡಬ್​ ಆಗಿದೆ. ಹಾಗಾಗಿ ಎಲ್ಲ ರಾಜ್ಯಗಳಿಗೂ ತೆರಳಿ ‘ಆರ್​ಆರ್​ಆರ್​’ ಚಿತ್ರತಂಡ ಪ್ರಚಾರ ಮಾಡುತ್ತಿದೆ. ಈ ವೇಳೆ ಓಟಿಟಿ ರಿಲೀಸ್​ ಬಗ್ಗೆ ಪ್ರಶ್ನೆ ಎದುರಾಗಿದೆ. ಅದಕ್ಕೆ ಚಿತ್ರತಂಡದ ಕಡೆಯಿಂದ ಉತ್ತರ ಸಿಕ್ಕಿದೆ. ಚಿತ್ರಮಂದಿರದಲ್ಲಿ ಈ ಸಿನಿಮಾ ತೆರೆಕಂಡು ಕನಿಷ್ಠ 90 ದಿನಗಳು ಕಳೆದ ಬಳಿಕ ಓಟಿಟಿಯಲ್ಲಿ ಪ್ರಸಾರ ಆರಂಭಿಸಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ. ಆದರೆ ನಿರ್ದಿಷ್ಟ ದಿನಾಂಕವನ್ನು ಅವರು ತಿಳಿಸಿಲ್ಲ.

ಆರ್​ಆರ್​ಆರ್​ ಸಿನಿಮಾದ ತೆಲುಗು, ತಮಿಳು, ಕನ್ನಡ ಮತ್ತು ಮಲಯಾಳಂ ಅವತರಣಿಕೆಗಳ ಓಟಿಟಿ ಪ್ರಸಾರದ ಹಕ್ಕನ್ನು ಜೀ5 ಸಂಸ್ಥೆ ಖರೀದಿಸಿದೆ. ಹಿಂದಿ ವರ್ಷನ್​ ನೆಟ್​ಫ್ಲಿಕ್ಸ್​ ಪಾಲಾಗಿದೆ. ಓಟಿಟಿ ವಹಿವಾಟಿನಿಂದಾಗಿ ಈ ಚಿತ್ರಕ್ಕೆ ಬಹುಕೋಟಿ ರೂಪಾಯಿ ಆದಾಯ ಹರಿದು ಬಂದಿದೆ.

ಕನ್ನಡದ ನಟ ಅರುಣ್​ ಸಾಗರ್​ ಕೂಡ ಈ ಚಿತ್ರದಲ್ಲೊಂದು ಪಾತ್ರ ಮಾಡಿದ್ದಾರೆ. ಎಂಎಂ ಕೀರವಾಣಿ ಸಂಗೀತ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ‘ಜನನಿ’, ‘ಹಳ್ಳಿ ನಾಟು’ ಹಾಡುಗಳು ಜನಮನ ಗೆದ್ದಿವೆ. ಟ್ರೇಲರ್​ ನೋಡಿದ ಬಳಿಕ ಸಿನಿಮಾ ಮೇಲಿನ ನಿರೀಕ್ಷೆ ದುಪ್ಪಟ್ಟಾಗಿದೆ.

ಇದನ್ನೂ ಓದಿ:

RRR: ಬೆಂಗಳೂರಲ್ಲಿ ತೆಲುಗು ನಟರನ್ನು ನೋಡಲು ಮುಗಿಬಿದ್ದ ಜನ; ಆರ್​ಆರ್​ಆರ್​ ಸುದ್ದಿಗೋಷ್ಠಿ ವೇಳೆ ನೂಕುನುಗ್ಗಲು

RRR​ ಸುದ್ದಿಗೋಷ್ಠಿ: ಕರುನಾಡಿಗೆ ಬಂದ ರಾಜಮೌಳಿ, ಆಲಿಯಾ, ರಾಮ್​ ಚರಣ್​, ಜ್ಯೂ. ಎನ್​ಟಿಆರ್​ ಹೇಳಿದ್ದೇನು?

ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!