AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಯಲ್ಲಿ ‘RRR’ ವೀಕ್ಷಿಸಲು ಹೆಚ್ಚುವರಿ ಹಣ ನೀಡಬೇಕಿಲ್ಲ; ನಿರ್ಧಾರ ಬದಲಿಸಿ ಸಿಹಿ ಸುದ್ದಿ ನೀಡಿದ ಜೀ5

RRR OTT Release: ಪೇ ಪರ್​ ವ್ಯೂ ಮಾದರಿಯಲ್ಲಿ ಸಿನಿಮಾ ಪ್ರಸಾರ ಮಾಡಲು ತೀರ್ಮಾನಿಸಿದ್ದ ಜೀ5 ಒಟಿಟಿ ಸಂಸ್ಥೆ ಈಗ ತನ್ನ ನಿರ್ಧಾರ ಬದಲಿಸಿದೆ. ಇದು ಚಂದಾದಾರರಿಗೆ ಖುಷಿ ನೀಡಿದೆ.

ಒಟಿಟಿಯಲ್ಲಿ ‘RRR’ ವೀಕ್ಷಿಸಲು ಹೆಚ್ಚುವರಿ ಹಣ ನೀಡಬೇಕಿಲ್ಲ; ನಿರ್ಧಾರ ಬದಲಿಸಿ ಸಿಹಿ ಸುದ್ದಿ ನೀಡಿದ ಜೀ5
ಆರ್​ಆರ್​ಆರ್
TV9 Web
| Edited By: |

Updated on: May 19, 2022 | 4:12 PM

Share

ಟಾಲಿವುಡ್​ ಹೀರೋಗಳಾದ ರಾಮ್​ ಚರಣ್​ ಹಾಗೂ ಜ್ಯೂ. ಎನ್​ಟಿಆರ್ ಮುಖ್ಯ ಭೂಮಿಕೆ ನಿಭಾಯಿಸಿದ ‘ಆರ್​ಆರ್​ಆರ್​’ ಸಿನಿಮಾ (RRR Movie) ಚಿತ್ರಮಂದಿರದಲ್ಲಿ ಬಹುದೊಡ್ಡ ಗೆಲುವು ಕಂಡಿದೆ. ಈ ಸಿನಿಮಾ ಮಾಡಿದ ದಾಖಲೆಗಳು ಅನೇಕ. ಈಗ ‘ಆರ್​ಆರ್​ಆರ್​’ ಚಿತ್ರ ಒಟಿಟಿಯಲ್ಲಿ ರಿಲೀಸ್​ ಆಗುತ್ತಿದೆ. ಮೇ 20ರಂದು ಪ್ರೇಕ್ಷಕರು ಮನೆಯಲ್ಲೇ ಕುಳಿತು ಈ ಸಿನಿಮಾ ವೀಕ್ಷಿಸಬಹುದು. ಜೀ5 ಒಟಿಟಿ (OTT Platform) ಮೂಲಕ ಈ ಚಿತ್ರ ಪ್ರಸಾರ ಆಗಲಿದೆ. ಈ ಮೊದಲು ಒಟಿಟಿ ಪ್ರಸಾರಕ್ಕೆ ಒಂದಿಷ್ಟು ಷರತ್ತು ಹಾಕಲಾಗಿತ್ತು. ಈಗಾಗಲೇ ಜೀ5 ಚಂದಾದಾರರಾಗಿದ್ದರೂ ಕೂಡ ಹೆಚ್ಚುವರಿ ಹಣ ನೀಡಿ ‘ಆರ್​ಆರ್​ಆರ್​’ ಸಿನಿಮಾವನ್ನು ವೀಕ್ಷಿಸಬೇಕು ಎಂದು ಹೇಳಲಾಗಿತ್ತು. ಆದರೆ ಆ ನಿರ್ಧಾರದಿಂದ ಜೀ5 (Zee5) ಹಿಂದೆ ಸರಿದಿದೆ. ಜನರಿಂದ ತೀವ್ರ ಒತ್ತಾಯ ಕೇಳಿಬಂದ ಹಿನ್ನೆಲೆಯಲ್ಲಿ ಹೊಸ ಸುದ್ದಿ ನೀಡಲಾಗಿದೆ. ಈಗಾಗಲೇ ಸಬ್​ಸ್ಕ್ರಿಪ್ಷನ್​ ಹೊಂದಿರುವವರು ಯಾವುದೇ ಹೆಚ್ಚುವರಿ ಹಣ ನೀಡದೇ ‘ಆರ್​ಆರ್​ಆರ್’ ಸಿನಿಮಾವನ್ನು ನೋಡಬಹುದು ಎಂದು ತಿಳಿಸಿದೆ. ಈ ಸುದ್ದಿ ಕೇಳಿ ಫ್ಯಾನ್ಸ್​ ಖುಷಿ​ ಆಗಿದ್ದಾರೆ.

‘ಆರ್​ಆರ್​ಆರ್​’ ಸಿನಿಮಾದ ಅಸಲಿ ಮಜಾ ಇರುವುದೇ ಅದರ ಮೇಕಿಂಗ್​ನಲ್ಲಿ. ಅದ್ದೂರಿಯಾಗಿ ಮೂಡಿಬಂದಿರುವ ದೃಶ್ಯಗಳನ್ನು ಚಿತ್ರಮಂದಿರದಲ್ಲಿ ನೋಡಿ ಪ್ರೇಕ್ಷಕರು ಎಂಜಾಯ್​ ಮಾಡಿದ್ದಾರೆ. ಈಗ ಒಟಿಟಿಯಲ್ಲೂ 4K ರೆಸೊಲ್ಯೂಷನ್​ ಲಭ್ಯವಾಗುತ್ತಿದೆ. 5.1 ಸೌಂಡ್​ ಕೂಡ ಇರಲಿದೆ. ಇದು ಒಟಿಟಿ ಪ್ರೇಕ್ಷಕರಿಗೆ ಇನ್ನಷ್ಟು ಥ್ರಿಲ್​ ನೀಡಿದೆ. ಮೇ 19ರ ಮಧ್ಯರಾತ್ರಿಯಿಂದಲೇ ಜೀ5ನಲ್ಲಿ ‘ಆರ್​ಆರ್​ಆರ್​’ ಪ್ರಸಾರ ಆರಂಭ ಆಗಲಿದೆ.

ಇದನ್ನೂ ಓದಿ
Image
ರಾಜಮೌಳಿ ಜತೆ ಕೆಲಸ ಮಾಡಿದ್ದಕ್ಕೆ ರಾಮ್​ಚರಣ್ ಹೊಸ​ ಚಿತ್ರಕ್ಕೆ ಸೋಲು?; ಆತಂಕದಲ್ಲಿ ಜ್ಯೂ.ಎನ್​ಟಿಆರ್​ ಫ್ಯಾನ್ಸ್
Image
‘ಆರ್​ಆರ್​ಆರ್​’ ಚಿತ್ರದಲ್ಲಿ ಮಲ್ಲಿ ಅಮ್ಮನಾಗಿ ಕಾಣಿಸಿಕೊಂಡವರು ಇವರೇ ನೋಡಿ
Image
ಸೋಲಿಲ್ಲದ ಸರದಾರ ರಾಜಮೌಳಿ ಗೆಲುವಿನ ಗುಟ್ಟೇನು? ಇಲ್ಲಿವೆ ‘ಆರ್​ಆರ್​ಆರ್​’ ನಿರ್ದೇಶಕನ 5 ಸೂತ್ರಗಳು
Image
ಹೇಗಿದೆ ರಾಮ್​ ಚರಣ್​ ಹೊಸ ಕಾರು? ಇದರ ಬೆಲೆ ಬರೋಬ್ಬರಿ 4 ಕೋಟಿ ರೂಪಾಯಿ

ಇದನ್ನೂ ಓದಿ: ‘ಆರ್​ಆರ್​ಆರ್​’ ನಿರ್ದೇಶಕ ರಾಜಮೌಳಿ ಮನೆಗೆ ಬಂತು ಹೊಸ ಕಾರು; ಇದರ ಬೆಲೆ ಎಷ್ಟು?

ರಾಜಮೌಳಿ ನಿರ್ದೇಶನದಲ್ಲಿ ಮೂಡಿಬಂದ ‘ಆರ್​ಆರ್​ಆರ್​’ ಸಿನಿಮಾ ಗಲ್ಲಾಪೆಟ್ಟಿಯಲ್ಲಿ ಸಾವಿರಾರು ಕೋಟಿ ರೂಪಾಯಿ ಬಾಚಿಕೊಂಡಿದೆ. 3ಡಿ ಅವತರಣಿಕೆಯಲ್ಲೂ ಈ ಸಿನಿಮಾ ತೆರೆಕಂಡಿತ್ತು. ರಾಮ್​ ಚರಣ್​ ಮತ್ತು ಜ್ಯೂ. ಎನ್​ಟಿಆರ್​ ಅವರ ವೃತ್ತಿಜೀವನಕ್ಕೆ ಈ ಸಿನಿಮಾದಿಂದ ದೊಡ್ಡ ಮೈಲೇಜ್​ ಸಿಕ್ಕಿದೆ. ನಟಿ ಆಲಿಯಾ ಭಟ್​ ಈ ಚಿತ್ರದ ಮೂಲಕ ಮೊದಲ ಬಾರಿಗೆ ದಕ್ಷಿಣ ಭಾರತಕ್ಕೆ ಕಾಲಿಟ್ಟರು. ರಾಮ್​ ಚರಣ್​ಗೆ ಜೋಡಿಯಾಗಿ ಅವರು ಕಾಣಿಸಿಕೊಂಡರು. ಇನ್ನು ಅಜಯ್​ ದೇವಗನ್​ ಅವರ ಪಾತ್ರಕ್ಕೆ ಸ್ಕ್ರೀನ್​ ಸ್ಪೇಸ್​ ಕಡಿಮೆ ಆಗಿದ್ದರೂ ಕೂಡ ಕಥೆಗೆ ತಿರುವು ನೀಡುವಂತಹ ಪಾತ್ರದಲ್ಲಿ ಅವರು ನಟಿಸಿದ್ದಾರೆ. ಹಾಗಾಗಿ ಉತ್ತರ ಭಾರತದಲ್ಲಿ ಹಿಂದಿ ಪ್ರೇಕ್ಷಕರು ಈ ಚಿತ್ರವನ್ನು ಮುಗಿಬಿದ್ದು ನೋಡಿದರು. ನೆಟ್​ಫ್ಲಿಕ್ಸ್​ ಮೂಲಕ ‘ಆರ್​ಆರ್​ಆರ್​’ ಹಿಂದಿ ವರ್ಷನ್​ ಪ್ರಸಾರ ಆಗಲಿದೆ.

ಜ್ಯೂ. ಎನ್​ಟಿಆರ್​ ಜನ್ಮದಿನಕ್ಕೆ ಒಟಿಟಿ ರಿಲೀಸ್​:

ಮೇ 20ರಂದು ಜ್ಯೂ. ಎನ್​ಟಿಆರ್​ ಜನ್ಮದಿನ. ಆ ಪ್ರಯುಕ್ತವೇ ‘ಆರ್​ಆರ್​ಆರ್​’ ಸಿನಿಮಾ ಒಟಿಟಿಯಲ್ಲಿ ಪ್ರಸಾರ ಆರಂಭಿಸುತ್ತಿರುವುದಕ್ಕೆ ಫ್ಯಾನ್ಸ್​ ಖುಷಿ ಆಗಿದ್ದಾರೆ. ‘ಆರ್​ಆರ್​ಆರ್​’ ಸಿನಿಮಾದಲ್ಲಿ ಕೊಮರಮ್​ ಭೀಮ್​ ಎಂಬ ಪಾತ್ರದಲ್ಲಿ ಜ್ಯೂ. ಎನ್​ಟಿಆರ್​ ನಟಿಸಿದ್ದಾರೆ. ಅವರ ಜೊತೆ ಅಲ್ಲುರಿ ಸೀತಾರಾಮ ರಾಜು ಪಾತ್ರವನ್ನು ರಾಮ್​ ಚರಣ್​ ನಿಭಾಯಿಸಿದ್ದಾರೆ. ಇಬ್ಬರ ಪಾತ್ರಗಳು ಕೂಡ ಈ ಸಿನಿಮಾದಲ್ಲಿ ಸಖತ್​ ಹೈಲೈಟ್​ ಆಗಿದೆ. ಈ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಅಬ್ಬರಿಸಿದ ರೀತಿ ಕಂಡು ಬಾಲಿವುಡ್​ ಮಂದಿ ಕೂಡ ನಿಬ್ಬೆರಗಾಗಿದ್ದಾರೆ. ರಾಜಮೌಳಿ ಸೋಲಿಲ್ಲದ ಸರದಾರ ಎಂಬುದು ಈ ಸಿನಿಮಾ ಮೂಲಕ ಮತೊಮ್ಮೆ ಸಾಬೀತಾಗಿದೆ. ‘ಆರ್​ಆರ್​ಆರ್​’ ಚಿತ್ರಕ್ಕೆ ಬಂಡವಾಳ ಹೂಡಿದ ‘ಡಿವಿವಿ ಎಂಟರ್​ಟೇನ್​ಮೆಂಟ್​’ ಸಂಸ್ಥೆ ಭರ್ಜರಿ ಲಾಭ ಮಾಡಿಕೊಂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?