AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧನುಶ್ ಬಳಿಕ ಮತ್ತೊಬ್ಬರಿಂದ ‘ನಯನತಾರಾ‘ಗೆ ನೊಟೀಸ್: 5 ಕೋಟಿ ಪರಿಹಾರಕ್ಕೆ ಬೇಡಿಕೆ

Nayanthara Documentary: ನೆಟ್​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿದ್ದ ನಯನತಾರಾ ಡಾಕ್ಯುಮೆಂಟರಿ ವಿರುದ್ಧ ಈಗಾಗಲೇ ನಟ ಧನುಶ್ ಅವರ ನಿರ್ಮಾಣ ಸಂಸ್ಥೆ ಪ್ರಕರಣ ದಾಖಲಿಸಿದ್ದು, ಭಾರಿ ಮೊತ್ತದ ಹಣಕ್ಕೆ ಬೇಡಿಕೆ ಇಟ್ಟಿದೆ. ಇದೀಗ ಮತ್ತೊಂದು ನಿರ್ಮಾಣ ಸಂಸ್ಥೆ ಇದೇ ಡಾಕ್ಯುಮೆಂಟರಿ ವಿರುದ್ಧ ನೊಟೀಸ್ ಕಳಿಸಿದ್ದು, ಐದು ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದೆ.

ಧನುಶ್ ಬಳಿಕ ಮತ್ತೊಬ್ಬರಿಂದ ‘ನಯನತಾರಾ‘ಗೆ ನೊಟೀಸ್: 5 ಕೋಟಿ ಪರಿಹಾರಕ್ಕೆ ಬೇಡಿಕೆ
Nayanthara
ಮಂಜುನಾಥ ಸಿ.
|

Updated on:Jul 08, 2025 | 5:18 PM

Share

ನಟಿ ನಯನತಾರಾ (Nayanthara), ದಕ್ಷಿಣ ಭಾರತದ ಸ್ಟಾರ್ ನಟಿ. ಆದರೆ ನಯನತಾರಾ ಅವರ ಅತಿಯಾದ ಶಿಸ್ತು, ನಿಷ್ಠುರ ನುಡಿ-ನಡೆಗಳಿಂದಾಗಿ ಅವರನ್ನು ವಿರೋಧಿಸುವವರ ಸಂಖ್ಯೆಯೂ ಚಿತ್ರರಂಗದಲ್ಲಿ ಸಾಕಷ್ಟಿದೆ. ನಯನತಾರಾ, ನಿರ್ದೇಶಕ ವಿಘ್ನೇಷ್ ಅನ್ನು ವಿವಾಹವಾಗಿ ಇದೀಗ ಬಾಡಿಗೆ ತಾಯಿಯ ಮೂಲಕ ಇಬ್ಬರು ಮಕ್ಕಳನ್ನು ಸಹ ಪಡೆದಿದ್ದಾರೆ. ಕೆಲ ತಿಂಗಳ ಹಿಂದಷ್ಟೆ ನಯನತಾರಾ ಅವರ ಜೀವನದ ಬಗ್ಗೆ ಡಾಕ್ಯುಮೆಂಟರಿಯೊಂದು ನೆಟ್​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿತ್ತು. ಅದರ ಹಿಂದೆಯೇ ಸಾಕಷ್ಟು ವಿವಾದವನ್ನು ಸಹ ಇದು ಆಕರ್ಷಿಸಿತ್ತು.

ನಯನತಾರಾ ಅವರು, ಧನುಶ್ ನಿರ್ಮಾಣ ಮಾಡಿದ್ದ ‘ನಾನುಂ ರೌಡಿ ದಾ’ ಸಿನಿಮಾದ ಕೆಲ ದೃಶ್ಯಗಳನ್ನು ಡಾಕ್ಯುಮೆಂಟರಿಯಲ್ಲಿ ಬಳಸಿಕೊಳ್ಳಲಾಗಿತ್ತು. ‘ನಾನುಂ ರೌಡಿ ದಾ’ ಸಿನಿಮಾದಲ್ಲಿ ನಯನತಾರಾ ನಟಿಸಿದ್ದರು, ಸಿನಿಮಾವನ್ನು ವಿಘ್ನೇಷ್ ಶಿವನ್ ನಿರ್ದೇಶನ ಮಾಡಿದ್ದರು. ಇದೇ ಸಿನಿಮಾದ ಶೂಟಿಂಗ್ ಸಮಯದಲ್ಲಿ ನಯನತಾರಾ ಹಾಗೂ ವಿಘ್ನೇಷ್ ಶಿವನ್ ನಡುವೆ ಪ್ರೀತಿ ಮೂಡಿತ್ತು. ಹಾಗಾಗಿ ಸಿನಿಮಾದ ಶೂಟಿಂಗ್ ವೇಳೆಯ ಕೆಲ ದೃಶ್ಯಗಳನ್ನು ನಯನತಾರಾ ಡಾಕ್ಯುಮೆಂಟರಿಯಲ್ಲಿ ಬಳಸಿಕೊಳ್ಳಲಾಗಿತ್ತು.

ಇದಕ್ಕೆ ಆಕ್ಷೇಪಿಸಿ ನಟ ಧನುಶ್ ಅವರ ನಿರ್ಮಾಣ ಸಂಸ್ಥೆಯಿಂದ ನಯನತಾರಾ ಡಾಕ್ಯುಮೆಂಟರಿ ನಿರ್ಮಾಣ ಹಾಗೂ ನಿರ್ದೇಶನ ಮಾಡಿದವರ ವಿರುದ್ಧ ದೂರು ದಾಖಲಾಗಿದ್ದಲ್ಲದೆ ಭಾರಿ ಮೊತ್ತದ ಪರಿಹಾರಕ್ಕೆ ಬೇಡಿಕೆ ಇಡಲಾಗಿತ್ತು. ಅದೇ ಡಾಕ್ಯುಮೆಂಟರಿಯಲ್ಲಿ ನಯನತಾರಾ ನಟಿಸಿರುವ ಇನ್ನೂ ಕೆಲವಾರು ಸಿನಿಮಾಗಳ ದೃಶ್ಯಗಳನ್ನು ಸಹ ಬಳಸಿಕೊಳ್ಳಲಾಗಿತ್ತು. ಇದೀಗ ಮತ್ತೊಂದು ಸಿನಿಮಾ ನಿರ್ಮಾಣ ಸಂಸ್ಥೆಯ ಕಡೆಯಿಂದ ಡಾಕ್ಯುಮೆಂಟರಿ ಮೇಕರ್ಸ್​ಗೆ ನೊಟೀಸ್ ಹೋಗಿದ್ದು, ಐದು ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ ಇಡಲಾಗಿದೆ.

ಇದನ್ನೂ ಓದಿ:ಆ ಸ್ಟಾರ್ ನಟನ ಸಿನಿಮಾನಲ್ಲಿ ನಟಿಸಿ ತಪ್ಪು ಮಾಡಿದೆ: ನಯನತಾರಾ ಬೇಸರಕ್ಕೆ ಕಾರಣವೇನು?

‘ನಯನತಾರಾ’ ಡಾಕ್ಯುಮೆಂಟರಿಯಲ್ಲಿ ರಜನೀಕಾಂತ್ ನಟಿಸಿದ್ದ, ಕನ್ನಡದ ‘ಆಪ್ತಮಿತ್ರ’ ಸಿನಿಮಾದ ರೀಮೇಕ್ ‘ಚಂದ್ರಮುಖಿ’ ಸಿನಿಮಾದ ಕೆಲವು ದೃಶ್ಯಗಳನ್ನು ಸಹ ಬಳಸಿಕೊಳ್ಳಲಾಗಿತ್ತು. ಆ ಸಿನಿಮಾದ ಹಕ್ಕುಗಳನ್ನು ಹೊಂದಿರುವ ಎಪಿ ಇಂಟರ್ನ್ಯಾಷನಲ್ಸ್ ಸಂಸ್ಥೆಯು ಇದೀಗ ನೊಟೀಸ್ ಕಳಿಸಿದೆ. ತಮ್ಮ ಅನುಮತಿ ಇಲ್ಲದೆ ಸಿನಿಮಾದ ದೃಶ್ಯಗಳನ್ನು ಬಳಸಿಕೊಳ್ಳುವ ಮೂಕಲ ಕಾಪಿರೈಟ್ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಧನುಶ್ ನಿರ್ಮಾಣ ಸಂಸ್ಥೆಯು ನಯನತಾರಾ ವಿರುದ್ಧ ದೂರು ದಾಖಲಿಸಿದಾಗ ಸಾಮಾಜಿಕ ಜಾಲತಾಣದಲ್ಲಿ ಆ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ನಟಿ ನಯನತಾರಾ, ಧನುಶ್ ವಿರುದ್ಧ ನಾನಾ ಆರೋಪಗಳನ್ನು ಮಾಡಿದ್ದರು. ಧನುಶ್ ಅವರನ್ನು ಘೋಮುಖ ವ್ಯಾಘ್ರನಿಗೆ ಹೋಲಿಸಿದ್ದರು ಆದರೆ ಧನುಶ್ ಇದರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:14 pm, Tue, 8 July 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ