AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sai Dharam Tej: ಆಕ್ಸಿಡೆಂಟ್​ ಆದರೂ ಕನಿಕರ ತೋರದ ಪ್ರೇಕ್ಷಕರು; ನಟ ಸಾಯಿ ಧರಮ್​ ತೇಜ್​ಗೆ ನ.26ಕ್ಕೆ ಇನ್ನೊಂದು ಚಾನ್ಸ್​

Republic on Zee5: ಸಾಯಿ ಧರಮ್​ ತೇಜ್​ಗೆ ಆಕ್ಸಿಡೆಂಟ್​ ಆದಾಗ ಅವರು ಬೇಗ ಗುಣಮುಖರಾಗಲಿ ಎಂದು ಅನೇಕ ಅಭಿಮಾನಿಗಳು ಪ್ರಾರ್ಥನೆ ಮಾಡಿಕೊಂಡಿದ್ದರು. ಆ ಕಷ್ಟದ ಪರಿಸ್ಥಿತಿಯಲ್ಲೇ ‘ರಿಪಬ್ಲಿಕ್​’ ಸಿನಿಮಾವನ್ನು ಬಿಡುಗಡೆ ಮಾಡಲಾಗಿತ್ತು.

Sai Dharam Tej: ಆಕ್ಸಿಡೆಂಟ್​ ಆದರೂ ಕನಿಕರ ತೋರದ ಪ್ರೇಕ್ಷಕರು; ನಟ ಸಾಯಿ ಧರಮ್​ ತೇಜ್​ಗೆ ನ.26ಕ್ಕೆ ಇನ್ನೊಂದು ಚಾನ್ಸ್​
ಸಾಯಿ ಧರಮ್​ತೇಜ
TV9 Web
| Edited By: |

Updated on: Nov 02, 2021 | 1:41 PM

Share

ನಟ ಸಾಯಿ ಧರಮ್​ ತೇಜ್​ ಅವರು ಕಳೆದ ಕೆಲವು ತಿಂಗಳಿಂದ ಅನೇಕ ಏಳು-ಬೀಳುಗಳನ್ನು ಕಂಡಿದ್ದಾರೆ. ಸೆಪ್ಟೆಂಬರ್​ 10ರಂದು ಅವರಿಗೆ ಹೈದರಾಬಾದ್​ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಹಲವು ದಿನಗಳ ಕಾಲ ಅವರ ಕೋಮಾ ಸ್ಥಿತಿಯಲ್ಲಿ ಇದ್ದರು. ಸಾಯಿ ಧರಮ್​ ತೇಜ್​ ಪ್ರಜ್ಞಾಹೀನ ಸ್ಥಿತಿಯಲ್ಲಿ ಇರುವಾಗಲೇ ಅವರ ‘ರಿಪಬ್ಲಿಕ್​’ ಸಿನಿಮಾ ಬಿಡುಗಡೆ ಆಗಿತ್ತು. ಆದರೆ ಪ್ರೇಕ್ಷಕರಿಂದ ಆ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿರಲಿಲ್ಲ. ಈಗ ಆ ಚಿತ್ರ ಓಟಿಟಿ ಪ್ಲಾಟ್​ಫಾರ್ಮ್​ಗೆ ಕಾಲಿಡುತ್ತಿದೆ.

ಸಾಯಿ ಧರಮ್​ ತೇಜ್​ಗೆ ಆಕ್ಸಿಡೆಂಟ್​ ಆದಾಗ ಅವರು ಬೇಗ ಗುಣಮುಖರಾಗಲಿ ಎಂದು ಅನೇಕ ಅಭಿಮಾನಿಗಳು ಪ್ರಾರ್ಥನೆ ಮಾಡಿಕೊಂಡಿದ್ದರು. ಆ ಕಷ್ಟದ ಪರಿಸ್ಥಿತಿಯಲ್ಲೇ ‘ರಿಪಬ್ಲಿಕ್​’ ಸಿನಿಮಾವನ್ನು ಬಿಡುಗಡೆ ಮಾಡಲು ನಿರ್ಮಾಪಕರು ತೀರ್ಮಾನಿಸಿದ್ದರು. ಕೋಮದಲ್ಲಿ ಇರುವ ಸಾಯಿ ಧರಮ್​ ತೇಜ್​ ಮೇಲಿನ ಕನಿಕರದ ಕಾರಣದಿಂದಲಾದರೂ ಪ್ರೇಕ್ಷಕರು ಬಂದು ಆ ಸಿನಿಮಾವನ್ನು ನೋಡುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಆ ನಂಬಿಕೆ ಸುಳ್ಳಾಯಿತು. ಇದು ಸಹಜವಾಗಿಯೇ ಚಿತ್ರತಂಡಕ್ಕೆ ನಿರಾಸೆ ಮೂಡಿಸಿತ್ತು.

ಈಗ ಸಾಯಿ ಧರಮ್​ ತೇಜ್​ ಚೇತರಿಸಿಕೊಂಡಿದ್ದಾರೆ. ಥಿಯೇಟರ್​ನಲ್ಲಿ ತಮ್ಮ ‘ರಿಪಬ್ಲಿಕ್​’ ಸಿನಿಮಾ ಸೋತಿರುವುದಕ್ಕೆ ಅವರಿಗೆ ಬೇಸರ ಆಗಿದೆ. ಈಗ ಓಟಿಟಿಯಲ್ಲಿ ಪ್ರದರ್ಶನ ಕಾಣಲು ಆ ಚಿತ್ರ ಸಜ್ಜಾಗಿದೆ. ನ.26ರಂದು ಜೀ5 ಮೂಲಕ ‘ರಿಪಬ್ಲಿಕ್​’ ಸಿನಿಮಾ ಪ್ರೇಕ್ಷಕರಿಗೆ ಲಭ್ಯವಾಗಲಿದೆ. ಚಿತ್ರಮಂದಿರದಲ್ಲಿ ಸೋತ ಸಿನಿಮಾವನ್ನು ಜನರು ಓಟಿಟಿ ವೇದಿಕೆಯಲ್ಲಾದರೂ ಕೈ ಹಿಡಿಯಬಹುದು ಎಂಬ ನಿರೀಕ್ಷೆಯಲ್ಲಿ ಅವರ ಅಭಿಮಾನಿಗಳಿದ್ದಾರೆ. ಹಾಗಾಗಿ ಸಾಯಿ ಧರಮ್​ ತೇಜ್​ಗೆ ಇದನ್ನು ಸೆಕೆಂಡ್​ ಚಾನ್ಸ್​ ಎನ್ನಬಹುದು.

ಅ.1ರಂದು ‘ರಿಪಬ್ಲಿಕ್’​ ತೆರೆಕಂಡಿತ್ತು. ಈ ಸಿನಿಮಾದಲ್ಲಿ ಸಾಯಿ ಧರಮ್​ ತೇಜ್​ ಅವರು ಐಎಎಸ್​ ಅಧಿಕಾರಿಯ ಪಾತ್ರ ಮಾಡಿದ್ದಾರೆ. ಆಕ್ಸಿಡೆಂಟ್​ ಆಗುವುದಕ್ಕೂ ಎರಡು ದಿನ ಮುನ್ನ ಕರುನಾಡಿನ ದಿವಂಗತ ಐಎಎಸ್​ ಅಧಿಕಾರಿ ಡಿಕೆ ರವಿಗೆ ಒಂದು ವಿಡಿಯೋ ಮೂಲಕ ಸಾಯಿ ಧರಮ್ ತೇಜ್​ ಅವರು ನಮನ ಸಲ್ಲಿಸಿದ್ದರು. ‘ಥ್ಯಾಂಕ್​ ಯೂ ಕಲೆಕ್ಟರ್​ ಡಿಕೆ ರವಿ’ ಎಂಬ ಕ್ಯಾಪ್ಷನ್​ ಜೊತೆ ಆ ವಿಡಿಯೋವನ್ನು ಸಾಯಿ ಧರಮ್​ ತೇಜ್​ ಶೇರ್​ ಮಾಡಿಕೊಂಡಿದ್ದರು. ಅದರಲ್ಲಿ ಡಿಕೆ ರವಿ ಅವರ ಅಪರೂಪದ ಮಾತುಗಳು ಇವೆ. ಅವರ ದಿಟ್ಟತನ ಮತ್ತು ಸಾಧನೆಗಳ ಬಗ್ಗೆ ಮಾಹಿತಿ ಇದೆ. ಡಿವಿ ರವಿ ಅವರನ್ನು ಧೀರ ಯೋಧ ಎಂದು ಸಾಯಿ ಧರಮ್​ ತೇಜ್ ಬಣ್ಣಿಸಿದ್ದರು. ಆ ಮೂಲಕ ಅವರು ಕರುನಾಡಿನ ದಕ್ಷ ಅಧಿಕಾರಿಗೆ ನಮನ ಸಲ್ಲಿಸಿದ್ದರು. ಅದಾಗಿ ಎರಡು ದಿನ ಕಳೆಯುವುದರೊಳಗೆ ಸಾಯಿ ಧರಮ್​ ತೇಜ್​ಗೆ ರಸ್ತೆ ಅಪಘಾತ ಆಗಿತ್ತು.

ಇದನ್ನೂ ಓದಿ:

ಪುನೀತ್​ ಬಗ್ಗೆ ಅವಹೇಳನಕಾರಿ ಪೋಸ್ಟ್​ ಮಾಡಿದ್ದ ವ್ಯಕ್ತಿ ಅರೆಸ್ಟ್​; ಸೈಬರ್​ ಪೊಲೀಸರ ಬಲೆಗೆ ಬಿದ್ದ ಕಿಡಿಗೇಡಿ

ಪುನೀತ್​ ಅವರ 2 ಕಣ್ಣನ್ನು 4 ಜನರಿಗೆ ಜೋಡಿಸಿದ್ದು ಹೇಗೆ? ವೈದ್ಯರು ತೆರೆದಿಟ್ಟ ಅಚ್ಚರಿ ಮಾಹಿತಿ ಇಲ್ಲಿದೆ

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ