Sai Dharam Tej: ಆಕ್ಸಿಡೆಂಟ್​ ಆದರೂ ಕನಿಕರ ತೋರದ ಪ್ರೇಕ್ಷಕರು; ನಟ ಸಾಯಿ ಧರಮ್​ ತೇಜ್​ಗೆ ನ.26ಕ್ಕೆ ಇನ್ನೊಂದು ಚಾನ್ಸ್​

| Updated By: ಮದನ್​ ಕುಮಾರ್​

Updated on: Nov 02, 2021 | 1:41 PM

Republic on Zee5: ಸಾಯಿ ಧರಮ್​ ತೇಜ್​ಗೆ ಆಕ್ಸಿಡೆಂಟ್​ ಆದಾಗ ಅವರು ಬೇಗ ಗುಣಮುಖರಾಗಲಿ ಎಂದು ಅನೇಕ ಅಭಿಮಾನಿಗಳು ಪ್ರಾರ್ಥನೆ ಮಾಡಿಕೊಂಡಿದ್ದರು. ಆ ಕಷ್ಟದ ಪರಿಸ್ಥಿತಿಯಲ್ಲೇ ‘ರಿಪಬ್ಲಿಕ್​’ ಸಿನಿಮಾವನ್ನು ಬಿಡುಗಡೆ ಮಾಡಲಾಗಿತ್ತು.

Sai Dharam Tej: ಆಕ್ಸಿಡೆಂಟ್​ ಆದರೂ ಕನಿಕರ ತೋರದ ಪ್ರೇಕ್ಷಕರು; ನಟ ಸಾಯಿ ಧರಮ್​ ತೇಜ್​ಗೆ ನ.26ಕ್ಕೆ ಇನ್ನೊಂದು ಚಾನ್ಸ್​
ಸಾಯಿ ಧರಮ್​ತೇಜ
Follow us on

ನಟ ಸಾಯಿ ಧರಮ್​ ತೇಜ್​ ಅವರು ಕಳೆದ ಕೆಲವು ತಿಂಗಳಿಂದ ಅನೇಕ ಏಳು-ಬೀಳುಗಳನ್ನು ಕಂಡಿದ್ದಾರೆ. ಸೆಪ್ಟೆಂಬರ್​ 10ರಂದು ಅವರಿಗೆ ಹೈದರಾಬಾದ್​ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಹಲವು ದಿನಗಳ ಕಾಲ ಅವರ ಕೋಮಾ ಸ್ಥಿತಿಯಲ್ಲಿ ಇದ್ದರು. ಸಾಯಿ ಧರಮ್​ ತೇಜ್​ ಪ್ರಜ್ಞಾಹೀನ ಸ್ಥಿತಿಯಲ್ಲಿ ಇರುವಾಗಲೇ ಅವರ ‘ರಿಪಬ್ಲಿಕ್​’ ಸಿನಿಮಾ ಬಿಡುಗಡೆ ಆಗಿತ್ತು. ಆದರೆ ಪ್ರೇಕ್ಷಕರಿಂದ ಆ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿರಲಿಲ್ಲ. ಈಗ ಆ ಚಿತ್ರ ಓಟಿಟಿ ಪ್ಲಾಟ್​ಫಾರ್ಮ್​ಗೆ ಕಾಲಿಡುತ್ತಿದೆ.

ಸಾಯಿ ಧರಮ್​ ತೇಜ್​ಗೆ ಆಕ್ಸಿಡೆಂಟ್​ ಆದಾಗ ಅವರು ಬೇಗ ಗುಣಮುಖರಾಗಲಿ ಎಂದು ಅನೇಕ ಅಭಿಮಾನಿಗಳು ಪ್ರಾರ್ಥನೆ ಮಾಡಿಕೊಂಡಿದ್ದರು. ಆ ಕಷ್ಟದ ಪರಿಸ್ಥಿತಿಯಲ್ಲೇ ‘ರಿಪಬ್ಲಿಕ್​’ ಸಿನಿಮಾವನ್ನು ಬಿಡುಗಡೆ ಮಾಡಲು ನಿರ್ಮಾಪಕರು ತೀರ್ಮಾನಿಸಿದ್ದರು. ಕೋಮದಲ್ಲಿ ಇರುವ ಸಾಯಿ ಧರಮ್​ ತೇಜ್​ ಮೇಲಿನ ಕನಿಕರದ ಕಾರಣದಿಂದಲಾದರೂ ಪ್ರೇಕ್ಷಕರು ಬಂದು ಆ ಸಿನಿಮಾವನ್ನು ನೋಡುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಆ ನಂಬಿಕೆ ಸುಳ್ಳಾಯಿತು. ಇದು ಸಹಜವಾಗಿಯೇ ಚಿತ್ರತಂಡಕ್ಕೆ ನಿರಾಸೆ ಮೂಡಿಸಿತ್ತು.

ಈಗ ಸಾಯಿ ಧರಮ್​ ತೇಜ್​ ಚೇತರಿಸಿಕೊಂಡಿದ್ದಾರೆ. ಥಿಯೇಟರ್​ನಲ್ಲಿ ತಮ್ಮ ‘ರಿಪಬ್ಲಿಕ್​’ ಸಿನಿಮಾ ಸೋತಿರುವುದಕ್ಕೆ ಅವರಿಗೆ ಬೇಸರ ಆಗಿದೆ. ಈಗ ಓಟಿಟಿಯಲ್ಲಿ ಪ್ರದರ್ಶನ ಕಾಣಲು ಆ ಚಿತ್ರ ಸಜ್ಜಾಗಿದೆ. ನ.26ರಂದು ಜೀ5 ಮೂಲಕ ‘ರಿಪಬ್ಲಿಕ್​’ ಸಿನಿಮಾ ಪ್ರೇಕ್ಷಕರಿಗೆ ಲಭ್ಯವಾಗಲಿದೆ. ಚಿತ್ರಮಂದಿರದಲ್ಲಿ ಸೋತ ಸಿನಿಮಾವನ್ನು ಜನರು ಓಟಿಟಿ ವೇದಿಕೆಯಲ್ಲಾದರೂ ಕೈ ಹಿಡಿಯಬಹುದು ಎಂಬ ನಿರೀಕ್ಷೆಯಲ್ಲಿ ಅವರ ಅಭಿಮಾನಿಗಳಿದ್ದಾರೆ. ಹಾಗಾಗಿ ಸಾಯಿ ಧರಮ್​ ತೇಜ್​ಗೆ ಇದನ್ನು ಸೆಕೆಂಡ್​ ಚಾನ್ಸ್​ ಎನ್ನಬಹುದು.

ಅ.1ರಂದು ‘ರಿಪಬ್ಲಿಕ್’​ ತೆರೆಕಂಡಿತ್ತು. ಈ ಸಿನಿಮಾದಲ್ಲಿ ಸಾಯಿ ಧರಮ್​ ತೇಜ್​ ಅವರು ಐಎಎಸ್​ ಅಧಿಕಾರಿಯ ಪಾತ್ರ ಮಾಡಿದ್ದಾರೆ. ಆಕ್ಸಿಡೆಂಟ್​ ಆಗುವುದಕ್ಕೂ ಎರಡು ದಿನ ಮುನ್ನ ಕರುನಾಡಿನ ದಿವಂಗತ ಐಎಎಸ್​ ಅಧಿಕಾರಿ ಡಿಕೆ ರವಿಗೆ ಒಂದು ವಿಡಿಯೋ ಮೂಲಕ ಸಾಯಿ ಧರಮ್ ತೇಜ್​ ಅವರು ನಮನ ಸಲ್ಲಿಸಿದ್ದರು. ‘ಥ್ಯಾಂಕ್​ ಯೂ ಕಲೆಕ್ಟರ್​ ಡಿಕೆ ರವಿ’ ಎಂಬ ಕ್ಯಾಪ್ಷನ್​ ಜೊತೆ ಆ ವಿಡಿಯೋವನ್ನು ಸಾಯಿ ಧರಮ್​ ತೇಜ್​ ಶೇರ್​ ಮಾಡಿಕೊಂಡಿದ್ದರು. ಅದರಲ್ಲಿ ಡಿಕೆ ರವಿ ಅವರ ಅಪರೂಪದ ಮಾತುಗಳು ಇವೆ. ಅವರ ದಿಟ್ಟತನ ಮತ್ತು ಸಾಧನೆಗಳ ಬಗ್ಗೆ ಮಾಹಿತಿ ಇದೆ. ಡಿವಿ ರವಿ ಅವರನ್ನು ಧೀರ ಯೋಧ ಎಂದು ಸಾಯಿ ಧರಮ್​ ತೇಜ್ ಬಣ್ಣಿಸಿದ್ದರು. ಆ ಮೂಲಕ ಅವರು ಕರುನಾಡಿನ ದಕ್ಷ ಅಧಿಕಾರಿಗೆ ನಮನ ಸಲ್ಲಿಸಿದ್ದರು. ಅದಾಗಿ ಎರಡು ದಿನ ಕಳೆಯುವುದರೊಳಗೆ ಸಾಯಿ ಧರಮ್​ ತೇಜ್​ಗೆ ರಸ್ತೆ ಅಪಘಾತ ಆಗಿತ್ತು.

ಇದನ್ನೂ ಓದಿ:

ಪುನೀತ್​ ಬಗ್ಗೆ ಅವಹೇಳನಕಾರಿ ಪೋಸ್ಟ್​ ಮಾಡಿದ್ದ ವ್ಯಕ್ತಿ ಅರೆಸ್ಟ್​; ಸೈಬರ್​ ಪೊಲೀಸರ ಬಲೆಗೆ ಬಿದ್ದ ಕಿಡಿಗೇಡಿ

ಪುನೀತ್​ ಅವರ 2 ಕಣ್ಣನ್ನು 4 ಜನರಿಗೆ ಜೋಡಿಸಿದ್ದು ಹೇಗೆ? ವೈದ್ಯರು ತೆರೆದಿಟ್ಟ ಅಚ್ಚರಿ ಮಾಹಿತಿ ಇಲ್ಲಿದೆ