AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಕ್ಸಿಡೆಂಟ್​ ಬಳಿಕ ಥಿಯೇಟರ್​ನಲ್ಲಿ ಸೋತು ಓಟಿಟಿಯಲ್ಲಿ ದಾಖಲೆ ಮಾಡಿದ ಸಾಯಿ ಧರಮ್​ ತೇಜ್​ ಚಿತ್ರ ‘ರಿಪಬ್ಲಿಕ್​’

Republic Movie | Zee5: ನ.26ರಂದು ಜೀ5 ಮೂಲಕ ‘ರಿಪಬ್ಲಿಕ್​’ ಸಿನಿಮಾ ಪ್ರಸಾರ ಆರಂಭಿಸಿತು. ಪ್ರೇಕ್ಷಕರು ಈ ಚಿತ್ರವನ್ನು ಮುಗಿಬಿದ್ದು ನೋಡಿದ್ದಾರೆ. ಹಾಗಾಗಿ ದಾಖಲೆ ಪ್ರಮಾಣದಲ್ಲಿ ‘ರಿಪಬ್ಲಿಕ್​’ ವೀಕ್ಷಣೆ ಕಂಡಿದೆ.

ಆ್ಯಕ್ಸಿಡೆಂಟ್​ ಬಳಿಕ ಥಿಯೇಟರ್​ನಲ್ಲಿ ಸೋತು ಓಟಿಟಿಯಲ್ಲಿ ದಾಖಲೆ ಮಾಡಿದ ಸಾಯಿ ಧರಮ್​ ತೇಜ್​ ಚಿತ್ರ ‘ರಿಪಬ್ಲಿಕ್​’
ಸಾಯಿ ಧರಮ್ ತೇಜ್
TV9 Web
| Edited By: |

Updated on: Dec 08, 2021 | 9:13 AM

Share

ಟಾಲಿವುಡ್ (Tollywood)​ ನಟ ಸಾಯಿ ಧರಮ್​ ತೇಜ್​ (Sai Dharam Tej) ಅವರು ಬಹಳ ನಿರೀಕ್ಷೆ ಇಟ್ಟುಕೊಂಡು ‘ರಿಪಬ್ಲಿಕ್​’ ಸಿನಿಮಾ ಮಾಡಿದ್ದರು. ಆದರೆ ಆ ಚಿತ್ರ ಬಿಡುಗಡೆ ಆಗುವುದಕ್ಕಿಂತ ಮುನ್ನವೇ ಅವರಿಗೆ ಆ್ಯಕ್ಸಿಡೆಂಟ್​ ಆಗಿತ್ತು. ಸೆಪ್ಟೆಂಬರ್​ 10ರಂದು ಅವರಿಗೆ ಹೈದರಾಬಾದ್​ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಹಲವು ದಿನಗಳ ಕಾಲ ಅವರ ಕೋಮಾ ಸ್ಥಿತಿಯಲ್ಲಿ ಇದ್ದರು. ಸಾಯಿ ಧರಮ್​ ತೇಜ್​ ಪ್ರಜ್ಞಾಹೀನ ಸ್ಥಿತಿಯಲ್ಲಿ ಇರುವಾಗಲೇ ಅವರ ‘ರಿಪಬ್ಲಿಕ್​’ ಸಿನಿಮಾ (Republic Movie) ಬಿಡುಗಡೆ ಆಗಿತ್ತು. ಆದರೆ ಪ್ರೇಕ್ಷಕರಿಂದ ಆ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿರಲಿಲ್ಲ. ಇದು ಅವರ ಅಭಿಮಾನಿಗಳಿ ಸಖತ್​ ಬೇಸರ ಮೂಡಿಸಿತ್ತು. ಆದರೆ ಈಗ ಆ ಬೇಸರವನ್ನು ಮರೆಸುವಂತಹ ಸುದ್ದಿ ಕೇಳಿಬಂದಿದೆ. ಜೀ5 (Zee5) ಮೂಲಕ ಬಿಡುಗಡೆ ಆಗಿದ್ದ ಈ ಚಿತ್ರ ಒಂದು ಸಾಧನೆ ಮಾಡಿದೆ. ಓಟಿಟಿ ಪ್ಲಾಟ್​ಫಾರ್ಮ್​ನಲ್ಲಿ (OTT platform) ಸಾಯಿ ಧರಮ್​ ತೇಜ್​ ಅವರಿಗೆ ಗೆಲುವು ಸಿಕ್ಕಿದೆ. 

ನ.26ರಂದು ಜೀ5 ಮೂಲಕ ‘ರಿಪಬ್ಲಿಕ್​’ ಸಿನಿಮಾ ಪ್ರಸಾರ ಆರಂಭಿಸಿತು. ಪ್ರೇಕ್ಷಕರು ಈ ಚಿತ್ರವನ್ನು ಮುಗಿಬಿದ್ದು ನೋಡಿದ್ದಾರೆ. ಚಿತ್ರಮಂದಿರಕ್ಕೆ ಬರಲು ಹಿಂದೇಟು ಹಾಕಿದ್ದವರೆಲ್ಲರೂ ಮನೆಯಲ್ಲೇ ಕುಳಿತು ಈ ಸಿನಿಮಾ ವೀಕ್ಷಿಸಿದ್ದಾರೆ. ಹಾಗಾಗಿ ದಾಖಲೆ ಪ್ರಮಾಣದಲ್ಲಿ ‘ರಿಪಬ್ಲಿಕ್​’ ವೀಕ್ಷಣೆ ಕಂಡಿದೆ. 7 ದಿನಗಳಲ್ಲಿ ಈ ಸಿನಿಮಾ 12 ಕೋಟಿ ನಿಮಿಷಗಳಷ್ಟು ವೀಕ್ಷಣೆ ಆಗಿದೆ. ತೆಲುಗು ಚಿತ್ರರಂಗದಲ್ಲಿ ಇದೊಂದು ದಾಖಲೆ ಎಂದು ಹೇಳಲಾಗುತ್ತಿದೆ.

‘ರಿಪಬ್ಲಿಕ್​’ ಸಿನಿಮಾದಲ್ಲಿ ಐಎಎಸ್​ ಅಧಿಕಾರಿಯ ಕಥೆ ಇದೆ. ಹಾಗಾಗಿ ಕರುನಾಡಿನ ನಿಷ್ಠಾವಂತ ಐಎಎಸ್​ ಅಧಿಕಾರಿ, ದಿವಗಂತ ಡಿಕೆ ರವಿ ಅವರಿಗೆ ಈ ಸಿನಿಮಾತಂಡದಿಂದ ಒಂದು ವಿಡಿಯೋ ಮೂಲಕ ಗೌರವ ಸಲ್ಲಿಸಲಾಗಿತ್ತು. ಓಟಿಟಿಯಲ್ಲಿ ಚಿತ್ರ ಬಿಡುಗಡೆ ಆಗುವುದಕ್ಕೂ ಮುನ್ನ ಜೀ5 ಮೂಲಕ ಉತ್ತಮವಾಗಿ ಪ್ರಚಾರ ಮಾಡಲಾಯಿತು. ಎಲ್ಲದರ ಪರಿಣಾಮವಾಗಿ ಕೇವಲ 7 ದಿನದಲ್ಲಿ 12 ಕೋಟಿ ನಿಮಿಷಗಳಷ್ಟು ವೀಕ್ಷಣೆ ಕಾಣುವ ಮೂಲಕ ಸಾಯಿ ಧರಮ್​ ಪಾಲಿಗೆ ಈ ಸಿನಿಮಾ ದೊಡ್ಡ ಯಶಸ್ಸು ತಂದುಕೊಟ್ಟಿದೆ.

ಬೈಕ್​ ಅಪಘಾತದ ಬಳಿಕ ಒಂದು ತಿಂಗಳಿಗೂ ಹೆಚ್ಚು ದಿನಗಳ ಕಾಲ ಸಾಯಿ ಧರಮ್​ ತೇಜ್​ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಅವರು ಈಗ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಅ.15ರಂದು ಸಾಯಿ ಧರಮ್​ ತೇಜ್​ ಜನ್ಮದಿನ. ಆ ಪ್ರಯುಕ್ತ ಅವರ ಮಾವ ‘ಮೆಗಾ ಸ್ಟಾರ್​’ ಚಿರಂಜೀವಿ ವಿಶ್​ ಮಾಡಿದ್ದರು. ‘ಈ ಬಾರಿ ವಿಜಯ ದಶಮಿಯ ವಿಶೇಷ ಏನೆಂದರೆ, ಸಾಯಿ ಧರಮ್​ ತೇಜ್​ ಸಂಪೂರ್ಣ ಗುಣಮುಖರಾಗಿ ಮನೆಗೆ ಬರುತ್ತಿದ್ದಾರೆ. ಭೀಕರ ಬೈಕ್​ ಅಪಘಾತದಲ್ಲಿ ಅವರು ಬದುಕಿ ಬಂದಿದ್ದಾರೆ. ಇದು ನಮ್ಮೆಲ್ಲರಿಗೂ ಖುಷಿ ನೀಡಿದೆ. ಅವರಿಗೆ ಇದು ಪುನರ್ಜನ್ಮ’ ಎಂದು ಚಿರಂಜೀವಿ ಟ್ವೀಟ್​ ಮಾಡಿದ್ದರು.

ಇದನ್ನೂ ಓದಿ:

ಓಟಿಟಿಯಲ್ಲಿ ಡಿಸೆಂಬರ್ ಧಮಾಕಾ; ಮನರಂಜನೆ ನೀಡಲು ಬರುತ್ತಿವೆ ಬಹುನಿರೀಕ್ಷಿತ ಸಿನಿಮಾ, ವೆಬ್​ ಸಿರೀಸ್

ಒಟಿಟಿಯಲ್ಲಿ ರಿಲೀಸ್​ ಆದ ‘ಕೋಟಿಗೊಬ್ಬ 3’ ಚಿತ್ರಕ್ಕೆ ಬರುತ್ತಿದೆ ಉತ್ತಮ ಪ್ರತಿಕ್ರಿಯೆ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ