‘ರಾಮಾಯಣ’ ನಟಿ ಸಾಯಿ ಪಲ್ಲವಿ ಅಭಿನಯದ ಇನ್ನೊಂದು ಚಿತ್ರ 40 ಕೋಟಿ ರೂ.ಗೆ ಸೇಲ್​

‘ತಂಡೇಲ್​’ ಸಿನಿಮಾದಲ್ಲಿ ಸಾಯಿ ಪಲ್ಲವಿ ಹಾಗೂ ನಾಗ ಚೈತನ್ಯ ನಟಿಸಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಇನ್ನೂ ಮುಗಿದಿಲ್ಲ. ಅಷ್ಟರಲ್ಲಾಗಲೇ ಒಟಿಟಿ ಪ್ರಸಾರ ಹಕ್ಕುಗಳು ಮಾರಾಟ ಆಗಿವೆ. 40 ಕೋಟಿ ರೂಪಾಯಿಗೆ ಈ ಡೀಲ್​ ನಡೆದಿದೆ. ನೈಜ ಘಟನೆ ಆಧಾರಿತ ಈ ಸಿನಿಮಾದಲ್ಲಿ ನಾಗ ಚೈತನ್ಯ ಅವರಿಗೆ ಡಿಫರೆಂಟ್​ ಪಾತ್ರವಿದೆ. ಈ ವರ್ಷವೇ ‘ತಂಡೇಲ್​’ ಸಿನಿಮಾ ಬಿಡುಗಡೆ ಆಗಲಿದೆ.

‘ರಾಮಾಯಣ’ ನಟಿ ಸಾಯಿ ಪಲ್ಲವಿ ಅಭಿನಯದ ಇನ್ನೊಂದು ಚಿತ್ರ 40 ಕೋಟಿ ರೂ.ಗೆ ಸೇಲ್​
ಸಾಯಿ ಪಲ್ಲವಿ
Follow us
|

Updated on: Apr 29, 2024 | 8:10 PM

ನಟಿ ಸಾಯಿ ಪಲ್ಲವಿ (Sai Pallavi) ಅವರಿಗೆ ಭರ್ಜರಿ ಡಿಮ್ಯಾಂಡ್​ ಇದೆ. ಯಾವ ಪಾತ್ರ ಕೊಟ್ಟರೂ ನ್ಯಾಯ ಒದಗಿಸುವ ಕಲಾವಿದೆ ಅವರು. ಈಗ ಅವರು ‘ರಾಮಾಯಣ’ ಚಿತ್ರದಲ್ಲಿ ಸೀತೆಯ ಪಾತ್ರ ಮಾಡುತ್ತಿದ್ದಾರೆ. ಇದರಿಂದಾಗಿ ಅವರ ಖ್ಯಾತಿ ಇನ್ನಷ್ಟು ಹೆಚ್ಚಾಗಿದೆ. ಹಾಗಾಗಿ ಸಾಯಿ ಪಲ್ಲವಿ ಅಭಿನಯದ ಇತರೆ ಸಿನಿಮಾಗಳಿಗೂ ಬೇಡಿಕೆ ಹೆಚ್ಚಾಗಿದೆ. ಈ ಬಗ್ಗೆ ಹೊಸ ನ್ಯೂಸ್​ ಕೇಳಿಬಂದಿದೆ. ಸಾಯಿ ಪಲ್ಲವಿ ಹಾಗೂ ನಾಗ ಚೈತನ್ಯ (Naga Chaitanya) ನಟನೆಯ ‘ತಂಡೇಲ್​’ (Thandel) ಸಿನಿಮಾದ ಡಿಜಿಟಲ್​ ಪ್ರಸಾರ ಹಕ್ಕು 40 ಕೋಟಿ ರೂಪಾಯಿಗೆ ಮಾರಾಟ ಆಗಿದೆ. ಚಿತ್ರತಂಡವೇ ಈ ಅಧಿಕೃತ ಮಾಹಿತಿ ಹಂಚಿಕೊಂಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಸಾಯಿ ಪಲ್ಲವಿ ಮತ್ತು ನಾಗ ಚೈತನ್ಯ ಅವರಿಗೆ ‘ತಂಡೇಲ್’ ಸಿನಿಮಾದಲ್ಲಿ ಡಿಫರೆಂಟ್​ ಗೆಟಪ್​ ಇದೆ. ಮೀನುಗಾರರ ಬದುಕಿನ ಕಹಾನಿ ಈ ಸಿನಿಮಾದಲ್ಲಿ ಇರಲಿದೆ. ಸಾಯಿ ಪಲ್ಲವಿ ಮಾತ್ರವಲ್ಲದೇ ನಾಗ ಚೈತನ್ಯ ಅವರ ಪಾಲಿಗೂ ಈ ಸಿನಿಮಾ ತುಂಬ ಸ್ಪೆಷಲ್​ ಆಗಿದೆ. ಅವರ ವೃತ್ತಿಜೀವನದಲ್ಲಿ ಅತಿ ಹೆಚ್ಚು ಬೆಲೆಗೆ ಮಾರಾಟವಾದ ಸಿನಿಮಾ ಎಂಬ ಖ್ಯಾತಿಗೆ ‘ತಂಡೇಲ್​’ ಪಾತ್ರವಾಗಿದೆ.

‘ತಂಡೇಲ್​’ ಸಿನಿಮಾದ ಹಿಂದಿ ಮತ್ತು ದಕ್ಷಿಣ ಭಾರತದ ಎಲ್ಲ ಭಾಷೆಗಳ ವರ್ಷನ್​ ಅನ್ನು ನೆಟ್​ಫ್ಲಿಕ್ಸ್​ ಖರೀದಿಸಿದೆ. ಈ ಮೊದಲು ಸಾಯಿ ಪಲ್ಲವಿ ಮತ್ತು ನಾಗ ಚೈತನ್ಯ ಅವರು ‘ಲವ್​ ಸ್ಟೋರಿ’ ಸಿನಿಮಾದಲ್ಲಿ ಜೊತೆಯಾಗಿ ನಟಿಸಿದ್ದರು. ಈ ಜೋಡಿ ಎಂದರೆ ಅಭಿಮಾನಿಗಳಿಗೆ ಸಖತ್​ ಇಷ್ಟ. ‘ನೀವು ನಿಜ ಜೀವನದಲ್ಲಿಯೂ ಒಂದಾಗಬೇಕು’ ಎಂದು ಕಮೆಂಟ್​ ಮಾಡಿದ ಅನೇಕರಿದ್ದಾರೆ. ‘ತಂಡೇಲ್​’ ಚಿತ್ರದಲ್ಲಿ ಮತ್ತೊಮ್ಮೆ ಅವರನ್ನು ಜೋಡಿಯಾಗಿ ನೋಡಲು ಫ್ಯಾನ್ಸ್​ ಕಾದಿದ್ದಾರೆ.

ಇದನ್ನೂ ಓದಿ: ಒಂದೇ ವೇದಿಕೆಯಲ್ಲಿ ಮಾಜಿ ದಂಪತಿ ಸಮಂತಾ-ನಾಗ ಚೈತನ್ಯ? ಆದರೆ ಒಂದು ಟ್ವಿಸ್ಟ್​

ಒಟಿಟಿಯಲ್ಲಿ ‘ತಂಡೇಲ್​’ ಚಿತ್ರಕ್ಕೆ ಈ ಪರಿ ಬೇಡಿಕೆ ಬರಲು ಇನ್ನೊಂದು ಕಾರಣ ಇದೆ. ನಾಗ ಚೈತನ್ಯ ಅವರು ಒಟಿಟಿಯಲ್ಲಿ ಫೇಮಸ್​ ಆಗಿದ್ದಾರೆ. ಅವರು ನಟಿಸಿದ ‘ಧೂತ’ ವೆಬ್​ ಸರಣಿಯು ಜನಮನ ಗೆದ್ದಿದೆ. ಹಾಗಾಗಿ ಅವರ ಡಿಮ್ಯಾಂಡ್​ ಜಾಸ್ತಿ ಆಗಿದೆ. ನೈಜ ಘಟನೆ ಆಧರಿಸಿ ‘ತಂಡೇಲ್​’ ಸಿನಿಮಾ ಮೂಡಿಬರುತ್ತಿದೆ. ಈ ಸಿನಿಮಾದ ಶೂಟಿಂಗ್​ ಇನ್ನೂ ಪೂರ್ಣಗೊಂಡಿಲ್ಲ. ಅಷ್ಟರಲ್ಲಾಗಲೇ ಈ ಪರಿ ಬೇಡಿಕೆ ಬಂದಿರುವುದು ಚಿತ್ರತಂಡದ ಖುಷಿಗೆ ಕಾರಣ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು