AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virata Parvam OTT Release: ಥಿಯೇಟರ್​ನಲ್ಲಿ ಸೋತ ಸಾಯಿ ಪಲ್ಲವಿಯ ‘ವಿರಾಟ ಪರ್ವಂ’ ಚಿತ್ರಕ್ಕೀಗ ಒಟಿಟಿಯೇ ಗತಿ; ಪ್ರಸಾರ​ ಯಾವಾಗ?

Sai Pallavi | Rana Daggubati: ಜೂನ್​ 17ರಂದು ‘ವಿರಾಟ ಪರ್ವಂ’ ಸಿನಿಮಾ ತೆರೆಕಂಡಿತ್ತು. ಒಂದು ತಿಂಗಳು ಕಳೆಯೋದರೊಳಗೆ ಈ ಚಿತ್ರ ಒಟಿಟಿ ಅಂಗಳಕ್ಕೆ ಕಾಲಿಡುತ್ತಿದೆ.

Virata Parvam OTT Release: ಥಿಯೇಟರ್​ನಲ್ಲಿ ಸೋತ ಸಾಯಿ ಪಲ್ಲವಿಯ ‘ವಿರಾಟ ಪರ್ವಂ’ ಚಿತ್ರಕ್ಕೀಗ ಒಟಿಟಿಯೇ ಗತಿ; ಪ್ರಸಾರ​ ಯಾವಾಗ?
ರಾಣಾ ದಗ್ಗುಬಾಟಿ, ಸಾಯಿ ಪಲ್ಲವಿ
TV9 Web
| Edited By: |

Updated on:Jun 30, 2022 | 10:33 AM

Share

ನಟಿ ಸಾಯಿ ಪಲ್ಲವಿ (Sai Pallavi) ಅವರ ಸಿನಿಮಾ ಮೇಲೆ ಅಭಿಮಾನಿಗಳು ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿರುತ್ತಾರೆ. ಅವರ ಚಿತ್ರಗಳು ಬಾಕ್ಸ್​ ಆಫೀಸ್​ನಲ್ಲಿ ಮಿನಿಮಮ್​​ ಬಿಸ್ನೆಸ್​ ಮಾಡುತ್ತವೆ ಎಂಬ ಭರವಸೆ ನಿರ್ಮಾಪಕರಲ್ಲಿ ಇತ್ತು. ಆದರೆ ‘ವಿರಾಟ ಪರ್ವಂ’  (Virata Parvam) ಸಿನಿಮಾ ವಿಚಾರದಲ್ಲಿ ಅದು ಸುಳ್ಳಾಯಿತು. ಹಲವು ಕಾರಣಗಳಿಂದಾಗಿ ಈ ಸಿನಿಮಾ ಗೆಲ್ಲಲೇ ಇಲ್ಲ. ‘ವಿರಾಟ ಪರ್ವಂ’ ಬಿಡುಗಡೆಯ ಸಂದರ್ಭದಲ್ಲಿ ಸಾಯಿ ಪಲ್ಲವಿ ಅವರ ಒಂದು ಹೇಳಿಕೆಯಿಂದ ವಿವಾದ ಸೃಷ್ಟಿ ಆಗಿದ್ದು ಕೂಡ ಈ ಸೋಲಿಗೆ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ. ಈ ಚಿತ್ರದಲ್ಲಿ ರಾಣಾ ದಗ್ಗುಬಾಟಿ ಹೀರೋ ಆಗಿ ನಟಿಸಿದ್ದಾರೆ. ಥಿಯೇಟರ್​ನಲ್ಲಿ ಸೋತ ‘ವಿರಾಟ ಪರ್ವಂ’ ಸಿನಿಮಾಗೆ ಈಗ ಉಳಿದಿರುವುದು ಒಟಿಟಿ (OTT) ಆಯ್ಕೆ ಮಾತ್ರ. ಜುಲೈ 1ರಿಂದ ನೆಟ್​ಫಿಕ್ಸ್​ ಮೂಲಕ ಈ ಸಿನಿಮಾದ ಸ್ಟ್ರೀಮಿಂಗ್ ಆರಂಭ​ ಆಗಲಿದೆ.

ಜೂನ್ 17ರಂದು ‘ವಿರಾಟ ಪರ್ವಂ’ ಚಿತ್ರ ಬಿಡುಗಡೆ ಆಯಿತು. ನಕ್ಸಲೈಟ್​ ಪಾತ್ರದಲ್ಲಿ ರಾಣಾ ದಗ್ಗುಬಾಟಿ ಕಾಣಿಸಿಕೊಂಡರೆ, ಅವರ ಪ್ರೇಯಸಿಯಾಗಿ ಸಾಯಿ ಪಲ್ಲವಿ ನಟಿಸಿದರು. ಟ್ರೇಲರ್​ನಲ್ಲಿ ಸಾಯಿ ಪಲ್ಲವಿ ಪಾತ್ರವೇ ಹೆಚ್ಚು ಹೈಲೈಟ್​ ಆಗಿತ್ತು. ನಿರೀಕ್ಷೆಯಂತೆ ಸಿನಿಮಾದಲ್ಲಿಯೂ ಅವರು ಆವರಿಸಿಕೊಂಡಿದ್ದರು. ಆದರೂ ಕೂಡ ಅವರ ಅಭಿಮಾನಿಗಳಿಗೆ ಈ ಸಿನಿಮಾ ಇಷ್ಟ ಆಗಲಿಲ್ಲ.

1990ರ ಸಮಯದಲ್ಲಿ ತೆಲಂಗಾಣದಲ್ಲಿ ನಡೆದ ಕೆಲವು ಸತ್ಯ ಘಟನೆಗಳನ್ನು ಆಧರಿಸಿ ‘ವಿರಾಟ ಪರ್ವಂ’ ಸಿನಿಮಾ ಮೂಡಿಬಂದಿದೆ. ವೇಣು ಉಡುಗುಲ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ರಾಣಾ ದಗ್ಗುಬಾಟಿ ಅವರ ಹೋಮ್​ ಬ್ಯಾನರ್​ ಮೂಲಕವೇ ಈ ಸಿನಿಮಾ ನಿರ್ಮಾಣ ಆಗಿದೆ. ಪ್ರಿಯಾಮಣಿ, ನಂದಿತಾ ದಾಸ್​, ಈಶ್ವರಿ ರಾವ್​ ಮುಂತಾದ ಪ್ರತಿಭಾವಂತ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಚಿತ್ರಮಂದಿರದಲ್ಲಿ ಸೋತ ಈ ಚಿತ್ರವನ್ನು ಒಟಿಟಿಯಲ್ಲಾದರೂ ಪ್ರೇಕ್ಷಕರು ಕೈ ಹಿಡಿಯುತ್ತಾರಾ ಎಂಬ ಕೌತುಕ ಈಗ ಮೂಡಿದೆ.

ಇದನ್ನೂ ಓದಿ
Image
Bhool Bhulaiyaa 2: ಒಟಿಟಿಗೆ ಬರ್ತಿದೆ ‘ಭೂಲ್​ ಭುಲಯ್ಯ 2’; ಕಾರ್ತಿಕ್​ ಆರ್ಯನ್​ ಫ್ಯಾನ್ಸ್​ಗೆ ಸಿಹಿ ಸುದ್ದಿ​ ನೀಡಿದ ನೆಟ್​ಫ್ಲಿಕ್ಸ್​
Image
ಒಟಿಟಿ ಪ್ಲಾಟ್​ಫಾರ್ಮ್​ನಲ್ಲಿ 200 ಕೋಟಿ ರೂಪಾಯಿ ಲಾಭ ಮಾಡಿದ ‘ವಿಕ್ರಮ್​’ ಸಿನಿಮಾ
Image
‘ನಾನು ಹಿಂದಿ ಹೀರೋ’ ಎಂದು ಗರ್ವ ತೋರಿಸಿ ಸೋತ ಜಾನ್​ ಅಬ್ರಾಹಂ ಸಿನಿಮಾಗೆ ಈಗ ಒಟಿಟಿ ಮಾತ್ರ ಗತಿ
Image
ಮತ್ತೆ ಹಳೇ ಚಾರ್ಮ್​ ಪಡೆದ ಶಾರುಖ್​ ಖಾನ್​; ‘ಪಠಾಣ್​’ ಚಿತ್ರದ ಒಟಿಟಿ ಪ್ರಸಾರ ಹಕ್ಕು 200 ಕೋಟಿ ರೂ.ಗೆ ಸೇಲ್​?

ಒಂದು ಸಿನಿಮಾ ಸೋತರೇನಂತೆ? ಸಾಯಿ ಪಲ್ಲವಿ ಅವರ ಉತ್ಸಾಹ ಕಡಿಮೆ ಆಗಿಲ್ಲ. ಈಗಾಗಲೇ ಅವರು ಹೊಸ ಚಿತ್ರದತ್ತ ತಮ್ಮ ಗಮನ ಹರಿಸಿದ್ದಾರೆ. ಅವರ ಮುಂದಿನ ಸಿನಿಮಾ ‘ಗಾರ್ಗಿ’ ಬಗ್ಗೆ ದೊಡ್ಡ ನಿರೀಕ್ಷೆ ಇದೆ. ಈ ಸಿನಿಮಾವನ್ನು ರಿಲೀಸ್​ ಮಾಡಲು ಕಾಲಿವುಡ್​ನ ಖ್ಯಾತ ನಟ ಸೂರ್ಯ ಹಾಗೂ ಅವರ ಪತ್ನಿ ಜ್ಯೋತಿಕಾ ಮುಂದೆ ಬಂದಿದ್ದಾರೆ. ಇದರಿಂದ ಸಾಯಿ ಪಲ್ಲವಿ ಅವರ ಬಲ ಹೆಚ್ಚಿದಂತಾಗಿದೆ. ಕನ್ನಡದಲ್ಲೂ ‘ಗಾರ್ಗಿ’ ಚಿತ್ರ ಮೂಡಿಬರುತ್ತಿದೆ.

ಇದನ್ನೂ ಓದಿ: Sai Pallavi: ಥಿಯೇಟರ್​ಗೆ ಜನರನ್ನು ಕರೆಸುವಲ್ಲಿ ಸೋತ ಸಾಯಿ ಪಲ್ಲವಿ; ‘ಲೇಡಿ ಪವರ್​ ಸ್ಟಾರ್​’ ಬಿರುದು ಈಗೇನಾಯ್ತು?

Sai Pallavi: ಸಾಯಿ ಪಲ್ಲವಿ ಬೆಂಬಲಕ್ಕೆ ನಿಂತ ಸಾವಿರಾರು ಮಂದಿ; ಸ್ಪಷ್ಟನೆ ವಿಡಿಯೋ ಕಂಡು ಜನರು ಹೇಳ್ತಿರೋದೇನು?

Published On - 8:31 am, Thu, 30 June 22

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?