AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sai Pallavi: ಯಾರು ಎಷ್ಟೇ ಟೀಕೆ ಮಾಡಿದ್ರೂ ಸಾಯಿ ಪಲ್ಲವಿ ನಂ.1; ಧೂಳೆಬ್ಬಿಸುತ್ತಿದೆ ‘ವಿರಾಟ ಪರ್ವಂ’ ಸಿನಿಮಾ

Sai Pallavi | Virata Parvam: ‘ವಿರಾಟ ಪರ್ವಂ’ ಚಿತ್ರದ ನಟಿ ಸಾಯಿ ಪಲ್ಲವಿ ಅವರು ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಅವರಿಗೆ ಎಷ್ಟು ಡಿಮ್ಯಾಂಡ್​ ಇದೆ ಎಂಬುದಕ್ಕೆ ಈಗ ಹೊಸ ಉದಾಹರಣೆ ಸಿಕ್ಕಿದೆ.​

Sai Pallavi: ಯಾರು ಎಷ್ಟೇ ಟೀಕೆ ಮಾಡಿದ್ರೂ ಸಾಯಿ ಪಲ್ಲವಿ ನಂ.1; ಧೂಳೆಬ್ಬಿಸುತ್ತಿದೆ ‘ವಿರಾಟ ಪರ್ವಂ’ ಸಿನಿಮಾ
ಸಾಯಿ ಪಲ್ಲವಿ
TV9 Web
| Edited By: |

Updated on:Jul 05, 2022 | 8:19 AM

Share

ದಕ್ಷಿಣ ಭಾರತದಲ್ಲಿ ನಟಿ ಸಾಯಿ ಪಲ್ಲವಿ (Sai Pallavi) ಅವರಿಗೆ ಸಖತ್​ ಬೇಡಿಕೆ​ ಇದೆ. ಅವರು ಕೋಟ್ಯಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ಅತ್ಯುತ್ತಮ ನಟನೆ ಮತ್ತು ಸಿಂಪಲ್​ ವ್ಯಕ್ತಿತ್ವದ ಕಾರಣದಿಂದ ಅವರು ಅನೇಕರಿಗೆ ಇಷ್ಟ ಆಗುತ್ತಾರೆ. ಆದರೆ ಇತ್ತೀಚೆಗೆ ಅವರು ನೀಡಿದ ಒಂದು ಹೇಳಿಕೆಯಿಂದ ಗದ್ದಲ ಸೃಷ್ಟಿ ಆಗಿತ್ತು. ಆ ಕಾರಣದಿಂದ ಅವರ ‘ವಿರಾಟ ಪರ್ವಂ’ (Virata Parvam) ಸಿನಿಮಾ ಕೂಡ ಸೊರಗುವಂತಾಯಿತು. ಜೂನ್​ 17ರಂದು ತೆರೆಕಂಡ ಈ ಸಿನಿಮಾಗೆ ಬಾಕ್ಸ್​ ಆಫೀಸ್​ನಲ್ಲಿ ಹೆಚ್ಚು ಆದಾಯ ಹರಿದುಬರಲಿಲ್ಲ. ಆದರೆ ಈಗ ಒಟಿಟಿಯಲ್ಲಿ ಈ ಚಿತ್ರ ಧೂಳೆಬ್ಬಿಸುತ್ತಿದೆ. ನೆಟ್​ಫ್ಲಿಕ್ಸ್ (Netflix) ಮೂಲಕ ಸ್ಟ್ರೀಮಿಂಗ್​ ಆಗುತ್ತಿರುವ ‘ವಿರಾಟ ಪರ್ವಂ’ ಚಿತ್ರವನ್ನು ಜನರು ಮುಗಿಬಿದ್ದು ನೋಡುತ್ತಿದ್ದಾರೆ. ಹಾಗಾಗಿ ಇದು ನಂ.1 ಟ್ರೆಂಡಿಂಗ್​ನಲ್ಲಿದೆ.

‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಬಗ್ಗೆ ಸಾಯಿ ಪಲ್ಲವಿ ನೀಡಿದ್ದ ಹೇಳಿಕೆಯನ್ನು ಅನೇಕರು ವಿರೋಧಿಸಿದ್ದರು. ಅವರ ಆ ಹೇಳಿಕೆಯ ಕಾರಣದಿಂದ ತಾವು ‘ವಿರಾಟ ಪರ್ವಂ’ ಚಿತ್ರವನ್ನು ಬಹಿಷ್ಕಾರ ಮಾಡುವುದಾಗಿ ಹಲವರು ಗುಡುಗಿದ್ದರು. ಆದರೆ ಈಗ ನೆಟ್​ಫ್ಲಿಕ್ಸ್​ನಲ್ಲಿ ಜನರು ಈ ಚಿತ್ರವನ್ನು ಹೆಚ್ಚಾಗಿ ವೀಕ್ಷಿಸುತ್ತಿದ್ದಾರೆ. ಟ್ರೆಂಡಿಂಗ್​ನಲ್ಲಿ ನಂಬರ್​ ಒನ್​ ಆಗಿರುವುದು ಚಿತ್ರತಂಡದ ಸಂತಸಕ್ಕೆ ಕಾರಣ ಆಗಿದೆ. ಯಾರು ಎಷ್ಟೇ ಟೀಕೆ ಮಾಡಿದರೂ ಸಾಯಿ ಪಲ್ಲವಿ ನಂ.1 ಎಂದು ಅಭಿಮಾನಿಗಳು ಖುಷಿಪಡುತ್ತಿದ್ದಾರೆ.

ಇದನ್ನೂ ಓದಿ
Image
Virata Parvam OTT Release: ಥಿಯೇಟರ್​ನಲ್ಲಿ ಸೋತ ಸಾಯಿ ಪಲ್ಲವಿಯ ‘ವಿರಾಟ ಪರ್ವಂ’ ಚಿತ್ರಕ್ಕೀಗ ಒಟಿಟಿಯೇ ಗತಿ; ಪ್ರಸಾರ​ ಯಾವಾಗ?
Image
Sai Pallavi: ಥಿಯೇಟರ್​ಗೆ ಜನರನ್ನು ಕರೆಸುವಲ್ಲಿ ಸೋತ ಸಾಯಿ ಪಲ್ಲವಿ; ‘ಲೇಡಿ ಪವರ್​ ಸ್ಟಾರ್​’ ಬಿರುದು ಈಗೇನಾಯ್ತು?
Image
Sai Pallavi: ಸಾಯಿ ಪಲ್ಲವಿ ಬೆಂಬಲಕ್ಕೆ ನಿಂತ ಸಾವಿರಾರು ಮಂದಿ; ಸ್ಪಷ್ಟನೆ ವಿಡಿಯೋ ಕಂಡು ಜನರು ಹೇಳ್ತಿರೋದೇನು?
Image
Sai Pallavi: ಸಾಯಿ ಪಲ್ಲವಿ ವಿವಾದದ ಬಳಿಕ ‘ವಿರಾಟ ಪರ್ವಂ’ ಚಿತ್ರಕ್ಕೆ ಜನರು ನೀಡಿದ ರೇಟಿಂಗ್​ ಎಷ್ಟು?

ರಿಯಲ್​ ಘಟನೆಗಳನ್ನು ಆಧಾರವಾಗಿ ಇಟ್ಟುಕೊಂಡು ‘ವಿರಾಟ ಪರ್ವಂ’ ಸಿನಿಮಾ ಮೂಡಿಬಂದಿದೆ. ಈ ಚಿತ್ರದಲ್ಲಿ ನಕ್ಸಲ್​ ನಾಯಕನಾಗಿ ರಾಣಾ ದಗ್ಗುಬಾಟಿ ನಟಿಸಿದ್ದಾರೆ. ಅವರಿಗೆ ಜೋಡಿಯಾಗಿ ಸಾಯಿ ಪಲ್ಲವಿ ಅಭಿನಯಿಸಿದ್ದಾರೆ. ವೇಣು ಉಡುಗುಲ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಥಿಯೇಟರ್​ನಲ್ಲಿ ಸೋತ ಈ ಸಿನಿಮಾ ಈಗ ಒಟಿಟಿಯಲ್ಲಿ ಸೂಪರ್​ ಹಿಟ್​ ಆಗಿದೆ ಎಂಬುದು ವಿಶೇಷ.

‘ಗಾರ್ಗಿ’ ಬಿಡುಗಡೆಗೆ ಸಾಯಿ ಪಲ್ಲವಿ ಸಜ್ಜು:

ಸಾಯಿ ಪಲ್ಲವಿ ನಟಿಸಿರುವ ‘ಗಾರ್ಗಿ’ ಚಿತ್ರ ಜುಲೈ 15ರಂದು ಚಿತ್ರಮಂದಿರದಲ್ಲಿ ರಿಲೀಸ್​ ಆಗಲಿದೆ. ಈ ಸಿನಿಮಾಗೆ ಗೌತಮ್​ ರಾಮಚಂದ್ರನ್​ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಮಾತ್ರವಲ್ಲದೇ ಸ್ವತಃ ಸಾಯಿ ಪಲ್ಲವಿ ಅವರಿಗೂ ಸಖತ್​ ನಿರೀಕ್ಷೆ ಇದೆ. ‘ಗಾರ್ಗಿ’ ಕನ್ನಡದಲ್ಲೂ ರಿಲೀಸ್​ ಆಗುತ್ತಿದೆ. ಕನ್ನಡದ ಅವತರಣಿಕೆಗೆ ಸಾಯಿ ಪಲ್ಲವಿ ಅವರೇ ಡಬ್​​ ಮಾಡಿದ್ದಾರೆ.

ಇದನ್ನೂ ಓದಿ: Gargi Movie: ಫ್ಯಾನ್ಸ್​ ಮೆಚ್ಚುವ ರೀತಿಯಲ್ಲಿ ಮತ್ತೆ ಬರುತ್ತಿದ್ದಾರೆ ಸಾಯಿ ಪಲ್ಲವಿ; ಇಲ್ಲವೆ ‘ಗಾರ್ಗಿ’ ಚಿತ್ರದ ಫೋಟೋಗಳು

Sai Pallavi: ಸಿಂಪಲ್​ ಸೀರೆ ಧರಿಸಿ ಕಣ್ಮನ ಸೆಳೆದ ಸಾಯಿ ಪಲ್ಲವಿ; ಸ್ಟಾರ್​ ನಟಿಗೆ ಅಭಿಮಾನಿಗಳ ಲೈಕ್ಸ್​ ಸುರಿಮಳೆ

Published On - 8:19 am, Tue, 5 July 22

Follow Us
TV9 Web
TV9 Web

TV9 Kannada

Read More
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ