AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿ ಎದುರಲ್ಲಿ ಹೆಂಡತಿ ಬಗ್ಗೆ ಪ್ರಶ್ನೆ ಕೇಳಿದ ಕರಣ್​ ಜೋಹರ್​; ಸೈಫ್​​ಗೆ ಮುಜುಗರ

ಕರಣ್​ ಜೋಹರ್ ಅವರು ಕರೀನಾ ಕಪೂರ್​ ಬಗ್ಗೆ ವಿಷಯ ಪ್ರಸ್ತಾಪಿಸಿದಾಗ ಸೈಫ್​​ ಅಲಿ ಖಾನ್​ ವಿಚಿತ್ರವಾಗಿ ಲುಕ್​ ನೀಡಿದರು. ‘ನಾನೇನೂ ಅಶ್ಲೀಲ ಪ್ರಶ್ನೆ ಕೇಳುತ್ತಿಲ್ಲ’ ಎಂದು ಕರಣ್​ ಸಮಜಾಯಿಷಿ ನೀಡಿದರು. ‘ತಾಯಿಯ ಎದುರಲ್ಲಿ ಇಂಥ ವಿಷಯ ಮಾತಾಡುವ ಅವಶ್ಯಕತೆ ಇಲ್ಲ’ ಎಂಬ ರೀತಿಯಲ್ಲಿ ಸೈಫ್​ ಅಲಿ ಖಾನ್​ ಕೈ ತೋರಿಸಿದರು.

ತಾಯಿ ಎದುರಲ್ಲಿ ಹೆಂಡತಿ ಬಗ್ಗೆ ಪ್ರಶ್ನೆ ಕೇಳಿದ ಕರಣ್​ ಜೋಹರ್​; ಸೈಫ್​​ಗೆ ಮುಜುಗರ
ಕರಣ್​ ಜೋಹರ್​, ಸೈಫ್​ ಅಲಿ ಖಾನ್​, ಶರ್ಮಿಳಾ ಟ್ಯಾಗೋರ್​
ಮದನ್​ ಕುಮಾರ್​
|

Updated on: Dec 26, 2023 | 1:04 PM

Share

ಜನಪ್ರಿಯ ‘ಕಾಫಿ ವಿತ್​ ಕರಣ್​’ (Koffee With Karan) ಶೋಗೆ ಅನೇಕ ಸೆಲೆಬ್ರಿಟಿಗಳು ಬಂದು ಹೋಗಿದ್ದಾರೆ. ಪ್ರತಿ ಎಪಿಸೋಡ್​ನಲ್ಲೂ ನಿರೂಪಕ ಕರಣ್​ ಜೋಹರ್​ ಅವರು ಒಂದಲ್ಲಾ ಒಂದು ಕಾಂಟ್ರವರ್ಸಿ ಪ್ರಶ್ನೆ ಕೇಳುತ್ತಾರೆ. ಇದರಿಂದ ಅತಿಥಿಗಳಿಗೆ ತೊಂದರೆ ಆಗಿದ್ದುಂಟು. ಈಗ ಈ ಕಾರ್ಯಕ್ರಮದ ಹೊಸ ಎಪಿಸೋಡ್​ಗೆ ಸೈಫ್​ ಅಲಿ ಖಾನ್​ (Saif Ali Khan) ಮತ್ತು ಅವರ ತಾಯಿ ಶರ್ಮಿಳಾ ಟ್ಯಾಗೋರ್​ ಅವರು ಬಂದಿದ್ದಾರೆ. ಈ ವೇಳೆ ಕರಣ್​ ಜೋಹರ್ ಅವರು ಕರೀನಾ ಕಪೂರ್​ (Kareena Kapoor Khan) ಬಗ್ಗೆ ಕೇಳಿದ ಪ್ರಶ್ನೆಗಳಿಂದ ಸೈಫ್​ ಅಲಿ ಖಾನ್​ ಅವರಿಗೆ ಮುಜುಗರ ಆಗಿದೆ. ಈ ಸಂಚಿಕೆಯ ಪ್ರೋಮೋ ಬಿಡುಗಡೆ ಮಾಡಲಾಗಿದೆ.

ಸೈಫ್​ ಅಲಿ ಖಾನ್​ ಅವರು ಬಾಲಿವುಡ್​ನಲ್ಲಿ ಬಹುಬೇಡಿಕೆಯ ಹೀರೋ. ‘ಆದಿಪುರುಷ್​’ ಮೂಲಕ ಅವರು ದಕ್ಷಿಣ ಭಾರತದಲ್ಲೂ ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ. ಅವರದ್ದು ಫಿಲ್ಮಿ ಹಿನ್ನೆಲೆಯ ಕುಟುಂಬ. ಸೈಫ್​ ತಾಯಿ ಶರ್ಮಿಳಾ ಟ್ಯಾಗೋರ್​ ಅವರು ಒಂದು ಕಾಲದ ಬ್ಯುಸಿ ನಟಿ ಆಗಿದ್ದರು. ಸೈಫ್​ ಅವರ ಎರಡನೇ ಪತ್ನಿ ಕರೀನಾ ಕಪೂರ್​ ಕೂಡ ಬಾಲಿವುಡ್​ನಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ.

ಇದನ್ನೂ ಓದಿ: ‘ಮಕ್ಕಳು ಬೇಕು ಎಂಬ ಕಾರಣಕ್ಕೆ ಸೈಫ್​ ಜೊತೆ ಮದುವೆಯಾದೆ’: ಕರೀನಾ ಕಪೂರ್​ ಖಾನ್​

‘ಕಾಫಿ ವಿತ್​ ಕರಣ್​’ ಶೋಗೆ ಬರುವ ಅತಿಥಿಗಳ ಜೊತೆ ಕರಣ್​ ಜೋಹರ್​ ಅವರು ಫಿಲ್ಟರ್​ ಇಲ್ಲದೇ ಮಾತನಾಡುತ್ತಾರೆ. ಖಾಸಗಿ ಬದುಕು ಹಾಗೂ ಲೈಂಗಿಕತೆ ಬಗ್ಗೆಯೂ ಪ್ರಶ್ನೆ ಎದುರಾಗುತ್ತದೆ. ವಿವಾದಗಳ ಕುರಿತ ವಿಷಯವನ್ನೂ ಕೆದಕಲಾಗುತ್ತದೆ. ಕೆಲವರು ಇಂಥ ಪ್ರಶ್ನೆಗಳನ್ನು ಕೂಲ್​ ಆಗಿ ಸ್ವೀಕರಿಸುತ್ತಾರೆ. ಆದರೆ ಕೆಲವರು ಗರಂ ಆಗುತ್ತಾರೆ. ಸೈಫ್​ ಅಲಿ ಖಾನ್​ ಅವರಿಗೆ ಇರಿಸುಮುರಿಸು ಉಂಟಾಗಿದೆ.

View this post on Instagram

A post shared by Karan Johar (@karanjohar)

ಮಾತಿನ ನಡುವೆ ಕರಣ್​ ಜೋಹರ್ ಅವರು ಕರೀನಾ ಕಪೂರ್​ ಬಗ್ಗೆ ವಿಷಯ ಪ್ರಸ್ತಾಪಿಸಿದಾಗ ಸೈಫ್​ ಅಲಿ ಖಾನ್​ ವಿಚಿತ್ರವಾಗಿ ಲುಕ್​ ನೀಡಿದರು. ‘ನಾನೇನೂ ಅಶ್ಲೀಲ ಪ್ರಶ್ನೆ ಕೇಳುತ್ತಿಲ್ಲ’ ಎಂದು ಕರಣ್​ ಜೋಹರ್​ ಸಮಜಾಯಿಷಿ ನೀಡಿದರು. ‘ತಾಯಿಯ ಎದುರಲ್ಲಿ ಇಂಥ ವಿಷಯ ಮಾತಾಡುವ ಅವಶ್ಯಕತೆ ಇಲ್ಲ’ ಎಂಬ ರೀತಿಯಲ್ಲಿ ಸೈಫ್​ ಅಲಿ ಖಾನ್​ ಕೈ ತೋರಿಸಿದರು. ಪ್ರೋಮೋದಲ್ಲಿ ಇದೆಲ್ಲವೂ ಹೈಲೈಟ್​ ಆಗಿದೆ. ‘ಡಿಸ್ನಿ ಪ್ಲಸ್​ ಹಾಟ್​ ಸ್ಟಾರ್​’ ಮೂಲಕ ಈ ಎಪಿಸೋಡ್​ ಡಿ.28ರ ಮಧ್ಯರಾತ್ರಿಯಿಂದ ವೀಕ್ಷಣೆಗೆ ಲಭ್ಯವಾಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು