AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salaga Movie: ‘ಸಲಗ’ ಬಗ್ಗೆ ಹಬ್ಬಿದೆ ಸುಳ್ಳು ಸುದ್ದಿ; ಓಟಿಟಿ ರಿಲೀಸ್​ ಕುರಿತು ದುನಿಯಾ ವಿಜಯ್​ ಸ್ಪಷ್ಟನೆ

Duniya Vijay: ‘ಯಾರೋ ನಮ್ಮ ಯಶಸ್ಸನ್ನು ಸಹಿಸೋಕೆ ಆಗದವರು ಈ ಚಿತ್ರ ಓಟಿಟಿಯಲ್ಲಿ ಬರುತ್ತೆ ಅಂತ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಖಂಡಿತವಾಗಿ ಇದು ಓಟಿಟಿಗೆ ಬರುವುದಿಲ್ಲ’ ಎಂದು ಸಲಗ ಸಿನಿಮಾದ ನಟ, ನಿರ್ದೇಶಕ ದುನಿಯಾ ವಿಜಯ್​ ಹೇಳಿದ್ದಾರೆ.

Salaga Movie: ‘ಸಲಗ’ ಬಗ್ಗೆ ಹಬ್ಬಿದೆ ಸುಳ್ಳು ಸುದ್ದಿ; ಓಟಿಟಿ ರಿಲೀಸ್​ ಕುರಿತು ದುನಿಯಾ ವಿಜಯ್​ ಸ್ಪಷ್ಟನೆ
ದುನಿಯಾ ವಿಜಯ್​
TV9 Web
| Edited By: |

Updated on: Oct 18, 2021 | 2:04 PM

Share

ಮಾಸ್​ ಕಮರ್ಷಿಯಲ್​ ಶೈಲಿಯಲ್ಲಿ ಮೂಡಿಬಂದಿರುವ ‘ಸಲಗ’ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್​ ಸಿಕ್ಕಿದೆ. ದುನಿಯಾ ವಿಜಯ್​ ಇದೇ ಮೊದಲ ಬಾರಿಗೆ ನಿರ್ದೇಶನ ಮಾಡಿದ್ದು, ಚೊಚ್ಚಲ ಪ್ರಯತ್ನದಲ್ಲೇ ದೊಡ್ಡ ಗೆಲುವು ಪಡೆದುಕೊಂಡಿದ್ದಾರೆ. ಬಹುತೇಕ ಕಡೆಗಳಲ್ಲಿ ಚಿತ್ರ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿರುವುದು ಇಡೀ ತಂಡಕ್ಕೆ ಖುಷಿ ನೀಡಿದೆ. ಅದರ ನಡುವೆ ಚಿತ್ರದ ಬಗ್ಗೆ ಒಂದು ಗಾಸಿಪ್​ ಹಬ್ಬಿದೆ. ಈ ಸಿನಿಮಾ ಓಟಿಟಿಯಲ್ಲಿ ಲಭ್ಯವಾಗಲಿದೆ ಎಂದು ಹರಡಿರುವ ಗಾಳಿ ಸುದ್ದಿ ಬಗ್ಗೆ ಈಗ ಸ್ವತಃ ದುನಿಯಾ ವಿಜಯ್​ ಪ್ರತಿಕ್ರಿಯೆ ನೀಡಿದ್ದಾರೆ.

ಕೊರೊನಾ ಆತಂಕವನ್ನು ಮರೆತು ಜನರು ಚಿತ್ರಮಂದಿರಕ್ಕೆ ಬಂದು ‘ಸಲಗ’ ಚಿತ್ರವನ್ನು ನೋಡುತ್ತಿದ್ದಾರೆ. ಆದರೆ ಕೆಲವರು ಈ ಚಿತ್ರ ಓಟಿಟಿಗೆ ಬಂದ ಮೇಲೆ ನೋಡೋಣ ಎಂದುಕೊಳ್ಳುತ್ತಿದ್ದಾರೆ. ಅದಕ್ಕೆ ಪೂರಕವಾಗಿ ಕೆಲವರು ಗಾಸಿಪ್​ ಹಬ್ಬಿಸುತ್ತಿದ್ದಾರೆ. ಅದು ಚಿತ್ರತಂಡದ ಗಮನಕ್ಕೆ ಬಂದಿದೆ. ‘ಸದ್ಯಕ್ಕಂತೂ ನಮ್ಮ ಸಿನಿಮಾ ಓಟಿಟಿಗೆ ಬರುವುದಿಲ್ಲ’ ಎಂದು ದುನಿಯಾ ವಿಜಯ್​ ನೇರವಾಗಿ ಹೇಳಿದ್ದಾರೆ.

‘ಎಲ್ಲರಿಗೂ ನಮಸ್ಕಾರ. ಸಲಗ ಚಿತ್ರಕ್ಕೆ ದೊಡ್ಡ ಯಶಸ್ಸು ನೀಡಿರುವ ಎಲ್ಲರಿಗೂ ನಾವು ಚಿರಋಣಿ ಆಗಿರುತ್ತೇವೆ. ಆದರೆ ಒಂದು ವಿಷಯ ಓಡಾಡುತ್ತಿದೆ. ಯಾರೋ ನಮ್ಮ ಯಶಸ್ಸನ್ನು ಸಹಿಸೋಕೆ ಆಗದವರು ಈ ಚಿತ್ರ ಓಟಿಟಿಯಲ್ಲಿ ಬರುತ್ತೆ ಅಂತ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಖಂಡಿತವಾಗಿ ಇದು ಓಟಿಟಿಗೆ ಬರುವುದಿಲ್ಲ. ಚಿತ್ರಮಂದಿರದಲ್ಲೇ ಪ್ರದರ್ಶನ ಕಾಣುತ್ತದೆ. ಚಿತ್ರಮಂದಿರದಲ್ಲಿಯೇ ಜನರು ನೋಡಬೇಕು ಅಂತ ನಾವು ಎರಡು ವರ್ಷದಿಂದ ಕಾದಿದ್ದೆವು. ಮೊದಲೇ ನಮಗೆ ಓಟಿಟಿ ಆಫರ್​ ಬಂದಿತ್ತು. ಆದರೂ ನಾವೂ ಕೊಟ್ಟಿರಲಿಲ್ಲ. ಓಟಿಟಿಗೆ ಬರುತ್ತದೆ ಎಂದುಕೊಂಡು ಚಿತ್ರವನ್ನು ಮಿಸ್​ ಮಾಡಿಕೊಳ್ಳಬೇಡಿ. ಚಿತ್ರಮಂದಿರಕ್ಕೆ ಬಂದು ನೋಡಿ’ ಎಂದು ದುನಿಯಾ ವಿಜಯ್​ ಹೇಳಿದ್ದಾರೆ.

ಕೆ.ಪಿ. ಶ್ರೀಕಾಂತ್​ ನಿರ್ಮಾಣ ಮಾಡಿರುವ ಈ ಸಿನಿಮಾ ಅ.14ರಂದು ಬಿಡುಗಡೆಯಾಗಿ ಒಳ್ಳೆಯ ಓಪನಿಂಗ್​ ಪಡೆದುಕೊಂಡಿತು. ಮೊದಲ ವೀಕೆಂಡ್​ ಕಳೆದ ಬಳಿಕವೂ ಉತ್ತಮ ಪ್ರದರ್ಶನ ಕಾಣುತ್ತಿದೆ. ಸಂಜನಾ ಆನಂದ್​, ಡಾಲಿ ಧನಂಜಯ, ಕಾಕ್ರೋಜ್​ ಸುಧಿ, ಯಶ್​ ಶೆಟ್ಟಿ, ಚನ್ನಕೇಶವ, ಶ್ರೀಧರ್​, ಶ್ರೇಷ್ಠ ಮುಂತಾದವರ ನಟನೆಗೆ ಪ್ರೇಕ್ಷಕರಿಂದ ಮೆಚ್ಚುಗೆ ಮಾತುಗಳು ಕೇಳಿಬರುತ್ತಿವೆ.

ಇದನ್ನೂ ಓದಿ:

Salaga Movie Review: ‘ಸಲಗ’ ತುಂಬಾ ರಗಡ್​ ಆಗಿದೆ ಎಚ್ಚರಿಕೆ! ದುನಿಯಾ ವಿಜಯ್​ಗೆ ಮಾಸ್​ ಪ್ರೇಕ್ಷಕರೇ ಟಾರ್ಗೆಟ್​

Salaga: ನಿರೀಕ್ಷೆಗೂ ಮೀರಿ ‘ಸಲಗ’ ಸಕ್ಸಸ್​; ಹಾಗಾದ್ರೆ ಈವರೆಗಿನ ಕಲೆಕ್ಷನ್​ ಲೆಕ್ಕ ಹೇಳೋರು ಯಾರು?

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ