Salman Khan: ಅತಿಯಾದ ಕೋಪದ ಕಾರಣಕ್ಕೆ ಬಿಗ್​ ಬಾಸ್​ ನಿರೂಪಣೆಯಿಂದ ಹೊರನಡೆದ್ರಾ ಸಲ್ಮಾನ್​ ಖಾನ್​?

|

Updated on: Jul 30, 2023 | 10:34 AM

Bigg Boss OTT season 2: ಸಲ್ಮಾನ್​ ಖಾನ್​ ಅವರಿಗೆ ಬಹಳ ಬೇಗ ಕೋಪ ಬರುತ್ತದೆ ಎಂಬುದು ನಿಜ. ಬಿಗ್​ ಬಾಸ್​ ಸ್ಪರ್ಧಿಗಳು ಮಿತಿ ಮೀರಿ ವರ್ತಿಸಿದಾಗ ಸಲ್ಮಾನ್​ ಖಾನ್​ ಸಿಟ್ಟು ಪ್ರದರ್ಶಿಸಿದ ಉದಾಹರಣೆ ಸಾಕಷ್ಟಿದೆ.

Salman Khan: ಅತಿಯಾದ ಕೋಪದ ಕಾರಣಕ್ಕೆ ಬಿಗ್​ ಬಾಸ್​ ನಿರೂಪಣೆಯಿಂದ ಹೊರನಡೆದ್ರಾ ಸಲ್ಮಾನ್​ ಖಾನ್​?
ಸಲ್ಮಾನ್​ ಖಾನ್​
Follow us on

ನಟ ಸಲ್ಮಾನ್​ ಖಾನ್​ (Salman Khan) ಅವರು ಸಿನಿಮಾ ಮಾತ್ರವಲ್ಲದೇ ಬಿಗ್​ ಬಾಸ್​ ನಿರೂಪಣೆ ಮಾಡುವ ಮೂಲಕವೂ ಅಭಿಮಾನಿಗಳಿಗೆ ಹತ್ತಿರ ಆಗಿದ್ದಾರೆ. ಇಷ್ಟು ವರ್ಷಗಳ ಕಾಲ ಟಿವಿಯಲ್ಲಿ ಬಿಗ್​ ಬಾಸ್​ ಕಾರ್ಯಕ್ರಮವನ್ನು ನಡೆಸಿಕೊಡುತ್ತಿದ್ದ ಅವರು ಈ ವರ್ಷದಿಂದ ಬಿಗ್​ ಬಾಸ್​ ಒಟಿಟಿ (Bigg Boss OTT season 2) ಆವೃತ್ತಿಗೂ ನಿರೂಪಕನಾಗಿದ್ದಾರೆ. ಕಳೆದ ವರ್ಷ ಕರಣ್​ ಜೋಹರ್​ ಅವರು ‘ಬಿಗ್​ ಬಾಸ್​ ಹಿಂದಿ ಒಟಿಟಿ’ ಶೋ ನಡೆಸಿಕೊಟ್ಟಿದ್ದರು. ಈ ಬಾರಿ ಸಲ್ಮಾನ್​ ಖಾನ್​ ಅವರು ಆ ಜವಾಬ್ದಾರಿಯನ್ನು ವಹಿಸಿಕೊಂಡು ನಿಭಾಯಿಸುತ್ತಿದ್ದಾರೆ. ಆದರೆ ಅವರು ಶೋನಿಂದ ಅರ್ಧಕ್ಕೆ ಹೊರನಡೆದಿದ್ದಾರೆ ಎಂಬ ವದಂತಿ ಹರಡಿತ್ತು. ಅದರಿಂದ ಸಲ್ಲು ಅಭಿಮಾನಿಗಳಲ್ಲಿ ಬೇಸರ ಮೂಡಿತ್ತು. ಆದರೆ ಸಲ್ಮಾನ್​ ಖಾನ್​ ಅವರು ಮತ್ತೆ ಬಿಗ್​ ಬಾಸ್ (Bigg Boss)​ ಒಟಿಟಿ ಶೋಗೆ ವಾಪಸ್​ ಬಂದಿದ್ದಾರೆ ಎಂಬುದು ಈಗ ಖಚಿತವಾಗಿದೆ.

ಸಲ್ಮಾನ್​ ಖಾನ್​ ಅವರಿಗೆ ಬಹಳ ಬೇಗ ಕೋಪ ಬರುತ್ತದೆ ಎಂಬುದು ನಿಜ. ಅನೇಕ ಸಂದರ್ಭಗಳಲ್ಲಿ ಅವರು ಕೂಗಾಡಿದ್ದುಂಟು. ಬಿಗ್​ ಬಾಸ್​ ಸ್ಪರ್ಧಿಗಳು ಮಿತಿ ಮೀರಿ ವರ್ತಿಸಿದಾಗ ಸಲ್ಮಾನ್​ ಖಾನ್​ ಅವರು ಸಿಟ್ಟು ಪ್ರದರ್ಶಿಸಿದ ಉದಾಹರಣೆ ಸಾಕಷ್ಟಿದೆ. ಇತ್ತೀಚೆಗೆ ಅವರು ಬಿಗ್​ ಬಾಸ್​ ಒಟಿಟಿ ಶೋ ನಿರೂಪಣೆ ಮಾಡುವಾಗ ಸಿಗರೇಟ್​ ಹಿಡಿದುಕೊಂಡಿದ್ದರು. ಅಲ್ಲದೇ, ಅವರ ಬಾಯಿಯಿಂದ ಕೆಲವು ಅಕ್ಷೇಪಾರ್ಹ ಪದಗಳು ಬಂದಿದ್ದವು. ನಂತರ ಅವರು ನಿರೂಪಣೆಯಿಂದ ಹೊರನಡೆದಿದ್ದಾರೆ ಎಂದು ಸುದ್ದಿ ಹಬ್ಬಿತು.

ಇದನ್ನೂ ಓದಿ: Salman Khan: ವಂಶಿಕಾ ಮಾತ್ರವಲ್ಲ, ಸಲ್ಮಾನ್​ ಖಾನ್​ ಹೆಸರಲ್ಲೂ ನಡೆದಿದೆ ಮೋಸ; ಅಧಿಕೃಕವಾಗಿ ಹೇಳಿಕೆ ಬಿಡುಗಡೆ ಮಾಡಿದ ಸಲ್ಲು

ಈ ಘಟನೆ ಕುರಿತಂತೆ ಸುದ್ದಿ ಸಂಸ್ಥೆಯೊಂದಕ್ಕೆ ಸಲ್ಮಾನ್​ ಖಾನ್​ ಅವರು ಸ್ಪಷ್ಟನೆ ನೀಡಿದ್ದಾರೆ. ‘ನನ್ನ ಅಭಿಮಾನಿಗಳೇ ನನ್ನ ಪಾಲಿನ ಸಾಧನೆ ಮತ್ತು ಹೆಮ್ಮೆ. ಇಂದು ನಾನು ಏನಾಗಿದ್ದೇನೂ ಅದು ಅವರಿಂದಲೇ. ನನಗೆ ಕೋಪ ಬರುತ್ತದೆ ಮತ್ತು ನಾನು ಶೋನಿಂದ ಕೆಲವೊಮ್ಮೆ ಹೊರಬರುತ್ತೇನೆ ಎಂಬುದು ನಿಜ. ಆದರೆ ವೀಕೆಂಡ್​ ಕಾ ವಾರ್​ ಎಪಿಸೋಡ್​ನಲ್ಲಿ ನನ್ನನ್ನು ನೋಡಲು ತಾಳ್ಮೆಯಿಂದ ಕಾಯುವ ಅಭಿಮಾನಿಗಳಿಗಾಗಿ ನಾನು ವಾಪಸ್​ ಬರುತ್ತೇನೆ’ ಎಂದು ಸಲ್ಮಾನ್​ ಖಾನ್​ ಹೇಳಿದ್ದಾರೆ.

ಇದನ್ನೂ ಓದಿ: ‘ಸಲ್ಮಾನ್​ ಖಾನ್​ನನ್ನು ಖಂಡಿತಾ ಕೊಲ್ಲುತ್ತೇನೆ’: ರಾಷ್ಟ್ರೀಯ ಸುದ್ದಿ ವಾಹಿನಿಯಲ್ಲಿ ಬಹಿರಂಗವಾಗಿ ಕೊಲೆ ಬೆದರಿಕೆ

ಸಲ್ಮಾನ್​ ಖಾನ್​ ಅವರಿಗೆ ಜೀವ ಬೆದರಿಕೆ ಇದೆ. ಆ ಹಿನ್ನೆಲೆಯಲ್ಲಿ ಅವರು ಬುಲೆಟ್​ ಪ್ರೂಫ್​ ಕಾರುಗಳನ್ನು ಖರೀದಿಸಿದ್ದಾರೆ. ತಮ್ಮ ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಹಾಗಂತ ಸಿನಿಮಾ ಮತ್ತು ನಿರೂಪಣೆ ಕೆಲಸಗಳಿಗೆ ಅವರು ಬ್ರೇಕ್​ ಹಾಕಿಲ್ಲ. ಎಂದಿನಂತೆ ಅವರು ಈ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರು ನಟಿಸುತ್ತಿರುವ ‘ಟೈಗರ್​ 3’ ಸಿನಿಮಾಗಾಗಿ ಫ್ಯಾನ್ಸ್​ ಕಾದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.