AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದೇಪದೇ ಅದೇ ತಪ್ಪು ಮಾಡುತ್ತಿದ್ದಾರೆ ಸಲ್ಮಾನ್​ ಖಾನ್​; ಬೇಸರ ಹೊರ ಹಾಕಿದ ಫ್ಯಾನ್ಸ್​

‘ರಾಧೆ’ ಸಿನಿಮಾ ರಿಲೀಸ್ ಆಗುವಾಗ ದೇಶದ ಬಹುತೇಕ ಕಡೆಗಳಲ್ಲಿ ಚಿತ್ರಮಂದಿರಗಳು ಕ್ಲೋಸ್ ಇದ್ದವು. ಈ ಕಾರಣಕ್ಕೆ ಚಿತ್ರತಂಡ ಒಟಿಟಿ ಮೊರೆ ಹೋಗಿತ್ತು. ಸಂಪ್ರದಾಯ ಬ್ರೇಕ್​ ಮಾಡಬಾರದು ಎನ್ನುವ ಕಾರಣಕ್ಕೆ ಚಿತ್ರಮಂದಿರದಲ್ಲೂ ಸಲ್ಲು ಸಿನಿಮಾ ರಿಲೀಸ್ ಆಗಿತ್ತು.

ಪದೇಪದೇ ಅದೇ ತಪ್ಪು ಮಾಡುತ್ತಿದ್ದಾರೆ ಸಲ್ಮಾನ್​ ಖಾನ್​; ಬೇಸರ ಹೊರ ಹಾಕಿದ ಫ್ಯಾನ್ಸ್​
TV9 Web
| Edited By: |

Updated on: Sep 11, 2021 | 7:24 PM

Share

ಸಲ್ಮಾನ್​ ಖಾನ್​ ಸಿನಿಮಾಗಳು ಬಾಕ್ಸ್​ ಆಫೀಸ್​ನಲ್ಲಿ ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡುತ್ತದೆ. ಸಲ್ಲು ಸಿನಿಮಾ ವಿಮರ್ಶೆಯಲ್ಲಿ ಸೋತ ಹೊರತಾಗಿಯೂ ನೂರು ಕೋಟಿ ರೂಪಾಯಿ ಗಳಿಕೆ ಮಾಡಿದ ಉದಾಹರಣೆ ಸಾಕಷ್ಟಿದೆ. ‘ರಾಧೆ: ಯುವರ್​ ಮೋಸ್ಟ್ ವಾಂಟೆಡ್​ ಭಾಯ್​’ ಚಿತ್ರದ ವಿಚಾರದಲ್ಲಿ ಸಲ್ಮಾನ್ ಖಾನ್​ ತಪ್ಪು ನಿರ್ಧಾರ ತೆಗೆದುಕೊಂಡಿದ್ದರು. ಒಟಿಟಿ ಹಾಗೂ ಚಿತ್ರಮಂದಿರಗಳಲ್ಲಿ ಸಿನಿಮಾ ಒಟ್ಟಿಗೆ ರಿಲೀಸ್​ ಮಾಡಿದ್ದರು. ಇದರಿಂದಾಗಿ ಚಿತ್ರದ ಬಾಕ್ಸ್​ ಆಫೀಸ್​ ಕಲೆಕ್ಷನ್​ ತೀವ್ರಗತಿಯಲ್ಲಿ ಕುಸಿದಿತ್ತು. ಆದರೆ, ಈಗ ಸಲ್ಲು ಮತ್ತದೇ ತಪ್ಪು ಮಾಡುತ್ತಿದ್ದಾರೆ.

‘ರಾಧೆ’ ಸಿನಿಮಾ ರಿಲೀಸ್ ಆಗುವಾಗ ದೇಶದ ಬಹುತೇಕ ಕಡೆಗಳಲ್ಲಿ ಚಿತ್ರಮಂದಿರಗಳು ಕ್ಲೋಸ್ ಇದ್ದವು. ಈ ಕಾರಣಕ್ಕೆ ಚಿತ್ರತಂಡ ಒಟಿಟಿ ಮೊರೆ ಹೋಗಿತ್ತು. ಸಂಪ್ರದಾಯ ಬ್ರೇಕ್​ ಮಾಡಬಾರದು ಎನ್ನುವ ಕಾರಣಕ್ಕೆ ಚಿತ್ರಮಂದಿರದಲ್ಲೂ ಸಲ್ಲು ಸಿನಿಮಾ ರಿಲೀಸ್ ಆಗಿತ್ತು. ಈಗ ಕೊವಿಡ್​ ಕಡಿಮೆ ಆಗಿದ್ದು ದೇಶದ ಬಹುತೇಕ ಕಡೆ ಚಿತ್ರಮಂದಿರ ಓಪನ್​ ಆಗಿದೆ. ಆದಾಗ್ಯೂ ಸಲ್ಲು, ಮತ್ತದೇ ಹಳೆಯ ನಿರ್ಧಾರ ಕೈಗೊಳ್ಳುತ್ತಿದ್ದಾರೆ.

‘ಅಂತಿಮ್​-ದಿ ಫೈನಲ್​ ಟ್ರುತ್​’ ಸಿನಿಮಾದಲ್ಲಿ ಸಲ್ಲು ನಟಿಸುತ್ತಿದ್ದಾರೆ. ಈ ಸಿನಿಮಾ ಜೀ 5ನಲ್ಲಿ ಪ್ರೀಮಿಯರ್​ ಆಗಲಿದೆ ಎನ್ನಲಾಗುತ್ತಿದೆ. ಆಯುಶ್​ ಶರ್ಮಾ ಗ್ಯಾಂಗ್​ಸ್ಟರ್​ ಆಗಿ ಕಾಣಿಸಿಕೊಂಡರೆ, ಸಲ್ಲು ಸಿಖ್​ ಪೊಲೀಸ್​ ಆಗಿ ನಟಿಸಿದ್ದಾರೆ.  ಕೊವಿಡ್ ಕಾರಣದಿಂದ ಮಹಾರಾಷ್ಟ್ರದಲ್ಲಿ ಇನ್ನೂ ಚಿತ್ರಮಂದಿರ ತೆರೆದಿಲ್ಲ. ಹೀಗಾಗಿ, ಒಟಿಟಿ ರಿಲೀಸ್​ಗೆ ಸಲ್ಲು ಹೆಚ್ಚು ಒತ್ತು ಕೊಡುತ್ತಿದ್ದಾರೆ. ಈ ಮೂಲಕ ಹೆಚ್ಚು ಜನರನ್ನು ತಲುಪೋ ಆಲೋಚನೆ ಅವರದ್ದು. ಇನ್ನು, ಚಿತ್ರಮಂದಿರಗಳಲ್ಲೂ ಈ ಸಿನಿಮಾ ತೆರೆಗೆ ಬರುತ್ತಿದೆ.

‘ಅಂತಿಮ್​-ದಿ ಫೈನಲ್​ ಟ್ರುತ್​’ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇದೆ. ಇನ್ನು, ಸಲ್ಲು ಸಿನಿಮಾ ಎಂದರೆ ಅಲ್ಲಿ, ಆ್ಯಕ್ಷನ್​ಗೆ ಯಾವುದೇ ಕೊರತೆ ಇರುವುದಿಲ್ಲ. ಆದರೆ, ಈ ಸಿನಿಮಾ ಚಿತ್ರಮಂದಿರ ಹಾಗೂ ಒಟಿಟಿಯಲ್ಲಿ ಒಟ್ಟಿಗೆ ರಿಲೀಸ್​ ಆಗುತ್ತಿರುವುದರಿಂದ ಬಾಕ್ಸ್​ ಆಫೀಸ್​ ಕಲೆಕ್ಷನ್​ಗೆ ಹೊಡೆತ ಬೀಳಲಿದೆ. ಈ ಬಗ್ಗೆ ಅಭಿಮಾನಿಗಳು ಬೇಸರ ಹೊರ ಹಾಕಿದ್ದಾರೆ.

ಇದನ್ನೂ ಓದಿ: ರಾಜಮೌಳಿ ರಿಜೆಕ್ಟ್​ ಮಾಡಿದ್ದ ಸಲ್ಮಾನ್​ ಖಾನ್ ಸಿನಿಮಾ ಸೂಪರ್​ ಹಿಟ್​; ವಿಜಯೇಂದ್ರ ಪ್ರಸಾದ್​ ಪಶ್ಚಾತ್ತಾಪ

ಸಲ್ಮಾನ್ ಖಾನ್ ‘ಹಿಟ್​ ಆಂಡ್ ರನ್’ ಪ್ರಕರಣವನ್ನು ಹೋಲುವ ‘ಸೆಲ್ಮೋನ್ ಭಾಯಿ’ ಗೇಮ್​ಗೆ ಕೋರ್ಟ್ ತಡೆ; ಏನಿದು ಪ್ರಕರಣ?

Follow Us
ಸಚಿವ ಡಿ.ಸುಧಾಕರ್ ಅಂತಿಮ ದರ್ಶನದ ವೇಳೆ ಬಿಕ್ಕಿ ಬಿಕ್ಕಿ ಅತ್ತ ಡಿಕೆಶಿ
ಸಚಿವ ಡಿ.ಸುಧಾಕರ್ ಅಂತಿಮ ದರ್ಶನದ ವೇಳೆ ಬಿಕ್ಕಿ ಬಿಕ್ಕಿ ಅತ್ತ ಡಿಕೆಶಿ
ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿ ಪತ್ತೆ: DIG ಹೇಳಿದ್ದಿಷ್ಟು
ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿ ಪತ್ತೆ: DIG ಹೇಳಿದ್ದಿಷ್ಟು
ಮೊದಲ ಭಾಷಣದಲ್ಲೇ ಸಾಲದ ಬಗ್ಗೆ ಮಾತಾಡಿದ ತಮಿಳುನಾಡು ಸಿಎಂ ವಿಜಯ್​​
ಮೊದಲ ಭಾಷಣದಲ್ಲೇ ಸಾಲದ ಬಗ್ಗೆ ಮಾತಾಡಿದ ತಮಿಳುನಾಡು ಸಿಎಂ ವಿಜಯ್​​
ರವಿಶಂಕರ್ ಗುರೂಜಿ ಮಾತಿಗೆ ಪ್ರಧಾನಿ ಮೋದಿಗೂ ನಗು!
ರವಿಶಂಕರ್ ಗುರೂಜಿ ಮಾತಿಗೆ ಪ್ರಧಾನಿ ಮೋದಿಗೂ ನಗು!
ರವಿಶಂಕರ್ ಗುರೂಜಿಯ 100ನೇ ಹುಟ್ಟುಹಬ್ಬಕ್ಕೂ ಬರುತ್ತೇನೆ ಎಂದ ಪ್ರಧಾನಿ ಮೋದಿ
ರವಿಶಂಕರ್ ಗುರೂಜಿಯ 100ನೇ ಹುಟ್ಟುಹಬ್ಬಕ್ಕೂ ಬರುತ್ತೇನೆ ಎಂದ ಪ್ರಧಾನಿ ಮೋದಿ
ಮೋದಿ ಸಂಚರಿಸೋ ರಸ್ತೇಲಿ ಜಿಲೆಟಿನ್ ಕಡ್ಡಿಗಳು ಪತ್ತೆ: ಶಂಕಿತ ಪೊಲೀಸ್ ವಶಕ್ಕೆ
ಮೋದಿ ಸಂಚರಿಸೋ ರಸ್ತೇಲಿ ಜಿಲೆಟಿನ್ ಕಡ್ಡಿಗಳು ಪತ್ತೆ: ಶಂಕಿತ ಪೊಲೀಸ್ ವಶಕ್ಕೆ
ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟು ಸನ್ಮಾನಿಸಿದ ಗುರೂಜಿ
ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟು ಸನ್ಮಾನಿಸಿದ ಗುರೂಜಿ
ವಿಜಯ್ ಪ್ರಮಾಣವಚನ ಮುಗಿಸಿ ಹೊರಟ ತ್ರಿಶಾ ನೋಡಲು ಮುಗಿಬಿದ್ದ ಅಭಿಮಾನಿಗಳು
ವಿಜಯ್ ಪ್ರಮಾಣವಚನ ಮುಗಿಸಿ ಹೊರಟ ತ್ರಿಶಾ ನೋಡಲು ಮುಗಿಬಿದ್ದ ಅಭಿಮಾನಿಗಳು
ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ವಿಜಯ್​ ದಿಟ್ಟ ಮಾತುಗಳು!
ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ವಿಜಯ್​ ದಿಟ್ಟ ಮಾತುಗಳು!
ತಮಿಳುನಾಡಿನ ನೂತನ ಮುಖ್ಯಮಂತ್ರಿಯಾದ ವಿಜಯ್​​ಗೆ ಶುಭ ಕೋರಿದ ಪ್ರಧಾನಿ ಮೋದಿ
ತಮಿಳುನಾಡಿನ ನೂತನ ಮುಖ್ಯಮಂತ್ರಿಯಾದ ವಿಜಯ್​​ಗೆ ಶುಭ ಕೋರಿದ ಪ್ರಧಾನಿ ಮೋದಿ